Homeಅಂತರಾಷ್ಟ್ರೀಯಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

- Advertisement -
- Advertisement -

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಹೇಳಲಾಗಿತ್ತು. ಈಗ, ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆತನ ಕತ್ತು ಹಿಸುಕಲಾಗಿದೆ ಎಂದು ಎಪ್ಸ್ಟೀನ್‌ನ ಮರಣೋತ್ತರ ಪರೀಕ್ಷೆಯನ್ನು ವೀಕ್ಷಿಸಿದ್ದ ವೈದ್ಯರೊಬ್ಬರು ಹೇಳಿಕೆ ನೀಡಿದ್ದಾರೆ.

ಬಾಲಕಿಯರು- ಮಕ್ಕಳು ಸೇರಿದಂತೆ ಹಲವಾರು ಮಹಿಳೆಯರನ್ನು ತನ್ನ ಲೈಂಗಿಕ ಕೃತ್ಯಗಳಿಗೆ ಬಳಸಿಕೊಂಡಿದ್ದ ಮತ್ತು ಪ್ರಭಾವಿ ನಾಯಕರ ಲೈಂಗಿಕ ತೃಷೆಗಾಗಿ ಹೆಣ್ಣುಮಕ್ಕಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಲೈಂಗಿಕ ಅಪರಾಧಿ ಎಪ್ಸ್ಟೀನ್‌ನನ್ನು ಅಮೆರಿಕ ಪೊಲೀಸರು ಬಂಧಿಸಿದ್ದರು. 

ಆತನಿಗೆ, 2017ರಲ್ಲಿ ಶಿಕ್ಷೆ ವಿಧಿಸಿ, ನ್ಯೂಯಾರ್ಕ್‌ನಲ್ಲಿ ಇರಿಸಲಾಗಿತ್ತು. ಆತ, 2019ರ ಆಗಸ್ಟ್‌ 10ರಂದು ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದ. ಇತ್ತೀಚೆಗೆ, ಎಪ್ಸ್ಟೀನ್‌ಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅಮೆರಿಕ ನ್ಯಾಯ ಮಂಡಳಿ ಬಿಡುಗಡೆ ಮಾಡಿದೆ. ಅದರಲ್ಲಿ, ಪ್ರಧಾನಿ ಮೋದಿ ಸೇರಿದಂತೆ ಕೆಲ ರಾಷ್ಟ್ರಗಳ ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿವೆ. ಇದೇ ಹೊತ್ತಿನಲ್ಲಿ ಅತನ ಸಾವಿನ ಕುರಿತಾದ ಚರ್ಚೆಯೂ ನಡೆಯುತ್ತಿದೆ.

ಎಪ್ಸ್ಟೀನ್‌ನ ಮರಣೋತ್ತರ ಪರೀಕ್ಷೆಯನ್ನು ಆತನ ಕುಟುಂಬದ ಪರವಾಗಿ ವೀಕ್ಷಿಸಿದ್ದ ವಿಧಿವಿಜ್ಞಾನ ರೋಗಶಾಸ್ತ್ರಜ್ಞ ಡಾ. ಮೈಕೆಲ್ ಬಾಡೆನ್ ಅವರು ದಿ ಟೆಲಿಗ್ರಾಫ್ ಪತ್ರಿಕೆಗೆ ಸಂದರ್ಶನ ನೀಡಿದ್ದಾರೆ. ಈ ವೇಳೆ, ಎಪ್ಸ್ಟೀನ್‌ ಆತ್ಮಹತ್ಯೆ ವರದಿಯ ಬಗ್ಗೆ ಅನುಮಾನವನ್ನು ಪುನರುಚ್ಚರಿಸಿದ್ದಾರೆ.

“ಎಪ್ಸ್ಟೀನ್ ನೇಣು ಹಾಕಿಕೊಂಡು ಮೃತಪಟ್ಟಿಲ್ಲ. ಆತನ ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ. ಈಗ ಲಭ್ಯವಿರುವ ಎಲ್ಲ ವಿವರಗಳನ್ನು ಸಮಗ್ರವಾಗಿ ಪರಿಗಣಿಸಿ, ಪರಿಶೀಲಿಸಿ ಆತನ ಸಾವಿನ ನಿಖರ ಕಾರಣದ ಕುರಿತು ಇನ್ನಷ್ಟು ಆಳವಾದ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು” ಎಂದು ಹೇಳಿದ್ದಾರೆ.

2019ರಲ್ಲಿಯೂ ಬಾಡೆನ್‌ ಅವರು ಪರೀಕ್ಷೆಯ ವರದಿಗಳು ಮತ್ತು ಸಾಕ್ಷ್ಯಗಳು ಇದು ಆತ್ಮಹತ್ಯೆಗಿಂತ ಕೊಲೆಯೆಂದು ಸೂಚಿಸುತ್ತದೆ ಎಂದೇ ಹೇಳಿದ್ದರು. ಆರಂಭಿಕ ಪರೀಕ್ಷೆ ವೇಳೆ ಇನ್ನೂ ಹೆಚ್ಚಿನ ಪರೀಕ್ಷೆಗಳ ಅಗತ್ಯವಿದೆ ಎಂದು ಮರಣೋತ್ತರ ಪರೀಕ್ಷೆಯನ್ನು ಬಾಕಿ ಇಡಲಾಗಿತ್ತು. ಆದರೆ, ಕೇವಲ ಐದು ದಿನಗಳಲ್ಲಿಯೇ ಅಂದಿನ ಮುಖ್ಯ ವೈದ್ಯಕೀಯ ಪರೀಕ್ಷಕ ಡಾ. ಬಾರ್ಬರಾ ಸ್ಯಾಂಪ್ಸನ್ ಅವರು ಮರಣ ಪ್ರಮಾಣಪತ್ರದಲ್ಲಿ ಆತ್ಮಹತ್ಯೆ ಎಂದು ದಾಖಲಿಸಿದ್ದರು. ಸ್ಯಾಂಪ್ಸನ್ ಅವರು ಸಂಪೂರ್ಣ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಆ ಸಮಯದಲ್ಲಿ ತಾವು ಹಾಜರಿರಲಿಲ್ಲವೆಂದು ಬಾಡೆನ್‌ ಈಗ ಹೇಳಿದ್ದಾರೆ.

“ಅಧಿಕೃತ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಎಪ್ಸ್ಟೀನ್‌ನ ಕುತ್ತಿಗೆಯಲ್ಲಿ ಮೂರು ಮುರಿತಗಳು ದಾಖಲಾಗಿದ್ದವು. ಥೈರಾಯ್ಡ್ ಕಾರ್ಟಿಲೇಜ್ ಮೇಲೆ ಎರಡು ಮುರಿತ ಕಂಡು ಬಂದಿತ್ತು. ನನ್ನ 50 ವರ್ಷದ ವೃತ್ತಿಜೀವನದಲ್ಲಿ ನ್ಯೂಯಾರ್ಕ್ ಜೈಲಿನ ಖೈದಿಗಳನ್ನು ಸೇರಿದಂತೆ, ನೇಣು ಬಿಗಿದುಕೊಂಡ ಆತ್ಮಹತ್ಯೆ ಪ್ರಕರಣದಲ್ಲಿ ಮೂರು ಕುತ್ತಿಗೆ ಮುರಿತಗಳನ್ನು ಎಂದಿಗೂ ನೋಡಿಲ್ಲ” ಎಂದು ಬಾಡೆನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...

ಗಾಜಾ ಕುರಿತು ತೀರ್ಪುಗಾರರ ಹೇಳಿಕೆಗೆ ವಿರೋಧ; ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿದ ಅರುಂಧತಿ ರಾಯ್

ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದು ಬರಹಗಾರ್ತಿ ಅರುಂಧತಿ ರಾಯ್ ಹೇಳಿದ್ದಾರೆ. ತೀರ್ಪುಗಾರರ ಅಧ್ಯಕ್ಷೆ ವಿಮ್ ವೆಂಡರ್ಸ್ ಅವರು, ಗಾಜಾ ಕುರಿತು ಪ್ರಶ್ನಿಸಿದಾಗ 'ರಾಜಕೀಯ ವಿಷಯಗಳಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ' ಎಂದು ಹೇಳಿದ್ದರು. ಈ...