Homeಮುಖಪುಟ'ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ' : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ ಲಭ್ಯವಿತ್ತು ಎಂದು ಪ್ರತಿಪಾದಿಸಿರುವ ರಾಹುಲ್ ಗಾಂಧಿ, ಈ ವಿಚಾರದಲ್ಲಿ ಪ್ರಕಾಶಕರು ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದ್ದಾರೆ. ಈ ಪುಸ್ತಕದ ಬಿಡುಗಡೆ ಮತ್ತು ಲಭ್ಯತೆಯ ಕುರಿತು ಪ್ರಕಾಶಕರು ನೀಡುತ್ತಿರುವ ಹೇಳಿಕೆಗಳು ಸತ್ಯಕ್ಕೆ ದೂರವಾಗಿವೆ ಎಂದಿದ್ದಾರೆ.

ರಾಹುಲ್ ಗಾಂಧಿಯವರು ಪ್ರಕಾಶನ ಸಂಸ್ಥೆಯಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ನೀಡಿದ ಹೇಳಿಕೆಯನ್ನು ಪ್ರಶ್ನಿಸಿದ್ದಾರೆ. ಪೆಂಗ್ವಿನ್ ಹೌಸ್ ನರವಾಣೆ ಅವರ ಪುಸ್ತಕವು ಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಎಲ್ಲಿಯೂ ಪ್ರಕಟವಾಗಿಲ್ಲ ಮತ್ತು ಸಾರ್ವಜನಿಕರಿಗೆ ಲಭ್ಯವಿಲ್ಲ ಎಂದು ಹೇಳಿದೆ. ಆದರೆ, ಇದನ್ನು ನಿರಾಕರಿಸಿದ ರಾಹುಲ್ ಗಾಂಧಿ, 2023ರಲ್ಲಿ ಜನರಲ್ ನರವಾಣೆ ಅವರು ಮಾಡಿದ್ದ ಟ್ವೀಟ್‌ ಅನ್ನು ಉಲ್ಲೇಖಿಸಿದ್ದು, “ನನ್ನ ಪುಸ್ತಕ ಈಗ ಲಭ್ಯವಿದೆ” ಎಂದು ಸ್ವತಃ ನರವಾಣೆ ಅವರೇ ತಿಳಿಸಿದ್ದರು ಎಂದು ನೆನಪಿಸಿದ್ದಾರೆ.

“ಒಂದೋ ಪ್ರಕಾಶಕರು ಸುಳ್ಳು ಹೇಳುತ್ತಿದ್ದಾರೆ, ಇಲ್ಲಾ ಮಾಜಿ ಸೇನಾ ಮುಖ್ಯಸ್ಥರು ಸುಳ್ಳು ಹೇಳುತ್ತಿರಬೇಕು; ನಾನು ಪೆಂಗ್ವಿನ್ ಸಂಸ್ಥೆಗಿಂತ ಜನರಲ್ ನರವಾಣೆ ಅವರ ಮಾತನ್ನೇ ನಂಬುತ್ತೇನೆ” ಎಂದು ರಾಹುಲ್ ಹೇಳಿದ್ದಾರೆ. ಈ ಪುಸ್ತಕವು ಅಮೆಜಾನ್‌ನಂತಹ ತಾಣಗಳಲ್ಲಿ ಲಭ್ಯವಿತ್ತು ಎಂಬುದು ರಾಹುಲ್ ಗಾಂಧಿ ಅವರ ವಾದವಾಗಿದ್ದು, ಮೋದಿ ಸರ್ಕಾರದ ಬಗೆಗಿನ ಕೆಲವು ” ಸತ್ಯಗಳನ್ನು” ಮರೆಮಾಚಲು ಈ ರೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ

ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಮಸ್ಕಾರ ಸ್ನೇಹಿತರೇ.. ನನ್ನ ಪುಸ್ತಕ ಈಗ ಲಭ್ಯವಿದೆ. ಲಿಂಕ್ ಫಾಲೋ ಮಾಡಿ.. ಓದಿ ಸಂತೋಷವಾಗಿರಿ. ಜೈ ಹಿಂದ್” ಎಂದು ನರವಾಣೆ ಅವರು ಹಾಕಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ ಓದಿ ಕೇಳಿಸಿದ್ದಾರೆ.

“ಇದು ಜನರಲ್ ನರವಾಣೆ ಅವರು ಮಾಡಿರುವ ಟ್ವೀಟ್. ನಾನು ಹೇಳಲು ಬಯಸುತ್ತಿರುವ ಅಂಶವೆಂದರೆ, ಇಲ್ಲಿ ಒಂದೋ ನರವಾಣೆ ಅವರು ಸುಳ್ಳು ಹೇಳುತ್ತಿರಬೇಕು ಅಥವಾ ಪೆಂಗ್ವಿನ್ ಪ್ರಕಾಶನ ಸಂಸ್ಥೆ ಸುಳ್ಳು ಹೇಳುತ್ತಿರಬೇಕು. ಇಬ್ಬರೂ ಏಕಕಾಲಕ್ಕೆ ಸತ್ಯ ಹೇಳಲು ಸಾಧ್ಯವಿಲ್ಲ. ಆದರೆ, ನಾನು ಮಾಜಿ ಸೇನಾ ಮುಖ್ಯಸ್ಥರ ಮಾತನ್ನು ನಂಬುತ್ತೇನೆ; ಅವರು ಸುಳ್ಳು ಹೇಳುತ್ತಾರೆ ಎಂದು ನಾನು ಭಾವಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪುಸ್ತಕ ಲಭ್ಯವಿತ್ತು ಎಂಬ ನರವಾಣೆ ಅವರ ಹಿಂದಿನ ಟ್ವೀಟ್ ಸತ್ಯವಾಗಿದ್ದರೆ, ಈಗ ಪುಸ್ತಕ ಲಭ್ಯವೇ ಇಲ್ಲ ಎನ್ನುತ್ತಿರುವ ಪ್ರಕಾಶಕರ ಮಾತು ಸುಳ್ಳಾಗಿರಬೇಕು ಎಂಬುವುದು ರಾಹುಲ್ ಗಾಂಧಿಯವರ ತರ್ಕವಾಗಿದೆ.

“ಪೆಂಗ್ವಿನ್ ಪ್ರಕಾಶನ ಸಂಸ್ಥೆಯು ಈ ಪುಸ್ತಕ ಪ್ರಕಟವಾಗಿಲ್ಲ ಎಂದು ಹೇಳುತ್ತಿದೆ. ಆದರೆ ಅದೇ ಪುಸ್ತಕವು ಅಮೆಜಾನ್‌ನಲ್ಲಿ ಲಭ್ಯವಿದೆ. ಜನರಲ್ ನರವಾಣೆ ಅವರು 2023ರಲ್ಲೇ ಟ್ವೀಟ್ ಮಾಡಿ, ‘ನನ್ನ ಪುಸ್ತಕವನ್ನು ದಯವಿಟ್ಟು ಖರೀದಿಸಿ’ ಎಂದು ಕೇಳಿಕೊಂಡಿದ್ದರು. ಇದನ್ನು ನಾನು ಆಗಲೇ ಓದಿ ತೋರಿಸಿದ್ದೇನೆ. ಈಗ ನೀವೇ ಹೇಳಿ, ನೀವು ನರವಾಣೆ ಅವರಿಗಿಂತ ಪೆಂಗ್ವಿನ್ ಸಂಸ್ಥೆಯನ್ನು ನಂಬುತ್ತೀರಾ? ನಾನಂತೂ ಜನರಲ್ ನರವಾಣೆ ಅವರನ್ನೇ ನಂಬುತ್ತೇನೆ,” ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಜುಗರ ಉಂಟುಮಾಡುವಂತಹ ಕೆಲವು ವಿಚಾರಗಳು ನರವಾಣೆ ಅವರ ಪುಸ್ತಕದಲ್ಲಿದೆ. ಹಾಗಾಗಿ, ಖಂಡಿತವಾಗಿಯೂ, ಇಲ್ಲಿ ಪೆಂಗ್ವಿನ್ ಪ್ರಕಾಶನ ಸಂಸ್ಥೆಯು ಸತ್ಯ ಹೇಳುತ್ತಿದೆಯೇ ಅಥವಾ ಮಾಜಿ ಸೇನಾ ಮುಖ್ಯಸ್ಥರು ಸತ್ಯ ಹೇಳುತ್ತಿದ್ದಾರೆಯೇ ಎಂಬುದನ್ನು ನೀವೇ ನಿರ್ಧರಿಸಬೇಕು. ಸದ್ಯದ ಮುಖ್ಯವಾದ ವಿಚಾರವೇ ಇದು,” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅಮೆಜಾನ್‌ನ ಅಮೆರಿಕದ ವೆಬ್‌ಸೈಟ್‌ನಲ್ಲಿ ನರವಾಣೆ ಅವರ ಪುಸ್ತಕವು ಮೇ 1, 2024 ರಂದೇ ಪ್ರಕಟವಾಗಿದೆ ಎಂದು ತೋರಿಸುತ್ತಿದೆ. ಆದರೆ, ಪ್ರಸ್ತುತ ಅದು “ಲಭ್ಯವಿಲ್ಲ” ಎಂದು ನಮೂದಿಸಲಾಗಿದೆ. ಇದೇ ವೇಳೆ, ಭಾರತದ ಅಮೆಜಾನ್ ವೆಬ್‌ಸೈಟ್‌ನಲ್ಲಿ ಹುಡುಕಿದಾಗ ಈ ಪುಟವು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸಂದೇಶ ಕಾಣಿಸುತ್ತಿದೆ. ಪ್ರಕಾಶಕರು ಪುಸ್ತಕ ಬಿಡುಗಡೆಯೇ ಆಗಿಲ್ಲ ಎನ್ನುತ್ತಿದ್ದರೂ, ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳಲ್ಲಿ ಪ್ರಕಟಣೆಯ ದಿನಾಂಕ ನಮೂದಾಗಿರುವುದು ರಾಹುಲ್ ಗಾಂಧಿಯವರ “ಪುಸ್ತಕ ಲಭ್ಯವಿತ್ತು” ಎಂಬ ವಾದಕ್ಕೆ ಆಧಾರ ನೀಡಿದಂತಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸಂಸ್ಥೆಯು ಹೇಳಿಕೆ ನೀಡಿ, ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಎಂಬ ಆತ್ಮಕಥೆಯ ವಿಶೇಷ ಪ್ರಕಟಣಾ ಹಕ್ಕುಗಳನ್ನು ತಾವು ಹೊಂದಿರುವುದಾಗಿ ತಿಳಿಸಿದೆ. ಮಾರುಕಟ್ಟೆಯಲ್ಲಿ ಅನಧಿಕೃತ ಪ್ರತಿಗಳು ಲಭ್ಯವಿವೆ ಎಂಬ ವರದಿಗಳ ನಡುವೆ, ಈ ಪುಸ್ತಕವು ಇದುವರೆಗೆ ಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಅಧಿಕೃತವಾಗಿ ಪ್ರಕಟವಾಗಿಲ್ಲ ಮತ್ತು ಸಾರ್ವಜನಿಕರಿಗೆ ಲಭ್ಯವಿಲ್ಲ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...