Homeಮುಖಪುಟಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

- Advertisement -
- Advertisement -

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ.

ಶುಕ್ರವಾರ (ಫೆ.13) ದೇಶದ ಪ್ರಮುಖ ರೈತ ಸಂಘಟನೆಗಳ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯನ್ನು ‘ಹಂತ-ಹಂತವಾಗಿ ಸಂಘಟಿಸಿದ ಕೃತಕ ಮತ್ತು ನಕಲಿ’ ಸಭೆ ಎಂದು ಟೀಕಿಸಿದ ಪಿಯೂಷ್ ಗೋಯಲ್, ರಾಹುಲ್ ಗಾಂಧಿ ಮುಗ್ದರು, ಶ್ರಮಿಕರೂ ಆದ ಅನ್ನದಾತರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ರಾಹುಲ್ ಗಾಂಧಿಯವರು ಮತ್ತೊಮ್ಮೆ ಹಂತ-ಹಂತವಾಗಿ ರೂಪಿಸಲಾದ, ಅತ್ಯಂತ ಕೃತಕ ಮತ್ತು ನಕಲಿ ನಿರೂಪಣೆಯನ್ನು ಹೊರತಂದಿದ್ದಾರೆ. ಈ ಬಾರಿ, ಅವರು ರೈತ ನಾಯಕರೆಂದು ನಟಿಸುತ್ತಿರುವ ಕೆಲವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹೆಗಲ ಮೇಲೆ ಇಟ್ಟು ಗುಂಡು ಹಾರಿಸುತ್ತಿದ್ದಾರೆ. ಇದು ಸಂಪೂರ್ಣ ಕೃತಕ ಮತ್ತು ಆಧಾರರಹಿತ ಸಂಭಾಷಣೆಯಾಗಿದೆ” ಎಂದಿರುವ ಗೋಯಲ್, ‘ಫರ್ಜಿ (ನಕಲಿ) ರಾಹುಲ್ ಗಾಂಧಿ’ ಎಂಬ ಶೀರ್ಷಿಕೆಯೊಂದಿಗೆ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

“ವ್ಯಾಪಾರ ಒಪ್ಪಂದದ ಕುರಿತ ರಾಹುಲ್ ಗಾಂಧಿಯವರ ಹೇಳಿಕೆಗಳು ‘ನಕಲಿ ಮತ್ತು ಕಟ್ಟುಕಥೆ’ ಎಂದಿರುವ ಗೋಯಲ್, ರೈತರ ಹಿತಾಸಕ್ತಿಗಳನ್ನು ‘ಮೋದಿ ಸರ್ಕಾರ ಸಂಪೂರ್ಣವಾಗಿ ರಕ್ಷಿಸಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

“ರೈತರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ’ ಎಂಬುವುದನ್ನು ನಾನು ದಾಖಲೆಯೊಂದಿಗೆ ಮತ್ತು ಸಂಪೂರ್ಣ ಜವಾಬ್ದಾರಿಯೊಂದಿಗೆ ಹೇಳುತ್ತಿದ್ದೇನೆ. ಇದು ನಮ್ಮ ರೈತರು, ಮೀನುಗಾರರು, ಯುವಕರು, ಎಂಎಸ್‌ಎಂಇಗಳು, ಕುಶಲಕರ್ಮಿಗಳು ಮತ್ತು ನವೋದ್ಯಮಗಳಿಗೆ ಸಹಾಯ ಮಾಡುವ ವ್ಯಾಪಾರ ಒಪ್ಪಂದವಾಗಿದೆ” ಎಂದಿದ್ದಾರೆ.

“ರಾಹುಲ್ ಗಾಂಧಿ, ಇಂದು ನೀವು ನಾಟಕ ಕಲಾವಿದರಾಗಿ ಮತ್ತು ನಕಲಿ, ಆಧಾರರಹಿತ ಆರೋಪಗಳು ಮತ್ತು ಕಟ್ಟುಕಥೆಗಳ ನಿರಂತರ ವ್ಯಾಪಾರಿಯಾಗಿ ಸಂಪೂರ್ಣವಾಗಿ ಬಹಿರಂಗಗೊಂಡಿದ್ದೀರಿ” ಎಂದು ವಾಗ್ದಾಳಿ ನಡೆಸಿದ್ದಾರೆ.

ವ್ಯಾಪಾರ ಒಪ್ಪಂದದ ಅಡಿಯಲ್ಲಿ ಸೋಯಾಬೀನ್ ಹಿಂಡಿ ಮತ್ತು ಮೆಕ್ಕೆಜೋಳದಂತಹ ಉತ್ಪನ್ನಗಳಿಗೆ ಯಾವುದೇ ರಿಯಾಯಿತಿಗಳನ್ನು ನೀಡಿಲ್ಲ, ಆದ್ದರಿಂದ ಇವುಗಳಿಂದ ದೇಶದ ರೈತರಿಗೆ ಯಾವುದೇ ಅಪಾಯವಿಲ್ಲ ಎಂದು ಪಿಯೂಷ್ ಗೋಯಲ್ ಪ್ರತಿಪಾದಿಸಿದ್ದಾರೆ. ಇನ್ನು ಸೇಬುಗಳ ಆಮದಿಗೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವರು, ಸರ್ಕಾರ ಅನಿಯಮಿತ ಆಮದಿಗೆ ಅವಕಾಶ ನೀಡಿಲ್ಲ; ಬದಲಾಗಿ, ನಿಗದಿತ ಪ್ರಮಾಣವನ್ನು ಮಾತ್ರ ಪರಿಚಯಿಸಲಾಗಿದೆ ಎಂದು ಹೇಳಿದ್ದಾರೆ.

ಸೇಬುಗಳ ಆಮದನ್ನು ಪ್ರತಿ ಕೆಜಿಗೆ 80 ರೂಪಾಯಿಗಳ ಕನಿಷ್ಠ ಆಮದು ಬೆಲೆ ಮತ್ತು ಅದರ ಜೊತೆಗೆ 25 ರೂಪಾಯಿಗಳ ಆಮದು ಸುಂಕವನ್ನು ಪಾವತಿಸಿದರೆ ಮಾತ್ರ ಅನುಮತಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಚಿವರ ಹೇಳಿಕೆಗೆ ತಿರುಗೇಟು ಕೊಟ್ಟಿರುವ ರಾಹುಲ್ ಗಾಂಧಿ, ಶನಿವಾರ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಜವಳಿ ಉದ್ಯಮದ ಕುರಿತಾದ ತಮ್ಮ ಆತಂಕಗಳನ್ನು ಪುನರುಚ್ಚರಿಸಿದ್ದು, ಈ ವ್ಯಾಪಾರ ಒಪ್ಪಂದವು ಹತ್ತಿ ಬೆಳೆಗಾರರು ಮತ್ತು ಜವಳಿ ರಫ್ತುದಾರರ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಪ್ರತಿಪಾದಿಸಿದ್ದಾರೆ.

“ಪಿಯೂಷ್ ಗೋಯಲ್ ಅವರೇ ಸುಳ್ಳು ಹೇಳಬೇಡಿ…” ಎಂದು ರಾಹುಲ್ ಗಾಂಧಿ ವಿಡಿಯೋದಲ್ಲಿ ಹೇಳಿದ್ದಾರೆ. ಈ ವ್ಯಾಪಾರ ಒಪ್ಪಂದವು ಒಂದು ರೀತಿಯ ‘ಶರಣಾಗತಿ’ ಎಂದು ಪುನರುಚ್ಚರಿಸಿದ ಅವರು, ಇದರಿಂದ ದೇಶದ ಹತ್ತಿ ಬೆಳೆಗಾರರು ಮತ್ತು ಜವಳಿ ಉದ್ಯಮ ಎರಡಕ್ಕೂ ‘ಬಹಳ ದೊಡ್ಡ ಮಟ್ಟದ ಹಾನಿಯಾಗುವ ಸಾಧ್ಯತೆಯಿದೆ’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಶುಕ್ರವಾರ 17 ಪ್ರಮುಖ ರೈತ ಸಂಘಟನೆಗಳ ನಾಯಕರನ್ನು ಭೇಟಿ ಮಾಡಿದ್ದಾರೆ. ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಲು ರಾಷ್ಟ್ರವ್ಯಾಪಿ ಚಳುವಳಿಯ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ.

ಸಭೆಯ ದೃಶ್ಯಗಳನ್ನು ಹಂಚಿಕೊಡಿರುವ ರಾಹುಲ್ ಗಾಂಧಿ, “ನರೇಂದ್ರ ‘ಸರೆಂಡರ್’ ಮೋದಿ ಅವರು ಭಾರತದ ರೈತರಿಗೆ ದ್ರೋಹ ಬಗೆದಿದ್ದಾರೆ. ರೈತರು ಇದನ್ನು ಅರಿತುಕೊಂಡಿದ್ದಾರೆ. ಇದು ಕೇವಲ ವ್ಯಾಪಾರ ಒಪ್ಪಂದವಲ್ಲ; ಇದು ನಮ್ಮ ಅನ್ನದಾತರ ಜೀವನೋಪಾಯದ ಮೇಲೆ ನಡೆಸಿದ ನೇರ ದಾಳಿಯಾಗಿದೆ” ಎಂದಿದ್ದಾರೆ.

“ಇಂದು ಸಂಸತ್ತಿನಲ್ಲಿ ರೈತ ಸಂಘಟನೆಗಳ ನಿಯೋಗದೊಂದಿಗೆ ನಡೆದ ಸಭೆಯಲ್ಲಿ ರೈತರ ಆತಂಕಗಳು ಸ್ಪಷ್ಟವಾಗಿ ಗೊತ್ತಾಗಿವೆ. ಹಣದುಬ್ಬರ, ಹೆಚ್ಚುತ್ತಿರುವ ವೆಚ್ಚಗಳು ಮತ್ತು ಕನಿಷ್ಠ ಬೆಂಬಲ ಬೆಲೆ ಸಂಬಂಧ ಹೋರಾಡುತ್ತಿರುವ ರೈತರನ್ನು, ಈಗ ಬೃಹತ್ ಸಬ್ಸಿಡಿಗಳು ಮತ್ತು ಯಾಂತ್ರಿಕ ಶಕ್ತಿಯ ಬೆಂಬಲ ಹೊಂದಿರುವ ವಿದೇಶಿ ಬೆಳೆಗಳನ್ನು ಎದುರಿಸಲು ಯಾವುದೇ ಸಿದ್ಧತೆಯಿಲ್ಲದೆ ಕೈಬಿಡಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ರೈತರ ‘ಹಕ್ಕುಗಳು, ಭದ್ರತೆ ಮತ್ತು ಘನತೆ’ಗಾಗಿ ಅವರ ಪರವಾಗಿ ನಿಲ್ಲುತ್ತದೆ” ಎಂದು ಪ್ರತಿಪಾದಿಸಿದ ರಾಹುಲ್ ಗಾಂಧಿ, “ಇದು ಸಮಾನವಾದ ಹೋರಾಟವಲ್ಲ; ಇದು ಏಕಪಕ್ಷೀಯ ಒತ್ತಡವಾಗಿದೆ. ಸರ್ಕಾರದ ಟೊಳ್ಳು ಭರವಸೆಗಳು ಇನ್ನು ಮುಂದೆ ನಡೆಯುವುದಿಲ್ಲ. ರೈತರ ಅನುಮತಿಯಿಲ್ಲದೆ ಅವರ ಭವಿಷ್ಯವನ್ನು ಅಡವಿಡಲು ಸಾಧ್ಯವಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...