Homeಮುಖಪುಟಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

- Advertisement -
- Advertisement -

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ. ಆದರೆ, ಅದರಲ್ಲಿ ತನ್ನ ವಿರುದ್ದ ಯಾವುದೇ ಪುರಾವೆಗಳು ಇಲ್ಲದ ಕಾರಣ ಬಹಿರಂಗಪಡಿಸುತ್ತಿಲ್ಲ ಎಂದಿದ್ದಾರೆ.

ಗುವಾಹಟಿಯಲ್ಲಿ ಸೋಮವಾರ (ಫೆ.9) ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೊಗೊಯ್, “ನನ್ನ ಪತ್ನಿ 2013ರಲ್ಲಿ ಕೆಲಸದ ನಿಮಿತ್ತ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದರು. ಆ ವರ್ಷದ ಡಿಸೆಂಬರ್‌ನಲ್ಲಿ 10 ದಿನಗಳ ಭೇಟಿಯ ಸಮಯದಲ್ಲಿ ನಾನು ಅವರ ಜೊತೆಗಿದ್ದೆ. ಈ ವಿಷಯದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಈ ಬಗ್ಗೆ ತನ್ನನ್ನು ಎಂದಿಗೂ ಪ್ರಶ್ನಿಸಿಲ್ಲ” ಎಂದು ಹೇಳಿದ್ದಾರೆ.

“ಸಿಎಂ ಶರ್ಮಾ ಎಷ್ಟು ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದರೆ, ಅವರು ನನ್ನ ಮಕ್ಕಗಳ ಬಗ್ಗೆಯೂ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಅವರ ಮಕ್ಕಳ ಬಗ್ಗೆಯೂ ನಮಗೆ ಗೊತ್ತಿದೆ, ಎಲ್ಲರಿಗೂ ಗೊತ್ತಿದೆ. ಆದರೆ, ಅವರ ಮಾಹಿತಿಯನ್ನು ಬಹಿರಂಗಪಡಿಸಲು ಬಯಸುವುದಿಲ್ಲ. ಹಿಮಂತ ಬಿಸ್ವಾ ಶರ್ಮಾ ತಾನು ಸಿಎಂ ಕುರ್ಚಿಯಲ್ಲಿ ಕೂರಲು ಅರ್ಹವಾದ ವ್ಯಕ್ತಿಯಲ್ಲ ಎಂದು ಸಾಬೀತುಪಡಿಸಿದ್ದಾರೆ. ಅವರ ಹೇಳಿಕೆಗಳು ಅಸ್ಸಾಂಗೆ ನಾಚಿಕೆಗೇಡು, ಅವರು ಸುಳ್ಳು ಸುದ್ದಿಯನ್ನು ಏಕೆ ಹರಡುತ್ತಿದ್ದಾರೆ? ಸುಪ್ರೀಂ ಕೋರ್ಟ್‌ ಈ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಳ್ಳಬೇಕು” ಎಂದು ಗೊಗೊಯ್ ಹೇಳಿದ್ದಾರೆ. ತನ್ನ ಅಪ್ರಾಪ್ತ ಮಕ್ಕಳನ್ನು ವಿವಾದಕ್ಕೆ ಎಳೆದಿರುವ ಸಿಎಂ ಶರ್ಮಾ ವಿರುದ್ದ ಕ್ರಮಕ್ಕೆ ಕಾನೂನು ಆಯ್ಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ತಾನು ನಿರಪರಾಧಿ ಎಂದು ಸಾಬೀತುಪಡಿಸಲು ಎಸ್‌ಐಟಿ ವರದಿಯನ್ನು ಬಹಿರಂಗಗೊಳಿಸುವಂತೆ ಗೊಗೊಯ್ ಒತ್ತಾಯಿಸಿದ್ದಾರೆ. “ನಾನು ಆರಂಭದಿಂದಲೂ ಹೇಳುತ್ತಿದ್ದೇನೆ, ನಾನು ಎಸ್‌ಐಟಿ ತನಿಖೆಯ ವಿರುದ್ದ ಇಲ್ಲ. ಎಸ್‌ಐಟಿ ವರದಿಯನ್ನು ಬಿಡುಗಡೆ ಮಾಡಬೇಕೆಂದೇ ನಾನೂ ಬಯಸುತ್ತಿದ್ದೇನೆ” ಎಂದು ಹೇಳಿದ್ದಾರೆ.

ಶರ್ಮಾ ಅವರ ಪತ್ರಿಕಾಗೋಷ್ಠಿಯ ಸಮಯದ ಬಗ್ಗೆ ಪ್ರತಿಕ್ರಿಯಿಸಿದ ಗೊಗೊಯ್, “ನಿನ್ನೆಯ ಸುದೀರ್ಘ ಪತ್ರಿಕಾಗೋಷ್ಠಿಯ ಹಿಂದಿನ ಪ್ರಮುಖ ಅಂಶವೆಂದರೆ ಕಾಂಗ್ರೆಸ್ ಪಕ್ಷದ ಜನಪ್ರಿಯತೆ ಹೆಚ್ಚುತ್ತಿದೆ… ಅಲ್ಲದೆ ರಾಷ್ಟ್ರೀಯ ಭದ್ರತೆಯ ವಿಷಯವಾಗಿದ್ದರೆ, ಅವರು ಕಳೆದ ಆರು ತಿಂಗಳಿನಿಂದ ಏಕೆ ಸುಮ್ಮನಿದ್ದರು?.. ಕಾಂಗ್ರೆಸ್ ಪಕ್ಷವು 12,000 ಬಿಘಾ ಭೂಮಿ ಸಿಎಂ ಕುಟುಂಬದ ಒಡೆತನದಲ್ಲಿದೆ ಎಂದು ಬಹಿರಂಗಪಡಿಸಿದ ನಂತರ ಸಿಎಂ ಪತ್ರಿಕಾಗೋಷ್ಠಿ ನಡೆಸಬೇಕಾಯಿತು” ಎಂದು ಗೊಗೊಯ್ ತಿಳಿಸಿದ್ದಾರೆ.

“ಸಿಎಂ ಶರ್ಮಾ ತಮ್ಮ ಸಾಮಾಜಿಕ ಮಾಧ್ಯಮದ ವಿಡಿಯೋಗಳ ಮೂಲಕ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ” ಎಂದು ಗೊಗೊಯ್ ಆರೋಪಿಸಿದ್ದಾರೆ.

ಸಿಎಂ ಶರ್ಮಾ ಅವರು ಗೌರವ್ ಗೊಗೊಯ್ ಅವರ ಪತ್ನಿ ಎಲಿಜಬೆತ್ ಕೋಲ್ಬರ್ನ್ ಮತ್ತು ಪಾಕಿಸ್ತಾನಿ ಪ್ರಜೆ ಅಲಿ ತೌಕೀರ್ ಶೇಖ್ ನಡುವೆ ಆಳವಾದ ಸಂಬಂಧವಿದೆ ಎಂದು ಆರೋಪಿಸಿದ್ದಾರೆ. ಗುಪ್ತಚರ ಬ್ಯೂರೋದ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಲಾಗಿದೆ ಎಂದು ಶರ್ಮಾ ಹೇಳಿಕೊಂಡಿದ್ದಾರೆ ಮತ್ತು ಗೌರವ್ ಗೊಗೊಯ್ ಅವರು 2013ರಲ್ಲಿ ಪಾಕಿಸ್ತಾನಕ್ಕೆ ‘ಅತ್ಯಂತ ಗೌಪ್ಯ ಭೇಟಿ’ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪಗಳನ್ನು ಗೌರವ್ ಗೊಗೊಯ್ ಅವರು “ಸಿ-ಗ್ರೇಡ್ ಸಿನಿಮಾ” ಮತ್ತು “ಸಂಪೂರ್ಣ ಸುಳ್ಳು” ಎಂದು ತಳ್ಳಿಹಾಕಿದ್ದಾರೆ.

ಭಾರತಕ್ಕೆ ವರ್ಗಾವಣೆಯಾಗುವ ಮೊದಲು ಕೋಲ್ಬರ್ನ್ ಅವರು ತೌಕೀರ್ ಶೇಖ್ ನಡೆಸುತ್ತಿದ್ದ ‘ಲೀಡ್ ಪಾಕಿಸ್ತಾನ್’ ಸಂಸ್ಥೆಯೊಂದಿಗೆ ಕೆಲಸ ಮಾಡಿದ್ದರು. ಭಾರತಕ್ಕೆ ಬಂದ ಮೇಲೆ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ನಿಯಮಗಳನ್ನು ಉಲ್ಲಂಘಿಸಿ ಶೇಖ್ ಅವರಿಂದ ಸಂಬಳ ಪಡೆಯುವುದನ್ನು ಮುಂದುವರೆಸಿದ್ದರು ಎಂದು ಶರ್ಮಾ ಆರೋಪ ಮಾಡಿದ್ದಾರೆ.

ಭಾರತದಲ್ಲಿ ಕೆಲಸ ಮಾಡಿದ ನಂತರ, ಕೋಲ್ಬರ್ನ್ ಶೇಖ್ ಅವರಿಗೆ ಮಾಹಿತಿಯನ್ನು ಸಂಗ್ರಹಿಸಿ ವರದಿಗಳನ್ನು ನೀಡಿದ್ದಾರೆ. ಗೊಗೊಯ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಪಾಕಿಸ್ತಾನಿ ಬ್ಯಾಂಕ್ ಖಾತೆಯನ್ನು ಘೋಷಿಸಿಲ್ಲ ಎಂದು ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...