Homeಮುಖಪುಟನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

- Advertisement -
- Advertisement -

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಪ್ರಕರಣದ 8ನೇ ಆರೋಪಿಯಾಗಿದ್ದ ದಿಲೀಪ್ ಜೊತೆಗೆ, ಅಪರಾಧ ಮಾಡಲು ಕ್ರಿಮಿನಲ್ ಪಿತೂರಿ ನಡೆಸಿದ ಆರೋಪ ಹೊತ್ತಿದ್ದ 7ನೇ ಆರೋಪಿಯಾಗಿದ್ದ ಚಾರ್ಲಿ ಥಾಮಸ್, 9 ಆರೋಪಿಯಾಗಿದ್ದ ಸನಿಲ್ ಕುಮಾರ್ ಯಾನೆ ಮೇಸ್ತ್ರಿ ಸನಿಲ್ ಮತ್ತು 15ನೇ ಆರೋಪಿಯಾಗಿದ್ದ ಶರತ್ ಜಿ. ನಾಯರ್ ಅವರ ಖುಲಾಸೆಯನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ.

ವಿಚಾರಣಾ ನ್ಯಾಯಾಲಯವು ಪ್ರಕರಣದ ಇತರ ಆರೋಪಿಗಳಾಗಿದ್ದ ಪಲ್ಸರ್ ಸುನಿ (ಎ1), ಮಾರ್ಟಿಂಗ್ ಆಂಟನಿ (ಎ2), ಬಿ. ಮಣಿಕಂದನ್ (ಎ3), ವಿಪಿ ವಿಜೀಶ್ (ಎ4), ಎಚ್. ಸಲೀಮ್ (ಎ5), ಸಿ. ಪ್ರದೀಪ್ (ಎ 6) ಅವರನ್ನು ಅತ್ಯಾಚಾರ, ಪಿತೂರಿ, ಅಪಹರಣ ಮತ್ತು ಇತರ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ, 340, 354, 366, 354 ಬಿ ಮತ್ತು 376 ಡಿ ಅಡಿಯ ಅಪರಾಧಗಳಲ್ಲಿ ಇವರನ್ನು ತಪ್ಪಿತಸ್ಥರೆಂದು ಘೋಷಣೆ ಮಾಡಲಾಗಿದೆ.

ಅಪರಾಧಿಗಳಿಗೆ ಸಾಮೂಹಿಕ ಅತ್ಯಾಚಾರದ ಅಪರಾಧಕ್ಕಾಗಿ 20 ವರ್ಷಗಳ ಕಠಿಣ ಸಜೆ ವಿಧಿಸಲಾಗಿದ್ದು, ಇತರ ಸಂಬಂಧಿತ ಅಪರಾಧಗಳಿಗಾಗಿ ಏಕಕಾಲದಲ್ಲಿ ಅನುಭವಿಸಬೇಕಾದ ಹೆಚ್ಚುವರಿ ಶಿಕ್ಷೆಗಳನ್ನು ನೀಡಲಾಗಿದೆ. ಅಲ್ಲದೆ, ಆಪರಾಧಿಗಳಿಗೆ ವಿಧಿಸಲಾದ ದಂಡದ ಮೊತ್ತದಲ್ಲಿ 5 ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯವು ನಿರ್ದೇಶಿಸಿದೆ.

ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ, 1 ರಿಂದ 6 ರವರೆಗಿನ ಅಪರಾಧಿಗಳಿಗೆ ವಿಧಿಸಲಾದ ಶಿಕ್ಷೆಯನ್ನು ಹೆಚ್ಚಿಸುವಂತೆ ಕೋರಿದೆ. ಅಪರಾಧದ ಗಂಭೀರತೆ ಮತ್ತು ಸಮಾಜದ ಮೇಲೆ ಅದು ಬೀರುವ ಪರಿಣಾಮವನ್ನು ಪರಿಗಣಿಸಿದರೆ, ಪ್ರಸ್ತುತ ನೀಡಿರುವ ಶಿಕ್ಷೆಯು ಅಸಮರ್ಪಕವಾಗಿದೆ ಎಂದು ವಾದಿಸಿದೆ.

ಸೆಷನ್ಸ್ ನ್ಯಾಯಾಲಯವು ಅಪರಾಧಿಗಳಿಗೆ ಆಶ್ರಯ ನೀಡಿದ್ದ ಆರೋಪದಿಂದ ಚಾರ್ಲಿ ಥಾಮಸ್ ಅವರನ್ನು ಖುಲಾಸೆಗೊಳಿಸಿದೆ ಮತ್ತು ನಟ ದಿಲೀಪ್ ಅವರ ಮೇಲಿದ್ದ ಎಲ್ಲಾ ಆರೋಪಗಳನ್ನು ವಜಾಗೊಳಿಸಿ ಅವರನ್ನು ಮುಕ್ತಗೊಳಿಸಿದೆ. ಸನಿಲ್ ಕುಮಾರ್ ಮತ್ತು ಶರತ್ ನಾಯರ್ ಅವರ ಮೇಲಿದ್ದ ಪಿತೂರಿ, ಪ್ರಚೋದನೆ ಮತ್ತು ಸಾಕ್ಷ್ಯ ನಾಶಪಡಿಸಿದ ಆರೋಪಗಳಿಂದಲೂ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದೆ.

ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ, ಆರೋಪಿಗಳ ಖುಲಾಸೆಯು ಕಾನೂನುಬಾಹಿರ ಮತ್ತು ಅಸಮರ್ಥನೀಯ ಎಂದು ಪ್ರತಿಪಾದಿಸಿದೆ. ಪ್ರಕರಣದ ಹಿಂದಿನ ದೊಡ್ಡ ಮಟ್ಟದ ಪಿತೂರಿಗೆ ಸಂಬಂಧಿಸಿದ ಪುರಾವೆಗಳನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುವಲ್ಲಿ ವಿಚಾರಣಾ ನ್ಯಾಯಾಲಯವು ವಿಫಲವಾಗಿದೆ ಎಂದು ವಾದಿಸಿದೆ. ದಾಖಲಾಗಿರುವ ಸಾಕ್ಷ್ಯಾಧಾರಗಳ ಪ್ರಕಾರ, ಸಂತ್ರಸ್ತೆಯ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ 2013 ರಲ್ಲೇ ಎಂಟನೇ ಆರೋಪಿ (ಎ8) ಮತ್ತು ಮೊದಲನೇ ಆರೋಪಿ (ಎ1) ನಡುವೆ ಮುಖ್ಯ ಪಿತೂರಿ ನಡೆದಿತ್ತು. ಆ ನಂತರ 1 ರಿಂದ 6 ರವರೆಗಿನ ಆರೋಪಿಗಳು ಮಾಡಿದ ಕೃತ್ಯಗಳು ಅದೇ ಪಿತೂರಿಯ ಮುಂದುವರಿದ ಭಾಗವಾಗಿವೆ ಎಂದಿದೆ.

ವಿಚಾರಣಾ ನ್ಯಾಯಾಲಯವು ತನಿಖಾ ತಂಡದ ವಿರುದ್ಧ ನೀಡಿರುವ ಕೆಲವು ಪ್ರತಿಕೂಲ ಅಭಿಪ್ರಾಯಗಳನ್ನು ಸಹ ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ ಪ್ರಶ್ನಿಸಿದೆ. ವಿಶೇಷ ತನಿಖಾ ತಂಡವು (ಎಸ್‌ಐಟಿ) ಅತ್ಯಂತ ಸಮಗ್ರವಾದ ಮತ್ತು ನ್ಯಾಯಸಮ್ಮತವಾದ ತನಿಖೆಯನ್ನು ನಡೆಸಿದೆ ಎಂದು ಸರ್ಕಾರ ಪ್ರತಿಪಾದಿಸಿದೆ. ತನಿಖೆಯಲ್ಲಿ ಒಂದು ವೇಳೆ ಸಣ್ಣಪುಟ್ಟ ನ್ಯೂನತೆಗಳಿದ್ದರೂ ಸಹ, ಅವುಗಳಿಂದ ಆರೋಪಿಗಳಿಗೆ ಅನ್ಯಾಯವಾಗಿದೆ ಎಂದು ಸಾಬೀತಾಗದ ಹೊರತು, ಅಂತಹ ನ್ಯೂನತೆಗಳನ್ನೇ ಖುಲಾಸೆಗೆ ಆಧಾರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...