Homeಮುಖಪುಟಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

- Advertisement -
- Advertisement -

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದ ವಿಮಾನ, ಸಂಜೆ 7.11ಕ್ಕೆ ರಾಂಚಿ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆಗಿದ್ದು, ಸ್ವಲ್ಪ ಹೊತ್ತಿನಲ್ಲೇ ಪತನಗೊಂಡಿದೆ ಎಂದು ವರದಿಗಳು ಹೇಳಿವೆ.

ಕ್ಯಾಪ್ಟನ್ ವಿವೇಕ್ ವಿಕಾಸ್ ಭಗತ್, ಕ್ಯಾಪ್ಟನ್ ಸವ್ರಜ್‌ದೀಪ್ ಸಿಂಗ್, ರೋಗಿ ಸಂಜಯ್ ಕುಮಾರ್, ವೈದ್ಯ ವಿಕಾಸ್ ಕುಮಾರ್ ಗುಪ್ತಾ, ಪ್ಯಾರಾಮೆಡಿಕ್ ಸಚಿನ್ ಕುಮಾರ್ ಮಿಶ್ರಾ, ಸಹಾಯಕರಾದ ಅರ್ಚನಾ ದೇವಿ ಮತ್ತು ಧುರು ಕುಮಾರ್ ಮೃತರು ಎಂದು ತಿಳಿದು ಬಂದಿದೆ.

“ವಿಮಾನ ಸಂಜೆ 7.30ರ ಸುಮಾರಿಗೆ ಕಾಣೆಯಾಗಿತ್ತು. ನಂತರ ಅದು ಸಿಮಾರಿಯಾದ ಬರಿಯಾಟು ಪಂಚಾಯತ್ ಪ್ರದೇಶದ ಕಾಡಿನಲ್ಲಿ ಪತನಗೊಂಡಿದೆ. ಅದರಲ್ಲಿದ್ದ ಏಳು ಮಂದಿಯೂ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನ ರಾಂಚಿಯಿಂದ ದೆಹಲಿಗೆ ತೆರಳುತ್ತಿತ್ತು” ಎಂದು ಛಾತ್ರಾ ಜಿಲ್ಲಾಧಿಕಾರಿ ಕೀರ್ತಿಶ್ರೀ ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಏಳು ಮಂದಿ ಮೃತರ ಶವಗಳನ್ನು ಹೊರತೆಗೆಯಲಾಗಿದೆ ಎಂದು ಎಸ್‌ಡಿಪಿಒ ಶುಭಂ ಖಂಡೇಲ್ವಾಲ್ ಪಿಟಿಐಗೆ ಹೇಳಿದ್ದಾರೆ.

ಡಿಜಿಸಿಎ ವೆಬ್‌ಸೈಟ್ ಪ್ರಕಾರ, ದೆಹಲಿ ಮೂಲದ ನಾನ್-ಶೆಡ್ಯೂಲ್ಡ್ ಆಪರೇಟರ್ ಆಗಿರುವ ರೆಡ್‌ಬರ್ಡ್, ಅಪಘಾತಕ್ಕೀಡಾದ ವಿಮಾನ ಸೇರಿದಂತೆ ಆರು ವಿಮಾನಗಳನ್ನು ಹೊಂದಿದೆ.

ರಾಂಚಿಯ ದೇವ್‌ಕಮಲ್ ಆಸ್ಪತ್ರೆಯ ರೋಗಿಯೊಬ್ಬರು ಏರ್ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದರು ಎಂದು ಆಸ್ಪತ್ರೆಯ ಸಿಇಒ ಅನಂತ್ ಸಿನ್ಹಾ ಅವರನ್ನು ಉಲ್ಲೇಖಿಸಿ ಪಿಟಿಐ ವರದಿ ತಿಳಿಸಿದೆ.

“ಲತೇಹರ್ ಜಿಲ್ಲೆಯ ಚಂದ್ವಾ ನಿವಾಸಿ ಸಂಜಯ್ ಕುಮಾರ್ (41) ಎಂಬ ರೋಗಿಯನ್ನು ಫೆಬ್ರವರಿ 16ರಂದು ಶೇ. 65ರಷ್ಟು ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ಕರೆತರಲಾಗಿತ್ತು. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕುಟುಂಬ ಸದಸ್ಯರು ಉತ್ತಮ ಚಿಕಿತ್ಸೆಗಾಗಿ ಅವರನ್ನು ದೆಹಲಿಗೆ ಕರೆದೊಯ್ಯಲು ನಿರ್ಧರಿಸಿದ್ದರು” ಎಂದು ಸಿನ್ಹಾ ವಿವರಿಸಿದ್ದಾರೆ.

ದೆಹಲಿಗೆ ತೆರಳುವ ಸಲುವಾಗಿ ಸಂಜೆ 4.30ರ ಸುಮಾರಿಗೆ ಸಂಜಯ್ ಕುಮಾರ್ ಅವರನ್ನು ಕರೆದುಕೊಂಡು ಆಸ್ಪತ್ರೆಯಿಂದ ಹೊರಟ್ಟಿದ್ದರು ಎಂದು ಮಾಹಿತಿ ನೀಡಿದ್ದಾರೆ.

ವಿಮಾನವು ಟೇಕ್ ಆಫ್ ಆದ ಸುಮಾರು 20 ನಿಮಿಷಗಳ ನಂತರ ವಾಯು ಸಂಚಾರ ನಿಯಂತ್ರಣ ಕೇಂದ್ರದೊಂದಿಗಿನ ಸಂಪರ್ಕವನ್ನು ಕಳೆದುಕೊಂಡಿತ್ತು ಎಂದು ರಾಂಚಿ ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್ ತಿಳಿಸಿದ್ದಾರೆ.

“ಅಪಘಾತಕ್ಕೆ ಪ್ರತಿಕೂಲ ಹವಾಮಾನ ಕಾರಣವಾಗಿರಬಹುದು, ಆದರೆ ತನಿಖೆಯ ನಂತರವೇ ನಿಜವಾದ ಕಾರಣ ತಿಳಿದುಬರಲಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...