Homeಮುಖಪುಟರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು 'ಗಂಡು ಮಗುವಿಗೆ ಜನ್ಮ ನೀಡಿದೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

- Advertisement -
- Advertisement -

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು.

ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಭರತ್‌ಪುರ ಜಿಲ್ಲೆಯ ವೀರ್‌ನ ಶಾಸಕರು, ಬಿಜೆಪಿಯ ಬಜೆಟ್‌ಗಳನ್ನು ಯೌವ್ವನದ ಮತ್ತು ಉತ್ಪಾದಕ ಎಂದು ಹೇಳಿ, ಕಾಂಗ್ರೆಸ್‌ನ ಬಜೆಟ್‌ಗಳನ್ನು ವೃದ್ಧಾಪ್ಯದ ಪ್ರತಿಬಿಂಬವೆಂದು ಚಿತ್ರಿಸಿದ್ದಾರೆ ಎಂದು ವರದಿಯಾಗಿದೆ.

ಭಜನ್ ಲಾಲ್ ಶರ್ಮಾ ನೇತೃತ್ವದ ಸರ್ಕಾರವು ತನ್ನ ಮೊದಲ ಕೆಲವು ಬಜೆಟ್‌ಗಳ ಮೂಲಕ “ಗಂಡು ಮಗುವಿಗೆ ಜನ್ಮ ನೀಡಿದೆ” ಎಂದು ಅವರು ತಮ್ಮ ಮಾತುಗಳಲ್ಲಿ ಸೂಚಿಸಿದರು. ಇದು ಗಟ್ಟಿಯಾಗಿದ್ದು, ಉಪಯುಕ್ತವಾಗಿದೆ ಎಮದರು. ಒಬ್ಬರ ಯೌವನದಲ್ಲಿ ಗಂಡು ಮಗು ಹಡೆಯುವುದು ಪ್ರಯೋಜನಕಾರಿ ಎಂದು ಹೇಳಿಕೊಂಡರು.

ಅವರು ಹಿಂದಿನ ಕಾಂಗ್ರೆಸ್ ಆಡಳಿತದೊಂದಿಗೆ ಬಿಜೆಪಿಯನ್ನು ಹೋಲಿಸಿದ ಅವರು, ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿ ತಮ್ಮ ಅಂತಿಮ ಬಜೆಟ್ ಅನ್ನು ಮಂಡಿಸಿದಾಗ, ಅದು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ್ದಾರೆ. ಈ ಹೇಳಿಕೆಗಳ ಸಮಯದಲ್ಲಿ ಪಕ್ಕದಲ್ಲಿ ಕುಳಿತಿದ್ದ ಕೆಲವು ಬಿಜೆಪಿ ಶಾಸಕರು ನಗುತ್ತಿರುವುದು ಕಂಡುಬಂದಿದೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿದೆ

ಈ ಹೇಳಿಕೆಗಳಿಗೆ ವಿರೋಧ ಪಕ್ಷದ ನಾಯಕ ಟಿಕಾ ರಾಮ್ ಜಲ್ಲಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಕೋಲಿ ಅವರು ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ಈ ಹೇಳಿಕೆಗಳು ಬಿಜೆಪಿಯೊಳಗಿನ ಆಳವಾದ ಪಿತೃಪ್ರಧಾನ ಮತ್ತು ಮಹಿಳಾ ವಿರೋಧಿ ಮನೋಭಾವವನ್ನು ಪ್ರತಿಬಿಂಬಿಸುತ್ತವೆ. ಬಜೆಟ್ ಅನ್ನು ಗಂಡು ಅಥವಾ ಹೆಣ್ಣು ಮಗುವಿನ ಜನನದೊಂದಿಗೆ ಸಮೀಕರಿಸುವುದು ಸಂಕುಚಿತ ಮತ್ತು ಪ್ರತಿಗಾಮಿ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ ಎಂದು ಜಲ್ಲಿ ಹೇಳಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ಕೋಲಿ ಹೊಗಳಿದ ಬಜೆಟ್ ಅನ್ನು ಮಹಿಳಾ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಮಂಡಿಸಿದ್ದಾರೆ. ವಿಧಾನಸಭೆಯನ್ನು ಈ ಹಿಂದೆ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಸೇರಿದಂತೆ ಮಹಿಳಾ ಸ್ಪೀಕರ್ ಅಧ್ಯಕ್ಷತೆ ವಹಿಸಿದ್ದರು. ಅಂತಹ ಭಾಷೆ ಮಹಿಳೆಯರಿಗೆ ಅವಮಾನ ಮತ್ತು ಲಿಂಗ ಸಮಾನತೆಯತ್ತ ಪ್ರಯತ್ನಗಳನ್ನು ದುರ್ಬಲಗೊಳಿಸುತ್ತದೆ” ಎಂದು ಜಲ್ಲಿ ಹೇಳಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...