Homeಮುಖಪುಟನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

- Advertisement -
- Advertisement -

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಲು ಲೋಕಸಭೆಗೆ ಬಂದಿಲ್ಲ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸೋಮವಾರ (ಫೆ.9) ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿಗೆ ಸಂಸದರಿಂದ ಭದ್ರತಾ ಬೆದರಿಕೆ ಇದೆ ಎಂಬ ಸ್ಪೀಕರ್ ಹೇಳಿಕೆಯನ್ನು ತಿರಸ್ಕರಿಸಿದ್ದು, “ಆರೋಪ ಮಾಡುವವರು ಕ್ರಮ ಕೈಗೊಳ್ಳಲಿ” ಎಂದು ಸವಾಲು ಹಾಕಿದ್ದಾರೆ. “ಯಾರಾದರು ಪ್ರಧಾನಿ ಮೇಲೆ ದಾಳಿ ಮಾಡುವುದಾಗಿ ಹೇಳಿದ್ದರೆ ದಯವಿಟ್ಟು ಎಫ್‌ಐಆರ್ ದಾಖಲಿಸಿ, ಆ ವ್ಯಕ್ತಿಯನ್ನು ಬಂಧಿಸಿ. ನೀವು ಯಾಕೆ ಹಾಗೆ ಮಾಡುತ್ತಿಲ್ಲ?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ಪ್ರಧಾನಿ ಸಂಸತ್ತಿಗೆ ಬರಲು ಹೆದರುತ್ತಿರುವುದು ಸಂಸದರ ಬೆದರಿಕೆಯಿಂದ ಅಲ್ಲ, ನಾನು ಆಡುತ್ತಿರುವ ಸತ್ಯದ ಮಾತುಗಳನ್ನು ಕೇಳಿ. ಅವರು ಸತ್ಯವನ್ನು ಎದುರಿಸಲಾಗದೆ ಭಯಭೀತರಾಗಿದ್ದಾರೆ. ಇದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಕಾಂಗ್ರೆಸ್ ಸದಸ್ಯರು ಪ್ರಧಾನಿಯ ಮೇಲೆ ದಾಳಿ ಮಾಡುವ ಪ್ರಶ್ನೆಯೇ ಇಲ್ಲ ಎಂದಿರುವ ಅವರು, ಪ್ರಧಾನಿ ಮೋದಿಯವರು ಸದನವನ್ನು ಎದುರಿಸುವ ಧೈರ್ಯ ತೋರಿಸಬೇಕಿತ್ತು” ಎಂದಿದ್ದಾರೆ.

“ನಾವು ಏನು ಹೇಳುತ್ತೇವೆಯೋ ಅದಕ್ಕೆ ಅವರು ಹೆದರುತ್ತಿದ್ದಾರೆ, ಮೊದಲ ಹೆಜ್ಜೆಯಾಗಿ ನರವಾಣೆಯವರ ಪುಸ್ತಕವನ್ನು ಅವರಿಗೆ ನೀಡುತ್ತೇವೆ ಎಂಬ ಭಯವಿದೆ” ಎಂದು ಹೇಳಿದ್ದಾರೆ.

“ಸರ್ಕಾರ ಬಜೆಟ್ ಕುರಿತು ಹೆಚ್ಚಿನ ಚರ್ಚೆ ಮಾಡಲು ಹಿಂಜರಿಯುತ್ತಿದೆ. ನನ್ನ ಪ್ರಕಾರ, ಅವರು ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಅದು ನಮ್ಮ ರೈತರ ಮೇಲೆ ಬೀರುವ ಪರಿಣಾಮದ ಕುರಿತು ಚರ್ಚಿಸುವ ಬಗ್ಗೆ ಚಿಂತಿತರಾಗಿದ್ದಾರೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ನಾನು ನರವಾಣೆಯವರ ಪುಸ್ತಕದ ಕುರಿತು ಮಾತನಾಡಬಾರದು ಎಂದು ಸದನವನ್ನು ಪದೇ ಪದೇ ಮುಂದೂಡಲಾಗುತ್ತಿದೆ. ಆರಂಭದಲ್ಲಿ ನರವಾಣೆಯವರ ಅಪ್ರಕಟಿತ ಪುಸ್ತಕದ ಕುರಿತು ಸದನದಲ್ಲಿ ಉಲ್ಲೇಖಿಸಬಾರದು ಎಂದರು. ನಾನು ಪುಸ್ತಕದ ಬಗ್ಗೆ ಉಲ್ಲೇಖಿಸುತ್ತಿಲ್ಲ, ಅದಕ್ಕೆ ಸಂಬಂಧಿಸಿದ ಪತ್ರಿಕಾ ವರದಿಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ ಎಂದೆ. ನಂತರ ಅವರು, ಲೇಖನದ ಕುರಿತೂ ಪ್ರಸ್ತಾಪಿಸಬಾರದು ಎಂದರು. ನಾನು ಮಾತನಾಡಲೇಬೇಕು ಎಂದೆ, ಅದಕ್ಕೆ ಅವರು ನಾನು ಮಾತನಾಡದಂತೆ ತಡೆಯುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪುಸ್ತಕ ಪ್ರಕಟವಾಗಿಲ್ಲ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ಪುಸ್ತಕ ಪ್ರಕಟವಾಗಿದೆ ಮತ್ತು ನಮಗೆ ಅದರ ಪ್ರತಿ ಸಿಕ್ಕಿದೆ. ರಾಷ್ಟ್ರಪತಿಯ ಭಾಷಣಕ್ಕೆ ವಂದನಾ ನಿರ್ಣಯದಲ್ಲಿ ವಿರೋಧಪಕ್ಷದ ನಾಯಕ ಸೇರಿದಂತೆ ಇಡೀ ವಿರೋಧ ಪಕ್ಷಕ್ಕೆ ಅವಕಾಶ ನೀಡದಿರುವುದು ಅನ್ಯಾಯ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...