Homeಅಂತರಾಷ್ಟ್ರೀಯಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

- Advertisement -
- Advertisement -

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಯುಎಇ ತಡೆಹಿಡಿದಿದೆ. ಅಬುದಾಬಿಯ ವಸತಿ ಪ್ರದೇಶದಲ್ಲಿ ಕ್ಷಿಪಣಿಯ ಅವಶೇಷಗಳು ಬಿದ್ದಿದ್ದರಿಂದ ಏಷ್ಯಾದ ಓರ್ವ ನಾಗರಿಕ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಬಹ್ರೇನ್‌ನಲ್ಲಿರುವ ಅಮೆರಿಕ ನೌಕಾಪಡೆಯ 5ನೇ ಫ್ಲೀಟ್ ಪ್ರಧಾನ ಕಚೇರಿಯನ್ನು ಗುರಿಯಾಗಿಸಿ ಇರಾನ್ ದಾಳಿ ಮಾಡಿದೆ. ಬಹ್ರೇನ್‌ನಲ್ಲಿ ವಾಯುದಾಳಿ ಸೈರನ್‌ಗಳು ಮೊಳಗಿವೆ.

ಅಮೆರಿಕದ ಸೈನ್ಯವಿರುವ ಕುವೈತ್‌ನ ಅಲ್-ಸಲೇಂ ವಾಯುನೆಲೆ ಮತ್ತು ಕ್ಯಾಂಪ್ ಆರಿಫ್ಜನ್ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ. ಅಮೆರಿಕದ ಅತಿದೊಡ್ಡ ವಾಯುನೆಲೆಯಾದ ಕತಾರ್‌ನ ಅಲ್-ಉದೈದ್ ಮೇಲೆ ಕ್ಷಿಪಣಿ ದಾಳಿ ನಡೆದಿದ್ದು, ಕತಾರ್ ರಕ್ಷಣಾ ಸೇನೆ ಅವುಗಳನ್ನು ತಡೆಹಿಡಿದಿದೆ.

ಸೌದಿ ಅರೇಬಿಯಾ ಈ ದಾಳಿಗಳನ್ನು ತೀವ್ರವಾಗಿ ಖಂಡಿಸಿದ್ದು, ಇವು ಪ್ರಾದೇಶಿಕ ಭದ್ರತೆಯ ಉಲ್ಲಂಘನೆ ಎಂದು ಕರೆದಿದೆ.

ಹೆಚ್ಚಿನ ಅರಬ್ ರಾಷ್ಟ್ರಗಳು ಈ ದಾಳಿಯನ್ನು ತಮ್ಮ ಸಾರ್ವಭೌಮತ್ವದ ಮೇಲಿನ ದಾಳಿ ಎಂದು ಹೇಳಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಯುಎಇ, ಕತಾರ್, ಇರಾಕ್, ಜೋರ್ಡಾನ್ ಮತ್ತು ಬಹ್ರೇನ್ ದೇಶಗಳು ತಮ್ಮ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿವೆ.

ಇಸ್ರೇಲ್ ಮೇಲೆ ದಾಳಿ

ಇರಾನ್ ಇಸ್ರೇಲ್ ಮೇಲೂ ಭಾರೀ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಆರಂಭಿಸಿದೆ ಎಂದು ವರದಿಯಾಗಿದೆ.

ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ “ಆಪರೇಷನ್ ಎಪಿಕ್ ಫ್ಯೂರಿ” ಗೆ ಪ್ರತಿಯಾಗಿ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಇಸ್ರೇಲ್ ಮೇಲೆ ಮೊದಲ ಹಂತದ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸುತ್ತಿರುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಇರಾನ್‌ನಿಂದ ಕ್ಷಿಪಣಿಗಳು ಬರುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಇಸ್ರೇಲ್‌ನಾದ್ಯಂತ ವಾಯುದಾಳಿ ಸೈರನ್‌ಗಳು ಮೊಳಗುತ್ತಿವೆ. ಎನ್‌ಡಿಟಿವಿ ವರದಿಯ ಪ್ರಕಾರ, ಟೆಲ್ ಅವೀವ್ ಸೇರಿದಂತೆ ಹಲವು ನಗರಗಳಲ್ಲಿ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಸಂಭವನೀಯ ಭಾರಿ ದಾಳಿಯನ್ನು ಎದುರಿಸಲು ಇಸ್ರೇಲ್ ಸರ್ಕಾರವು ದೇಶದಾದ್ಯಂತ ‘ಸ್ಟೇಟ್ ಆಫ್ ಎಮರ್ಜೆನ್ಸಿ’ (ತುರ್ತು ಪರಿಸ್ಥಿತಿ) ಘೋಷಿಸಿದೆ. ಅಲ್ಲದೆ, ಯುದ್ಧದ ಭೀತಿಯಿಂದ ತನ್ನ ವಾಯುಪ್ರದೇಶವನ್ನು ಎಲ್ಲಾ ನಾಗರಿಕ ವಿಮಾನ ಸಂಚಾರಕ್ಕೆ ಸ್ಥಗಿತಗೊಳಿಸಿದೆ.

ಇರಾನ್ ಉಡಾಯಿಸಿರುವ ಕ್ಷಿಪಣಿಗಳನ್ನು ಆಕಾಶದಲ್ಲೇ ಹೊಡೆದುರುಳಿಸಲು ಇಸ್ರೇಲ್‌ನ ‘ಐರನ್ ಡೋಮ್’ ಮತ್ತು ಅಮೆರಿಕದ ರಕ್ಷಣಾ ವ್ಯವಸ್ಥೆಗಳು ಕಾರ್ಯಪ್ರವೃತ್ತವಾಗಿವೆ.

ಪರಿಸ್ಥಿತಿಯು ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಪೂರ್ಣ ಪ್ರಮಾಣದ ಯುದ್ಧದ ಭೀತಿ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...