Homeಮುಖಪುಟಪ. ಬಂಗಾಳ ಎಸ್‌ಐಆರ್ : ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ

ಪ. ಬಂಗಾಳ ಎಸ್‌ಐಆರ್ : ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಾಗಿ (ಎಇಆರ್‌ಒ) ಕಾರ್ಯ ನಿರ್ವಹಿಸುತ್ತಿರುವ ಏಳು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ. ಇವರ ವಿರುದ್ಧ ‘ಗಂಭೀರ ದುರ್ನಡತೆ’ ಆರೋಪ ಮಾಡಿದೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ‘ಕರ್ತವ್ಯ ಲೋಪ ಮತ್ತು ಶಾಸನಬದ್ಧ ಅಧಿಕಾರಗಳ ದುರುಪಯೋಗ’ದ ಆರೋಪಗಳನ್ನು ಈ ಅಧಿಕಾರಿಗಳ ವಿರುದ್ಧ ಮಾಡಲಾಗಿದೆ.

ಎಲ್ಲಾ ಏಳು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಮುರ್ಷಿದಾಬಾದ್ ಜಿಲ್ಲೆಯ ಸಂಶೀರ್‌ಗಂಜ್‌ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ರಾಜ್ಯ ಸರ್ಕಾರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶಿಫಾವುರ್ರಹ್ಮಾನ್, ಫರಕ್ಕಾ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಫರಕ್ಕಾದ ಕಂದಾಯ ಅಧಿಕಾರಿ ನಿತೀಶ್ ದಾಸ್, ಮಾಯನಗುರಿ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಮಹಿಳಾ ಅಭಿವೃದ್ಧಿ ಅಧಿಕಾರಿ ಡಾಲಿಯಾ ರೇ ಚೌಧರಿ, ಸೂಟಿ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಸೂಟಿಯ ಸಹಾಯಕ ಕೃಷಿ ನಿರ್ದೇಶಕ ಶೇಕ್ ಮುರ್ಷಿದ್ ಆಲಂ, ಕ್ಯಾನಿಂಗ್ ಪರ್ಬೋ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಇಬ್ಬರು ಅಧಿಕಾರಿಗಳಾದ ಜಂಟಿ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಸತ್ಯಜಿತ್ ದಾಸ್ ಮತ್ತು ಫೀಲ್ಡ್ ಎಲೆಕ್ಷನ್ ಆಫೀಸರ್ ಜಯದೀಪ್ ಕುಂಡು, ದೆಬ್ರಾ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಜಂಟಿ ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೆಬಾಶಿಸ್ ಬಿಸ್ವಾಸ್ ಅಮಾನತುಗೊಂಡವರು.

ಈ ಎಲ್ಲಾ ಅಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮ ಪ್ರಕಟಣೆಗಾಗಿ ಬಾಕಿ ಉಳಿದಿದ್ದ ಪ್ರಕರಣಗಳ ಪರಿಶೀಲನೆಯ ಸಂದರ್ಭದಲ್ಲಿ, ಅಗತ್ಯ ದಾಖಲೆಗಳನ್ನು ಸಲ್ಲಿಸದಿದ್ದರೂ ಅನೇಕ ಪ್ರಕರಣಗಳನ್ನು ವಿಲೇವಾರಿ ಮಾಡಿರುವುದು ಕಂಡುಬಂದಿದೆ. ಮತದಾರರ ಅರ್ಹತೆ ಮತ್ತು ಮ್ಯಾಪಿಂಗ್‌ನಲ್ಲಿ ಅಸಮಂಜಸತೆಗಳಿದ್ದರೂ ಸಹ ಅವರು ಯಾವುದೇ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಆ ಮೂಲಕ, ಅನರ್ಹ ಪ್ರಕರಣಗಳನ್ನು ಅನುಮೋದಿಸಿ ತಮ್ಮ ಶಾಸನಬದ್ಧ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

1950ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 13ಸಿಸಿ ಅಡಿಯಲ್ಲಿ ತನಗೆ ನೀಡಲಾದ ಅಧಿಕಾರವನ್ನು ಬಳಸಿಕೊಂಡು, ಪಶ್ಚಿಮ ಬಂಗಾಳದ 7 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಚುನಾವಣಾ ಆಯೋಗವು ಅಮಾನತುಗೊಳಿಸಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಗಂಭೀರ ದುರ್ನಡತೆ, ಕರ್ತವ್ಯ ಲೋಪ ಮತ್ತು ಶಾಸನಬದ್ಧ ಅಧಿಕಾರಗಳ ದುರುಪಯೋಗಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ (ಫೆ.16) ತನ್ನ ಆದೇಶದಲ್ಲಿ ತಿಳಿಸಿದೆ.

ಸಂಬಂಧಪಟ್ಟ ಕೇಡರ್ ನಿಯಂತ್ರಣ ಪ್ರಾಧಿಕಾರಗಳು ಈ ಅಧಿಕಾರಿಗಳ ವಿರುದ್ಧ ಯಾವುದೇ ವಿಳಂಬವಿಲ್ಲದೆ ಶಿಸ್ತು ಕ್ರಮಗಳನ್ನು ಪ್ರಾರಂಭಿಸಬೇಕು ಎಂದು ಆದೇಶಿಸಿದ ಆಯೋಗವು, ಈ ಕುರಿತಾದ ಪ್ರಗತಿಯನ್ನು ತನಗೆ ತಿಳಿಸಬೇಕು ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...