Homeಅಂತರಾಷ್ಟ್ರೀಯವಿದ್ಯಾರ್ಥಿ ದಂಗೆ ಬಳಿಕ ಬಾಂಗ್ಲಾದಲ್ಲಿ ಇಂದು ಮೊದಲ ಮತದಾನ

ವಿದ್ಯಾರ್ಥಿ ದಂಗೆ ಬಳಿಕ ಬಾಂಗ್ಲಾದಲ್ಲಿ ಇಂದು ಮೊದಲ ಮತದಾನ

- Advertisement -
- Advertisement -

ಬಾಂಗ್ಲಾದೇಶದಲ್ಲಿ ಇಂದು (ಫೆ. 12, 2026) ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯುತ್ತಿದೆ. ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ನಡೆಯುತ್ತಿರುವ ಮೊದಲ ಪ್ರಮುಖ ಚುನಾವಣೆ ಇದಾಗಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 7:30ಕ್ಕೆ ಆರಂಭವಾದ ಮತದಾನವು ಸಂಜೆ 4:30ರವರೆಗೆ ನಡೆಯಲಿದೆ. ಸುಮಾರು 12.77 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.

ಒಟ್ಟು 300 ಸಂಸದೀಯ ಕ್ಷೇತ್ರಗಳ ಪೈಕಿ 299 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಒಬ್ಬ ಅಭ್ಯರ್ಥಿಯ ಮರಣದ ಕಾರಣ ಒಂದು ಕ್ಷೇತ್ರದಲ್ಲಿ ಮತದಾನ ರದ್ದುಗೊಳಿಸಲಾಗಿದೆ.

ಈ ಬಾರಿ ಸಂಸತ್ ಚುನಾವಣೆಯೊಂದಿಗೆ ‘ಜುಲೈ ಚಾರ್ಟರ್’ ಎಂಬ ಸಾಂವಿಧಾನಿಕ ಸುಧಾರಣೆಗಳ ಕುರಿತು ರಾಷ್ಟ್ರೀಯ ಜನಾಭಿಪ್ರಾಯ ಸಂಗ್ರಹವೂ ನಡೆಯುತ್ತಿದೆ.

‘ಜುಲೈ ಚಾರ್ಟರ್’ ಎಂಬುದು 2024ರ ಜುಲೈನಲ್ಲಿ ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿ ನೇತೃತ್ವದ ಬೃಹತ್ ಪ್ರತಿಭಟನೆ ಮತ್ತು ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ರೂಪಿಸಲಾದ ಒಂದು ಮಹತ್ವದ ಸಾಂವಿಧಾನಿಕ ಸುಧಾರಣಾ ದಾಖಲೆಯಾಗಿದೆ.

ನೋಬೆಲ್ ಪ್ರಶಸ್ತಿ ಪುರಸ್ಕೃತ ಡಾ. ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರವು ಈ ಚಾರ್ಟರ್ ಅನ್ನು ಸಿದ್ಧಪಡಿಸಿದೆ. ಇದನ್ನು ‘ಹೊಸ ಬಾಂಗ್ಲಾದೇಶದ ಜನ್ಮ’ ಎಂದು ಬಣ್ಣಿಸಲಾಗಿದೆ.

ಪ್ರಧಾನ ಮಂತ್ರಿಯ ಅಧಿಕಾರಾವಧಿಯನ್ನು ಗರಿಷ್ಠ 10 ವರ್ಷಗಳಿಗೆ (ಎರಡು ಅವಧಿ) ಸೀಮಿತಗೊಳಿಸುವ ಪ್ರಸ್ತಾವನೆ ಇದರಲ್ಲಿದೆ. ಪ್ರಸ್ತುತ ಇರುವ ಏಕಸದನ ಸಂಸತ್ತಿನ ಬದಲು, ದ್ವಿಸದನ, ಅಂದರೆ ಎರಡು ಸದನಗಳಿರುವ ಸಂಸತ್ತನ್ನು (300 ಸದಸ್ಯರ ಕೆಳಮನೆ ಮತ್ತು 100 ಸದಸ್ಯರ ಮೇಲ್ಮನೆ) ರಚಿಸುವ ಗುರಿ ಹೊಂದಿದೆ.

ಚುನಾವಣೆಗಳನ್ನು ನಡೆಸಲು ಮತ್ತೆ ‘ತಟಸ್ಥ ಉಸ್ತುವಾರಿ ಸರ್ಕಾರ’ ವ್ಯವಸ್ಥೆಯನ್ನು ಜಾರಿಗೆ ತರುವುದು. ಸಂವಿಧಾನದಲ್ಲಿ ನಾಗರಿಕರನ್ನು ‘ಬೆಂಗಾಲಿ’ (ಜನಾಂಗೀಯ) ಎನ್ನುವ ಬದಲು ‘ಬಾಂಗ್ಲಾದೇಶಿ’ (ನಾಗರಿಕ ಗುರುತು) ಎಂದು ಬದಲಾಯಿಸುವುದು. ರಾಜಕೀಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು (ಮೇಲ್ಮನೆಯಲ್ಲಿ ಶೇ. 10 ಮತ್ತು ಕೆಳಮನೆಯಲ್ಲಿ ಹಂತ ಹಂತವಾಗಿ ಶೇ. 33ಕ್ಕೆ ಏರಿಸುವುದು) ಇತ್ಯಾದಿ ವಿಷಯಗಳನ್ನು ಜುಲೈ ಚಾರ್ಟರ್‌ ಒಳಗೊಂಡಿದೆ.

ಇಂದಿನ ಸಾರ್ವತ್ರಿಕ ಚುನಾವಣೆಯೊಂದಿಗೆ, ಈ ಚಾರ್ಟರ್ ಅನ್ನು ಜಾರಿಗೆ ತರಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಜನರಿಂದ ‘ಹೌದು’ ಅಥವಾ ‘ಅಲ್ಲ’ ಎಂಬ ಅಭಿಪ್ರಾಯವನ್ನು ಪಡೆಯಲಾಗುತ್ತಿದೆ.

ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷವನ್ನು ನಿಷೇಧಿಸಿರುವುದರಿಂದ ಈ ಚುನಾವಣೆಯಲ್ಲಿ ಆ ಪಕ್ಷ ಸ್ಪರ್ಧಿಸುತ್ತಿಲ್ಲ. ಮುಖ್ಯವಾಗಿ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮತ್ತು ಜಮಾತ್-ಎ-ಇಸ್ಲಾಮಿ ನಡುವೆ ನೇರ ಪೈಪೋಟಿ ಇದೆ.

ಶಾಂತಿಯುತ ಮತದಾನಕ್ಕಾಗಿ ಸುಮಾರು 10 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ಸ್ಪರ್ಧೆಯಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಸಾರ್ವತ್ರಿಕ ಚುನಾವಣೆಯಲ್ಲಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷವು ಸ್ಪರ್ಧಿಸುತ್ತಿಲ್ಲ. ಹೀಗಾಗಿ, ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮತ್ತು ಜಮಾತ್-ಎ-ಇಸ್ಲಾಮಿ ನೇತೃತ್ವದ ಮೈತ್ರಿಕೂಟಗಳ ನಡುವೆ ತೀವ್ರ ಪೈಪೋಟಿ ಇದೆ.

ತಾರಿಕ್ ರೆಹಮಾನ್, ಡಾ. ಶಫೀಕರ್ ರೆಹಮಾನ್, ಮಿರ್ಜಾ ಫಕ್ರುಲ್ ಇಸ್ಲಾಂ ಅಲಂಗೀರ್, ನಹಿದ್ ಇಸ್ಲಾಂ, ಜಿ. ಎಂ. ಖಾದರ್ ಸ್ಪರ್ಧೆಯಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಖಲೀದಾ ಝಿಯಾ ಅವರ ಮಗ ತಾರಿಕ್ ರೆಹಮಾನ್ ಬಿಎನ್‌ಪಿ ಪಕ್ಷದ ಮುಖ್ಯಸ್ಥ. 17 ವರ್ಷಗಳ ಬಳಿಕ ದೇಶಕ್ಕೆ ಮರಳಿರುವ ಇವರು, ಈ ಚುನಾವಣೆಯ ಪ್ರಬಲ ಪ್ರಧಾನಿ ಅಭ್ಯರ್ಥಿಯಾಗಿದ್ದಾರೆ. ಇವರು ಪ್ರತಿಷ್ಠಿತ ಢಾಕಾ-17 ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಡಾ. ಶಫೀಕರ್ ರೆಹಮಾನ್ ಜಮಾತ್-ಎ-ಇಸ್ಲಾಮಿ ಪಕ್ಷದ ಅಮೀರ್ (ಮುಖ್ಯಸ್ಥ). ಇವರು 11 ಪಕ್ಷಗಳ ಮೈತ್ರಿಕೂಟದ ನೇತೃತ್ವ ವಹಿಸಿದ್ದು, ಪ್ರಧಾನಿ ಹುದ್ದೆಯ ಮತ್ತೊಬ್ಬ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ಇವರು ಢಾಕಾ-15 ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಮಿರ್ಜಾ ಫಕ್ರುಲ್ ಇಸ್ಲಾಂ ಅಲಂಗೀರ್ ಬಿಎನ್‌ಪಿ ಪಕ್ಷದ ಪ್ರಧಾನ ಕಾರ್ಯದರ್ಶಿ. ಇವರು ಠಾಕೂರ್‌ಗಾಂವ್-1 ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ನಹಿದ್ ಇಸ್ಲಾಂ 2024ರ ಜುಲೈ ಪ್ರತಿಭಟನೆಯ ವಿದ್ಯಾರ್ಥಿ ನಾಯಕ. ಇವರು ಹೊಸದಾಗಿ ರಚನೆಯಾದ ನ್ಯಾಷನಲ್ ಸಿಟಿಜನ್ ಪಾರ್ಟಿ (ಎನ್‌ಸಿಪಿ)ಯ ಸಂಚಾಲಕರಾಗಿದ್ದು, ಯುವ ಸಮೂಹದ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದಾರೆ.

ಜಿ. ಎಂ. ಖಾದರ್ ಜಾತೀಯ ಪಕ್ಷದ ಮುಖ್ಯಸ್ಥರು. ಇವರು ರಂಗ್‌ಪುರ-3 ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಜಮಾತ್-ಎ-ಇಸ್ಲಾಮಿ ಪಕ್ಷವು ಈ ಬಾರಿ ಮೊದಲ ಬಾರಿಗೆ ತನ್ನ ಮೈತ್ರಿಕೂಟದ ಮೂಲಕ ಕೃಷ್ಣಾ ನಂದಿ ಎಂಬ ಹಿಂದೂ ಅಭ್ಯರ್ಥಿಯನ್ನು ಖುಲ್ನಾ-1 ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಬಾಂಗ್ಲಾದೇಶದ ಪ್ರಸ್ತುತ ಮಧ್ಯಂತರ ಸರ್ಕಾರದ ಮುಖ್ಯಸ್ಥರಾದ ಡಾ. ಮುಹಮ್ಮದ್ ಯೂನುಸ್ ಅವರು ಇಂದು ಢಾಕಾದಲ್ಲಿ ತಮ್ಮ ಮತ ಚಲಾಯಿಸಿದ್ದಾರೆ, ಆದರೆ ಅವರು ಯಾವುದೇ ಪಕ್ಷದ ಪರವಾಗಿ ಸ್ಪರ್ಧಿಸಿಲ್ಲ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...