Homeದಲಿತ್ ಫೈಲ್ಸ್ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

- Advertisement -
- Advertisement -

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ ಕರಸುವಾ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 10 ವರ್ಷದ ದಲಿತ ಬಾಲಕಿಗೆ ಶಾಲಾ ಶೌಚಾಲಯ ತೊಳೆಯುವಂತೆ ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ದಾಖಲಾತಿಯಿಂದ ಆಕೆಯ ಹೆಸರನ್ನು ತೆಗೆದು ಹಾಕುವುದಾಗಿ ಬೆದರಿಸಿದ್ದಾರೆ. ಆದರೂ, ಅನಾರೋಗ್ಯ ಮತ್ತು ತಂದೆಯ ಆಕ್ಷೇಪಣೆಯನ್ನು ಉಲ್ಲೇಖಿಸಿ ಬಾಲಕಿ ಶೌಚಾಲಯ ತೊಳೆಯಲು ನಿರಾಕರಿಸಿದ್ದಾಳೆ. ಇದರಿಂದ ಕುಪಿತಗೊಂಡ ಶಿಕ್ಷಕಿ, ಆಕೆಗೆ ಥಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶಿಕ್ಷಕಿಯ ದೌರ್ಜನ್ಯದ ಕುರಿತು ಬಾಲಕಿ ಹೇಳಿಕೊಂಡ ವಿಡಿಯೋವನ್ನು ಸ್ಥಳೀಯರೊಬ್ಬರು ಇಂಟರ್‌ನೆಟ್‌ನಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಗ್ರಾಮಸ್ಥರು ಶಿಕ್ಷಕಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಈ ಕುರಿತು ಪೊಲೀಸರಿಗೆ ಮಾಹಿತಿ ದೊರೆತಿದೆ ಎಂದು ವರದಿ ಉಲ್ಲೇಖಿಸಿದೆ.

“ಶಿಕ್ಷಕಿ ತನಗೆ ಶೌಚಾಲಯವನ್ನು ಸ್ವಚ್ಛಗೊಳಿಸಲು ಮತ್ತು ಬಕೆಟ್‌ಗಳಿಗೆ ನೀರು ತುಂಬಿಸಲು ಹೇಳಿದ್ದರು. ತಾನು ಅದಕ್ಕೆ ನಿರಾಕರಿಸಿದಾಗ ಆಕೆ ಕೋಪಗೊಂಡು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಶಿಕ್ಷಕರು ಶಾಲೆಯ ಇತರ ಮಕ್ಕಳಿಗೂ ನಿಯಮಿತವಾಗಿ ಪೀಠೋಪಕರಣಗಳನ್ನು ಸ್ವಚ್ಛಗೊಳಿಸಲು ಮತ್ತು ಇತರ ಕೆಲಸಗಳನ್ನು ಮಾಡಲು ಒತ್ತಾಯಿಸುತ್ತಾರೆ. ಕೆಲವೊಮ್ಮೆ ಶಿಕ್ಷಕರು ವಿದ್ಯಾರ್ಥಿಗಳಿಂದ ತಮ್ಮ ಕಾಲುಗಳನ್ನು ಒತ್ತಿಸಿಕೊಳ್ಳುತ್ತಾರೆ (ಮಸಾಜ್ ಮಾಡಿಸಿಕೊಳ್ಳುತ್ತಾರೆ)” ಎಂದು ವಿದ್ಯಾರ್ಥಿನಿ ಹೇಳಿರುವುದು ವಿಡಿಯೋ ಕ್ಲಿಪ್‌ನಲ್ಲಿ ಇದೆ ಎಂದು ವರದಿ ತಿಳಿಸಿದೆ.

ಮಗಳ ಮೇಲಿನ ದೌರ್ಜನ್ಯದ ಕುರಿತು, ದಿನಗೂಲಿ ನೌಕರರಾದ ಬಾಲಕಿಯ ತಂದೆ ಜೋಗಿಂದರ್ ಸಿಂಗ್ ಶಿಕ್ಷಕಿಯನ್ನು ಪ್ರಶ್ನಿಸಿದಾಗ, ಆಕೆ ತನ್ನ ಸಹೋದರನಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಹೋದರ ಶಾಲೆಯ ಆವರಣದಲ್ಲೇ ಜೋಗಿಂದರ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

“ಶಿಕ್ಷಕಿ ನನ್ನ ಮಗಳಿಗೆ ಥಳಿಸಿದರು, ಆಕೆಯ ಸಹೋದರ ನನಗೆ ಥಳಿಸಿದ. ಆದ್ದರಿಂದ ನಾನು ಪೊಲೀಸರಿಗೆ ದೂರು ನೀಡಿದೆ. ನಂತರ ಗ್ರಾಮದ ಕೆಲ ಹಿರಿಯರು ದೂರು ಹಿಂಪಡೆಯಲು ಕೇಳಿಕೊಂಡಾಗ, ನಾನು ನನ್ನ ಮೇಲಿನ ಹಲ್ಲೆಯ ದೂರನ್ನು ಮಾತ್ರ ಹಿಂಪಡೆಯಲು ಒಪ್ಪಿಕೊಂಡೆ. ನನ್ನ ಮಗಳ ವಿಷಯದಲ್ಲಿ ನಾನು ರಾಜಿ ಮಾಡಿಕೊಳ್ಳುವುದಿಲ್ಲ. ಶನಿವಾರ ನಮ್ಮ ಮನೆಗೆ ಸಬ್‌ ಇನ್‌ಸ್ಪೆಕ್ಟರ್ ಭೇಟಿ ನೀಡಿ ಹೊಸ ಪೊಲೀಸ್ ದೂರು ದಾಖಲಿಸುವಂತೆ ಕೇಳಿಕೊಂಡಿದ್ದಾರೆ”ಎಂದು ಬಾಲಕಿಯ ತಂದೆ ಜೋಗಿಂದರ್ ಸಿಂಗ್ ಹೇಳಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ವಿವರಿಸಿದೆ.

“ನಾವು ವಿಡಿಯೋವನ್ನು ಗಮನಿಸಿದ್ದೇವೆ ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕುಟುಂಬದೊಂದಿಗೆ ಪೊಲೀಸರು ಸಂಪರ್ಕದಲ್ಲಿದ್ದಾರೆ ಎಂದು ಡಿಎಸ್ಪಿ (ಗಭಾನ) ಧನಂಜಯ್ ಸಿಂಗ್ ಹೇಳಿದ್ದಾರೆ. ಈ ವಿಷಯದಲ್ಲಿ ನಾವು ಅಗತ್ಯವಾದ ಕಾನೂನು ಕ್ರಮಗಳನ್ನು ಅನ್ವೇಷಿಸುತ್ತಿದ್ದೇವೆ. ನಾವು ಶಿಕ್ಷಣ ಇಲಾಖೆಯೊಂದಿಗೆ ಸಹ ಪತ್ರವ್ಯವಹಾರ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಲಿಖಿತ ದೂರು ಸ್ವೀಕರಿಸಿದ ನಂತರ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಸ್‌ಎಚ್‌ಒ (ಲೋಧಾ) ಹೇಮಂತ್ ಮಾವಿ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...