Homeಮುಖಪುಟ'ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ': 'ದಿ ಕೇರಳ ಸ್ಟೋರಿ 2' ಕುರಿತು...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

- Advertisement -
- Advertisement -

ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್’ ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ barandbench.com ವರದಿ ಮಾಡಿದೆ.

ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಮತ್ತು ಸಿನಿಮಾ ಕೋಮುಗಲಭೆಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿ ಅದರ ಸೆನ್ಸಾರ್ ಸರ್ಟಿಫಿಕೇಟ್ ರದ್ದುಗೊಳಿಸಬೇಕು ಎಂದು ಕೋರಿರುವ ಮೂರು ಅರ್ಜಿಗಳ ಕುರಿತು ನಿರ್ಧರಿಸಲು ಸ್ವತಃ ಸಿನಿಮಾ ವೀಕ್ಷಿಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕೇರಳದಂತಹ ಜಾತ್ಯತೀತ ರಾಜ್ಯವನ್ನು ಕೋಮು ದೃಷ್ಟಿಕೋನದಿಂದ ತೋರಿಸುವಾಗ ಸಿಬಿಎಫ್‌ಸಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಒತ್ತಿ ಹೇಳಿರುವುದಾಗಿ ವರದಿ ತಿಳಿಸಿದೆ.

“ಕೇರಳ ರಾಜ್ಯವು ಅತ್ಯಂತ ಜಾತ್ಯತೀತವಾಗಿದೆ. ಇಲ್ಲಿ ಜನರು ಬಹಳ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಎಲ್ಲೋ ನಡೆದ ಒಂದು ಘಟನೆಯನ್ನು ಇಡೀ ರಾಜ್ಯದಲ್ಲೇ ನಡೆಯುತ್ತಿದೆ ಎಂಬಂತೆ ತೋರಿಸಿದಾಗ ಅದು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತದೆ ಮತ್ತು ಅವರ ಆಕ್ರೋಶಕ್ಕೆ ಕಾರಣವಾಗಬಹುದು. ಇಂತಹ ತಪ್ಪು ಮಾಹಿತಿಗಳು ಹರಡಬಾರದು ಎಂಬ ಕಾರಣಕ್ಕಾಗಿಯೇ ಸೆನ್ಸಾರ್ ಮಂಡಳಿ ಮಧ್ಯಪ್ರವೇಶಿಸಿ ಅಂತಹ ದೃಶ್ಯಗಳನ್ನು ಪರಿಶೀಲಿಸುತ್ತದೆ” ಎಂದು ನ್ಯಾಯಮೂರ್ತಿ ಹೇಳಿರುವುದಾಗಿ ವರದಿ ವಿವರಿಸಿದೆ.

“ಸಿನಿಮಾವನ್ನು ನೈಜ ಘಟನೆಗಳ ಆಧಾರದ ಮೇಲೆ ರೂಪಿಸಲಾಗಿದೆ ಎಂದು ಚಿತ್ರತಂಡ ಹೇಳಿಕೊಳ್ಳುತ್ತಿದೆ. ಆದ್ದರಿಂದ, ಈ ಚಿತ್ರವು ಸತ್ಯವನ್ನು ತಪ್ಪಾಗಿ ಬಿಂಬಿಸಬಹುದು ಮತ್ತು ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಅರ್ಜಿದಾರರ ಆತಂಕಗಳು ನ್ಯಾಯಸಮ್ಮತವಾಗಿವೆ” ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

“ಸಿನಿಮಾದ ಶೀರ್ಷಿಕೆಯಲ್ಲಿ ರಾಜ್ಯದ ಹೆಸರನ್ನು (ಕೇರಳ) ಬಳಸಲಾಗಿದೆ ಎಂಬ ಅಂಶವನ್ನು ಗಮನಿಸಿದರೆ, ಕೇರಳದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

“ನೀವು ಈ ಸಿನಿಮಾಗೆ ‘ಕೇರಳ’ ಎಂದು ಹೆಸರಿಟ್ಟಿರುವುದರಿಂದ, ಆ ರಾಜ್ಯದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಸಾಮಾನ್ಯವಾಗಿ ನಾನು ಸಿನಿಮಾಗಳ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಏಕೆಂದರೆ ಅದು ಒಂದು ಕಲಾ ಸೃಷ್ಟಿ. ಆದರೆ, ನೀವು ಈ ಚಿತ್ರವು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತೀರಿ ಮತ್ತು ಅದಕ್ಕೆ ‘ಕೇರಳ’ ಎಂಬ ಹೆಸರನ್ನೇ ನೀಡಿದ್ದೀರಿ; ಇದು ಸಮಾಜದಲ್ಲಿ ಕೋಮು ಸಂಘರ್ಷ ಉಂಟುಮಾಡುವ ಸಾಧ್ಯತೆಯಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಜನಾಂಗೀಯ, ಧಾರ್ಮಿಕ ಮತ್ತು ಇತರ ಸಮುದಾಯಗಳನ್ನು ಅವಮಾನಿಸುವಂತಹ ದೃಶ್ಯಗಳು ಅಥವಾ ಪದಗಳನ್ನು ನಿಷೇಧಿಸುವ ಸೆನ್ಸಾರ್ ಮಂಡಳಿಯ ಸ್ವಂತ ಮಾರ್ಗಸೂಚಿಗಳನ್ನು ಈ ಸಿನಿಮಾ ಪಾಲಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ

“ನೋಡಿ, ಸೃಜನಶೀಲ ಸ್ವಾತಂತ್ರ್ಯ ಎಂಬುದು ಖಂಡಿತ ಇದೆ. ಆದರೆ ಸೆನ್ಸಾರ್ ಮಂಡಳಿಯು ಪಾಲಿಸಲೇಬೇಕಾದ ಕೆಲವು ಷರತ್ತುಗಳನ್ನು ವಿಧಿಸಿದೆ. ನೀವು ಅವುಗಳ ಬಗ್ಗೆ ಅರಿತಿದ್ದೀರಾ ಎಂಬುವುದು ಇಲ್ಲಿನ ಪ್ರಶ್ನೆ. ಸಿನಿಮಾದ ಮೇಲಿರುವ ತಪ್ಪು ಕಲ್ಪನೆಗಳು ಸಿನಿಮಾ ನೋಡಿದ ಮೇಲೆ ಬದಲಾಗಬಹುದು ನಿಜ, ಆದರೆ ಇದು ಕೇವಲ ಕಲ್ಪನೆಯಲ್ಲ; ನೀವು ಇದು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತಿದ್ದೀರಿ. ಅದು ಬಹಳ ಮುಖ್ಯವಾದ ವಿಷಯವಾಗುತ್ತದೆ” ಎಂದು ನ್ಯಾಮೂರ್ತಿ ಥಾಮಸ್ ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

ನಿರ್ಮಾಪಕರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಶ್ರೀಕುಮಾರ್ ಅವರು, ನ್ಯಾಯಾಲಯವು ಅಂತಿಮ ತೀರ್ಪು ನೀಡುವವರೆಗೆ ಇದುವರೆಗೆ ಬಿಡುಗಡೆಯಾಗಿರುವ ಎಲ್ಲಾ ಟೀಸರ್‌ಗಳನ್ನು ತೆಗೆದುಹಾಕಲು ಒಪ್ಪಿಕೊಂಡಿದ್ದಾರೆ ಎಂದು barandbench.com ವರದಿಯಲ್ಲಿ ಉಲ್ಲೇಖಿಸಿದೆ.

ನ್ಯಾಯಮೂರ್ತಿ ಥಾಮಸ್ ಅವರು ಈ ಪ್ರಕರಣದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿನಿಮಾ ನೋಡಲು ಅನುಕೂಲವಾಗುವಂತೆ ವಿಶೇಷ ಪ್ರದರ್ಶನವನ್ನು ಏರ್ಪಡಿಸಬಹುದು ಎಂದು ಶ್ರೀಕುಮಾರ್ ತಿಳಿಸಿದ್ದಾರೆ. ನ್ಯಾಯಾಧೀಶರು ತಾನು ನಾಳೆಯೇ ಸಿನಿಮಾ ವೀಕ್ಷಿಸುವುದಾಗಿ ಹೇಳಿದ್ದಾರೆ.

“ಸಾಮಾನ್ಯವಾಗಿ ನ್ಯಾಯಾಲಯವು ಕಲಾತ್ಮಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದರಿಂದ ದೂರವಿರುತ್ತದೆ. ಆದರೆ, ಈ ಚಿತ್ರವು ಧಾರ್ಮಿಕ ವಿಷಯವನ್ನು ಹೊಂದಿರುವುದರಿಂದ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ” ನ್ಯಾಯಮೂರ್ತಿ ತಿಳಿಸಿದ್ದಾರೆ.

ಬೆಳ್ಳಗಿನ ಅವಧಿಯ ವಿಚಾರಣೆಯಲ್ಲಿ ಮೇಲಿನ ವಾದ-ಪ್ರತಿವಾದಗಳು ನಡೆದಿವೆ. ನ್ಯಾಯಾಲಯ ಮಧ್ಯಾಹ್ನ 2 ಗಂಟೆಗೆ ಹೆಚ್ಚಿನ ವಿಚಾರಣೆ ನಡೆಸಲು ನಿರ್ಧರಿಸಿದೆ. ಈ ವೇಳೆ ನ್ಯಾಯಾಧೀಶರಿಗಾಗಿ ಸಿನಿಮಾದ ವಿಶೇಷ ಪ್ರದರ್ಶನ ಯಾವಾಗ ಏರ್ಪಡಿಸಬಹುದು ಎಂಬುವುದನ್ನು ಸೆನ್ಸಾರ್ ಮಂಡಳಿ ಮತ್ತು ನಿರ್ಮಾಪಕರು ನ್ಯಾಯಾಲಯಕ್ಕೆ ತಿಳಿಸಲಿದ್ದಾರೆ ಎಂದು barandbench.com ಉಲ್ಲೇಖಿಸಿದೆ.

ಕಣ್ಣೂರಿನ ನಿವಾಸಿಯಾದ ಶ್ರೀದೇವ್ ನಂಬೂದರಿ ಎಂಬುವವರು ಸಿನಿಮಾ ವಿರುದ್ದ ಅರ್ಜಿಯೊಂದನ್ನು ಸಲ್ಲಿಸಿದ್ದು, ಈ ಸಿನಿಮಾ ಕೇರಳವನ್ನು ಅನ್ಯಾಯದ ಮತ್ತು ಕಳಂಕಿತ ರೀತಿಯಲ್ಲಿ ಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಸಿನಿಮಾವನ್ನು ಬಿಡುಗಡೆ ಮಾಡುವುದರಿಂದ ಕೋಮು ಮತ್ತು ಪ್ರಾದೇಶಿಕ ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಮತ್ತು ಇದು ಕಾನೂನು ಸುವ್ಯವಸ್ಥೆಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...