Homeಕರ್ನಾಟಕಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, ಎರಡು ದೇಶಗಳ ನಡುವಿನ ಸಂಬಂಧಗಳು ಸಮಾನತೆ ಮತ್ತು ಪರಸ್ಪರ ಗೌರವದ ಬುನಾದಿಯ ಮೇಲೆ ಸ್ಥಾಪನೆಯಾಗಬೇಕಾಗುತ್ತದೆ. ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ, ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ ಎಂದಿದ್ದಾರೆ.

ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏರಿಸಿದ್ದರು. ಈಗ ಅದನ್ನು ಶೇಕಡ 25ರಿಂದ ಶೇಕಡ 18ಕ್ಕೆ ಇಳಿಸಿ ಭಾರತಕ್ಕೆ ಮಹಾ ಉಪಕಾರ ಮಾಡಿದಂತೆ ನಾಟಕವಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಭಾರತ ಶೂನ್ಯಕ್ಕಿಳಿಸಿದೆ. ಮೇಲ್ನೋಟದಲ್ಲಿಯೇ ಈ ತಾರತಮ್ಯದಿಂದ ಆಗಿರುವ ಅನ್ಯಾಯ ಸ್ಪಷ್ಟವಾಗಿ ಕಾಣುತ್ತಿದ್ದರೂ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಸ್ವಾಗತಿಸಿರುವುದು ಭಾರತದ 149 ಕೋಟಿ ಜನರಿಗೆ ಮಾಡುತ್ತಿರುವ ಮಹಾದ್ರೋಹವಾಗಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದ್ಯ ಭಾರತ ಶೇಕಡ 40ರಷ್ಟು ತೈಲವನ್ನು ರಷ್ಯಾದಿಂದ ಖರೀದಿಸುತ್ತಿದೆ. ಇದೀಗ ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ತಲೆಬಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದಿಂದ ತೈಲ ಖರೀದಿಯನ್ನು ಕೈಬಿಟ್ಟು ಅಮೆರಿಕ ಮತ್ತು ವೆನಿಜುವೆಲಾ ದೇಶಗಳಿಂದ ತೈಲ ಖರೀದಿಸಲು ಒಪ್ಪಿಕೊಂಡಿರುವುದು ಈ ಒಪ್ಪಂದದ ಮುಖ್ಯಾಂಶವಾಗಿದೆ. ಈ ಮೂಲಕ ಭಾರತ ಸಂಪೂರ್ಣ ಶರಣಾಗತಿಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದ್ದು, ಅದರ ಪರಿಣಾಮವಾಗಿ ಉಳಿದ ಅಗತ್ಯವಸ್ತುಗಳು ಕೂಡಾ ದುಬಾರಿಯಾಗಲಿದೆ ಎಂದಿದ್ದಾರೆ.

ಈ ಒಪ್ಪಂದದಿಂದ ಆಗಲಿರುವ ಸಣ್ಣಪುಟ್ಟ ಲಾಭಗಳನ್ನು ದೊಡ್ಡ ಸಾಧನೆ ಎಂದು ಬಿಂಬಿಸುತ್ತಿರುವ ಕೇಂದ್ರ ಸರ್ಕಾರ ಭಾರತೀಯರಿಗೆ, ಮುಖ್ಯವಾಗಿ ದೇಶದ ರೈತ ಸಮುದಾಯಕ್ಕೆ ಆಗುತ್ತಿರುವ ನಷ್ಟವನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡುತ್ತಿದೆ. ಈ ಒಪ್ಪಂದವನ್ನು ಅಮೆರಿಕದ ರೈತ ಸಮುದಾಯ ಒಕ್ಕೊರಲಿನಿಂದ ಸ್ವಾಗತಿಸಿ ಕುಣಿದಾಡುತ್ತಿರುವುದೇ ಈ ಒಪ್ಪಂದ ಭಾರತದ ರೈತರ ಪಾಲಿನ ಮರಣಶಾಸನವಾಗಲಿದೆ ಎಂಬುದಕ್ಕೆ ಸೂಚನೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಭಾರತಕ್ಕೆ ಹೋಲಿಸಿದರೆ ಅತೀ ಹೆಚ್ಚಿನ ಪ್ರಮಾಣದ ಸಬ್ಸಿಡಿ ಪಡೆಯುತ್ತಿರುವ ಅಮೆರಿಕದ ರೈತರು, ಭಾರತದ ಕೃಷಿ ಉತ್ಪನ್ನಗಳಿಗಿಂತ ಕಡಿಮೆ ಬೆಲೆಗೆ ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಿದೆ. ಈ ಅಪಾಯವನ್ನು ತಪ್ಪಿಸಲಿಕ್ಕಾಗಿಯೇ ಇಲ್ಲಿಯವರೆಗಿನ ಎಲ್ಲ ಸರ್ಕಾರಗಳು ಅಮೆರಿಕದಿಂದ ಆಮದಾಗುತ್ತಿರುವ ಕೃಷಿ ಉತ್ಪನ್ನಗಳ ಮೇಲೆ ಹೆಚ್ಚಿನ ಪ್ರಮಾಣದ ಸುಂಕ ಹೇರುತ್ತಾ ಬಂದಿವೆ. ಈಗ ಈ ಆಮದು ಸುಂಕವನ್ನು ರದ್ದುಗೊಳಿಸಿದರೆ ದೇಶದ ಮಾರುಕಟ್ಟೆಗಳಲ್ಲಿ ಅಮೆರಿಕದ ಅಗ್ಗದ ದರದ ಆಹಾರಧಾನ್ಯ, ಹಣ್ಣು, ತರಕಾರಿ ಮತ್ತು ಡೇರಿ ಉತ್ಪನ್ನಗಳು ಲಗ್ಗೆ ಇಡಲಿವೆ. ಇದರಿಂದ ಭಾರತದ ರೈತರು ದಿವಾಳಿ ಸ್ಥಿತಿ ತಲುಪಲಿದ್ದು, ಅವರಿಗೆ ಆತ್ಮಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲದ ಸ್ಥಿತಿ ನಿರ್ಮಾಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಂಪೂರ್ಣವಾಗಿ ಶರಣಾಗತಿಯಾಗಿರುವ ಈ ಒಪ್ಪಂದಕ್ಕೆ ಭಾರತೀಯರ ಹಿತರಕ್ಷಣೆಯ ಉದ್ದೇಶ ಖಂಡಿತ ಇಲ್ಲ. ಅಮೆರಿಕದ ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ಎದುರಿಸುತ್ತಿರುವ ಮೋದಿಯವರ ಉದ್ಯಮ ಸ್ನೇಹಿತ ಅದಾನಿ ಅವರ ರಕ್ಷಣೆ ಮತ್ತು ಜೆಫ್ರಿ ಎಪ್‌ಸ್ಟೀನ್ ಫೈಲ್ಸ್‌ನಲ್ಲಿ ಕಾಣಿಸಿಕೊಂಡಿರುವ ಪ್ರಧಾನಿ ಮೋದಿ ಮತ್ತು ಸಂಪುಟದ ಸದಸ್ಯರ ಹೆಸರುಗಳಿಂದಾಗಿ ಸೃಷ್ಟಿಯಾಗಿರುವ ಒತ್ತಡದ ಭಾಗವಾಗಿ ಕೇಂದ್ರ ಸರ್ಕಾರ ದೇಶ ವಿರೋಧಿಯಾಗಿರುವ ಒಪ್ಪಂದಕ್ಕೆ ಒಪ್ಪಿಕೊಂಡಿದೆ ಎಂಬ ಆರೋಪವನ್ನು ನಿರಾಕರಿಸಲು ಸಾಧ್ಯವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಜಾಗತಿಕವಾಗಿ ಭಾರತ ಹಿಂದೆಂದೂ ಇಷ್ಟೊಂದು ದುರ್ಬಲವಾಗಿರಲಿಲ್ಲ. ರಾಜತಾಂತ್ರಿಕವಾಗಿ ಎದುರಾಗುವ ಒತ್ತಡಗಳನ್ನು ಇಲ್ಲಿಯವರೆಗಿನ ಎಲ್ಲಾ ಪ್ರಧಾನಿಗಳು ಸಮರ್ಥವಾಗಿ ಎದುರಿಸಿ ಭಾರತದ ಸಾರ್ವಭೌಮತೆ ಮತ್ತು ಗೌರವವನ್ನು ಕಾಪಾಡಿಕೊಂಡು ಬಂದಿದ್ದಾರೆ. ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಅಲಿಪ್ತ ನೀತಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿತ್ತು. ಪ್ರಧಾನಿ ಇಂದಿರಾಗಾಂಧಿಯವರು ದೈತ್ಯ ಅಮೆರಿಕದ ಒತ್ತಡವನ್ನು ಕೂಡಾ ಲೆಕ್ಕಿಸದೆ ಪಾಕಿಸ್ತಾನವನ್ನು ಮಣಿಸಿದ್ದು ಈಗ ಇತಿಹಾಸವಾಗಿದೆ. ಜಾಗತಿಕವಾಗಿ ಎಲ್ಲ ದೇಶಗಳು ಆರ್ಥಿಕ ಹಿಂಜರಿತದಿಂದ ತತ್ತರಿಸುತ್ತಿದ್ದಾಗ ಭಾರತದ ಆರ್ಥಿಕ ಸಾರ್ವಭೌಮತೆಯನ್ನು ಕಾಪಾಡಿದ್ದ ಡಾ.ಮನಮೋಹನ್ ಸಿಂಗ್ ಅವರು ಹೊಸ ಆರ್ಥಿಕ ಯುಗದ ಪ್ರವರ್ತಕರಾಗಿದ್ದರು ಎಂದಿದ್ದಾರೆ.

ಆದರೆ, ಇಂದು ವಿಶ್ವದಲ್ಲಿ ಭಾರತಕ್ಕೆ ಮಿತ್ರರಿಗಿಂತ ಶತ್ರುಗಳ ಸಂಖ್ಯೆ ಹೆಚ್ಚಾಗಿದೆ. ವಿದೇಶಾಂಗ ನೀತಿ ಎಂದರೆ ಭಾಷಣ, ಘೋಷಣೆ, ಕೈಕುಲುಕಾಟ ಮತ್ತು ಸ್ವಪ್ರಚಾರವಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿದುಕೊಂಡಂತಿದೆ. ಚೀನಾ ಮತ್ತು ಅಮೆರಿಕದಂತಹ ದೈತ್ಯ ಶಕ್ತಿಗಳ ನಡುವೆ ಸಿಕ್ಕಿಹಾಕಿಕೊಂಡಿರುವ ಭಾರತ ತನ್ನ ಅಸ್ಮಿತೆಯನ್ನು ಸಂಪೂರ್ಣ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ತಲೆಮೇಲೆ ಕೂರಿಸಿ ಮೆರೆದಾಡಿದ್ದ ನರೇಂದ್ರ ಮೋದಿ ಅವರು ಈಗ ಅದೇ ಟ್ರಂಪ್ ಅವರ ಆಜ್ಞಾಪಾಲಕರಾಗುವ ದೈನೇಸಿ ಸ‍್ಥಿತಿಗೆ ಬಂದಿರುವುದು ವಿಷಾದನೀಯ ಬೆಳವಣಿಗೆಯಾಗಿದೆ. ಮೋದಿಯವರ 56 ಇಂಚಿನ ಎದೆ ಮತ್ತು ವಿಶ್ವಗುರುವಿನ ಕಿರೀಟವನ್ನು ಡೊನಾಲ್ಡ್ ಟ್ರಂಪ್ ಪ್ರತಿದಿನ ಕುಟ್ಟಿ ಪುಡಿ ಮಾಡುತ್ತಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.

ವಿದೇಶಾಂಗ ನೀತಿಯಿಂದ ಹಿಡಿದು ಆರ್ಥಿಕ ಮತ್ತು ಸಾಮಾಜಿಕ ನೀತಿಯವರೆಗೂ ಎಲ್ಲ ರಂಗಗಳಲ್ಲಿಯೂ ಸಂಪೂರ್ಣವಾಗಿ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ರಾಜೀನಾಮೆ ಕೊಟ್ಟು ದೇಶದ ಮತ್ತು ಅಳಿದುಳಿದ ಅವರ ಗೌರವವನ್ನು ಉಳಿಸಿಕೊಳ್ಳುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...