Homeಕರ್ನಾಟಕಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

- Advertisement -
- Advertisement -

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದು ನಕಲಿ ಪತ್ರ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಿಎಂ ಜಂಟಿ ಕಾರ್ಯದರ್ಶಿ ಅರುಣ್‌ ಫುರ್ಟಾಡೊ ಅವರು ವಿಧಾನಸೌಧದ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಪತ್ರದ ಕುರಿತು ಮಾಹಿತಿ ನೀಡಿರುವ ಸಿಎಂ “ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

“ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ” ಎಂದಿದ್ದಾರೆ.

ನಕಲಿ ಎನ್ನಲಾದ ಪತ್ರವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್, ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ ಮತ್ತು ಸುನಿಲ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದರು.

ಸುನಿಲ್ ಕುಮಾರ್ ಅವರು ಪತ್ರವನ್ನು ಹಂಚಿಕೊಂಡು, “ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ. ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸಿದ್ದರಾಮಯ್ಯನವರೂ “ಇಂದ್ರೀಯ” ವಶವಾಗಿ ಆಡಳಿತದ ಹದ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ” ಎಂದು ಬರೆದುಕೊಂಡಿದ್ದರು.

ಅಬಕಾರಿ ಇಲಾಖೆಯಲ್ಲಿ ನಡೆದಿರುವ 6000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ? ಅಥವಾ ನಿಮ್ಮಿಂದ ಮಾಡಿಸುತ್ತಾರಾ? ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆಯಿಂದ ಸಾರ್ವಜನಿಕರು ನರಳುತ್ತಿರುವಾಗ ಜಿಲ್ಲಾ ವೈದ್ಯಾಧಿಕಾರಿಯೊಬ್ಬನನ್ನು ಅಬಕಾರಿ ಇಲಾಖೆಗೆ ನಿಯೋಜನೆ ಮಾಡುವಂತೆ ನೀವೇ ಖುದ್ದಾಗಿ ನಿರ್ದೇಶನ ನೀಡುತ್ತೀರೆಂದರೆ ಅದೆಂತ ಒತ್ತಡ ಹಾಗೂ ವ್ಯಾಮೋಹ ನಿಮ್ಮನ್ನು ಕಾಡುತ್ತಿರಬಹುದು? ಅಥವಾ ಅಧಿಕಾರ ಹಸ್ತಾಂತರದ ಚಿಂತೆ ನಿಮ್ಮನ್ನು ಆವರಿಸಿದೆಯೋ ? ಎಂದು ಪ್ರಶ್ನಿಸಿದ್ದರು.

ಇತರ ಕೆಲವರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಸಿದ್ದರಾಮಯ್ಯ ಹೆಸರಿನ ಪತ್ರವನ್ನು ಹಂಚಿಕೊಂಡು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...