Homeಕರ್ನಾಟಕಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, ಎರಡು ದೇಶಗಳ ನಡುವಿನ ಸಂಬಂಧಗಳು ಸಮಾನತೆ ಮತ್ತು ಪರಸ್ಪರ ಗೌರವದ ಬುನಾದಿಯ ಮೇಲೆ ಸ್ಥಾಪನೆಯಾಗಬೇಕಾಗುತ್ತದೆ. ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ, ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ ಎಂದಿದ್ದಾರೆ.

ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏರಿಸಿದ್ದರು. ಈಗ ಅದನ್ನು ಶೇಕಡ 25ರಿಂದ ಶೇಕಡ 18ಕ್ಕೆ ಇಳಿಸಿ ಭಾರತಕ್ಕೆ ಮಹಾ ಉಪಕಾರ ಮಾಡಿದಂತೆ ನಾಟಕವಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಭಾರತ ಶೂನ್ಯಕ್ಕಿಳಿಸಿದೆ. ಮೇಲ್ನೋಟದಲ್ಲಿಯೇ ಈ ತಾರತಮ್ಯದಿಂದ ಆಗಿರುವ ಅನ್ಯಾಯ ಸ್ಪಷ್ಟವಾಗಿ ಕಾಣುತ್ತಿದ್ದರೂ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಸ್ವಾಗತಿಸಿರುವುದು ಭಾರತದ 149 ಕೋಟಿ ಜನರಿಗೆ ಮಾಡುತ್ತಿರುವ ಮಹಾದ್ರೋಹವಾಗಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದ್ಯ ಭಾರತ ಶೇಕಡ 40ರಷ್ಟು ತೈಲವನ್ನು ರಷ್ಯಾದಿಂದ ಖರೀದಿಸುತ್ತಿದೆ. ಇದೀಗ ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ತಲೆಬಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದಿಂದ ತೈಲ ಖರೀದಿಯನ್ನು ಕೈಬಿಟ್ಟು ಅಮೆರಿಕ ಮತ್ತು ವೆನಿಜುವೆಲಾ ದೇಶಗಳಿಂದ ತೈಲ ಖರೀದಿಸಲು ಒಪ್ಪಿಕೊಂಡಿರುವುದು ಈ ಒಪ್ಪಂದದ ಮುಖ್ಯಾಂಶವಾಗಿದೆ. ಈ ಮೂಲಕ ಭಾರತ ಸಂಪೂರ್ಣ ಶರಣಾಗತಿಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದ್ದು, ಅದರ ಪರಿಣಾಮವಾಗಿ ಉಳಿದ ಅಗತ್ಯವಸ್ತುಗಳು ಕೂಡಾ ದುಬಾರಿಯಾಗಲಿದೆ ಎಂದಿದ್ದಾರೆ.

ಈ ಒಪ್ಪಂದದಿಂದ ಆಗಲಿರುವ ಸಣ್ಣಪುಟ್ಟ ಲಾಭಗಳನ್ನು ದೊಡ್ಡ ಸಾಧನೆ ಎಂದು ಬಿಂಬಿಸುತ್ತಿರುವ ಕೇಂದ್ರ ಸರ್ಕಾರ ಭಾರತೀಯರಿಗೆ, ಮುಖ್ಯವಾಗಿ ದೇಶದ ರೈತ ಸಮುದಾಯಕ್ಕೆ ಆಗುತ್ತಿರುವ ನಷ್ಟವನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡುತ್ತಿದೆ. ಈ ಒಪ್ಪಂದವನ್ನು ಅಮೆರಿಕದ ರೈತ ಸಮುದಾಯ ಒಕ್ಕೊರಲಿನಿಂದ ಸ್ವಾಗತಿಸಿ ಕುಣಿದಾಡುತ್ತಿರುವುದೇ ಈ ಒಪ್ಪಂದ ಭಾರತದ ರೈತರ ಪಾಲಿನ ಮರಣಶಾಸನವಾಗಲಿದೆ ಎಂಬುದಕ್ಕೆ ಸೂಚನೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಭಾರತಕ್ಕೆ ಹೋಲಿಸಿದರೆ ಅತೀ ಹೆಚ್ಚಿನ ಪ್ರಮಾಣದ ಸಬ್ಸಿಡಿ ಪಡೆಯುತ್ತಿರುವ ಅಮೆರಿಕದ ರೈತರು, ಭಾರತದ ಕೃಷಿ ಉತ್ಪನ್ನಗಳಿಗಿಂತ ಕಡಿಮೆ ಬೆಲೆಗೆ ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಿದೆ. ಈ ಅಪಾಯವನ್ನು ತಪ್ಪಿಸಲಿಕ್ಕಾಗಿಯೇ ಇಲ್ಲಿಯವರೆಗಿನ ಎಲ್ಲ ಸರ್ಕಾರಗಳು ಅಮೆರಿಕದಿಂದ ಆಮದಾಗುತ್ತಿರುವ ಕೃಷಿ ಉತ್ಪನ್ನಗಳ ಮೇಲೆ ಹೆಚ್ಚಿನ ಪ್ರಮಾಣದ ಸುಂಕ ಹೇರುತ್ತಾ ಬಂದಿವೆ. ಈಗ ಈ ಆಮದು ಸುಂಕವನ್ನು ರದ್ದುಗೊಳಿಸಿದರೆ ದೇಶದ ಮಾರುಕಟ್ಟೆಗಳಲ್ಲಿ ಅಮೆರಿಕದ ಅಗ್ಗದ ದರದ ಆಹಾರಧಾನ್ಯ, ಹಣ್ಣು, ತರಕಾರಿ ಮತ್ತು ಡೇರಿ ಉತ್ಪನ್ನಗಳು ಲಗ್ಗೆ ಇಡಲಿವೆ. ಇದರಿಂದ ಭಾರತದ ರೈತರು ದಿವಾಳಿ ಸ್ಥಿತಿ ತಲುಪಲಿದ್ದು, ಅವರಿಗೆ ಆತ್ಮಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲದ ಸ್ಥಿತಿ ನಿರ್ಮಾಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಂಪೂರ್ಣವಾಗಿ ಶರಣಾಗತಿಯಾಗಿರುವ ಈ ಒಪ್ಪಂದಕ್ಕೆ ಭಾರತೀಯರ ಹಿತರಕ್ಷಣೆಯ ಉದ್ದೇಶ ಖಂಡಿತ ಇಲ್ಲ. ಅಮೆರಿಕದ ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ಎದುರಿಸುತ್ತಿರುವ ಮೋದಿಯವರ ಉದ್ಯಮ ಸ್ನೇಹಿತ ಅದಾನಿ ಅವರ ರಕ್ಷಣೆ ಮತ್ತು ಜೆಫ್ರಿ ಎಪ್‌ಸ್ಟೀನ್ ಫೈಲ್ಸ್‌ನಲ್ಲಿ ಕಾಣಿಸಿಕೊಂಡಿರುವ ಪ್ರಧಾನಿ ಮೋದಿ ಮತ್ತು ಸಂಪುಟದ ಸದಸ್ಯರ ಹೆಸರುಗಳಿಂದಾಗಿ ಸೃಷ್ಟಿಯಾಗಿರುವ ಒತ್ತಡದ ಭಾಗವಾಗಿ ಕೇಂದ್ರ ಸರ್ಕಾರ ದೇಶ ವಿರೋಧಿಯಾಗಿರುವ ಒಪ್ಪಂದಕ್ಕೆ ಒಪ್ಪಿಕೊಂಡಿದೆ ಎಂಬ ಆರೋಪವನ್ನು ನಿರಾಕರಿಸಲು ಸಾಧ್ಯವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಜಾಗತಿಕವಾಗಿ ಭಾರತ ಹಿಂದೆಂದೂ ಇಷ್ಟೊಂದು ದುರ್ಬಲವಾಗಿರಲಿಲ್ಲ. ರಾಜತಾಂತ್ರಿಕವಾಗಿ ಎದುರಾಗುವ ಒತ್ತಡಗಳನ್ನು ಇಲ್ಲಿಯವರೆಗಿನ ಎಲ್ಲಾ ಪ್ರಧಾನಿಗಳು ಸಮರ್ಥವಾಗಿ ಎದುರಿಸಿ ಭಾರತದ ಸಾರ್ವಭೌಮತೆ ಮತ್ತು ಗೌರವವನ್ನು ಕಾಪಾಡಿಕೊಂಡು ಬಂದಿದ್ದಾರೆ. ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಅಲಿಪ್ತ ನೀತಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿತ್ತು. ಪ್ರಧಾನಿ ಇಂದಿರಾಗಾಂಧಿಯವರು ದೈತ್ಯ ಅಮೆರಿಕದ ಒತ್ತಡವನ್ನು ಕೂಡಾ ಲೆಕ್ಕಿಸದೆ ಪಾಕಿಸ್ತಾನವನ್ನು ಮಣಿಸಿದ್ದು ಈಗ ಇತಿಹಾಸವಾಗಿದೆ. ಜಾಗತಿಕವಾಗಿ ಎಲ್ಲ ದೇಶಗಳು ಆರ್ಥಿಕ ಹಿಂಜರಿತದಿಂದ ತತ್ತರಿಸುತ್ತಿದ್ದಾಗ ಭಾರತದ ಆರ್ಥಿಕ ಸಾರ್ವಭೌಮತೆಯನ್ನು ಕಾಪಾಡಿದ್ದ ಡಾ.ಮನಮೋಹನ್ ಸಿಂಗ್ ಅವರು ಹೊಸ ಆರ್ಥಿಕ ಯುಗದ ಪ್ರವರ್ತಕರಾಗಿದ್ದರು ಎಂದಿದ್ದಾರೆ.

ಆದರೆ, ಇಂದು ವಿಶ್ವದಲ್ಲಿ ಭಾರತಕ್ಕೆ ಮಿತ್ರರಿಗಿಂತ ಶತ್ರುಗಳ ಸಂಖ್ಯೆ ಹೆಚ್ಚಾಗಿದೆ. ವಿದೇಶಾಂಗ ನೀತಿ ಎಂದರೆ ಭಾಷಣ, ಘೋಷಣೆ, ಕೈಕುಲುಕಾಟ ಮತ್ತು ಸ್ವಪ್ರಚಾರವಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿದುಕೊಂಡಂತಿದೆ. ಚೀನಾ ಮತ್ತು ಅಮೆರಿಕದಂತಹ ದೈತ್ಯ ಶಕ್ತಿಗಳ ನಡುವೆ ಸಿಕ್ಕಿಹಾಕಿಕೊಂಡಿರುವ ಭಾರತ ತನ್ನ ಅಸ್ಮಿತೆಯನ್ನು ಸಂಪೂರ್ಣ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ತಲೆಮೇಲೆ ಕೂರಿಸಿ ಮೆರೆದಾಡಿದ್ದ ನರೇಂದ್ರ ಮೋದಿ ಅವರು ಈಗ ಅದೇ ಟ್ರಂಪ್ ಅವರ ಆಜ್ಞಾಪಾಲಕರಾಗುವ ದೈನೇಸಿ ಸ‍್ಥಿತಿಗೆ ಬಂದಿರುವುದು ವಿಷಾದನೀಯ ಬೆಳವಣಿಗೆಯಾಗಿದೆ. ಮೋದಿಯವರ 56 ಇಂಚಿನ ಎದೆ ಮತ್ತು ವಿಶ್ವಗುರುವಿನ ಕಿರೀಟವನ್ನು ಡೊನಾಲ್ಡ್ ಟ್ರಂಪ್ ಪ್ರತಿದಿನ ಕುಟ್ಟಿ ಪುಡಿ ಮಾಡುತ್ತಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.

ವಿದೇಶಾಂಗ ನೀತಿಯಿಂದ ಹಿಡಿದು ಆರ್ಥಿಕ ಮತ್ತು ಸಾಮಾಜಿಕ ನೀತಿಯವರೆಗೂ ಎಲ್ಲ ರಂಗಗಳಲ್ಲಿಯೂ ಸಂಪೂರ್ಣವಾಗಿ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ರಾಜೀನಾಮೆ ಕೊಟ್ಟು ದೇಶದ ಮತ್ತು ಅಳಿದುಳಿದ ಅವರ ಗೌರವವನ್ನು ಉಳಿಸಿಕೊಳ್ಳುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...