Homeಅಂತರಾಷ್ಟ್ರೀಯಡ್ರಗ್ ದೊರೆ 'ಎಲ್ ಮೆಂಚೊ' ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

‘ಎಲ್ ಮೆಂಚೊ’ ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿಯಾಗಿದೆ.

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್‌ ಸಂಘಟನೆಯ ನಾಯಕನಾಗಿದ್ದ 59 ವರ್ಷದ ಎಲ್ ಮೆಂಚೊ, ಜಲಿಸ್ಕೊ ರಾಜ್ಯದ ತಪಲ್ಪಾ ಪಟ್ಟಣದಲ್ಲಿ ಸೈನಿಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಕ್ಸಿಕೋ ನಗರಕ್ಕೆ ವಿಮಾನದ ಮೂಲಕ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ ಎಂದು ಸೇನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ ಮೆಂಚೊ ಹತ್ಯೆಯ ವಿರುದ್ಧ ಪ್ರತಿಭಟಿಸಿದ ಬಂದೂಕುಧಾರಿಗಳು ಪಶ್ಚಿಮ ಜಲಿಸ್ಕೊ ರಾಜ್ಯದ (ತಪಲ್ಪಾ ಸೇರಿದಂತೆ) ಸುಮಾರು 20ಕ್ಕೂ ಹೆಚ್ಚು ರಸ್ತೆಗಳನ್ನು ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಬಂದ್ ಮಾಡಿದ್ದಾರೆ. ಈ ಹಿಂಸಾಚಾರ ಇತರ ರಾಜ್ಯಗಳಿಗೂ ಹಬ್ಬಿದೆ.

ಕಾರ್ಟೆಲ್ ಸದಸ್ಯರು ಮೆಕ್ಸಿಕೋದ ಸುಮಾರು 20 ರಾಜ್ಯಗಳಲ್ಲಿ 250ಕ್ಕೂ ಹೆಚ್ಚು ಕಡೆ ರಸ್ತೆ ತಡೆ ನಡೆಸಿದ್ದಾರೆ ಎಂದು ಸಿಎನ್‌ಎನ್‌ ವರದಿ ಮಾಡಿದೆ.

ಹಿಂಸಾಚಾರದ ಹಿನ್ನೆಲೆ ಅಮೆರಿಕ ಮತ್ತು ಕೆನಡಾ ಸರ್ಕಾರಗಳು ತಮ್ಮ ನಾಗರಿಕರಿಗೆ ಮನೆಯಲ್ಲೇ ಇರಲು ಸೂಚಿಸಿವೆ. ಜಲಿಸ್ಕೊ, ಮಿಚೋವಾಕನ್ ಮತ್ತು ಗುವಾನಾಜುವಾಟೊ ರಾಜ್ಯಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಗುವಾಡಲಜಾರ ಮತ್ತು ಪೋರ್ಟೊ ವಲ್ಲಾರ್ಟಾದಂತಹ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಗಿದ್ದು, ಹಲವು ಅಂತಾರಾಷ್ಟ್ರೀಯ ವಿಮಾನಯಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ಜಲಿಸ್ಕೊ ರಾಜ್ಯವು ಈ ವರ್ಷ ನಡೆಯಲಿರುವ ಫಿಫಾ ವಿಶ್ವಕಪ್‌ನ ಆತಿಥ್ಯ ವಹಿಸಲಿದ್ದು, ಸದ್ಯದ ಪರಿಸ್ಥಿತಿಯಿಂದಾಗಿ ಎಲ್ಲಾ ದೊಡ್ಡ ಸಾರ್ವಜನಿಕ ಸಮಾರಂಭಗಳು ಮತ್ತು ಫುಟ್‌ಬಾಲ್ ಪಂದ್ಯಗಳನ್ನು ಮುಂದೂಡಲಾಗಿದೆ ಎಂದು ದಿ ಹಿಂದೂ ಸ್ಪೋರ್ಟ್ಸ್ ಸ್ಟಾರ್ ವರದಿ ತಿಳಿಸಿದೆ.

ಒಸೆಗುಯೆರಾ, ಸಿನಾಲೋವಾ ಕಾರ್ಟೆಲ್ ಸ್ಥಾಪಕರಾದ ಜೊವಾಕ್ವಿನ್ ಎಲ್ ಚಾಪೊ, ಗುಜ್ಮಾನ್ ಮತ್ತು ಇಸ್ಮಾಯೆಲ್ ಜಾಂಬಾಡಾ ಅವರ ಬಂಧನದ ನಂತರ ಮೆಕ್ಸಿಕೋದಲ್ಲಿ ಸೆರೆಹಿಡಿಯಲ್ಪಟ್ಟ ಅತ್ಯಂತ ದೊಡ್ಡ ಡ್ರಗ್ ದೊರೆ ಆಗಿದ್ದಾನೆ. ಸದ್ಯ ಎಲ್ ಚಾಪೊ ಮತ್ತು ಜಾಂಬಾಡಾ ಇಬ್ಬರೂ ಅಮೆರಿಕಾದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಎಲ್ ಮೆಂಚೊ ಸಾವಿನೊಂದಿಗೆ, ಅಮೆರಿಕಾದ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟೇಶನ್ (ಡಿಇಎ) ದಶಕಗಳಿಂದ ನಡೆಸುತ್ತಿದ್ದ ಕಾರ್ಯಾಚರಣೆಗೆ ದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಎಲ್ ಮೆಂಚೊನ ಮರಣದ ನಂತರ, ಜಲಿಸ್ಕೊ ಕಾರ್ಟೆಲ್‌ನೊಳಗೆ ಮುಂದಿನ ನಾಯಕತ್ವಕ್ಕಾಗಿ ಭಾರೀ ಅಂತರ್ಯುದ್ಧ ನಡೆಯುವ ಸಾಧ್ಯತೆಯಿದೆ ಎಂದು ದಿ ನ್ಯೂಯಾರ್ಕ್ ಟೈಮ್ಸ್ ವಿಶ್ಲೇಷಿಸಿದೆ.

ಹಿಂಸಾಚಾರವನ್ನು ಹತ್ತಿಕ್ಕಲು ಮೆಕ್ಸಿಕೋ ಸರ್ಕಾರವು ಜಲಿಸ್ಕೊ ರಾಜ್ಯಕ್ಕೆ ಹೆಚ್ಚುವರಿ 10,000 ಸೇನಾ ಸಿಬ್ಬಂದಿಯನ್ನು ರವಾನಿಸಿದೆ ಎಂದು ಎಬಿಸಿ ನ್ಯೂಸ್ ತಿಳಿಸಿದೆ.

ಮೆಕ್ಸಿಕನ್ ಸೇನೆ ಭಾನುವಾರ ನೀಡಿದ ಹೇಳಿಕೆಯ ಪ್ರಕಾರ, ಎಲ್‌ ಮೆಂಚೊ ಮೇಲಿನ ದಾಳಿಯನ್ನು ಮೆಕ್ಸಿಕೋದ ಮಿಲಿಟರಿ ಗುಪ್ತಚರ ಮಾಹಿತಿ ಮಾತ್ರವಲ್ಲದೆ, ಅಮೆರಿಕದ ಅಧಿಕಾರಿಗಳಿಂದ ಲಭ್ಯವಾದ ಪೂರಕ ಮಾಹಿತಿಯ ನೆರವಿನೊಂದಿಗೆ ನಡೆಸಲಾಗಿದೆ.

ಅಮೆರಿಕದ ಡಿಇಎ ಈ ಕಾರ್ಯಾಚರಣೆಗೆ ಅಗತ್ಯವಾದ ತಾಂತ್ರಿಕ ಮತ್ತು ಕಣ್ಗಾವಲು ಮಾಹಿತಿಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಲ್ ಮೆಂಚೊನನ್ನು ಪತ್ತೆಹಚ್ಚಲು ಅಮೆರಿಕ ಘೋಷಿಸಿದ್ದ 15 ಮಿಲಿಯನ್ ಡಾಲರ್ ಬಹುಮಾನದ ಮಾಹಿತಿಯನ್ನು ಹಂಚಿಕೊಳ್ಳುವವರಿಗೆ ನೀಡುವ ಪ್ರಕ್ರಿಯೆಯ ಕುರಿತು ಈಗ ಚರ್ಚೆ ನಡೆಯುತ್ತಿದೆ ಎಂದು ಸಿಬಿಎಸ್ ನ್ಯೂಸ್ ತಿಳಿಸಿದೆ.

ಈ ಯಶಸ್ವಿ ದಾಳಿಯು ಅಮೆರಿಕ ಮತ್ತು ಮೆಕ್ಸಿಕೋ ನಡುವಿನ ಭದ್ರತಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ಎರಡೂ ದೇಶಗಳ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಮೆಕ್ಸಿಕನ್ ಸೇನೆಯ ಪ್ರಕಟಣೆಯ ಪ್ರಕಾರ, ಕಾರ್ಯಾಚರಣೆಯಲ್ಲಿ ಒಸೆಗುಯೆರಾ ಮಾತ್ರವಲ್ಲದೆ ಕಾರ್ಟೆಲ್‌ನ ಆರು ಶಂಕಿತ ಬಂದೂಕುಧಾರಿಗಳು ಕೂಡ ಹತರಾಗಿದ್ದಾರೆ. ಇದೇ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ.

ಕಾರ್ಯಾಚರಣೆಯ ವೇಳೆ ಇಬ್ಬರು ಶಂಕಿತ ಕಾರ್ಟೆಲ್ ಸದಸ್ಯರನ್ನು ಬಂಧಿಸಲಾಗಿದೆ. ಅಲ್ಲದೆ, ವಿಮಾನಗಳನ್ನು ಹೊಡೆದುರುಳಿಸುವ ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸುವ ಸಾಮರ್ಥ್ಯವಿರುವ ರಾಕೆಟ್ ಲಾಂಚರ್‌ಗಳು ಸೇರಿದಂತೆ ವಿವಿಧ ರೀತಿಯ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್?

ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್ ಎಂಬುವುದು ಮೆಕ್ಸಿಕೋದ ಅತ್ಯಂತ ಪ್ರಬಲ ಮತ್ತು ಅಪಾಯಕಾರಿ ಅಪರಾಧ ಸಂಘಟನೆಯಾಗಿದೆ. ಇದು 2009-2010ರಲ್ಲಿ ಸಿನಾಲೋವಾ ಕಾರ್ಟೆಲ್‌ನಿಂದ ಬೇರ್ಪಟ್ಟ ಗುಂಪಾಗಿ ಉದಯಿಸಿತು. ಎಲ್ ಮೆಂಚೊ ಇದರ ಮುಖ್ಯಸ್ಥನಾಗಿದ್ದ.

ಈ ಗುಂಪು ಪ್ರಮುಖವಾಗಿ ಕೊಕೇನ್, ಹೆರಾಯಿನ್ ಮತ್ತು ಸಿಂಥೆಟಿಕ್ ಡ್ರಗ್ಸ್ (ಫೆಂಟಾನಿಲ್) ನಂತಹ ಮಾದಕ ದ್ರವ್ಯಗಳ ಅಕ್ರಮ ಸಾಗಾಟದಲ್ಲಿ ತೊಡಗಿದೆ. ಇದಲ್ಲದೆ ಹಣ ಅಕ್ರಮ ಸಾಗಾಟ, ಅಪಹರಣ ಮತ್ತು ತೈಲ ಕಳ್ಳತನದಂತಹ ಕೃತ್ಯಗಳಲ್ಲೂ ಇದು ಭಾಗಿಯಾಗಿದೆ ಎಂದು ವರದಿಗಳು ಹೇಳಿವೆ.

ಇದು ಅರೆಸೇನಾ ಪಡೆಯಂತೆಯೇ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಡ್ರೋನ್‌ಗಳ ಮೂಲಕ ಬಾಂಬ್ ದಾಳಿ ನಡೆಸುವುದು ಮತ್ತು ರಾಕೆಟ್ ಲಾಂಚರ್‌ಗಳನ್ನು ಬಳಸುವುದರಲ್ಲಿ ಕುಖ್ಯಾತವಾಗಿದೆ.

ಮೆಕ್ಸಿಕೋದ 32 ರಾಜ್ಯಗಳ ಪೈಕಿ ಸುಮಾರು 27ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇದು ತನ್ನ ಜಾಲವನ್ನು ಹೊಂದಿದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ, ಯುರೋಪ್ ಮತ್ತು ಏಷ್ಯಾದ ದೇಶಗಳಿಗೂ ತನ್ನ ವ್ಯವಹಾರವನ್ನು ವಿಸ್ತರಿಸಿದೆ.

ಈ ಕಾರ್ಟೆಲ್ ತನ್ನ ಎದುರಾಳಿ ಗುಂಪುಗಳು ಮತ್ತು ಸರ್ಕಾರಿ ಭದ್ರತಾ ಪಡೆಗಳ ಮೇಲೆ ತೀವ್ರವಾದ ದಾಳಿಗಳನ್ನು ನಡೆಸಲು ಹೆಸರಾಗಿದೆ. ಅಮೆರಿಕ ಸರ್ಕಾರವು ಇದನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...