Homeಮುಖಪುಟನಾವು ಹಿಂಸೆ, ಗಲಭೆ ಬೆಂಬಲಿಸುವುದಿಲ್ಲ.. ಜಮಾ ಮಸೀದಿಯಲ್ಲಿ ಮೊಳಗಿತು ಶಾಂತಿಯ ಮಂತ್ರ..

ನಾವು ಹಿಂಸೆ, ಗಲಭೆ ಬೆಂಬಲಿಸುವುದಿಲ್ಲ.. ಜಮಾ ಮಸೀದಿಯಲ್ಲಿ ಮೊಳಗಿತು ಶಾಂತಿಯ ಮಂತ್ರ..

- Advertisement -
- Advertisement -

ನವದೆಹಲಿಯ ಜಮಾ ಮಸೀದಿಯಲ್ಲಿ ಸಿಎಎ ಮತ್ತು ಎನ್ಆರ್ ಸಿ ವಿರುದ್ಧ ಘೋಷಣೆಗಳು ಮೊಳಗಿದವು. ನಾವು ಹಿಂಸೆ, ಗಲಭೆ ಬೆಂಬಲಿಸುವವರು ಅಲ್ಲ, ಪ್ರಚೋದಿಸುವವರೂ ಅಲ್ಲ. ನಾವು ಶಾಂತಿಪ್ರಿಯರು ಎಂದು ಗಾಂಧಿಯ ಮಾರ್ಗದಲ್ಲಿ ಪ್ರತಿಭಟನೆ  ನಡೆಸಿದರು. ಹಿಂಸೆ, ವಿಭಜನೆ, ಆತಂಕ ಸೃಷ್ಟಿಸುವುದು ಮಹನೀಯರ ಲಕ್ಷಣವಾಗಿರಲಿಲ್ಲ ಎಂದು ಸಾರಿದರು.

ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಮಾತನಾಡಿ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಜನರನ್ನು ಕಾಡುತ್ತಿದೆ. ಈ ಸಮಸ್ಯೆ ಬಗೆಹರಿಸುವುದು ಬಿಟ್ಟು ಪ್ರಧಾನಿ ನರೇದ್ರ ಮೋದಿ ಮತ್ತೊಮ್ಮೆ ಜನರನ್ನು ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಎನ್ ಪಿಎ, ಎನ್ಆರ್ ಸಿ ಮತ್ತು ಸಿಎಎ ಇನ್ನೊಂದು ನೋಟು ಅಮಾನ್ಯೀಕರಣ. ಪ್ರಧಾನಿಗಳು ವಾಸ್ತವ ಪರಿಸ್ಥಿತಿಯ ಬಗ್ಗೆ ಮಾತನಾಡಲಿ. ಅದು ಬಿಟ್ಟು ಜನರನ್ನು ಕ್ಯೂನಲ್ಲಿ ನಿಲ್ಲುವಂತೆ ಮಾಡುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವವರು, ಎನ್ಆರ್ ಸಿ, ಸಿಎಎ ಅವಶ್ಯಕತೆ ಇದೆಯೇ ಎಂಬ ಬಗ್ಗೆ ಪ್ರಶ್ನಿಸಬೇಕು. ದೊಡ್ಡ ದನಿಯಲ್ಲಿ ಕೇಳಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ವ್ಯಕ್ತಪಡಿಸಿರುವ ಆಶಯಗಳಿಗೆ ಧಕ್ಕೆ ಉಂಟಾಗುತ್ತಿರುವ ಸಂದರ್ಭದಲ್ಲಿ ಪ್ರತಿಯೊಬ್ಬರೂ ಕೇಂದ್ರದ ಜನವಿರೋಧಿ ನೀತಿಗಳನ್ನು ಖಂಡಿಸಬೇಕು ಎಂದು ಕರೆ ನೀಡಿದರು.

ಜಮಾ ಮಸೀದಿಯಲ್ಲಿ ಕೇಂದ್ರ ಸರ್ಕಾರದ ಸಿಎಎ, ಎನ್ಆರ್ ಸಿ ಹೊಸ ಕಾಯ್ದೆಗಳ ವಿರುದ್ಧ ಭಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳನ್ನು ಹಾಕಿದರು. ಯಾವುದೇ ಕಾರಣಕ್ಕೂ ಈ ಕಾಯ್ದೆಗಳನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸಿದರು. ದೇಶಕ್ಕೆ ಎನ್ ಆರ್ ಸಿ, ಸಿಎಎ, ಎನ್ ಪಿಎ ಬೇಕಾಗಿಲ್ಲ. ಉದ್ಯೋಗ ಬೇಕು. ಜನರಿಗೆ ಶಾಂತಿ ನೆಮ್ಮದಿಯ ಅವಶ್ಯಕತೆ ಇದೆ. ಸಂವಿಧಾನ ಉಳಿಸಿ ಭಾರತ ವಿಭಿಸುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ಮಾಜಿ ಶಾಸಕ ಶೋಯಿಬ್ ಇಕ್ಬಾಲ್ ಮಾತನಾಡಿ ನಮ್ಮದು ಅಹಿಂಸಾತ್ಮಕ ಹೋರಾಟ. ನಮಗೆ ಹಿಂಸಾ ವಾದದಲ್ಲಿ ನಂಬಿಕೆ ಇಲ್ಲ. ಅಹಿಂಸೆಯ ನೆಲೆಯಲ್ಲಿ ಶಾಂತಿಯುತ ಹೋರಾಟ ಮುಂದುವರಿಸುತ್ತೇವೆ. ಆದರೆ ಕೆಲವರು ನಮ್ಮ ಶಾಂತಿಯುತ ಪ್ರತಿಭಟನೆಯನ್ನು ಕದಡುತ್ತಿದ್ದಾರೆ. ಶಾಂತಿ ಕದಡುವವರು ನಮ್ಮ ಸಂಘಟನೆಗೆ ಸೇರಿದವರಲ್ಲ. ಅವರು ಹೋರಾಟವನ್ನು ದಿಕ್ಕುತಪ್ಪಿಸುವವರು. ಅವರ ಬಗ್ಗೆ ಎಚ್ಚರ ಬೇಕು. ನಾವು ಹಿಂಸೆಯನ್ನು ಇಷ್ಟಪಡುವುದಿಲ್ಲ. ಗಲಭೆಯನ್ನು ಪ್ರಚೋದಿಸುವುದಿಲ್ಲ. ನಾವು ಶಾಂತಿಪ್ರಿಯರು ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...