Homeಮುಖಪುಟಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

- Advertisement -
- Advertisement -

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ.

“ಪುಸ್ತಕದ ಮುದ್ರಿತ ಅಥವಾ ಡಿಜಿಟಲ್ ರೂಪದ ಯಾವುದೇ ಪ್ರತಿಗಳನ್ನು ಸಾರ್ವಜನಿಕವಾಗಿ ಪ್ರಕಟಿಸಿಲ್ಲ, ವಿತರಿಸಿಲ್ಲ, ಮಾರಾಟ ಮಾಡಿಲ್ಲ ಅಥವಾ ಲಭ್ಯವಾಗುವಂತೆ ಮಾಡಿಲ್ಲ” ಎಂಬ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದ(ಪಿಆರ್‌ಹೆಚ್‌ಐ) ಹೇಳಿಕೆಯನ್ನು ಅವರು ಮಂಗಳವಾರ (ಫೆ.10,2026) ಪ್ರತಿಧ್ವನಿಸಿದ್ದಾರೆ.

ಪುಸ್ತಕದ ವಿಚಾರ ಸಂಸತ್ತಿನ ಒಳಗೆ ಮತ್ತು ಹೊರಗೆ ರಾಜಕೀಯ ಜಟಾಪಟಿಗೆ ಕಾರಣವಾಗಿರುವ ನಡುವೆ, ಅದರ ಪ್ರಕಾಶಕರಾದ ‘ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ’ ಸೋಮವಾರ (ಫೆ.9,2026) ಸ್ಪಷ್ಟನೆ ಕೊಟ್ಟಿದೆ.

“ಇತ್ತೀಚಿನ ಸಾರ್ವಜನಿಕ ಚರ್ಚೆಗಳು ಮತ್ತು ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ, ಭಾರತದ ಮಾಜಿ ಭೂಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಕಥೆಯಾದ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಪುಸ್ತಕದ ಸಂಪೂರ್ಣ ಪ್ರಕಟಣಾ ಹಕ್ಕುಗಳನ್ನು ನಾವು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸ್ಪಷ್ಟಪಡಿಸಲು ಬಯಸುತ್ತದೆ. ಈ ಪುಸ್ತಕವು ಇನ್ನೂ ಪ್ರಕಟಗೊಂಡಿಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತೇವೆ. ಮುದ್ರಿತ ಅಥವಾ ಡಿಜಿಟಲ್ ರೂಪದ ಯಾವುದೇ ಪ್ರತಿಗಳನ್ನು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದಿಂದ ಸಾರ್ವಜನಿಕವಾಗಿ ಪ್ರಕಟಿಸಿಲ್ಲ, ವಿತರಿಸಿಲ್ಲ, ಮಾರಾಟ ಮಾಡಿಲ್ಲ ಅಥವಾ ಲಭ್ಯವಾಗುವಂತೆ ಮಾಡಿಲ್ಲ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ.

ಮುಂದುವರಿದು, “ಪ್ರಸ್ತುತ ಚಲಾವಣೆಯಲ್ಲಿರುವ ಈ ಪುಸ್ತಕದ ಯಾವುದೇ ಪ್ರತಿಗಳು, ಅವು ಪೂರ್ಣವಾಗಿರಲಿ ಅಥವಾ ಭಾಗಶಃವಾಗಿರಲಿ, ಮುದ್ರಿತ, ಡಿಜಿಟಲ್, ಪಿಡಿಎಫ್‌ ಅಥವಾ ಇನ್ನಾವುದೇ ರೂಪದಲ್ಲಿದ್ದರೂ ಮತ್ತು ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಪ್ಲಾಟ್‌ಫಾರ್ಮ್‌ನಲ್ಲಿದ್ದರೂ, ಅವು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದ ಹಕ್ಕುಸ್ವಾಮ್ಯದ ಉಲ್ಲಂಘನೆಯಾಗುತ್ತವೆ ಮತ್ತು ಅದನ್ನು ತಕ್ಷಣವೇ ನಿಲ್ಲಿಸಬೇಕು” ಎಂದು ಹೇಳಿದೆ.

ಪೆಂಗ್ವಿನ್ ಹೌಸ್‌ನ ಸ್ಪಷ್ಟೀಕರಣದ ಈ ಪೋಸ್ಟ್ ಅನ್ನು ನರವಾಣೆ ಅವರು ಹಂಚಿಕೊಂಡಿದ್ದು, “ಇದು ಪುಸ್ತಕದ ಸ್ಥಿತಿ” ಎಂದು ಬರೆದುಕೊಂಡಿದ್ದಾರೆ.

ಅಂದು ಪ್ರಿ-ಆರ್ಡರ್ ಮಾಡಿ ಎಂದಿದ್ದರು ನರವಾಣೆ

ಪುಸ್ತಕ ಪ್ರಕಟಿಸಿಲ್ಲ ಎಂಬ ಪೆಂಗ್ವಿನ್ ಹೌಸ್‌ನ ಹೇಳಿಕೆಯನ್ನು ಪ್ರತಿಧ್ವನಿಸಿರುವ ನರವಾಣೆ ಅವರು, ಈ ಹಿಂದೆ 2023ರ ಡಿಸೆಂಬರ್ 15ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ “ನಮಸ್ಕಾರ ಸ್ನೇಹಿತರೇ. ನನ್ನ ಪುಸ್ತಕ ಈಗ ಲಭ್ಯವಿದೆ. ಲಿಂಕ್ ಫಾಲೋ ಮಾಡಿ, ಓದಿ ಸಂತೋಷವಾಗಿರಿ. ಜೈ ಹಿಂದ್” ಎಂದು ಪೋಸ್ಟ್ ಹಾಕಿದ್ದರು. ಈ ಪೋಸ್ಟ್‌ನಲ್ಲಿ ಅವರು ಪೆಂಗ್ವಿನ್ ಹೌಸ್ ತನ್ನ ಪುಸ್ತಕದ ಕುರಿತು ಹಾಕಿದ್ದ ಪೋಸ್ಟ್‌ನ ಸ್ಕ್ರೀನ್ ಶಾಟ್‌ ಅನ್ನು ಹಂಚಿಕೊಂಡಿದ್ದರು.

ಪೆಂಗ್ವಿನ್ ಹೌಸ್ ಈ ರೀತಿ ಪೋಸ್ಟ್ ಹಾಕಿತ್ತು : “ನಾವು #VijayDiwas (ವಿಜಯ್ ದಿವಸ್) ಆಚರಣೆಗೆ ಸಜ್ಜಾಗುತ್ತಿರುವ ಈ ಸಂದರ್ಭದಲ್ಲಿ, ದಶಕಗಳ ಕಾಲ ಭಾರತಕ್ಕಾಗಿ ಹೋರಾಡಿದ 28ನೇ ಭೂಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ನರವಾಣೆ ಅವರಿಂದ ಆರಂಭಿಸಿ, ನಮ್ಮ ದೇಶದ ವೀರ ನಾಯಕರನ್ನು ಗೌರವಿಸೋಣ. ಅವರ ಕಥೆಯನ್ನು ತಿಳಿಯಲು, #4StarsOfDestiny ಪುಸ್ತಕವನ್ನು ಈಗಲೇ ಮುಂಗಡವಾಗಿ ಕಾಯ್ದಿರಿಸಿ (Pre-order): amzn.eu/d/fM48WQP”

ರಾಹುಲ್ ಗಾಂಧಿಯ ಪ್ರಶ್ನೆ ಏನು?

ಪೆಂಗ್ವಿನ್ ಹೌಸ್ ಪುಸ್ತಕ ಪ್ರಕಟಗೊಂಡಿಲ್ಲ ಎಂದು ಸ್ಪಷ್ಟನೆ ಕೊಟ್ಟಿರುವುದನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ಅಂದು ಸ್ವತಃ ನರವಾಣೆ ಅವರೇ ನನ್ನ ಪುಸ್ತಕ ಮುಂಗಡ ಆರ್ಡರ್ ಮಾಡಿ, ಓದಿ ಎಂದಿದ್ದರು. ಪೆಂಗ್ವಿನ್ ಹೌಸ್ ಕೂಡ ಇದನ್ನೇ ಹೇಳಿತ್ತು” ಆದರೆ, ಈಗ ಪೆಂಗ್ವಿನ್ ಹೌಸ್ ಪುಸ್ತಕ ಪ್ರಕಟಗೊಂಡಿಲ್ಲ ಎಂದು ಹೇಳುತ್ತಿದೆ. ಹಾಗಾದರೆ, ಇಲ್ಲಿ ಸುಳ್ಳು ಹೇಳುತ್ತಿರುವುದು ಯಾರು?” ಎಂದು ರಾಹುಲ್ ಗಾಂಧಿ ಕೇಳಿದ್ದಾರೆ.

ಮಂಗಳವಾರ ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಮಸ್ಕಾರ ಸ್ನೇಹಿತರೇ.. ನನ್ನ ಪುಸ್ತಕ ಈಗ ಲಭ್ಯವಿದೆ. ಲಿಂಕ್ ಫಾಲೋ ಮಾಡಿ.. ಓದಿ ಸಂತೋಷವಾಗಿರಿ. ಜೈ ಹಿಂದ್” ಎಂದು ನರವಾಣೆ ಅವರು ಹಾಕಿದ್ದ ಹಳೆಯ ಸಾಮಾಜಿಕ ಮಾಧ್ಯಮ ಪೋಸ್ಟ್ ಓದಿ ಕೇಳಿಸಿದ್ದಾರೆ.

“ಇದು ಜನರಲ್ ನರವಾಣೆ ಅವರು ಮಾಡಿರುವ ಟ್ವೀಟ್. ನಾನು ಹೇಳಲು ಬಯಸುತ್ತಿರುವ ಅಂಶವೆಂದರೆ, ಇಲ್ಲಿ ಒಂದೋ ನರವಾಣೆ ಅವರು ಸುಳ್ಳು ಹೇಳುತ್ತಿರಬೇಕು ಅಥವಾ ಪೆಂಗ್ವಿನ್ ಪ್ರಕಾಶನ ಸಂಸ್ಥೆ ಸುಳ್ಳು ಹೇಳುತ್ತಿರಬೇಕು. ಇಬ್ಬರೂ ಏಕಕಾಲಕ್ಕೆ ಸತ್ಯ ಹೇಳಲು ಸಾಧ್ಯವಿಲ್ಲ. ಆದರೆ, ನಾನು ಮಾಜಿ ಸೇನಾ ಮುಖ್ಯಸ್ಥರ ಮಾತನ್ನು ನಂಬುತ್ತೇನೆ; ಅವರು ಸುಳ್ಳು ಹೇಳುತ್ತಾರೆ ಎಂದು ನಾನು ಭಾವಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮುಂದುವರಿದು, “ಪೆಂಗ್ವಿನ್ ಪ್ರಕಾಶನ ಸಂಸ್ಥೆಯು ಈ ಪುಸ್ತಕ ಪ್ರಕಟವಾಗಿಲ್ಲ ಎಂದು ಹೇಳುತ್ತಿದೆ. ಆದರೆ ಅದೇ ಪುಸ್ತಕವು ಅಮೆಜಾನ್‌ನಲ್ಲಿ ಲಭ್ಯವಿದೆ. ಜನರಲ್ ನರವಾಣೆ ಅವರು 2023ರಲ್ಲೇ ಟ್ವೀಟ್ ಮಾಡಿ, ‘ನನ್ನ ಪುಸ್ತಕವನ್ನು ದಯವಿಟ್ಟು ಖರೀದಿಸಿ’ ಎಂದು ಕೇಳಿಕೊಂಡಿದ್ದರು. ಇದನ್ನು ನಾನು ಆಗಲೇ ಓದಿ ತೋರಿಸಿದ್ದೇನೆ. ಈಗ ನೀವೇ ಹೇಳಿ, ನೀವು ನರವಾಣೆ ಅವರಿಗಿಂತ ಪೆಂಗ್ವಿನ್ ಸಂಸ್ಥೆಯನ್ನು ನಂಬುತ್ತೀರಾ? ನಾನಂತೂ ಜನರಲ್ ನರವಾಣೆ ಅವರನ್ನೇ ನಂಬುತ್ತೇನೆ” ಎಂದಿದ್ದಾರೆ.

ಅಮೆಜಾನ್‌ನಲ್ಲಿತ್ತು ಪುಸ್ತಕ

ಅಮೆಜಾನ್‌ನ ಅಮೆರಿಕದ ವೆಬ್‌ಸೈಟ್‌ನಲ್ಲಿ ನರವಾಣೆ ಅವರ ಪುಸ್ತಕವು ಮೇ 1, 2024 ರಂದೇ ಪ್ರಕಟವಾಗಿದೆ ಎಂದು ತೋರಿಸುತ್ತಿದೆ. ಆದರೆ, ಪ್ರಸ್ತುತ ಅದು “ಲಭ್ಯವಿಲ್ಲ” ಎಂದು ನಮೂದಿಸಲಾಗಿದೆ. ಇದೇ ವೇಳೆ, ಭಾರತದ ಅಮೆಜಾನ್ ವೆಬ್‌ಸೈಟ್‌ನಲ್ಲಿ ಹುಡುಕಿದಾಗ ಈ ಪುಟವು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸಂದೇಶ ಕಾಣಿಸುತ್ತಿದೆ. ಪ್ರಕಾಶಕರು ಪುಸ್ತಕ ಬಿಡುಗಡೆಯೇ ಆಗಿಲ್ಲ ಎನ್ನುತ್ತಿದ್ದರೂ, ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳಲ್ಲಿ ಪ್ರಕಟಣೆಯ ದಿನಾಂಕ ನಮೂದಾಗಿರುವುದು ರಾಹುಲ್ ಗಾಂಧಿಯವರ “ಪುಸ್ತಕ ಲಭ್ಯವಿತ್ತು” ಎಂಬ ವಾದಕ್ಕೆ ಆಧಾರ ನೀಡಿದಂತಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಕೊನೆಯದಾಗಿ…ಪೆಂಗ್ವಿನ್ ಹೌಸ್ ಪುಸ್ತಕ ಪ್ರಕಟಿಸುವ ಮುನ್ನವೇ ಮುಂಗಡ ಬುಕ್ಕಿಂಗ್ ಮಾಡಿ ಎಂದು ಪೋಸ್ಟ್ ಹಾಕಿತ್ತೇ..? ನರವಾಣೆ ಕೂಡ ಇದೇ ಅರ್ಥದಲ್ಲಿ ಪೋಸ್ಟ್ ಹಂಚಿಕೊಂಡಿದ್ದರೇ? ಎಂಬ ಪ್ರಶ್ನೆ ಈಗ ಮೂಡಿದೆ. ಒಂದು ವೇಳೆ ಪ್ರಕಟಗೊಳ್ಳುವ ಮುನ್ನವೇ ಮುಂಗಡ ಬುಕ್ಕಿಂಗ್ ಮಾಡಿ ಎಂದಿದ್ದರೆ, ಪ್ರತಿಷ್ಠಿತ ಪ್ರಕಾಶನ ಸಂಸ್ಥೆ ಬುಕ್ಕಿಂಗ್ ಮಾಡಿದ ಜನರಿಗೆ ತಕ್ಷಣ ಎಲ್ಲಿಂದ ಪುಸ್ತಕ ಕೊಡುತ್ತಿತ್ತು? ಇಲ್ಲ ನಾವು ತಡವಾಗಿ ಕೊಡುತ್ತಿದ್ದೆವು ಎನ್ನುವುದಾದರೆ ಸಂಸ್ಥೆಯ ಉತ್ತಮ ಹೆಸರಿಗೆ (Good Will) ಹಿನ್ನಡೆಯಾದಂತೆ ಅಲ್ಲವೇ?

ಇನ್ನು, 2026ರ ಫೆ.10ರವರೆಗೆ ಪುಸ್ತಕದ ಕುರಿತ ರಾಜಕೀಯ ಜಟಾಪಟಿಯ ಬಗ್ಗೆ ನರವಾಣೆ ಮೌನವಾಗಿದ್ದರು. ಫೆ.10ರಂದು ರಾಹುಲ್ ಗಾಂಧಿ ನರವಾಣೆ ಈ ಹಿಂದೆ ಹೀಗೆ ಹೇಳಿದ್ದಾರೆ, ಈಗ ಪೆಂಗ್ವಿನ್ ಹೌಸ್ ಈ ರೀತಿ ಹೇಳುತ್ತಿದೆ ಎಂದು ನರವಾಣೆ ಅವರ ಹಳೆಯ ಟ್ವೀಟ್ ಓದಿದ ಬಳಿಕ, ನರವಾಣೆ ಮೌನ ಮುರಿದಿದ್ದಾರೆ. ಪೆಂಗ್ವಿನ್ ಹೌಸ್ ಹೇಳಿಕೆಯನ್ನು ಪ್ರತಿಧ್ವನಿಸಿದ್ದಾರೆ. ಹಾಗಾಗಿ, ನರವಾಣೆ ತಾನು ಈ ಹಿಂದೆ ಹಾಕಿದ್ದ ಪೋಸ್ಟ್‌ಗೆ ತದ್ವಿರುದ್ದವಾದ ನಿಲುವು ವ್ಯಕ್ತಪಡಿಸಿದಂತೆ ಕಾಣುತ್ತಿದೆ. ನರವಾಣೆಯ ಇತ್ತೀಚಿನ ಪೋಸ್ಟ್‌ನಿಂದ “ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ” ಎಂಬ ರಾಹುಲ್ ಗಾಂಧಿಯ ಫೆ.10ರ ಹೇಳಿಕೆ ಅರ್ಥ ಕಳೆದುಕೊಂಡಂತಾಗಿದೆ. ಯಾವುದು ಸತ್ಯ? ಏನನ್ನು ನಂಬಬೇಕು ಎಂಬ ಗೊಂದಲ ಮೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....

ಕಾಂಗ್ರೆಸ್ ಮುಸ್ಲಿಮರನ್ನು ದುರ್ಬಳಕೆ ಮಾಡಿಕೊಂಡಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ದಾವಣಗೆರೆ: ಕಾಂಗ್ರೆಸ್ ಪಕ್ಷವು ಇಷ್ಟು ವರ್ಷಗಳಿಂದ ಮುಸ್ಲಿಮರನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಮುಸ್ಲಿಮರು ತಮ್ಮೊಳಗೆ ಚರ್ಚಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...