Homeಕರ್ನಾಟಕಕನಕಪುರದಲ್ಲಿ ಯೇಸುಕ್ತಿಸ್ತನ ಪ್ರತಿಮೆ ವಿವಾದ: ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ, ಆತ್ಮತೃಪ್ತಿಗಾಗಿ - ಡಿ.ಕೆ ಶಿವಕುಮಾರ್‌

ಕನಕಪುರದಲ್ಲಿ ಯೇಸುಕ್ತಿಸ್ತನ ಪ್ರತಿಮೆ ವಿವಾದ: ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ, ಆತ್ಮತೃಪ್ತಿಗಾಗಿ – ಡಿ.ಕೆ ಶಿವಕುಮಾರ್‌

- Advertisement -
- Advertisement -

ತಮ್ಮ ಕ್ಷೇತ್ರದಲ್ಲಿ ಜೀಸಸ್ ಪ್ರತಿಮೆಗೆ ಪ್ರಾಯೋಜಕತ್ವ ನೀಡಿದ ವಿಚಾರದಲ್ಲಿನ ಹಲವಾರು ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನ ಡಿ.ಕೆ.ಶಿವಕುಮಾರ್ “ಸ್ಥಳೀಯರಿಗೆ ನೀಡಿದ ಭರವಸೆಯನ್ನು ಈಡೇರಿಸುತ್ತಿದ್ದೇನೆ ಅಷ್ಟೇ ಎಂದಿದ್ದಾರೆ”.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಿಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವದಲ್ಲಿಯೇ ಅತಿ ಎತ್ತರದ 114 ಅಡಿಯ ಏಕಶಿಲೆ ಯೇಸುಕ್ರಿಸ್ತರ ಪ್ರತಿಮೆ ನಿರ್ಮಾಣದ ಶಿಲಾನ್ಯಾಸವನ್ನು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕ್ರಿಸ್ಮಸ್ ಶುಭದಿನವಾದ ಬುಧವಾರ ನೆರವೇರಿಸಿದ್ದರು.

ಯೇಸುಕ್ರಿಸ್ತ ಪ್ರತಿಮೆ ನಿರ್ಮಾಣವಾಗುತ್ತಿರುವ ಕಪಾಲಿಬೆಟ್ಟದ ಹತ್ತು ಎಕರೆ ಜಾಗವನ್ನು ಕೊಂಡುಕೊಂಡು ಪ್ರತಿಮೆ ನಿರ್ಮಾಣ ಟ್ರಸ್ಟ್ ನವರಿಗೆ ಸಂಬಂಧಪಟ್ಟ ದಾಖಲೆಪತ್ರಗಳನ್ನು ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಇದೇ ಸಂದರ್ಭದಲ್ಲಿ ಹಸ್ತಾಂತರಿಸಿದ್ದರು.

ಹಾರೋಬೆಲೆ ಗ್ರಾಮದಲ್ಲಿ ಶೇಕಡಾ 99 ರಷ್ಟು ಮಂದಿ ಕ್ರೈಸ್ತ ಸಮುದಾಯದವರಿದ್ದು, ಈ ಪ್ರದೇಶದಲ್ಲಿ ಕ್ರಿಸ್ತನ ಪ್ರತಿಮೆ ಇಲ್ಲದಿರುವುದರಿಂದ ಜನರು ಹಾರೋಬೆಲೆಯಲ್ಲಿ ಯೇಸುಕ್ರಿಸ್ತನ ಪ್ರತಿಮೆ ಬೇಕು ಎಂದು ಕೇಳಿದ್ದರು. ನಾನು ಸಹಾಯ ಮಾಡುತ್ತೇನೆ ಎಂದು ನಾನು ಭರವಸೆ ನೀಡಿದ್ದೆ ಮತ್ತು ನಾನು ನನ್ನ ಕೆಲಸವನ್ನು ಮಾಡಿದ್ದೇನೆ. ಅದು ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ ಜೀವನದಲ್ಲಿ ಆತ್ಮ ತೃಪ್ತಿಗಾಗಿ ಕೆಲವು ಕೆಲಸಗಳನ್ನು ಮಾಡುತ್ತೇನೆ ಎಂದು ಶಿವಕುಮಾರ್‌ ಹೇಳಿದ್ದಾರೆ. ಅಲ್ಲದೇ ಭೂಮಿ ಅವರಿಗೆ ಸೇರದ ಹೊರತು ಯಾವುದೇ ಪ್ರತಿಮೆಯನ್ನು ನಿರ್ಮಿಸದಂತೆ ಸ್ಥಳೀಯರಿಗೆ ತಿಳಿಸಿದ್ದೇನೆ ಎಂದು ಸಹ ಹೇಳಿದ್ದಾರೆ.

“ನಾನು ಗ್ರಾಮೀಣ ಕ್ಷೇತ್ರದಿಂದ ಬಂದಿದ್ದೇನೆ, ಅಲ್ಲಿ ಜನರು ನನಗೆ ಪ್ರೀತಿ ಮತ್ತು ಶಕ್ತಿಯನ್ನು ನೀಡಿದ್ದಾರೆ. ನನ್ನ ಕ್ಷೇತ್ರದಲ್ಲಿ ನಾನು ನೂರಾರು ದೇವಾಲಯಗಳನ್ನು ನಿರ್ಮಿಸಿದ್ದೇನೆ. ಮೂರು ಸ್ಥಳಗಳಲ್ಲಿ 30 ಎಕರೆಗೂ ಹೆಚ್ಚು ಆಸ್ತಿಯನ್ನು ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿದೆ. ನಾನು ಖರೀದಿಸಿದ ಆಸ್ತಿಗಳಲ್ಲಿ ಕೆಲವನ್ನು ವಿವಿಧ ಸಂಸ್ಥೆಗಳಿಗೆ ದಾನ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಪ್ರತಿಮೆ ನಿರ್ಮಾಣದ ಬಗ್ಗೆ ಕುರಿತು ಡಿ.ಕೆ ಶಿವಕುಮಾರ್‌ ನಡೆಯನ್ನು ಆಡಳಿತಾರೂಢ BJP ಬಿಜೆಪಿ ಟೀಕಿಸಿದೆ. ಪ್ರತಿಮೆಗೆ ಸಂಬಂಧಿಸಿದ ಜಮೀನು ಶಿವಕುಮಾರ್‌ ಒಡೆತನದಲ್ಲಿಲ್ಲ ಎಂದು ರಾಜ್ಯ ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಆ ಭೂಮಿ ಸಮುದಾಯದ ಬಳಕೆಗಾಗಿ ಹುಲ್ಲುಗಾವಲು ಭೂಮಿಯಾಗಿರಬೇಕು ಇದು ರಾಜ್ಯ ಸರ್ಕಾರದ ಒಡೆತನದಲ್ಲಿದೆ ಎಂದು ಅವರು ಹೇಳಿದರು.

“ಇದು ಶಿವಕುಮಾರ್ ಅವರ ಆಸ್ತಿಯಲ್ಲ. ಇದು ಸರ್ಕಾರಿ ಗೋಮಾಳ ಭೂಮಿ. ಅವರು (ಶಿವಕುಮಾರ್) ಅವರು ಯಾವ ಅರ್ಥದಲ್ಲಿ ಖರೀದಿಸಿ ಕೊಟ್ಟಿದ್ದಾರೆಂದು ಹೇಳಿದ್ದಾರೆಂದು ನನಗೆ ತಿಳಿದಿಲ್ಲ. ಅದನ್ನು ಯಾರಿಗೂ ದಾನ ಮಾಡಲು ಸಾಧ್ಯವಿಲ್ಲ. ನಾನು ರಾಮನಗರ ಜಿಲ್ಲಾಧಿಕಾರಿಗಳ ವರದಿ ಕೇಳಿದ್ದೇನೆ” ಎಂದು ಆರ್‌ ಅಶೋಕ್‌ ಹೇಳಿದ್ದಾರೆ.

ಮೈಸೂರಿನ ಮತ್ತೊಬ್ಬ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಪ್ರತಿಮೆ ನಿರ್ಮಾಣದ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ್ದಾರೆ. ಸಿದ್ದಗಂಗ, ಸುತ್ತೂರು ಮತ್ತು ಆದಿಚುಂಚನಗಿರಿ ಮುಂತಾದ ಮಠಗಳ ದರ್ಶಕರನ್ನು ಮರೆತಿದ್ದೀರಾ ಎಂದು ಅವರು ಟ್ವೀಟ್ ನಲ್ಲಿ ಶಿವಕುಮಾರ್ ಅವರನ್ನು ಕೇಳಿದ್ದಾರೆ. “ಶಿವಕುಮಾರ ಸ್ವಾಮೀಜಿ (ಸಿದ್ದಗಂಗ ಮಠ) ಅವರ ಶಾಸನವನ್ನು ನಿರ್ಮಿಸುವುದು ಕಪಲಿಬೆಟ್ಟದ ಕಿರೀಟದಂತೆಯೇ ಇರುತ್ತಿತ್ತು ಅಲ್ಲವೇ?”. ಎಂದು ವ್ಯಂಗ್ಯವಾಡಿದ್ದಾರೆ.

ತನ್ನ ವಿರುದ್ಧದ ಟೀಕೆಗಳು ನನ್ನ ಜಾತ್ಯತೀತ ದೃಷ್ಟಿಕೋನದ ಬಗ್ಗೆ ಅವರಿಗಿರುವ ಅಸೂಯೆಯನ್ನು ತೋರಿಸುತ್ತದೆ ಎಂದು ಶಿವಕುಮಾರ್ ಹೇಳಿದ್ದಾರೆ. “ಎಚ್‌.ಡಿ ಕುಮಾರಸ್ವಾಮಿ ಸರ್ಕಾರವು ಭೂಮಿಯನ್ನು ನೀಡಿದ್ದು ಮತ್ತು ಅದಕ್ಕಾಗಿ ನಾನು ಹಣವನ್ನು ಪಾವತಿಸಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...