Homeಅಂತರಾಷ್ಟ್ರೀಯಡ್ರಗ್ ದೊರೆ 'ಎಲ್ ಮೆಂಚೊ' ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

‘ಎಲ್ ಮೆಂಚೊ’ ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿಯಾಗಿದೆ.

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್‌ ಸಂಘಟನೆಯ ನಾಯಕನಾಗಿದ್ದ 59 ವರ್ಷದ ಎಲ್ ಮೆಂಚೊ, ಜಲಿಸ್ಕೊ ರಾಜ್ಯದ ತಪಲ್ಪಾ ಪಟ್ಟಣದಲ್ಲಿ ಸೈನಿಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಕ್ಸಿಕೋ ನಗರಕ್ಕೆ ವಿಮಾನದ ಮೂಲಕ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ ಎಂದು ಸೇನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ ಮೆಂಚೊ ಹತ್ಯೆಯ ವಿರುದ್ಧ ಪ್ರತಿಭಟಿಸಿದ ಬಂದೂಕುಧಾರಿಗಳು ಪಶ್ಚಿಮ ಜಲಿಸ್ಕೊ ರಾಜ್ಯದ (ತಪಲ್ಪಾ ಸೇರಿದಂತೆ) ಸುಮಾರು 20ಕ್ಕೂ ಹೆಚ್ಚು ರಸ್ತೆಗಳನ್ನು ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಬಂದ್ ಮಾಡಿದ್ದಾರೆ. ಈ ಹಿಂಸಾಚಾರ ಇತರ ರಾಜ್ಯಗಳಿಗೂ ಹಬ್ಬಿದೆ.

ಕಾರ್ಟೆಲ್ ಸದಸ್ಯರು ಮೆಕ್ಸಿಕೋದ ಸುಮಾರು 20 ರಾಜ್ಯಗಳಲ್ಲಿ 250ಕ್ಕೂ ಹೆಚ್ಚು ಕಡೆ ರಸ್ತೆ ತಡೆ ನಡೆಸಿದ್ದಾರೆ ಎಂದು ಸಿಎನ್‌ಎನ್‌ ವರದಿ ಮಾಡಿದೆ.

ಹಿಂಸಾಚಾರದ ಹಿನ್ನೆಲೆ ಅಮೆರಿಕ ಮತ್ತು ಕೆನಡಾ ಸರ್ಕಾರಗಳು ತಮ್ಮ ನಾಗರಿಕರಿಗೆ ಮನೆಯಲ್ಲೇ ಇರಲು ಸೂಚಿಸಿವೆ. ಜಲಿಸ್ಕೊ, ಮಿಚೋವಾಕನ್ ಮತ್ತು ಗುವಾನಾಜುವಾಟೊ ರಾಜ್ಯಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಗುವಾಡಲಜಾರ ಮತ್ತು ಪೋರ್ಟೊ ವಲ್ಲಾರ್ಟಾದಂತಹ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಗಿದ್ದು, ಹಲವು ಅಂತಾರಾಷ್ಟ್ರೀಯ ವಿಮಾನಯಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ಜಲಿಸ್ಕೊ ರಾಜ್ಯವು ಈ ವರ್ಷ ನಡೆಯಲಿರುವ ಫಿಫಾ ವಿಶ್ವಕಪ್‌ನ ಆತಿಥ್ಯ ವಹಿಸಲಿದ್ದು, ಸದ್ಯದ ಪರಿಸ್ಥಿತಿಯಿಂದಾಗಿ ಎಲ್ಲಾ ದೊಡ್ಡ ಸಾರ್ವಜನಿಕ ಸಮಾರಂಭಗಳು ಮತ್ತು ಫುಟ್‌ಬಾಲ್ ಪಂದ್ಯಗಳನ್ನು ಮುಂದೂಡಲಾಗಿದೆ ಎಂದು ದಿ ಹಿಂದೂ ಸ್ಪೋರ್ಟ್ಸ್ ಸ್ಟಾರ್ ವರದಿ ತಿಳಿಸಿದೆ.

ಒಸೆಗುಯೆರಾ, ಸಿನಾಲೋವಾ ಕಾರ್ಟೆಲ್ ಸ್ಥಾಪಕರಾದ ಜೊವಾಕ್ವಿನ್ ಎಲ್ ಚಾಪೊ, ಗುಜ್ಮಾನ್ ಮತ್ತು ಇಸ್ಮಾಯೆಲ್ ಜಾಂಬಾಡಾ ಅವರ ಬಂಧನದ ನಂತರ ಮೆಕ್ಸಿಕೋದಲ್ಲಿ ಸೆರೆಹಿಡಿಯಲ್ಪಟ್ಟ ಅತ್ಯಂತ ದೊಡ್ಡ ಡ್ರಗ್ ದೊರೆ ಆಗಿದ್ದಾನೆ. ಸದ್ಯ ಎಲ್ ಚಾಪೊ ಮತ್ತು ಜಾಂಬಾಡಾ ಇಬ್ಬರೂ ಅಮೆರಿಕಾದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಎಲ್ ಮೆಂಚೊ ಸಾವಿನೊಂದಿಗೆ, ಅಮೆರಿಕಾದ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟೇಶನ್ (ಡಿಇಎ) ದಶಕಗಳಿಂದ ನಡೆಸುತ್ತಿದ್ದ ಕಾರ್ಯಾಚರಣೆಗೆ ದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಎಲ್ ಮೆಂಚೊನ ಮರಣದ ನಂತರ, ಜಲಿಸ್ಕೊ ಕಾರ್ಟೆಲ್‌ನೊಳಗೆ ಮುಂದಿನ ನಾಯಕತ್ವಕ್ಕಾಗಿ ಭಾರೀ ಅಂತರ್ಯುದ್ಧ ನಡೆಯುವ ಸಾಧ್ಯತೆಯಿದೆ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವಿಶ್ಲೇಷಿಸಿದೆ.

ಹಿಂಸಾಚಾರವನ್ನು ಹತ್ತಿಕ್ಕಲು ಮೆಕ್ಸಿಕೋ ಸರ್ಕಾರವು ಜಲಿಸ್ಕೊ ರಾಜ್ಯಕ್ಕೆ ಹೆಚ್ಚುವರಿ 10,000 ಸೇನಾ ಸಿಬ್ಬಂದಿಯನ್ನು ರವಾನಿಸಿದೆ ಎಂದು ಎಬಿಸಿ ನ್ಯೂಸ್ ತಿಳಿಸಿದೆ.

ಮೆಕ್ಸಿಕನ್ ಸೇನೆ ಭಾನುವಾರ ನೀಡಿದ ಹೇಳಿಕೆಯ ಪ್ರಕಾರ, ಎಲ್‌ ಮೆಂಚೊ ಮೇಲಿನ ದಾಳಿಯನ್ನು ಮೆಕ್ಸಿಕೋದ ಮಿಲಿಟರಿ ಗುಪ್ತಚರ ಮಾಹಿತಿ ಮಾತ್ರವಲ್ಲದೆ, ಅಮೆರಿಕದ ಅಧಿಕಾರಿಗಳಿಂದ ಲಭ್ಯವಾದ ಪೂರಕ ಮಾಹಿತಿಯ ನೆರವಿನೊಂದಿಗೆ ನಡೆಸಲಾಗಿದೆ.

ಅಮೆರಿಕದ ಡಿಇಎ ಈ ಕಾರ್ಯಾಚರಣೆಗೆ ಅಗತ್ಯವಾದ ತಾಂತ್ರಿಕ ಮತ್ತು ಕಣ್ಗಾವಲು ಮಾಹಿತಿಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಲ್ ಮೆಂಚೊನನ್ನು ಪತ್ತೆಹಚ್ಚಲು ಅಮೆರಿಕ ಘೋಷಿಸಿದ್ದ 15 ಮಿಲಿಯನ್ ಡಾಲರ್ ಬಹುಮಾನದ ಮಾಹಿತಿಯನ್ನು ಹಂಚಿಕೊಳ್ಳುವವರಿಗೆ ನೀಡುವ ಪ್ರಕ್ರಿಯೆಯ ಕುರಿತು ಈಗ ಚರ್ಚೆ ನಡೆಯುತ್ತಿದೆ ಎಂದು ಸಿಬಿಎಸ್ ನ್ಯೂಸ್ ತಿಳಿಸಿದೆ.

ಈ ಯಶಸ್ವಿ ದಾಳಿಯು ಅಮೆರಿಕ ಮತ್ತು ಮೆಕ್ಸಿಕೋ ನಡುವಿನ ಭದ್ರತಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ಎರಡೂ ದೇಶಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಮೆಕ್ಸಿಕನ್ ಸೇನೆಯ ಪ್ರಕಟಣೆಯ ಪ್ರಕಾರ, ಕಾರ್ಯಾಚರಣೆಯಲ್ಲಿ ಒಸೆಗುಯೆರಾ ಮಾತ್ರವಲ್ಲದೆ ಕಾರ್ಟೆಲ್‌ನ ಆರು ಶಂಕಿತ ಬಂದೂಕುಧಾರಿಗಳು ಕೂಡ ಹತರಾಗಿದ್ದಾರೆ. ಇದೇ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ಇಬ್ಬರು ಶಂಕಿತ ಕಾರ್ಟೆಲ್ ಸದಸ್ಯರನ್ನು ಬಂಧಿಸಲಾಗಿದೆ. ಅಲ್ಲದೆ, ವಿಮಾನಗಳನ್ನು ಹೊಡೆದುರುಳಿಸುವ ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸುವ ಸಾಮರ್ಥ್ಯವಿರುವ ರಾಕೆಟ್ ಲಾಂಚರ್‌ಗಳು ಸೇರಿದಂತೆ ವಿವಿಧ ರೀತಿಯ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್?

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್ ಎಂಬುವುದು ಮೆಕ್ಸಿಕೋದ ಅತ್ಯಂತ ಪ್ರಬಲ ಮತ್ತು ಅಪಾಯಕಾರಿ ಅಪರಾಧ ಸಂಘಟನೆಯಾಗಿದೆ. ಇದು 2009-2010ರಲ್ಲಿ ಸಿನಾಲೋವಾ ಕಾರ್ಟೆಲ್‌ನಿಂದ ಬೇರ್ಪಟ್ಟ ಗುಂಪಾಗಿ ಉದಯಿಸಿತು. ಎಲ್ ಮೆಂಚೊ ಇದರ ಮುಖ್ಯಸ್ಥನಾಗಿದ್ದ.

ಈ ಗುಂಪು ಪ್ರಮುಖವಾಗಿ ಕೊಕೇನ್, ಹೆರಾಯಿನ್ ಮತ್ತು ಸಿಂಥೆಟಿಕ್ ಡ್ರಗ್ಸ್ (ಫೆಂಟಾನಿಲ್) ನಂತಹ ಮಾದಕ ದ್ರವ್ಯಗಳ ಅಕ್ರಮ ಸಾಗಾಟದಲ್ಲಿ ತೊಡಗಿದೆ. ಇದಲ್ಲದೆ ಹಣ ಅಕ್ರಮ ಸಾಗಾಟ, ಅಪಹರಣ ಮತ್ತು ತೈಲ ಕಳ್ಳತನದಂತಹ ಕೃತ್ಯಗಳಲ್ಲೂ ಇದು ಭಾಗಿಯಾಗಿದೆ ಎಂದು ವರದಿಗಳು ಹೇಳಿವೆ.

ಇದು ಅರೆಸೇನಾ ಪಡೆಯಂತೆಯೇ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಡ್ರೋನ್‌ಗಳ ಮೂಲಕ ಬಾಂಬ್ ದಾಳಿ ನಡೆಸುವುದು ಮತ್ತು ರಾಕೆಟ್ ಲಾಂಚರ್‌ಗಳನ್ನು ಬಳಸುವುದರಲ್ಲಿ ಕುಖ್ಯಾತವಾಗಿದೆ.

ಮೆಕ್ಸಿಕೋದ 32 ರಾಜ್ಯಗಳ ಪೈಕಿ ಸುಮಾರು 27ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇದು ತನ್ನ ಜಾಲವನ್ನು ಹೊಂದಿದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ, ಯುರೋಪ್ ಮತ್ತು ಏಷ್ಯಾದ ದೇಶಗಳಿಗೂ ತನ್ನ ವ್ಯವಹಾರವನ್ನು ವಿಸ್ತರಿಸಿದೆ.

ಈ ಕಾರ್ಟೆಲ್ ತನ್ನ ಎದುರಾಳಿ ಗುಂಪುಗಳು ಮತ್ತು ಸರ್ಕಾರಿ ಭದ್ರತಾ ಪಡೆಗಳ ಮೇಲೆ ತೀವ್ರವಾದ ದಾಳಿಗಳನ್ನು ನಡೆಸಲು ಹೆಸರಾಗಿದೆ. ಅಮೆರಿಕ ಸರ್ಕಾರವು ಇದನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....