Homeಮುಖಪುಟ10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

- Advertisement -
- Advertisement -

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ.

ಉತ್ತರ ಪ್ರದೇಶದ ಜಲ ಮಂಡಳಿಯ ಮಾಜಿ ಜೂನಿಯರ್ ಇಂಜಿನಿಯರ್ ರಾಮ್ ಭವನ್ (50) ಮತ್ತು ಆತನ ಪತ್ನಿ ದುರ್ಗಾವತಿ (47) ಶಿಕ್ಷೆಗೆ ಒಳಗಾದ ಅಪರಾಧಿಗಳು.

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ದಂಪತಿ ಅಪರಾಧಿಗಳೆಂದು ನ್ಯಾಯಾಲಯವು ತೀರ್ಪು ನೀಡಿದೆ.

ಅಪರಾಧದ ಪ್ರಮಾಣ, ಅವಧಿ ಮತ್ತು ವ್ಯವಸ್ಥಿತ ಸ್ವರೂಪವನ್ನು ಉಲ್ಲೇಖಿಸಿದ ನ್ಯಾಯಾಧೀಶರು, ಈ ಪ್ರಕರಣವು ‘ಅಪರೂಪದಲ್ಲಿ ಅಪರೂಪ’ ಎಂದು ಆದೇಶದಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಅಪರಾಧಿಗಳಲ್ಲಿ ಸುಧಾರಣೆಗೆ ಯಾವುದೇ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, 2010 ಮತ್ತು 2020ರ ನಡುವೆ ಬಾಲಕರ ಮೇಲೆ ದೌರ್ಜನ್ಯಗಳು ನಡೆದಿವೆ. ಸಂತ್ರಸ್ತರ ಪೈಕಿ ಕೇವಲ ಮೂರು ವರ್ಷದಷ್ಟು ಚಿಕ್ಕ ಬಾಲಕರು ಕೂಡ ಸೇರಿದ್ದಾರೆ ಎಂಬುವುದು ಅತ್ಯಂತ ಆಘಾತಕಾರಿ ವಿಷಯವಾಗಿದೆ.

ದಂಪತಿ ತಮ್ಮ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಪ್ರಾಪ್ತ ಬಾಲಕರನ್ನೇ ಗುರಿಯಾಗಿಸಿಕೊಂಡಿದ್ದರು. ಮಕ್ಕಳಿಗೆ ಹಣ, ಆಹಾರ, ಮೊಬೈಲ್ ಫೋನ್‌ಗಳು, ಇಂಟರ್ನೆಟ್ ಸೌಲಭ್ಯ ಮತ್ತು ಆನ್‌ಲೈನ್ ವಿಡಿಯೋ ಗೇಮ್‌ಗಳ ಆಮಿಷವೊಡ್ಡುತ್ತಿದ್ದರು.

ಒಮ್ಮೆ ಮಕ್ಕಳ ವಿಶ್ವಾಸ ಗಳಿಸಿದ ನಂತರ, ದಂಪತಿ ತಮ್ಮ ಮನೆಯಲ್ಲೇ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಈ ಘೋರ ಕೃತ್ಯಗಳನ್ನು ಮೊಬೈಲ್ ಫೋನ್‌ ಮತ್ತು ಇತರ ಡಿಜಿಟಲ್ ಸಾಧನಗಳಲ್ಲಿ ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು.

ವಿಡಿಯೋಗಳನ್ನು ಎನ್‌ಕ್ರಿಪ್ಟ್ ಮಾಡಿದ ಪ್ಲಾಟ್‌ಫಾರ್ಮ್‌ಗಳು ಮತ್ತು ಡಾರ್ಕ್ ವೆಬ್ ಸೇರಿದಂತೆ ವಿವಿಧ ಆನ್‌ಲೈನ್ ಮಾಧ್ಯಮಗಳಲ್ಲಿ ಹಂಚಿಕೆ ಮತ್ತು ಮಾರಾಟ ಮಾಡುತ್ತಿದ್ದರು. ಈ ವಿಡಿಯೋಗಳನ್ನು ಸುಮಾರು 47 ದೇಶಗಳ ಗ್ರಾಹಕರು ವೀಕ್ಷಿಸುತ್ತಿದ್ದರು ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

2020ರಲ್ಲಿ ಇಂಟರ್‌ಪೋಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಈ ಪ್ರಕರಣದ ತನಿಖೆಯನ್ನು ಆರಂಭಿಸಿತ್ತು. ಸಿಬಿಐ ಅಂತರ್ಜಾಲದಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ವಿಷಯಗಳನ್ನು (ಸಿಎಸ್‌ಎಎಂ) ಮೇಲ್ವಿಚಾರಣೆ ಮಾಡುವಾಗ ಆರೋಪಿ ರಾಮ್ ಭವನ್ ಸಿಕ್ಕಿ ಬಿದ್ದಿದ್ದ.

ಈತ ಮತ್ತು ಈತನ ಪತ್ನಿ ದುರ್ಗಾವತಿ ಸೇರಿ ಬಾಲಕರ ಮೇಲಿನ ದೌರ್ಜನ್ಯದ ವಿಡಿಯೋಗಳನ್ನು ಚಿತ್ರೀಕರಿಸಿ, ಅವುಗಳನ್ನು ಡಾರ್ಕ್ ವೆಬ್ ಮೂಲಕ ಸುಮಾರು 47 ದೇಶಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ನಂತರ ತನಿಖೆಯಿಂದ ತಿಳಿದು ಬಂದಿತ್ತು.

ಸಿಬಿಐ ಅಕ್ಟೋಬರ್ 31,2020 ರಂದು ರಾಮ್ ಭವನ್, ದುರ್ಗಾವತಿ ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಲೈಂಗಿಕ ದೌರ್ಜನ್ಯ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಸಾಮಗ್ರಿಗಳ ರಚನೆ ಮತ್ತು ಪ್ರಸಾರದ ಆರೋಪಗಳನ್ನು ಹೊರಿಸಿತ್ತು.

ತನಿಖೆಯ ವೇಳೆ ಅಪರಾಧಿಗಳ ಮನೆಯಿಂದ 8 ಲಕ್ಷ ರೂಪಾಯಿ ನಗದು, 12 ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಪೆನ್ ಡ್ರೈವ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇವುಗಳಲ್ಲಿ ಸಾವಿರಾರು ಅಶ್ಲೀಲ ವಿಡಿಯೋಗಳು ಮತ್ತು ಫೋಟೋಗಳು ಪತ್ತೆಯಾಗಿತ್ತು. ತನಿಖಾಧಿಕಾರಿಗಳು ಸಂತ್ರಸ್ತ ಬಾಲಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು ಮತ್ತು ಹೇಳಿಕೆಗಳನ್ನು ದಾಖಲಿಸಿದ್ದರು.

ತನಿಖೆ ಪೂರ್ಣಗೊಳಿಸಿ ಫೆಬ್ರವರಿ 10, 2021ರಂದು ಸಿಬಿಐ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು.

ವಿಚಾರಣೆಯ ಸಮಯದಲ್ಲಿ, ಪ್ರಾಸಿಕ್ಯೂಷನ್ ಸಂತ್ರಸ್ತರ ಸಾಕ್ಷ್ಯಗಳು, ವೈದ್ಯಕೀಯ ತಜ್ಞರ ವರದಿಗಳು ಮತ್ತು ವಶಪಡಿಸಿಕೊಂಡ ಮೊಬೈಲ್ ಫೋನ್‌ ಹಾಗೂ ಪೆನ್‌ಡ್ರೈವ್‌ಗಳಿಂದ ವಶಪಡಿಸಿಕೊಂಡ ಡಿಜಿಟಲ್ ಪುರಾವೆಗಳು ಸೇರಿದಂತೆ ಬಹು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದಿಟ್ಟಿತ್ತು.

ದೌರ್ಜನ್ಯದಿಂದ ಬಾಲಕರಿಗೆ ತೀವ್ರ ದೈಹಿಕ ಮತ್ತು ಮಾನಸಿಕ ಹಾನಿಯಾಗಿದೆ. ಕೆಲವು ಸಂತ್ರಸ್ತರ ಗಾಯಗಳಿಗೆ ಆಸ್ಪತ್ರೆಯ ಚಿಕಿತ್ಸೆ ಅಗತ್ಯವಿದೆ. ಇನ್ನು ಕೆಲವರಿಗೆ ಕಣ್ಣುಗಳು ಕೆಂಪಾಗುವುದು ಸೇರಿದಂತೆ ತೊಂದರೆಗಳು ಉಂಟಾಗಿವೆ ಎಂಬುವುದನ್ನು ನ್ಯಾಯಾಲಯ ಗಮನಿಸಿತ್ತು.

ಸುಮಾರು 10 ವರ್ಷಗಳ ಕಾಲ ದೌರ್ಜನ್ಯ ಮುಂದುವರೆದಿತ್ತು. ಹೆಚ್ಚಿನ ಸಂಖ್ಯೆಯ ಮಕ್ಕಳು ಇದಕ್ಕೆ ಬಲಿಯಾಗಿದ್ದಾರೆ ಎಂಬುವುದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, “ಇದು ವ್ಯವಸ್ಥಿತ ಮತ್ತು ಶೋಷಣೆಯ ಕೃತ್ಯ” ಎಂದು ಹೇಳಿದ್ದಾರೆ.

2026ರ ಫೆ. 20ರಂದು ನ್ಯಾಯಾಲಯವು ದಂಪತಿಯು ಬಹು ಅಪರಾಧಗಳಲ್ಲಿ ದೋಷಿಗಳು ಎಂದು ಘೋಷಿಸಿ ಮರಣದಂಡನೆ ಶಿಕ್ಷೆ ವಿಧಿಸಿದೆ. ಇದೇ ವೇಳೆ 33 ಸಂತ್ರಸ್ತರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...