Homeಮುಖಪುಟ10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

- Advertisement -
- Advertisement -

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ.

ಉತ್ತರ ಪ್ರದೇಶದ ಜಲ ಮಂಡಳಿಯ ಮಾಜಿ ಜೂನಿಯರ್ ಇಂಜಿನಿಯರ್ ರಾಮ್ ಭವನ್ (50) ಮತ್ತು ಆತನ ಪತ್ನಿ ದುರ್ಗಾವತಿ (47) ಶಿಕ್ಷೆಗೆ ಒಳಗಾದ ಅಪರಾಧಿಗಳು.

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ದಂಪತಿ ಅಪರಾಧಿಗಳೆಂದು ನ್ಯಾಯಾಲಯವು ತೀರ್ಪು ನೀಡಿದೆ.

ಅಪರಾಧದ ಪ್ರಮಾಣ, ಅವಧಿ ಮತ್ತು ವ್ಯವಸ್ಥಿತ ಸ್ವರೂಪವನ್ನು ಉಲ್ಲೇಖಿಸಿದ ನ್ಯಾಯಾಧೀಶರು, ಈ ಪ್ರಕರಣವು ‘ಅಪರೂಪದಲ್ಲಿ ಅಪರೂಪ’ ಎಂದು ಆದೇಶದಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಅಪರಾಧಿಗಳಲ್ಲಿ ಸುಧಾರಣೆಗೆ ಯಾವುದೇ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, 2010 ಮತ್ತು 2020ರ ನಡುವೆ ಬಾಲಕರ ಮೇಲೆ ದೌರ್ಜನ್ಯಗಳು ನಡೆದಿವೆ. ಸಂತ್ರಸ್ತರ ಪೈಕಿ ಕೇವಲ ಮೂರು ವರ್ಷದಷ್ಟು ಚಿಕ್ಕ ಬಾಲಕರು ಕೂಡ ಸೇರಿದ್ದಾರೆ ಎಂಬುವುದು ಅತ್ಯಂತ ಆಘಾತಕಾರಿ ವಿಷಯವಾಗಿದೆ.

ದಂಪತಿ ತಮ್ಮ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಪ್ರಾಪ್ತ ಬಾಲಕರನ್ನೇ ಗುರಿಯಾಗಿಸಿಕೊಂಡಿದ್ದರು. ಮಕ್ಕಳಿಗೆ ಹಣ, ಆಹಾರ, ಮೊಬೈಲ್ ಫೋನ್‌ಗಳು, ಇಂಟರ್ನೆಟ್ ಸೌಲಭ್ಯ ಮತ್ತು ಆನ್‌ಲೈನ್ ವಿಡಿಯೋ ಗೇಮ್‌ಗಳ ಆಮಿಷವೊಡ್ಡುತ್ತಿದ್ದರು.

ಒಮ್ಮೆ ಮಕ್ಕಳ ವಿಶ್ವಾಸ ಗಳಿಸಿದ ನಂತರ, ದಂಪತಿ ತಮ್ಮ ಮನೆಯಲ್ಲೇ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಈ ಘೋರ ಕೃತ್ಯಗಳನ್ನು ಮೊಬೈಲ್ ಫೋನ್‌ ಮತ್ತು ಇತರ ಡಿಜಿಟಲ್ ಸಾಧನಗಳಲ್ಲಿ ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು.

ವಿಡಿಯೋಗಳನ್ನು ಎನ್‌ಕ್ರಿಪ್ಟ್ ಮಾಡಿದ ಪ್ಲಾಟ್‌ಫಾರ್ಮ್‌ಗಳು ಮತ್ತು ಡಾರ್ಕ್ ವೆಬ್ ಸೇರಿದಂತೆ ವಿವಿಧ ಆನ್‌ಲೈನ್ ಮಾಧ್ಯಮಗಳಲ್ಲಿ ಹಂಚಿಕೆ ಮತ್ತು ಮಾರಾಟ ಮಾಡುತ್ತಿದ್ದರು. ಈ ವಿಡಿಯೋಗಳನ್ನು ಸುಮಾರು 47 ದೇಶಗಳ ಗ್ರಾಹಕರು ವೀಕ್ಷಿಸುತ್ತಿದ್ದರು ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

2020ರಲ್ಲಿ ಇಂಟರ್‌ಪೋಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಈ ಪ್ರಕರಣದ ತನಿಖೆಯನ್ನು ಆರಂಭಿಸಿತ್ತು. ಸಿಬಿಐ ಅಂತರ್ಜಾಲದಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ವಿಷಯಗಳನ್ನು (ಸಿಎಸ್‌ಎಎಂ) ಮೇಲ್ವಿಚಾರಣೆ ಮಾಡುವಾಗ ಆರೋಪಿ ರಾಮ್ ಭವನ್ ಸಿಕ್ಕಿ ಬಿದ್ದಿದ್ದ.

ಈತ ಮತ್ತು ಈತನ ಪತ್ನಿ ದುರ್ಗಾವತಿ ಸೇರಿ ಬಾಲಕರ ಮೇಲಿನ ದೌರ್ಜನ್ಯದ ವಿಡಿಯೋಗಳನ್ನು ಚಿತ್ರೀಕರಿಸಿ, ಅವುಗಳನ್ನು ಡಾರ್ಕ್ ವೆಬ್ ಮೂಲಕ ಸುಮಾರು 47 ದೇಶಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ನಂತರ ತನಿಖೆಯಿಂದ ತಿಳಿದು ಬಂದಿತ್ತು.

ಸಿಬಿಐ ಅಕ್ಟೋಬರ್ 31,2020 ರಂದು ರಾಮ್ ಭವನ್, ದುರ್ಗಾವತಿ ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಲೈಂಗಿಕ ದೌರ್ಜನ್ಯ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಸಾಮಗ್ರಿಗಳ ರಚನೆ ಮತ್ತು ಪ್ರಸಾರದ ಆರೋಪಗಳನ್ನು ಹೊರಿಸಿತ್ತು.

ತನಿಖೆಯ ವೇಳೆ ಅಪರಾಧಿಗಳ ಮನೆಯಿಂದ 8 ಲಕ್ಷ ರೂಪಾಯಿ ನಗದು, 12 ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಪೆನ್ ಡ್ರೈವ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇವುಗಳಲ್ಲಿ ಸಾವಿರಾರು ಅಶ್ಲೀಲ ವಿಡಿಯೋಗಳು ಮತ್ತು ಫೋಟೋಗಳು ಪತ್ತೆಯಾಗಿತ್ತು. ತನಿಖಾಧಿಕಾರಿಗಳು ಸಂತ್ರಸ್ತ ಬಾಲಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು ಮತ್ತು ಹೇಳಿಕೆಗಳನ್ನು ದಾಖಲಿಸಿದ್ದರು.

ತನಿಖೆ ಪೂರ್ಣಗೊಳಿಸಿ ಫೆಬ್ರವರಿ 10, 2021ರಂದು ಸಿಬಿಐ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು.

ವಿಚಾರಣೆಯ ಸಮಯದಲ್ಲಿ, ಪ್ರಾಸಿಕ್ಯೂಷನ್ ಸಂತ್ರಸ್ತರ ಸಾಕ್ಷ್ಯಗಳು, ವೈದ್ಯಕೀಯ ತಜ್ಞರ ವರದಿಗಳು ಮತ್ತು ವಶಪಡಿಸಿಕೊಂಡ ಮೊಬೈಲ್ ಫೋನ್‌ ಹಾಗೂ ಪೆನ್‌ಡ್ರೈವ್‌ಗಳಿಂದ ವಶಪಡಿಸಿಕೊಂಡ ಡಿಜಿಟಲ್ ಪುರಾವೆಗಳು ಸೇರಿದಂತೆ ಬಹು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದಿಟ್ಟಿತ್ತು.

ದೌರ್ಜನ್ಯದಿಂದ ಬಾಲಕರಿಗೆ ತೀವ್ರ ದೈಹಿಕ ಮತ್ತು ಮಾನಸಿಕ ಹಾನಿಯಾಗಿದೆ. ಕೆಲವು ಸಂತ್ರಸ್ತರ ಗಾಯಗಳಿಗೆ ಆಸ್ಪತ್ರೆಯ ಚಿಕಿತ್ಸೆ ಅಗತ್ಯವಿದೆ. ಇನ್ನು ಕೆಲವರಿಗೆ ಕಣ್ಣುಗಳು ಕೆಂಪಾಗುವುದು ಸೇರಿದಂತೆ ತೊಂದರೆಗಳು ಉಂಟಾಗಿವೆ ಎಂಬುವುದನ್ನು ನ್ಯಾಯಾಲಯ ಗಮನಿಸಿತ್ತು.

ಸುಮಾರು 10 ವರ್ಷಗಳ ಕಾಲ ದೌರ್ಜನ್ಯ ಮುಂದುವರೆದಿತ್ತು. ಹೆಚ್ಚಿನ ಸಂಖ್ಯೆಯ ಮಕ್ಕಳು ಇದಕ್ಕೆ ಬಲಿಯಾಗಿದ್ದಾರೆ ಎಂಬುವುದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, “ಇದು ವ್ಯವಸ್ಥಿತ ಮತ್ತು ಶೋಷಣೆಯ ಕೃತ್ಯ” ಎಂದು ಹೇಳಿದ್ದಾರೆ.

2026ರ ಫೆ. 20ರಂದು ನ್ಯಾಯಾಲಯವು ದಂಪತಿಯು ಬಹು ಅಪರಾಧಗಳಲ್ಲಿ ದೋಷಿಗಳು ಎಂದು ಘೋಷಿಸಿ ಮರಣದಂಡನೆ ಶಿಕ್ಷೆ ವಿಧಿಸಿದೆ. ಇದೇ ವೇಳೆ 33 ಸಂತ್ರಸ್ತರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...