Homeಅಂಕಣಗಳುಅಸಮರ್ಥರ ಕೈಯ್ಯಲ್ಲಿ ಆರ್ಥಿಕ ವ್ಯವಸ್ಥೆ

ಅಸಮರ್ಥರ ಕೈಯ್ಯಲ್ಲಿ ಆರ್ಥಿಕ ವ್ಯವಸ್ಥೆ

- Advertisement -
- Advertisement -

ಅಸಮರ್ಥರ ಕೈಯಲ್ಲಿರುವ ಭಾರತದ ಆರ್ಥಿಕತೆ ಚಿಂತಾಜನಕಸ್ಥಿತಿಯಲ್ಲಿದೆ ಎಂದು ಮಾಜಿ ವಿತ್ತಮಂತ್ರಿ ಪಿ.ಚಿದಂಬರಂ ಕಾತರ ವ್ಯಕ್ತಪಡಿಸಿದ್ದಾರೆ. ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಜೆಎನ್‍ಯುನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆದರೆ ಆರ್ಥಿಕ ತೀರ್ಮಾನಗಳನ್ನು ತೆಗೆದುಕೊಳ್ಳುವವರು ಪ್ರಧಾನಿ ಮೋದಿ. ಭಾರತದ ಇಂದಿನ ಆರ್ಥಿಕತೆಯನ್ನು ನಿಭಾಯಿಸುವ ಸಾಮಥ್ರ್ಯ ವಿತ್ತಮಂತ್ರಿಗಿದ್ದರೂ, ಅವರನ್ನು ಕಡೆಗಣಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ದೇಶದ ಆರ್ಥಿಕ ಬೆಳವಣಿಗೆ ಕುಂಟುತ್ತಾ ಸಾಗಿದೆ. ಯಾವಾಗ ಬೇಕಾದರೂ ಅದು ಮತ್ತಷ್ಟು ಬಿಗಡಾಯಿಸಬಹುದು ಎನ್ನುತ್ತಾರೆ ಪಿ.ಚಿದಂಬರಂ. ಮಾರುಕಟ್ಟೆಗೆ ಸೇರುವ ಜನ ಒಬ್ಬರಿಗೊಬ್ಬರು ಪರಿಚಯಸ್ಥರೇನಲ್ಲ. ನಂಬಿಕೆಯ ಮೇಲೆ ಅಲ್ಲಿಯ ವಹಿವಾಟು ನಡೆಯುತ್ತದೆ. ಆದರೆ ಅವರಲ್ಲಿ ಅಸ್ಥಿರತೆಯ ಭಯ ಉಂಟಾದರೆ ಮಾರುಕಟ್ಟೆಯಲ್ಲಿ ಏರುಪೇರು ಸಂಭವಿಸುತ್ತದೆ.

ಜಿಡಿಪಿ ಮೋದಿ ಆಳ್ವಿಕೆ ಆರಂಭವಾಗುವುದಕ್ಕೆ ಮೊದಲು 8 ಇದ್ದದ್ದು ಬರುಬರುತ್ತಾ 7.6, 6.6, 5.8, 5ಕ್ಕೆ ಇಳಿದು ಅದು ಈಗ 4.5ಕ್ಕೆ ಬಂದು ನಿಂತಿದೆ. ಇದರಿಂದ ಆಡಳಿತ ನಡೆಸುವವರಿಗೆ ತಲೆನೋವಾಗಿದೆ. ಆದರೆ ಅದನ್ನು ಅವರು ಪ್ರಕಟಪಡಿಸುವುದಿಲ್ಲ. ಮೋದಿಯವರ ತೀರ್ಮಾನವೇ ಅಂತ್ಯ ಎಂಬ ವಾತಾವರಣ ಸೃಷ್ಟಿಯಾಗಿದೆ. ಅದನ್ನು ಜಾರಿಗೆ ತರುವುದಷ್ಟೇ ಅರ್ಥಸಚಿವರ ಕೆಲಸ ಎಂಬುದು ಸತ್ಯ. ಈ ಪರಿಸ್ಥಿತಿಯಲ್ಲಿ ಆರ್ಥಿಕ ತಜ್ಞರಿಗೂ, ಸರ್ಕಾರಕ್ಕೂ ಘರ್ಷಣೆಗಳಾಗುತ್ತಿರುವುದು ನಮ್ಮ ನಿತ್ಯದ ನಿರಂತರ ಅನುಭವ.

ಕೃಷಿ ಬೆಳವಣಿಗೆ ದರ ಮೋದಿ ಅಧಿಕಾರಕ್ಕೆ ಬಂದಾಗ 6.3 ಇತ್ತು. 2017ರಲ್ಲಿ 5ಕ್ಕೆ 2018ರಲ್ಲಿ 2.9ಕ್ಕೆ ಇಳಿದ ಅದು 2019ರಲ್ಲಿ 2.1ಕ್ಕೆ ಬಂದು ನಿಂತಿದೆ. ಕೈಗಾರಿಕಾ ಬೆಳವಣಿಗೆ ಶೇ.4.6 ಇದ್ದದ್ದು ಈಗ 2.4ಕ್ಕೆ ಇಳಿದಿದೆ. ಮೋದಿ ಅಧಿಕಾರಕ್ಕೆ ಬಂದಮೇಲೆ ಯಾವ ವರ್ಷವೂ ಅದು ಮೇಲಕ್ಕೇರಿದ್ದಿಲ್ಲ. ಇಳಿಮುಖವಾಗುತ್ತಲೇ ಇದೆ. ಬೃಹತ್ ಕೈಗಾರಿಕೆಗಳು ಮೋದಿ ಅಧಿಕಾರಕ್ಕೆ ಬರುವ ಮುನ್ನ 4.8 ಇದ್ದದ್ದು 0.2ಕ್ಕೆ ಇಳಿದಿದ್ದರೆ ಅದೇ ಸಣ್ಣ ಕೈಗಾರಿಕೆಗಳು 0.9 ಇದ್ದದ್ದು ಈಗ 2.7 ಆಗಿದೆ. ಹೀಗಾಗಿ ಇದು ಮುನ್ನಡೆ ಸಾಧಿಸಿದೆ.
ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಿದೆ. ಗೃಹಬಳಕೆಯ ಸಾಮಗ್ರಿಗಳ ಮಾರಾಟವೂ ಇಳಿಮುಖವಾಗಿದೆ. ರೈತರು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗುತ್ತಿಲ್ಲ.

ಈರುಳ್ಳಿ ವಿಚಾರವನ್ನೇ ತೆಗೆದುಕೊಳ್ಳೋಣ. ರೈತರು ಈರುಳ್ಳಿ ಹೆಚ್ಚಾಗಿ ಬೆಳೆದರು. ವರ್ತಕರು ಅದನ್ನು ಅಗ್ಗವಾಗಿ ಕೊಂಡು ದಾಸ್ತಾನು ಮಾಡಿಕೊಂಡರು. ಈರುಳ್ಳಿ ಮಾರುಕಟ್ಟೆಯಲ್ಲಿ ತುಂಬಾ ಇದೆ. ಇದನ್ನು ರಫ್ತು ಮಾಡದಿದ್ದರೆ ರೈತರು, ವರ್ತಕರು ನಾಶವಾಗಿ ಬಿಡುತ್ತಾರೆ. ಈರುಳ್ಳಿ ಕೊಳೆತುಹೋಗಿ ಕೂಡಲೇ ಅನುಮತಿಕೊಡಿ ಎಂದು ರಫ್ತುದಾರರು ಬೊಬ್ಬೆ ಹಾಕುತ್ತಾರೆ. ಅಧಿಕಾರಿಗಳಿಗೆ, ಮಂತ್ರಿಗೆ, ಶಾಸಕರಿಗೆ ಕಾಂಚಾಣ ಕೊಟ್ಟು ಸರಿಮಾಡಿಕೊಳ್ಳುತ್ತಾರೆ. ರೈತರಿಗೆ ನಾಮಹಾಕಿ ಈ ವರ್ತಕರು ಲಕ್ಷಾಂತರ ಸಂಪಾದಿಸುತ್ತಾರೆ.

ಈಗ ಈರುಳ್ಳಿ ಭಾರತದ ಮಾರುಕಟ್ಟೆಯಲ್ಲಿ ಇಲ್ಲವೇ ಇಲ್ಲ. ರಫ್ತುಮಾಡಿ ಮಿಕ್ಕ ಈರುಳ್ಳಿಯನ್ನು ಅವರು ಸ್ವಲ್ಪ ಸ್ವಲ್ಪವೇ ಮಾರುಕಟ್ಟೆಗೆ ಬಿಡುತ್ತಾರೆ. ಬೆಲೆ ಕೆಜಿಗೆ 100-200 ಆಯಿತು. ಅದರಿಂದ ಮಧ್ಯವರ್ತಿ ವರ್ತಕರಿಗೆ ಲಾಭ.

ಇದೊಂದು ವಿಷವ್ಯೂಹ. ಈ ಬೆಲೆ ಏರಿಕೆಯನ್ನು ತಡೆಗಟ್ಟುವ ಯೋಗ್ಯತೆ ಸರ್ಕಾರಕ್ಕಿಲ್ಲ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ. ಬಡವರಿಗೆ ತಿಂಗಳಲ್ಲಿ 15 ದಿನ ಕೂಲಿ ಕೆಲಸ ಸಿಗುವುದೇ ದುರ್ಲಭವಾಗಿದೆ.

ತರಕಾರಿ, ದಿನಸಿ ಬೆಲೆಗಳು ಗಗನಕ್ಕೇರುತ್ತಿವೆ. ಅದನ್ನು ನಿಯಂತ್ರಣ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ. ಸಗಟುಬೆಲೆ ಹಣದುಬ್ಬರ ಶೇ.1.92ರಷ್ಟು ಹೆಚ್ಚಿದೆ. ಈ ಎಲ್ಲಾ ಸಮಸ್ಯೆಗಳು ತಾನೇತಾನಾಗಿ ಸರಿಹೋಗುತ್ತದೆ ಎಂದು ಸರ್ಕಾರ ಭಾವಿಸಿದಂತಿದೆ. ಆರ್ಥಿಕ ಸಚಿವರು ಸಮಸ್ಯೆಯನ್ನು ಅವರ ಮುಂದಿಟ್ಟಾಗ ವಿತಂಡವಾದ ಮಾಡುತ್ತಾರೆ. ಮೋದಿ ಮೌನ ತಳೆಯುತ್ತಾರೆ. 500, 1000 ರೂಗಳ ನೋಟುರದ್ದತಿ, ದೋಷಪೂರಿತ ಜಿಎಸ್‍ಟಿ, ಹೆಚ್ಚುತ್ತಿರುವ ನಿಯಂತ್ರಣ, ಪ್ರಧಾನಿ ಕಚೇರಿಯ ಅಧಿಕಾರದ ಕೇಂದ್ರೀಕರಣ ವ್ಯವಸ್ಥೆ ಇವುಗಳಿಂದ ಉಂಟಾಗಿರುವ ಗಂಡಾಂತರದ ಬಗೆಗೆ ಆರ್ಥಿಕ ತಜ್ಞರು ಎಚ್ಚರಿಕೆಯ ಮಾತನ್ನಾಡಿದರೆ ಅದನ್ನು ನಿರ್ಲಕ್ಷಿಸುವ ಮನೋಭಾವ ಸರ್ಕಾರದ್ದು. ಇಂದಿನ ಜ್ವಲಂತ ಸಮಸ್ಯೆಗಳು ದೇಶದ ಆರ್ಥಿಕ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದೆ ಎಂಬುದನ್ನು ಮೋದಿಯವರೂ, ಅರ್ಥಸಚಿವರು ಒಪ್ಪಿಕೊಳ್ಳುತ್ತಾರೆ. ಆದರೆ ಅವರು ಹೇಳುವುದು ಇಂದಿನ ಪರಿಸ್ಥಿತಿ ಹೀಗೆಯೇ ಮುಂದುವರೆಯುವುದಿಲ್ಲ. ವಿಶ್ವದ ಎಲ್ಲೆಡೆ ಈ ಸಮಸ್ಯೆ ಇದೆ. ಅಲ್ಲೆಲ್ಲ ಸರಿಹೋದರೆ ಇಲ್ಲಿಯೂ ಸರಿಹೋಗುತ್ತದೆ. ಅಚ್ಛೇದಿನ್ ಬಂದೇ ಬರುತ್ತದೆ ಎನ್ನುವುದು ಅವರ ವಾದ.

ಆರ್ಥಿಕ ತಜ್ಞರು, ಪ್ರಧಾನಿಗಳ ಆರ್ಥಿಕ ಸಲಹೆಗಾರರು ರಾಜೀನಾಮೆ ಕೊಟ್ಟುಹೋದರು. ಅವರು ನಿರ್ಗಮಿಸುವ ಮುನ್ನ ಹೇಳಿದ ಮಾತು: ಈ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಯ ಕೆಲಸ ಸರ್ಜನ್ ಇಲ್ಲವೇ ಶಸ್ತ್ರಚಿಕಿತ್ಸೆ ಮಾಡಲು ಹೊರಟಂತಿದೆ. ಮುಗ್ಗಟ್ಟಿನಿಂದ ಬಳಲಿರುವ ಆರ್ಥಿಕ ವ್ಯವಸ್ಥೆಯು ಅಸಮರ್ಥರ ಹಿಡಿತದಲ್ಲಿ ನರಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...