Homeಕರ್ನಾಟಕಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

ಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

- Advertisement -
- Advertisement -

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಸಂಕ್ಲಾಪೂರ ಗ್ರಾಮದ ಇಟ್ಟಿಗೆ ಗೂಡುಗಳಲ್ಲಿ ಜೀತಕ್ಕಿದ್ದ ಐವರು ಮಕ್ಕಳು ಸೇರಿದಂತೆ 34 ಮಂದಿ ಒಡಿಶಾ ಮೂಲದ ಕಾರ್ಮಿಕರನ್ನು ಮಂಗಳವಾರ (ಫೆ.10,2026) ರಕ್ಷಿಸಲಾಗಿದೆ.

ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಗ್ರಾಮದಲ್ಲಿ ಕಾರ್ಮಿಕರನ್ನು ಜೀತಕ್ಕಿಡಲಾಗಿದೆ ಎಂಬ ಮಾಹಿತಿ ಪಡೆದ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಪೊಲೀಸರು ಮತ್ತು ಸರ್ಕಾರೇತರ ಸಂಸ್ಥೆ (ಎನ್‌ಜಿಒ) ಸ್ಪಂದನ ಅಸೋಸಿಯೇಷನ್‌ನ ಸದಸ್ಯರನ್ನು ಒಳಗೊಂಡ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಣೆ ಮಾಡಿದೆ.

ರಕ್ಷಿಸಲ್ಪಟ್ಟ 34 ಜನರು ಒಂಬತ್ತು ಕುಟುಂಬಗಳಿಗೆ ಸೇರಿದವರು. ಒಡಿಶಾದ ಮಧ್ಯವರ್ತಿಯೊಬ್ಬರು ಪ್ರತಿ ಕುಟುಂಬಕ್ಕೆ 20,000 ರಿಂದ 30,000 ರೂ. ಮುಂಗಡ ಹಣದ ಭರವಸೆ ನೀಡುವ ಮೂಲಕ ಅವರನ್ನು ಕೆಲಸಕ್ಕೆ ಕರೆದುಕೊಂಡು ಬಂದಿದ್ದರು. ಮೊದಲು ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಕೆಲಸ ಕೊಡಿಸುವುದಾಗಿ ಹೇಳಲಾಗಿತ್ತು. ಅಲ್ಲಿಗೆ ಬಸ್‌ ಮೂಲಕ ಕರೆದೊಯ್ಯಲಾಗಿತ್ತು. ವಿಜಯವಾಡದಿಂದ ರೈಲಿನ ಮೂಲಕ ಬಾಗಲಕೋಟೆಗೆ ಕರೆ ತರಲಾಗಿತ್ತು. ಈ ವಿಚಾರ ಕಾರ್ಮಿಕರಿಗೆ ಗೊತ್ತೇ ಇರಲಿಲ್ಲ. ಬಾಗಲಕೋಟೆಯಲ್ಲಿ ಕೆಲಸ ಪ್ರಾರಂಭಿಸಿ ಎರಡು ವಾರಗಳ ಬಳಿಕವಷ್ಟೇ ಸ್ಥಳೀಯರ ಮೂಲಕ ತಾವು ಕರ್ನಾಟಕದಲ್ಲಿದ್ದೇವೆ ಎಂಬ ವಿಷಯ ಕಾರ್ಮಿಕರಿಗೆ ಗೊತ್ತಾಗಿದೆ ಎಂದು ಸ್ಪಂದನ ಅಸೋಸಿಯೇಷನ್‌ನ ನಿರ್ದೇಶಕಿ ಸುಶೀಲಾ ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಕಾರ್ಮಿಕರು ಒಮ್ಮೆ ಕೆಲಸಕ್ಕೆ ಹೋದರೆ 16 ಗಂಟೆಗೂ ಅಧಿಕ ಸಮಯ ಕೆಲಸ ಮಾಡುತ್ತಿದ್ದರು. ಬೆಳಿಗ್ಗೆ 5 ಗಂಟೆಗೆ ಕೆಲಸ ಪ್ರಾರಂಭಿಸಿದರೆ, ರಾತ್ರಿ 9-10 ಗಂಟೆಯವರೆಗೆ ಕನಿಷ್ಠ ವಿರಾಮಗಳೊಂದಿಗೆ ದುಡಿಯುತ್ತಿದ್ದರು. ಕೆಲಸಕ್ಕೆ ಕರೆದುಕೊಂಡು ಬಂದ ಮಧ್ಯವರ್ತಿ 20,000 ರಿಂದ 30,000 ರೂ.ಗಳವರೆಗೆ ಹಣ ಭರವಸೆ ನೀಡಿದ್ದ, ಆದರೆ ಕುಟುಂಬಗಳಿಗೆ ಒಟ್ಟು 8,000 ರೂ.ಗಳು ಮಾತ್ರ ಸಿಕ್ಕಿತ್ತು. ಪ್ರತಿ ಕುಟುಂಬವು ವಾರಕ್ಕೆ ಸುಮಾರು 800 ರೂ.ಗಳನ್ನು ಗಳಿಸುತ್ತಿತ್ತು, ಅದರಿಂದ ಅವರು ದಿನಸಿ ಸಾಮಗ್ರಿಗಳನ್ನು ಖರೀದಿಸುತ್ತಿದ್ದರು. ಇಟ್ಟಿಗ ಗೂಡು ಮಾಲೀಕ ಪ್ರತಿ ಕುಟುಂಬದಿಂದ ಒಬ್ಬ ಸದಸ್ಯರಿಗೆ ವಾರಕ್ಕೊಮ್ಮೆ ಮಾರುಕಟ್ಟೆಗೆ ಭೇಟಿ ನೀಡಲು ಮಾತ್ರ ಅವಕಾಶ ನೀಡುತ್ತಿದ್ದರು. ಶೋಷಣೆಗೆ ಒಳಗಾದಾಗ ಕಾರ್ಮಿಕರು ಅವರಿಗೆ ಭರವಸೆ ನೀಡಿದ್ದ ವೇತನವನ್ನು ಎಂದಿಗೂ ಪಡೆದಿರಲಿಲ್ಲ ಎಂಬುವುದಾಗಿ ಸುಶೀಲಾ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕಾರ್ಮಿಕರು ನೀರು ಅಥವಾ ನೈರ್ಮಲ್ಯ ಸೌಲಭ್ಯಗಳಿಲ್ಲದೆ ಸಣ್ಣ ಇಟ್ಟಿಗೆ ಗುಡಿಸಲುಗಳಲ್ಲಿ ಅಥವಾ ತಾತ್ಕಾಲಿಕ ಟಾರ್ಪಲ್ ಶೆಡ್‌ಗಳಲ್ಲಿ ವಾಸಿಸುತ್ತಿದ್ದರು. ಅವರು ಕಟ್ಟಿಗೆ ಬಳಸಿ ಅಡುಗೆ ಮಾಡುತ್ತಿದ್ದರು. ಅವರು ಹೊರಗೆ ಹೋದಾಗಲೆಲ್ಲಾ ಗೂಡು ಮಾಲೀಕರು ಅವರನ್ನು ಗಮನಿಸುತ್ತಿದ್ದರು. ಗೂಡು ಮಾಲೀಕ ಮತ್ತು ಅವರ ಇಬ್ಬರು ಪುತ್ರರು ಕಾರ್ಮಿಕರ ಮೇಲೆ ದೈಹಿಕ ದೌರ್ಜನ್ಯ ಎಸಗುತ್ತಿದ್ದರು. ಮೌಖಿಕವಾಗಿ ನಿಂದಿಸುತ್ತಿದ್ದರು. ಈ ಬಗ್ಗೆ ಪ್ರಶ್ನಿಸಿದರೆ ಕಾರ್ಮಿಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದರು. 13 ರಿಂದ 16 ವರ್ಷದೊಳಗಿನ ಮಕ್ಕಳು ಕೂಡ ಗೂಡುಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಶಾಲೆಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ ಎಂದು ವರದಿ ವಿವರಿಸಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಈ ಬಗ್ಗೆ ಮಾಹಿತಿ ಪಡೆದ ಸ್ಪಂದನ ಅಸೋಸಿಯೇಷನ್, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿತ್ತು. ಆದರೆ, ದೂರು ದಾಖಲಿಸುವಾಗ ನಮಗೆ ಅಡೆತಡೆಗಳು ಎದುರಾಯಿತು. ಎಫ್‌ಐಆರ್ ದಾಖಲಿಸಲೂ ಕೂಡ ತುಂಬಾ ಸಮಸ್ಯೆ ಆಯಿತು. ನಮ್ಮ ತಂಡದ ಸದಸ್ಯರು ಮತ್ತು ಕಾರ್ಮಿಕರ ರಕ್ಷಣೆಗಾಗಿ ನಾವು ಎಸ್ಪಿಗೆ ಕರೆ ಮಾಡಿದೆವು. ನಂತರ ಅವರು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ರಾಜಕೀಯ ಸಂಪರ್ಕ ಹೊಂದಿರುವ ಕೆಲವು ವ್ಯಕ್ತಿಗಳು ಪೊಲೀಸ್ ಠಾಣೆಗೆ ಬಂದು ಕಾರ್ಯಾಚರಣೆ ಮುಂದುವರಿಸದಂತೆ ಒತ್ತಡ ಹೇರಿದ ಪ್ರಸಂಗವೂ ನಡೆದಿದೆ ಎಂದು ಸುಶೀಲಾ ಹೇಳಿರುವುದಾಗಿ ವರದಿ ತಿಳಿಸಿದೆ.

ಎಫ್‌ಐಆರ್ ದಾಖಲಿಸಿದ್ದರೂ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಮಧ್ಯವರ್ತಿ ಅಥವಾ ಮಾಲೀಕರನ್ನು ಬಂಧಿಸಲಾಗಿದೆಯೇ ಎಂದು ಕೇಳಿದಾಗ, ಸುಶೀಲಾ, “ನನ್ನ ಪ್ರಕಾರ ಕನಿಷ್ಠ ಮಾಲೀಕರನ್ನೂ ಬಂಧಿಸಿಲ್ಲ. ಏಕೆಂದರೆ ಈ ಪ್ರಕರಣದಲ್ಲಿ ಶಿಕ್ಷೆ ಎರಡು ವರ್ಷಗಳ ಜೈಲಾಗಿದೆ. ಆದ್ದರಿಂದ ಅವರನ್ನು ಬಂಧಿಸದೇ ಇರಬಹುದು. ಅನೇಕ ಸಂದರ್ಭಗಳಲ್ಲಿ ನಾವು ಇದನ್ನು ನೋಡಿದ್ದೇವೆ” ಎಂದು ಸುಶೀಲಾ ಹೇಳಿದ್ದಾರೆ.

ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ, ಗೂಡು ಮಾಲೀಕ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಅವರು ಕಾರ್ಮಿಕರ ಆಧಾರ್ ಕಾರ್ಡ್‌ಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಪ್ರಕರಣವನ್ನು ಬಲಪಡಿಸಲು ಸ್ಪಂದನ ಸಂಸ್ಥೆ ಎಫ್‌ಐಆರ್‌ಗೆ ಮಾನವ ಕಳ್ಳಸಾಗಣೆ ಆರೋಪಗಳನ್ನು ಸೇರಿಸಲು ಒತ್ತಾಯಿಸಲು ಯೋಜಿಸುತ್ತಿದೆ ಎಂದು ಸುಶೀಲಾ ತಿಳಿಸಿದ್ದಾರೆ. ಪ್ರಸ್ತುತ, ಪೊಲೀಸರು ಬಾಲ ಕಾರ್ಮಿಕ ಪದ್ಧತಿ (ನಿರ್ಮೂಲನೆ) ಕಾಯ್ದೆ, 1976 ರ ಸೆಕ್ಷನ್ 16, 17 ಮತ್ತು 18 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜಿಲ್ಲಾಡಳಿತವು ಎಲ್ಲಾ 34 ಕಾರ್ಮಿಕರಿಗೆ ಬಿಡುಗಡೆ ಪ್ರಮಾಣಪತ್ರಗಳನ್ನು ನೀಡಿದೆ ಮತ್ತು ಪ್ರತಿ ವ್ಯಕ್ತಿಗೆ 30,000 ರೂ.ಗಳ ತಕ್ಷಣದ ಪರಿಹಾರದ ವ್ಯವಸ್ಥೆ ಮಾಡಿದೆ. ಅಧಿಕಾರಿಗಳು ಮೊದಲು ಕಾರ್ಮಿಕರನ್ನು ಸರ್ಕಾರಿ ಹಾಸ್ಟೆಲ್‌ನಲ್ಲಿ ಇರಿಸಿದ್ದರು. ನಂತರ ಕಾರ್ಮಿಕ, ಕಂದಾಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ತಂಡದ ಮೂಲಕ ಒಡಿಶಾದ ಅವರ ಹಳ್ಳಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

ಇದರೊಂದಿಗೆ, ಡಿಸೆಂಬರ್ 2025 ರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ಇಟ್ಟಿಗೆ ಗೂಡುಗಳು ಮತ್ತು ಒಂದು ಕಬ್ಬಿನ ತೋಟದಿಂದ ಒಟ್ಟು 99 ಜನರನ್ನು ಜೀತಪದ್ಧತಿಯಿಂದ ಅಧಿಕಾರಿಗಳು ಮುಕ್ತಗೊಳಿಸಿದಂತೆ ಆಗಿದೆ.

ಬಾಗಲಕೋಟೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸುವುದಕ್ಕೆ ಇಟ್ಟಿಗೆ ಗೂಡುಗಳು ಮತ್ತು ಕಬ್ಬು ಕಟಾವುಗಳಲ್ಲಿ ಕಾರ್ಮಿಕರ ಬೇಡಿಕೆಯೇ ಕಾರಣ ಎಂದು ಸುಶೀಲಾ ಹೇಳಿದ್ದಾರೆ. ಕಾನೂನು ಸರಿಯಾಗಿ ಅನುಷ್ಠಾನ ಆಗದಿರುವುದನ್ನು ಅವರು ಎತ್ತಿ ತೋರಿಸಿದ್ದಾರೆ.

Courtesy : thenewsminute.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ...

ಭಯೋತ್ಪಾದಕರ ಸಂಪರ್ಕ ಶಂಕೆ: ಮಹಾರಾಷ್ಟ್ರದ 21 ಸ್ಥಳಗಳಲ್ಲಿ ದಾಳಿ ನಡೆಸಿದ ಎಟಿಎಸ್

ಮುಂಬೈ: ಉಗ್ರಗಾಮಿ ಚಟುವಟಿಕೆಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಭಾನುವಾರ ಬೆಳಿಗ್ಗೆ ಸುಮಾರು 21 ಸ್ಥಳಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಯಾವತ್ಮಲ್ ಮತ್ತು ಅಹಲ್ಯಾನಗರ...

ಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ಫೆಬ್ರವರಿ 4ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ತಾನು ಮಾಡಿದ್ದ ಭಾಷಣದ ಬಹುಪಾಲು ಅಂಶಗಳನ್ನು ಯಾವುದೇ ಸಮರ್ಪಕ ಕಾರಣ ನೀಡದೆ ರಾಜ್ಯಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ವಿರೋಧ...

ಬೌದ್ಧಿಕ ದಾರಿದ್ರ್ಯ ಮತ್ತು ಸಾಂಸ್ಥಿಕ ಹತ್ಯೆಗಳು: ಡಾ.ಪಿ. ನಂದಕುಮಾರ 

                                                      ಸಂವಿಧಾನ ವಿರೋಧಿ ಹಾಗೂ ದಲಿತ, ಹಿಂದುಳಿದ, ಮಹಿಳೆಯರ ಹಕ್ಕುಗಳ ಅಂದಿನ ಮನುವಾದಿ  ಆರ್ಯಪಳೆಯುಳಿಕೆಗಳೆ ಇಂದೂ ಯುಜಿಸಿ- 2026ರ ಕರಡು ವಿರುದ್ಧ ಷಂಡ್ಯಂತ್ರ ರೂಪಿಸುತ್ತಿರುವುದು. ಕೇವಲ 3% ಜನಾಭಿಪ್ರಾಯವೇ ಭಾರತೀಯ ಒಟ್ಟು ಬಹುಸಮುದಾಯಗಳ ಅಭಿಪ್ರಾಯವೆಂಬಂತೆ...

ಅಮೆರಿಕದ ಕ್ಯಾಲಿಫೋರ್ನಿಯದಲ್ಲಿ ಕಾಣೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ

ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ.   ಈ ಕುರಿತು ಭಾರತದ ಕಾನ್ಸುಲೇಟ್ ಜನರಲ್ ಪ್ರಕಟಣೆ ಹೊರಡಿಸಿದ್ದು, ಸ್ಥಳೀಯ ಪೊಲೀಸರು...

ಬೆಂಗಳೂರು | ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಸಾವು

ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸಾವಿಗೀಡಾದ ಘಟನೆ ಬೆಂಗಳೂರಿನ ನೆಲಮಂಗಲದ ಜಿಂದಾಲ್‌ ಸಂಸ್ಥೆಯ ಬಳಿ...

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...