Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ (ಫೆ.21) ಆದೇಶಿಸಿದೆ.

ಶ್ರೀಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನೊಂದಿಗೂ ಗುರುತಿಸಿಕೊಂಡಿರುವ ಶಾಕುಂಭರಿ ಪೀಠಾಧೀಶ್ವರ ಆಶುತೋಷ್ ಬ್ರಹ್ಮಚಾರಿ ಮಹಾರಾಜ್ ಅವರು ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ಸಂತ್ರಸ್ತ ಬಾಲಕರ ಪರವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ವಿನೋದ್ ಕುಮಾರ್ ಚೌರಾಸಿಯಾ ಅವರು, ಈ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ಕೂಡಲೇ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.

ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ಅವರು 14 ಮತ್ತು 17 ವರ್ಷದ ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಮುಖ್ಯ ಆರೋಪವಾಗಿದೆ.

ಕಳೆದ ಒಂದು ವರ್ಷದಿಂದ ಅವರ ಆಶ್ರಮದಲ್ಲಿ ಹಾಗೂ ಇತ್ತೀಚೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಾಘ ಮೇಳದ ಸಂದರ್ಭದಲ್ಲಿ, ‘ಗುರು ಸೇವೆ’ ಮತ್ತು ‘ಧಾರ್ಮಿಕ ಮಾರ್ಗದರ್ಶನ’ದ ಹೆಸರಿನಲ್ಲಿ ಈ ದೌರ್ಜನ್ಯ ನಡೆದಿದೆ ಎಂದು ದೂರಲಾಗಿದೆ.

ಅರ್ಜಿದಾರರು ಮೊದಲು ಪ್ರಯಾಗ್‌ರಾಜ್ ಪೊಲೀಸ್ ಕಮಿಷನರ್ ಮತ್ತು ಸ್ಥಳೀಯ ಝುನ್ಸಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸದ ಕಾರಣ, ಜನವರಿ 28ರಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ.

ಅರ್ಜಿದಾರರು ನ್ಯಾಯಾಲಯಕ್ಕೆ ಸಾಕ್ಷ್ಯವಾಗಿ ಕೆಲವು ವಿಡಿಯೋಗಳನ್ನೊಳಗೊಂಡ ಸಿಡಿ ಸಲ್ಲಿಸಿದ್ದಾರೆ. ಅಲ್ಲದೆ, ಫೆಬ್ರವರಿ 13ರಂದು ನ್ಯಾಯಾಲಯವು ಇಬ್ಬರು ಸಂತ್ರಸ್ತ ಬಾಲಕರ ಹೇಳಿಕೆಯನ್ನು ವಿಡಿಯೋಗ್ರಫಿ ಮೂಲಕ ದಾಖಲಿಸಿಕೊಂಡಿದೆ.

ಪೋಕ್ಸೊ ಕಾಯ್ದೆಯ ನಿಬಂಧನೆಗಳಿಗೆ ಅನುಸಾರವಾಗಿ ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ನಡೆಸಬೇಕು ಮತ್ತು ಸಂತ್ರಸ್ತರ ಗುರುತು ಮತ್ತು ಘನತೆಯನ್ನು ರಕ್ಷಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ನ್ಯಾಯಾಲಯದ ಆದೇಶಕ್ಕೆ ಪ್ರತಿಕ್ರಿಯಿಸಿರುವ ಅವಿಮುಕ್ತೇಶ್ವರಾನಂದ ಸರಸ್ವತಿ, ತನಿಖೆಯ ನಂತರವೇ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.

“ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಸೂಚಿಸಿರುವುದು ಸರಿಯಾಗಿದೆ. ಪ್ರಕರಣ ದಾಖಲಾದಾಗ ಮಾತ್ರ ತನಿಖೆ ಮತ್ತು ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಆಗ ಮಾತ್ರ ನಮ್ಮ ವಿರುದ್ಧ ದಾಖಲಿಸಲಾದ ಸುಳ್ಳು ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ. ಈ ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಲು ಸಾಧ್ಯವಾಗುತ್ತದೆ. ಆದ್ದರಿಂದ ಇದು ಅಗತ್ಯವಾಗಿದೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ಅವರು ಪ್ರತಿಕ್ರಿಯಿಸಿದ್ದಾರೆ.

“ನಾನು ಹೇಳುವುದಿಷ್ಟೇ, ಅನೇಕ ಜನರು ಈ ವಿಷಯವನ್ನು ಗಮನಿಸುತ್ತಿರುವುದರಿಂದ ನ್ಯಾಯಾಲಯ ಹೆಚ್ಚು ಸಮಯ ತೆಗೆದುಕೊಳ್ಳದೆ ಈ ಪ್ರಕ್ರಿಯೆಯನ್ನು ವೇಗವಾಗಿ ನಡೆಸಬೇಕು. ಆದಷ್ಟು ಬೇಗ ಸಾಕ್ಷ್ಯಗಳನ್ನು ದಾಖಲಿಸಿ ತೀರ್ಪು ನೀಡಬೇಕು. ತಪ್ಪು ಯಾವಾಗಲೂ ತಪ್ಪಾಗಿಯೇ ಇರುತ್ತದೆ. ನಮ್ಮ ವಿರುದ್ಧ ದಾಖಲಿಸಲಾದ ಸುಳ್ಳು ಪ್ರಕರಣವು ಅಂತಿಮವಾಗಿ ಸುಳ್ಳೆಂದು ಸಾಬೀತಾಗುತ್ತದೆ” ಎಂದು ಹೇಳಿದ್ದಾರೆ.

ಕಳೆದ ಕೆಲ ಸಮಯದಿಂದ ಸ್ವಾಮಿ ಅವಿಮುಕ್ತೇಶ್ವರಾನಂದರು ಉತ್ತರ ಪ್ರದೇಶದ ಆಡಳಿತರೂಢ ಬಿಜೆಪಿ ಜೊತೆ ಸಂರ್ಘದಲ್ಲಿ ತೊಡಗಿದ್ದಾರೆ.

ಕಳೆದ ತಿಂಗಳು, ಅವರು ‘ಶಂಕರಾಚಾರ್ಯ’ ಎಂಬ ಪದನಾಮವನ್ನು ಬಳಸುವುದರ ವಿರುದ್ಧ ಪ್ರಯಾಗ್‌ರಾಜ್ ಆಡಳಿತವು ನೋಟಿಸ್ ಕಳುಹಿಸಿತ್ತು, ಇದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಜನವರಿ 18ರಂದು ಮೌನಿ ಅಮಾವಾಸ್ಯೆಯ ದಿನ ಸಂಗಮದಲ್ಲಿ ಸ್ನಾನ ಮಾಡುವ ಸ್ಥಳದ ಹತ್ತಿರ ಅವಿಮುಕ್ತೇಶ್ವರಾನಂದರನ್ನು ಪೊಲೀಸರು ತಡೆದಿದ್ದರು. ಅವರ ಅನುಯಾಯಿಗಳನ್ನು ಪೊಲೀಸರು ಒರಟಾಗಿ ನಡೆಸಿಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನು ಖಂಡಿಸಿ ಅವಿಮುಕ್ತೇಶ್ವರಾನಂದರು 48 ಗಂಟೆಗಳ ಕಾಲ ಆ ಸ್ಥಳದ ಸಮೀಪವೇ ಪ್ರತಿಭಟನೆ ನಡೆಸಿದ್ದರು.

2024ರ ಜನವರಿಯಲ್ಲಿ, ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಬಗ್ಗೆ ಅವಿಮುಕ್ತೇಶ್ವರಾನಂದರು ನೀಡಿದ ಹೇಳಿಕೆ ವಿವಾದವನ್ನು ಸೃಷ್ಟಿಸಿತ್ತು. “ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯಿಂದ ‘ರಾಜಕೀಯ ಹಿಂದೂಗಳು’ ಸಂತೋಷವಾಗಿದ್ದಾರೆ, ಆದರೆ ಅಸಂಖ್ಯಾತ ‘ಧಾರ್ಮಿಕ ಹಿಂದೂಗಳು’ ಅಲ್ಲ” ಎಂದು ಹೇಳುವ ಮೂಲಕ ಅವರು ಚರ್ಚೆಗೆ ನಾಂದಿ ಹಾಡಿದ್ದರು.

ಬಿಜೆಪಿ ಸರ್ಕಾರದ ವಿರುದ್ದ ತೊಡೆ ತಟ್ಟಿದ್ದ ಅವಿಮುಕ್ತೇಶ್ವರಾನಂದರ ವಿರುದ್ದ ಈಗ ಎಫ್‌ಐಆರ್‌ ದಾಖಲಾಗುತ್ತಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...