Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ (ಫೆ.21) ಆದೇಶಿಸಿದೆ.

ಶ್ರೀಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನೊಂದಿಗೂ ಗುರುತಿಸಿಕೊಂಡಿರುವ ಶಾಕುಂಭರಿ ಪೀಠಾಧೀಶ್ವರ ಆಶುತೋಷ್ ಬ್ರಹ್ಮಚಾರಿ ಮಹಾರಾಜ್ ಅವರು ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ಸಂತ್ರಸ್ತ ಬಾಲಕರ ಪರವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ವಿನೋದ್ ಕುಮಾರ್ ಚೌರಾಸಿಯಾ ಅವರು, ಈ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ಕೂಡಲೇ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.

ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ಅವರು 14 ಮತ್ತು 17 ವರ್ಷದ ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಮುಖ್ಯ ಆರೋಪವಾಗಿದೆ.

ಕಳೆದ ಒಂದು ವರ್ಷದಿಂದ ಅವರ ಆಶ್ರಮದಲ್ಲಿ ಹಾಗೂ ಇತ್ತೀಚೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಾಘ ಮೇಳದ ಸಂದರ್ಭದಲ್ಲಿ, ‘ಗುರು ಸೇವೆ’ ಮತ್ತು ‘ಧಾರ್ಮಿಕ ಮಾರ್ಗದರ್ಶನ’ದ ಹೆಸರಿನಲ್ಲಿ ಈ ದೌರ್ಜನ್ಯ ನಡೆದಿದೆ ಎಂದು ದೂರಲಾಗಿದೆ.

ಅರ್ಜಿದಾರರು ಮೊದಲು ಪ್ರಯಾಗ್‌ರಾಜ್ ಪೊಲೀಸ್ ಕಮಿಷನರ್ ಮತ್ತು ಸ್ಥಳೀಯ ಝುನ್ಸಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸದ ಕಾರಣ, ಜನವರಿ 28ರಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ.

ಅರ್ಜಿದಾರರು ನ್ಯಾಯಾಲಯಕ್ಕೆ ಸಾಕ್ಷ್ಯವಾಗಿ ಕೆಲವು ವಿಡಿಯೋಗಳನ್ನೊಳಗೊಂಡ ಸಿಡಿ ಸಲ್ಲಿಸಿದ್ದಾರೆ. ಅಲ್ಲದೆ, ಫೆಬ್ರವರಿ 13ರಂದು ನ್ಯಾಯಾಲಯವು ಇಬ್ಬರು ಸಂತ್ರಸ್ತ ಬಾಲಕರ ಹೇಳಿಕೆಯನ್ನು ವಿಡಿಯೋಗ್ರಫಿ ಮೂಲಕ ದಾಖಲಿಸಿಕೊಂಡಿದೆ.

ಪೋಕ್ಸೊ ಕಾಯ್ದೆಯ ನಿಬಂಧನೆಗಳಿಗೆ ಅನುಸಾರವಾಗಿ ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ನಡೆಸಬೇಕು ಮತ್ತು ಸಂತ್ರಸ್ತರ ಗುರುತು ಮತ್ತು ಘನತೆಯನ್ನು ರಕ್ಷಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ನ್ಯಾಯಾಲಯದ ಆದೇಶಕ್ಕೆ ಪ್ರತಿಕ್ರಿಯಿಸಿರುವ ಅವಿಮುಕ್ತೇಶ್ವರಾನಂದ ಸರಸ್ವತಿ, ತನಿಖೆಯ ನಂತರವೇ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.

“ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಸೂಚಿಸಿರುವುದು ಸರಿಯಾಗಿದೆ. ಪ್ರಕರಣ ದಾಖಲಾದಾಗ ಮಾತ್ರ ತನಿಖೆ ಮತ್ತು ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಆಗ ಮಾತ್ರ ನಮ್ಮ ವಿರುದ್ಧ ದಾಖಲಿಸಲಾದ ಸುಳ್ಳು ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ. ಈ ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಲು ಸಾಧ್ಯವಾಗುತ್ತದೆ. ಆದ್ದರಿಂದ ಇದು ಅಗತ್ಯವಾಗಿದೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ಅವರು ಪ್ರತಿಕ್ರಿಯಿಸಿದ್ದಾರೆ.

“ನಾನು ಹೇಳುವುದಿಷ್ಟೇ, ಅನೇಕ ಜನರು ಈ ವಿಷಯವನ್ನು ಗಮನಿಸುತ್ತಿರುವುದರಿಂದ ನ್ಯಾಯಾಲಯ ಹೆಚ್ಚು ಸಮಯ ತೆಗೆದುಕೊಳ್ಳದೆ ಈ ಪ್ರಕ್ರಿಯೆಯನ್ನು ವೇಗವಾಗಿ ನಡೆಸಬೇಕು. ಆದಷ್ಟು ಬೇಗ ಸಾಕ್ಷ್ಯಗಳನ್ನು ದಾಖಲಿಸಿ ತೀರ್ಪು ನೀಡಬೇಕು. ತಪ್ಪು ಯಾವಾಗಲೂ ತಪ್ಪಾಗಿಯೇ ಇರುತ್ತದೆ. ನಮ್ಮ ವಿರುದ್ಧ ದಾಖಲಿಸಲಾದ ಸುಳ್ಳು ಪ್ರಕರಣವು ಅಂತಿಮವಾಗಿ ಸುಳ್ಳೆಂದು ಸಾಬೀತಾಗುತ್ತದೆ” ಎಂದು ಹೇಳಿದ್ದಾರೆ.

ಕಳೆದ ಕೆಲ ಸಮಯದಿಂದ ಸ್ವಾಮಿ ಅವಿಮುಕ್ತೇಶ್ವರಾನಂದರು ಉತ್ತರ ಪ್ರದೇಶದ ಆಡಳಿತರೂಢ ಬಿಜೆಪಿ ಜೊತೆ ಸಂರ್ಘದಲ್ಲಿ ತೊಡಗಿದ್ದಾರೆ.

ಕಳೆದ ತಿಂಗಳು, ಅವರು ‘ಶಂಕರಾಚಾರ್ಯ’ ಎಂಬ ಪದನಾಮವನ್ನು ಬಳಸುವುದರ ವಿರುದ್ಧ ಪ್ರಯಾಗ್‌ರಾಜ್ ಆಡಳಿತವು ನೋಟಿಸ್ ಕಳುಹಿಸಿತ್ತು, ಇದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಜನವರಿ 18ರಂದು ಮೌನಿ ಅಮಾವಾಸ್ಯೆಯ ದಿನ ಸಂಗಮದಲ್ಲಿ ಸ್ನಾನ ಮಾಡುವ ಸ್ಥಳದ ಹತ್ತಿರ ಅವಿಮುಕ್ತೇಶ್ವರಾನಂದರನ್ನು ಪೊಲೀಸರು ತಡೆದಿದ್ದರು. ಅವರ ಅನುಯಾಯಿಗಳನ್ನು ಪೊಲೀಸರು ಒರಟಾಗಿ ನಡೆಸಿಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನು ಖಂಡಿಸಿ ಅವಿಮುಕ್ತೇಶ್ವರಾನಂದರು 48 ಗಂಟೆಗಳ ಕಾಲ ಆ ಸ್ಥಳದ ಸಮೀಪವೇ ಪ್ರತಿಭಟನೆ ನಡೆಸಿದ್ದರು.

2024ರ ಜನವರಿಯಲ್ಲಿ, ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಬಗ್ಗೆ ಅವಿಮುಕ್ತೇಶ್ವರಾನಂದರು ನೀಡಿದ ಹೇಳಿಕೆ ವಿವಾದವನ್ನು ಸೃಷ್ಟಿಸಿತ್ತು. “ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯಿಂದ ‘ರಾಜಕೀಯ ಹಿಂದೂಗಳು’ ಸಂತೋಷವಾಗಿದ್ದಾರೆ, ಆದರೆ ಅಸಂಖ್ಯಾತ ‘ಧಾರ್ಮಿಕ ಹಿಂದೂಗಳು’ ಅಲ್ಲ” ಎಂದು ಹೇಳುವ ಮೂಲಕ ಅವರು ಚರ್ಚೆಗೆ ನಾಂದಿ ಹಾಡಿದ್ದರು.

ಬಿಜೆಪಿ ಸರ್ಕಾರದ ವಿರುದ್ದ ತೊಡೆ ತಟ್ಟಿದ್ದ ಅವಿಮುಕ್ತೇಶ್ವರಾನಂದರ ವಿರುದ್ದ ಈಗ ಎಫ್‌ಐಆರ್‌ ದಾಖಲಾಗುತ್ತಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...