Homeಅಂತರಾಷ್ಟ್ರೀಯ'ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ' : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

- Advertisement -
- Advertisement -

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, “ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ” ಎಂದು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಮಿಲಿಟರಿ ಕ್ರಮವನ್ನು ಘೋಷಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಮ್ದಾನಿ ಪ್ರತಿಕ್ರಿಯಿಸಿದ್ದಾರೆ.

“ನಗರಗಳ ಮೇಲೆ ಬಾಂಬ್ ದಾಳಿ. ನಾಗರಿಕರನ್ನು ಕೊಲ್ಲುವುದು. ಹೊಸ ಯುದ್ಧ ರಂಗವನ್ನು ತೆರೆಯುವುದನ್ನು ಅಮೆರಿಕನ್ನರು ಬಯಸುವುದಿಲ್ಲ. ಆಡಳಿತ ಬದಲಾವಣೆಯನ್ನು ಮಾಡುವ ಸಲುವಾಗಿ ಮತ್ತೊಂದು ಯುದ್ಧವನ್ನು ಅಮೆರಿಕನ್ನರು ಬಯಸುವುದಿಲ್ಲ” ಎಂದು ಮಮ್ದಾನಿ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಅಮೆರಿಕನ್ನರು ಬಿಕ್ಕಟ್ಟಿಗೆ ಸುಲಭ ಪರಿಹಾರ ಬಯಸುತ್ತಾರೆ. ಅವರು ಶಾಂತಿ ಬಯಸುತ್ತಾರೆ” ಎಂದು ಬರೆದುಕೊಂಡಿದ್ದಾರೆ.

“ಆಡಳಿತ ಬದಲಾವಣೆ ಉತ್ತೇಜಿಸುವ ಉದ್ದೇಶದಿಂದ ಅಮೆರಿಕವು ಇರಾನ್‌ನೊಳಗೆ ‘ಪ್ರಮುಖ ಯುದ್ಧ ಕಾರ್ಯಾಚರಣೆಗಳನ್ನು’ ಪ್ರಾರಂಭಿಸಿದೆ” ಎಂದು ಟ್ರಂಪ್ ವಿಡಿಯೋ ಮೂಲಕ ಘೋಷಿಸಿದ್ದರು. ದಾಳಿಗಳು ಕೊನೆಗೊಂಡ ನಂತರ ತಮ್ಮ ಸರ್ಕಾರದ ನಿಯಂತ್ರಣವನ್ನು ಪಡೆದುಕೊಳ್ಳಿ ಎಂದು ಇರಾನಿಯನ್ನರಿಗೆ ಹೇಳಿದ್ದರು.

ನ್ಯೂಯಾರ್ಕ್ ನಗರದಲ್ಲಿ ವಸತಿ ಅಭಿವೃದ್ಧಿ, ಸ್ಥಳೀಯ ಸವಾಲುಗಳ ಕುರಿತು ಸಹಕಾರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಮಮ್ದಾನಿ ಶ್ವೇತಭವನದಲ್ಲಿ ಟ್ರಂಪ್ ಅವರನ್ನು ಭೇಟಿಯಾಗಿದ ಎರಡು ದಿನಗಳ ನಂತರ, ಟ್ರಂಪ್ ಕ್ರಮಕ್ಕೆ ಮಮ್ದಾನಿ ಖಂಡನೆ ವ್ಯಕ್ತಪಡಿಸಿರುವುದು ಗಮನಾರ್ಹ.

ಟ್ರಂಪ್ ಭೇಟಿಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಮಮ್ದಾನಿ ಮೇಕಿಂಗ್ ಅಮೆರಿಕ ಗ್ರೇಟ್ (ಎಂಎಜಿಎ) ನಾಯಕರೊಂದಿಗೆ (ಟ್ರಂಪ್ ಜೊತೆ) ಪ್ರೊಡಕ್ಟಿವ್ ಮಾತುಕತೆ ನಡೆಸುತ್ತೇವೆ. ಒಟ್ಟಿಗೆ ಕೆಲಸ ಮಾಡುವುದನ್ನು ಎದುರು ನೋಡುತ್ತೇವೆ ಎಂದಿದ್ದರು.

ಮಮ್ದಾನಿ ಚುನಾವಣೆಗೆ ನಿಂತಾಗ ಟ್ರಂಪ್ ವಿರುದ್ದ ಕಟು ಟೀಕೆ ವ್ಯಕ್ತಪಡಿಸಿದ್ದರು. ಆದರೆ, ಚುನಾವಣೆ ಗೆದ್ದು ನ್ಯೂಯಾರ್ಕ್ ಮೇಯರ್ ಆದ ಬಳಿಕ ಟ್ರಂಪ್ ಅವರನ್ನು ಭೇಟಿಯಾಗಿ ಉತ್ತಮ ಆಡಳಿತಕ್ಕೆ ಸಹಕಾರ ಕೋರಿದ್ದರು. ಈಗಲೂ ಟ್ರಂಪ್ ಅವರ ಮನುಷ್ಯ ವಿರೋಧಿ ಕ್ರಮಗಳನ್ನು ಟೀಕಿಸುವ ಮಮ್ದಾನಿ, ಆಡಳಿತದ ವಿಚಾರದಲ್ಲಿ ಅವರೊಂದಿಗೆ ಪರಸ್ಪರ ಸಹಕಾರದೊಂದಿಗೆ ಮುನ್ನಡೆಯಲು ಬಯಸಿದ್ದಾರೆ.

ಸೈದ್ದಾಂತಿಕ ಮತ್ತು ರಾಜಕೀಯವಾಗಿ ಮಮ್ದಾನಿ ಮತ್ತು ಟ್ರಂಪ್ ಪರಸ್ಪರ ವಿರೋಧಿಗಳು. ಮಮ್ದಾನಿ ಚುನಾವಣೆ ನಿಂತಾಗ ಟ್ರಂಪ್ ತೀವ್ರವಾಗಿ ಟೀಕಿಸಿದ್ದರು. ಮಮ್ದಾನಿ ಗೆದ್ದರೆ ಅಪಾಯ ಎಂಬಂತೆ ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...