Homeದಲಿತ್ ಫೈಲ್ಸ್ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

- Advertisement -
- Advertisement -

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು ಆರೋಪಿಸಿದ್ದಾರೆ. ಆದರೆ, ಪೊಲೀಸ್ ಅಧಿಕಾರಿಗಳು ಈ ಪತ್ರಕರ್ತನ ವಾದವನ್ನು ಬಲವಾಗಿ ನಿರಾಕರಿಸಿದ್ದಾರೆ.

ಕೇಶೋವಾಲಾ ಗ್ರಾಮದ ನಿವಾಸಿ ಗೋಲ್ಡಿ ನಿರ್ಭಿಕ್ ಎಂದೂ ಕರೆಯಲ್ಪಡುವ ವಿಮಲ್ ಭಾರ್ತಿ ಅವರು 13 ವರ್ಷಗಳಿಗೂ ಹೆಚ್ಚು ಕಾಲ ಸ್ವತಂತ್ರ ಪತ್ರಕರ್ತರಾಗಿ ಕೆಲಸ ಮಾಡಿದ್ದೇರೆ. ಆಪಾದಿತ ಆಡಳಿತಾತ್ಮಕ ಅಕ್ರಮಗಳ ಬಗ್ಗೆ ಹಲವು ವರದಿ ಮಾಡಿದ್ದೇನೆ ಎಂದು ಹೇಳಿದರು. ಬಾಜ್‌ಪುರ ಪೊಲೀಸ್ ಠಾಣೆಯಲ್ಲಿ ಕೆಲವು ಪೊಲೀಸ್ ಅಧಿಕಾರಿಗಳ ಪುನರಾವರ್ತಿತ ಪೋಸ್ಟ್‌ಗಳನ್ನು ಪ್ರಶ್ನಿಸಿ ನವೆಂಬರ್ 11 ರಂದು ವರದಿ ಪ್ರಕಟಿಸಿದ ನಂತರ ತೊಂದರೆ ಪ್ರಾರಂಭವಾಯಿತು ಎಂದು ಅವರು ವರದಿಗಾರರಿಗೆ ತಿಳಿಸಿದರು.

“ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಬಹುದೆಂಬ ಭಯದಿಂದ ನಾನು ನವೆಂಬರ್ 12 ರಂದು ಭಾರತದ ರಾಷ್ಟ್ರಪತಿ, ಕೇಂದ್ರ ಗೃಹ ಸಚಿವಾಲಯ, ಉತ್ತರಾಖಂಡ ಸಿಎಂ, ರಾಜ್ಯಪಾಲರು ಮತ್ತು ಡಿಜಿಪಿಗೆ ಪತ್ರ ಬರೆದಿದ್ದೆ” ಎಂದು ಹೇಳಿದರು.

ಮರುದಿನವೇ, ಪಿಡಬ್ಲ್ಯೂಡಿ ಸಹಾಯಕ ಎಂಜಿನಿಯರ್ ನೇಹಾ ಶರ್ಮಾ ಮತ್ತು ಜೆಸಿಬಿ ಯಂತ್ರದೊಂದಿಗೆ ಪೊಲೀಸ್ ತಂಡವು ಮನೆಗೆ ಬಂದು ಅತಿಕ್ರಮಣ ಆಗಿದೆ ಎಂದು ಆರೋಪಿಸಿ ಕಟ್ಟಡ ಕೆಡವಿದರು ಎಂದು ಅವರು ಆರೋಪಿಸಿದರು. “ನಾನು ಸಮಯಾವಕಾಶ ಕೇಳಿದೆ, ಆದರೆ ಅವರು ನಿರಾಕರಿಸಿದರು. ನಾನು ನನ್ನ ಫೋನ್‌ನಲ್ಲಿ ಧ್ವಂಸ ಮಾಡುತ್ತಿದ್ದನ್ನು ರೆಕಾರ್ಡ್ ಮಾಡಿದಾಗ, ಪೊಲೀಸರು ಫೋನ್ ಕಸಿದುಕೊಂಡು ಭಯೋತ್ಪಾದಕನಂತೆ ನನ್ನನ್ನು ವಶಕ್ಕೆ ಪಡೆದರು” ಎಂದು ಅವರು ಹೇಳಿಕೊಂಡರು.

ಪಿಡಬ್ಲ್ಯೂಡಿ ಅಧಿಕಾರಿಯ ದೂರಿನ ಆಧಾರದ ಮೇಲೆ ಪೊಲೀಸರು ತಮ್ಮ ವಿರುದ್ಧ ಬಿಎನ್‌ಎಸ್, 2023 ರ ಸೆಕ್ಷನ್ 132, 221 ಮತ್ತು 351(2) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಭಾರ್ತಿ ಹೇಳಿದರು. ಸೆಕ್ಷನ್ 41ಎ ಅಡಿಯಲ್ಲಿ ಯಾವುದೇ ಸೂಚನೆ ನೀಡದೆ ಬಂಧಿಸಿ ನಂತರ ಬನ್ನಖೇರಾ ಔಟ್‌ಪೋಸ್ಟ್ ಲಾಕ್-ಅಪ್‌ಗೆ ಕರೆದೊಯ್ಯಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಬಂಧನದಲ್ಲಿನ ತಮ್ಮ ಅನುಭವದ ಬಗ್ಗೆ ಮಾತನಾಡಿದ ಭಾರ್ತಿ, “ನನ್ನನ್ನು ಥಳಿಸಲಾಯಿತು, ವಿವಸ್ತ್ರಗೊಳಿಸಲಾಯಿತು, ಜಾತಿ ನಿಂದನೆ ಮಾಡಲಾಯಿತು. ಶೂನಿಂದ ನೀರು ಕುಡಿಯುವಂತೆ ಒತ್ತಾಯಿಸಲಾಯಿತು, ನನ್ನ ಮೊಬೈಲ್ ಮತ್ತು ಇಮೇಲ್ ಪಾಸ್‌ವರ್ಡ್‌ಗಳನ್ನು ನೀಡುವಂತೆ ಒತ್ತಾಯಿಸಲಾಯಿತು. ಅವರು ನನ್ನ ವೃತ್ತಿಪರ ಖಾತೆಗಳನ್ನು ಪ್ರವೇಶಿಸಿದರು, ನನ್ನ ಕೆಲಸವನ್ನು ಅಳಿಸಿದರು” ಎಂದು ಆರೋಪಿಸಿದ್ದಾರೆ.

“ಡಿಸೆಂಬರ್ 15 ರಂದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಹಿರಿಯ ರಾಜ್ಯ ಅಧಿಕಾರಿಗಳಿಗೆ ದೂರುಗಳನ್ನು ಸಲ್ಲಿಸಿದರು. ನಂತರ ಡಿಸೆಂಬರ್ 25 ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ” ಎಂದು ಅವರು ಹೇಳಿದರು.

ಜನವರಿ 2026 ರಲ್ಲಿ ನೋಟಿಸ್ ನೀಡಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಹೇಳುತ್ತಾರೆ.

ಆರೋಪಗಳನ್ನು ಬಾಜ್‌ಪುರ ವೃತ್ತ ಅಧಿಕಾರಿ ವಿಭವ್ ಸೈನಿ ಬಲವಾಗಿ ನಿರಾಕರಿಸಿದರು. “ಈ ಹೇಳಿಕೆಗಳು ಪೊಲೀಸರ ಮೇಲೆ ಒತ್ತಡ ಹೇರುವ ಪ್ರಯತ್ನವೆಂದು ತೋರುತ್ತದೆ. ಪಿಡಬ್ಲ್ಯೂಡಿ ಸಹಾಯಕ ಎಂಜಿನಿಯರ್ ಅವರ ಲಿಖಿತ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಅಧಿಕೃತ ಧ್ವಂಸ ಕಾರ್ಯಾಚರಣೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಮಾತ್ರ ಪೊಲೀಸರು ಹಾಜರಿದ್ದರು. ಯಾವುದೇ ಹಂತದಲ್ಲೂ ಪೊಲೀಸರು ತಮ್ಮ ಕಾನೂನು ಅಧಿಕಾರವನ್ನು ಮೀರಲಿಲ್ಲ. ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ” ಎಂದು ಅವರು ಹೇಳಿದರು. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ತನಿಖೆಯನ್ನು ಈಗ ಬೇರೆ ಜಿಲ್ಲೆಯ ಅಧಿಕಾರಿಗಳಿಗೆ ವರ್ಗಾಯಿಸಲಾಗಿದೆ ಎಂದು ಸೈನಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...