Homeಮುಖಪುಟಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ...

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

- Advertisement -
- Advertisement -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ (ಫೆ.15) ತಿಳಿಸಿದ್ದಾರೆ.

ಅಧಿವೇಶನದ ಮೊದಲ ಭಾಗದಲ್ಲಿ ಕಂಡುಬಂದಂತೆ ವಿರೋಧ ಪಕ್ಷಗಳು ಪ್ರತಿಭಟನೆಗಳನ್ನು ಮುಂದುವರಿಸಿದರೆ, ಅದು ಅಂತಿಮವಾಗಿ ಅವರಿಗೇ ಸಮಸ್ಯೆಯಾಗಲಿದೆ ಎಂದು ರಿಜಿಜು ಹೇಳಿದ್ದಾರೆ.

ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನದ ಎರಡನೇ ಭಾಗವು ಆಸಕ್ತಿದಾಯಕವಾಗಿರುತ್ತದೆ. ಹಲವಾರು ಪ್ರಮುಖ ಮಸೂದೆಗಳು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಸಂಸತ್ತಿನಲ್ಲಿ ಮಂಡನೆಯಾಗಲಿದೆ ಎಂದು ರಿಜಿಜು ತಿಳಿಸಿದ್ದಾರೆ.

ಬಜೆಟ್ ಅಧಿವೇಶನವು ಜನವರಿ 28ರಂದು ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡುವುದರೊಂದಿಗೆ ಪ್ರಾರಂಭಗೊಂಡಿದ್ದು, ಫೆಬ್ರವರಿ 12 ರಂದು ಮೊದಲ ಹಂತದ ಕಲಾಪಗಳು ಮುಕ್ತಾಯಗೊಂಡಿದೆ. ಎರಡನೇ ಹಂತಹ ಕಲಾಪಗಳು ಮಾರ್ಚ್ 9ರಂದು ಪ್ರಾರಂಭಗೊಂಡು ಏಪ್ರಿಲ್ 2ರಂದು ಕೊನೆಗೊಳ್ಳಲಿದೆ. ಈ ನಡುವೆ ಫೆಬ್ರವರಿ 1ರಂದು 2026-27ನೇ ಆರ್ಥಿಕ ವರ್ಷದ ಬಜೆಟ್ ಮಂಡನೆಯಾಗಿದೆ.

ತಮ್ಮ ಲೋಕಸಭಾ ಕ್ಷೇತ್ರವಾದ ಅರುಣಾಚಲ ಪಶ್ಚಿಮಕ್ಕೆ ಭೇಟಿ ನೀಡಿರುವ ರಿಜಿಜು, ಅಧಿವೇಶನದ ಎರಡನೇ ಭಾಗದಲ್ಲಿ ಚರ್ಚೆಗಾಗಿ ನಿರ್ದಿಷ್ಟ ಸಚಿವಾಲಯಗಳನ್ನು ಗುರುತಿಸಲು ಸರ್ಕಾರ ಯೋಜಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಲೋಕಸಭೆಯಲ್ಲಿ, ನಾವು ಐದು ಸಚಿವಾಲಯಗಳಲ್ಲಿನ ಅನುದಾನದ ಬೇಡಿಕೆಗಳನ್ನು ಚರ್ಚಿಸುತ್ತೇವೆ. ರಾಜ್ಯಸಭೆಯಲ್ಲಿ ಇತರ ಐದು ಸಚಿವಾಲಯಗಳ ಕೆಲಸದ ಬಗ್ಗೆ ಚರ್ಚಿಸುತ್ತೇವೆ. ರಾಜ್ಯಸಭೆಯಲ್ಲಿ ಅನುದಾನದ ಬೇಡಿಕೆಗಳ ಮೇಲೆ ಅಲ್ಲ, ಸಚಿವಾಲಯಗಳ ಮೇಲಿನ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಚರ್ಚೆಗೆ ಐದು ಸಚಿವಾಲಯಗಳನ್ನು ಮತ್ತು ನಂತರ ಲೋಕಸಭೆಗೆ ಐದು ಸಚಿವಾಲಯಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಬಜೆಟ್ ಅಧಿವೇಶನದ ಎರಡನೇ ಭಾಗವು ಕುತೂಹಲಕಾರಿಯಾಗಿರಲಿದೆ. ಒಂದು ವೇಳೆ ಪ್ರತಿಪಕ್ಷಗಳು ಸದನ ನಡೆಯಲು ಬಿಡದಿದ್ದರೆ, ನಾವು ಗಿಲೋಟಿನ್ (ಚರ್ಚೆಯಿಲ್ಲದೆ ಅನುದಾನದ ಬೇಡಿಕೆಗಳಿಗೆ ಅನುಮೋದನೆ ಪಡೆಯುವ ಪ್ರಕ್ರಿಯೆ) ಮೊರೆ ಹೋಗುತ್ತೇವೆ. ಇದು ಅವರಿಗೆ ಆಗುವ ನಷ್ಟ ಎಂದಿದ್ದಾರೆ.

ಬಜೆಟ್ ಅಧಿವೇಶನದ ಈ ಭಾಗವು ಏಕೆ ವಿಶೇಷವಾಗಿ ಕುತೂಹಲಕಾರಿಯಾಗಿರಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಿಜಿಜು, “ಇದು ನಾಲ್ಕು ಪ್ರಮುಖ ರಾಜ್ಯಗಳಾದ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ, ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಮುಂಬರುವ ವಿಧಾನಸಭಾ ಚುನಾವಣೆಗಳ ಸಮಯದಲ್ಲೇ ನಡೆಯುತ್ತಿದೆ” ಎಂದು ಉತ್ತರಿಸಿದ್ದಾರೆ.

“ನಾವು ಒಂದು ಅತ್ಯಂತ ನಿರ್ಣಾಯಕ ವಿಧೇಯಕ ಸೇರಿದಂತೆ ಕೆಲವು ಪ್ರಮುಖ ವಿಧೇಯಕಗಳನ್ನು ಮಂಡಿಸಲಿದ್ದೇವೆ. ಆ ವಿಧೇಯಕ ಯಾವುದು ಎಂಬುದನ್ನು ನಾವು ಈಗ ಬಹಿರಂಗಪಡಿಸುವುದಿಲ್ಲ, ಆದರೆ ಅಧಿವೇಶನದ ಎರಡನೇ ಭಾಗದಲ್ಲಿ ಒಂದು ಅತಿ ಮುಖ್ಯವಾದ ವ್ಯವಹಾರವನ್ನು ಕೈಗೆತ್ತಿಕೊಳ್ಳಲಿದ್ದೇವೆ. ನಾವು ಈ ಎಲ್ಲಾ ವಿಧೇಯಕಗಳಿಗೆ ಅಂಗೀಕಾರ ಪಡೆಯುತ್ತೇವೆ” ಎಂದು ತಿಳಿಸಿದ್ದಾರೆ.

ಅಧಿವೇಶನದ ಎರಡನೇ ಭಾಗದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತಾದ ವಿಧೇಯಕವನ್ನು ಮಂಡಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ಮಸೂದೆಯನ್ನು ಪರಿಶೀಲಿಸಲು ರಚಿಸಲಾದ ಸಂಸದೀಯ ಸಮಿತಿಯು ತನ್ನ ವರದಿಯನ್ನು ಇನ್ನೂ ಅಂತಿಮಗೊಳಿಸದಿರುವುದೇ ಇದಕ್ಕೆ ಕಾರಣ ಎಂದು ಹೇಳಿದ್ದಾರೆ. ಅಲ್ಲದೆ, ಪ್ರತಿಪಕ್ಷಗಳು ಚರ್ಚೆಯಲ್ಲಿ ಪಾಲ್ಗೊಳ್ಳದಿದ್ದರೆ ಅದು ಅವರಿಗೇ ನಷ್ಟ ಎಂದಿದ್ದಾರೆ.

ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿರುಕು ಮೂಡಿರಬಹುದು ಎಂದ ರಿಜಿಜು, ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಹಿ ಮಾಡಿಲ್ಲ ಎಂದು ತಿಳಿಸಿದರು. ಹೆಚ್ಚಿನ ಸಣ್ಣ ಪಕ್ಷಗಳಿಗೆ ಸದನದ ಕಲಾಪವನ್ನು ಸ್ಥಗಿತಗೊಳಿಸುವುದು ಇಷ್ಟವಿಲ್ಲ. ವಿಶೇಷವಾಗಿ ವಿಧಾನಸಭಾ ಚುನಾವಣೆಗಳು ಹತ್ತಿರವಿರುವುದರಿಂದ, ತಮ್ಮ ಭಾಗದ ಸಮಸ್ಯೆಗಳನ್ನು ಸದನದಲ್ಲಿ ಎತ್ತಲು ಅವು ಉತ್ಸುಕವಾಗಿವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...