Homeಮುಖಪುಟಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

- Advertisement -
- Advertisement -

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

“ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ಮರುಪರಿಶೀಲಿಸುವಂತೆ ನ್ಯಾಯಾಲಯ ಸೂಚಿಸಿರುವುದನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಆದರೆ, ಅವರನ್ನು ಬಿಡುಗಡೆಗೊಳಿಸುತ್ತಿಲ್ಲ” ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ಹೇಳಿರುವುದಾಗಿ ಲೈವ್‌ ಲಾ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ.ಬಿ. ವರಾಳೆ ಅವರನ್ನೊಳಗೊಂಡ ಪೀಠದ ಮುಂದೆ ಮಾಹಿತಿ ನೀಡಿದ ತುಷಾರ್ ಮೆಹ್ತಾ “ಜೈಲು ಕೈಪಿಡಿಯ ನಿಯಮದಂತೆ ಸೋನಮ್ ವಾಂಗ್‌ಚುಕ್ ಅವರನ್ನು ಇದುವರೆಗೆ 28 ಬಾರಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರು ಸಂಪೂರ್ಣವಾಗಿ ಸದೃಢರಾಗಿದ್ದು, ಆರೋಗ್ಯವಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಮುಂದುವರಿದು ಮಾತನಾಡಿದ ಮೆಹ್ತಾ, “ವಾಂಗ್‌ಚುಕ್ ಅವರಿಗೆ ಕೆಲವು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಂಡಿವೆ, ಆದರೆ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಪ್ರಿವೆಂಟಿವ್ ಬಂಧನಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ವಿನಾಯಿತಿಗಳನ್ನು ನೀಡಲು ಸಾಧ್ಯವಿಲ್ಲ ಮತ್ತು ಅದು ಅಪೇಕ್ಷಣೀಯವೂ ಅಲ್ಲ ಎಂದು ಮೆಹ್ತಾ ವಾದ ಮಂಡಿಸಿದ್ದಾರೆ.

ಫೆಬ್ರವರಿ 4ರ ವಿಚಾರಣೆಯಲ್ಲಿ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಪಿ.ಬಿ. ವರಾಳೆ ಅವರು ವಾಂಗ್‌ಚುಕ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ, “ಅವರ ಆರೋಗ್ಯ ವರದಿಗಳು ಉತ್ತಮವಾಗಿಲ್ಲ, ಸರ್ಕಾರ ಅವರ ಬಂಧನದ ಬಗ್ಗೆ ಮರುಚಿಂತನೆ ನಡೆಸಲಿ” ಎಂದು ಸೂಚಿಸಿದ್ದರು.

ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಕೆ.ಎಂ. ನಟರಾಜ್ ಅವರು ಆರಂಭದಲ್ಲಿ ಕಾಲಾವಕಾಶ ಕೋರಿ, “ವಾಂಗ್‌ಚುಕ್ ಅವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ತಿಳಿಸಿದ್ದರು.

ಇಂದು (ಫೆ. 11) ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಿ, ವಾಂಗ್‌ಚುಕ್ “ಸಂಪೂರ್ಣ ಆರೋಗ್ಯವಾಗಿದ್ದಾರೆ” ಮತ್ತು ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, “ಸರ್ಕಾರ ವಾಂಗ್‌ಚುಕ್ ಅವರ ಆರೋಗ್ಯ ವರದಿಯನ್ನು ಒಪ್ಪಿಕೊಂಡಿದೆ, ಆದರೆ, ಅವರಿಗೆ ಇರುವ ಅನಾರೋಗ್ಯವು ಬಿಡುಗಡೆ ಮಾಡುವಷ್ಟು ಗಂಭೀರವಾಗಿಲ್ಲ ಎಂಬುವುದು ಸರ್ಕಾರದ ವಾದವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಲುಷಿತ ನೀರಿನ ಸೇವನೆಯಿಂದಾಗಿ ಸೋನಮ್ ವಾಂಗ್‌ಚುಕ್ ಅವರು ಪದೇ ಪದೇ ಹೊಟ್ಟೆ ನೋವಿನ ಬಗ್ಗೆ ದೂರು ನೀಡುತ್ತಿದ್ದಾರೆ, ಆದ್ದರಿಂದ ತಜ್ಞ ವೈದ್ಯರಿಂದ ಅವರನ್ನು ತಪಾಸಣೆ ಮಾಡಿಸಬೇಕು ಎಂದು ಕೋರಿ (ವಾಂಗ್‌ಚುಕ್ ಪತ್ನಿ ಆಂಗ್ಮೋ ಪರವಾಗಿ) ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಾಲಯದ ಸೂಚನೆಯಂತೆ ಏಮ್ಸ್ ಜೋಧ್‌ಪುರ ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸಿ ವರದಿ ನೀಡಿದ್ದಾರೆ ಎನ್ನಲಾಗಿದೆ. ಈ ವರದಿಯನ್ನು ಆಧರಿಸಿ, ವಾಂಗ್‌ಚುಕ್ ಅವರಿಗೆ ಸಾಮಾನ್ಯ ಜೀರ್ಣಕ್ರಿಯೆ ಸಮಸ್ಯೆಯಿದೆ ಹೊರತು, ಬಿಡುಗಡೆ ಮಾಡುವಷ್ಟು ಗಂಭೀರ ಸ್ಥಿತಿಯಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ನಂತರ, ಸೆಪ್ಟೆಂಬರ್ 26, 2025 ರಂದು ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಜೋಧ್‌ಪುರಕ್ಕೆ ಕರೆದೊಯ್ಯಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯ್ದೆ, 1980 (ಎನ್‌ಎಸ್‌ಎ) ಅಡಿಯಲ್ಲಿ ಅವರ ಬಂಧನ ಕಾನೂನುಬಾಹಿರ ಎಂದು ವಾದಿಸಿರುವ ಪತ್ನಿ ಡಾ. ಗೀತಾಂಜಲಿ ಆಂಗ್ಮೋ ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠವು ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಿ, ತಲೆಯನ್ನು ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....

ಕಾಂಗ್ರೆಸ್ ಮುಸ್ಲಿಮರನ್ನು ದುರ್ಬಳಕೆ ಮಾಡಿಕೊಂಡಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ದಾವಣಗೆರೆ: ಕಾಂಗ್ರೆಸ್ ಪಕ್ಷವು ಇಷ್ಟು ವರ್ಷಗಳಿಂದ ಮುಸ್ಲಿಮರನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಮುಸ್ಲಿಮರು ತಮ್ಮೊಳಗೆ ಚರ್ಚಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...