Homeಕರ್ನಾಟಕಎಸ್‌ಐಆರ್ ಬಡವರ ವಿರುದ್ಧದ 'ಅಘೋಷಿತ ಯುದ್ಧ': ಶಿವಸುಂದರ್

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ ‘ಅಘೋಷಿತ ಯುದ್ದ’ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು.

ಕಲಬುರಗಿ ನಗರದ ಕನ್ನಡ ಭವನದಲ್ಲಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ಎದ್ದೇಳು ಕರ್ನಾಟಕ ಭಾನುವಾರ (ಮಾ.1) ಹಮ್ಮಿಕೊಂಡಿದ್ದ ‘ಎಸ್‌ಐಆರ್ ಪರಿಣಾಮ-ಸವಾಲು ಸಂವಾದಗೋಷ್ಠಿ’ಯಲ್ಲಿ ಅವರು ಮಾತನಾಡಿದರು.

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ, ಬದಲಿಗೆ ಅಂಚಿನ ಸಮುದಾಯಗಳ ವಿರುದ್ಧ ನಡೆಸುತ್ತಿರುವ ಸಂಚಿನ ಭಾಗವಾಗಿದೆ ಎಂದು ದೂರಿದರು.

ಎಸ್‌ಐಆರ್ ಎಂದರೆ ಸಾಮಾನ್ಯ ಪರಿಷ್ಕರಣೆ ಅಲ್ಲ. ಇದು ಅಲ್ಪಸಂಖ್ಯಾತರು, ಆದಿವಾಸಿಗಳು, ದಲಿತರು, ಮಹಿಳೆಯರು ಮತ್ತು ಇತರೆ ಹಿಂದುಳಿದ ವರ್ಗಗಳ ಮೇಲೆ ನಡೆಸುತ್ತಿರುವ ವ್ಯವಸ್ಥಿತ ಯುದ್ಧ. ಈ ಯುದ್ಧಕ್ಕೆ ಒಗ್ಗಟ್ಟಿನಿಂದ ಪ್ರತಿರೋಧ ತೋರಿಸದಿದ್ದರೆ, ನಮ್ಮದೇ ದೇಶದಲ್ಲಿ ನಾವು ದ್ವಿತೀಯ ದರ್ಜೆ ನಾಗರಿಕರಾಗಿ ಬದುಕಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಶಿವಸುಂದರ್ ಎಚ್ಚರಿಸಿದರು.

ಎಸ್‌ಐಆರ್ ಹಿಂದೆ ರಾಜಕೀಯ ಉದ್ದೇಶಗಳಿವೆ ಎಂದು ಆರೋಪಿಸಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು. ಎಸ್‌ಐಆರ್ ಪ್ರಕ್ರಿಯೆ ಮತದಾರರ ಪಟ್ಟಿಯನ್ನು ನವೀಕರಿಸುವುದಕ್ಕಿಂತ ಹೆಚ್ಚಾಗಿ ನಾಗರಿಕತ್ವವನ್ನು ಪರೀಕ್ಷಿಸುವ ಕ್ರಮವಾಗಿ ಪರಿಣಮಿಸಿದೆ ಎಂದು ಹೇಳಿದರು.

ಸಾಮಾನ್ಯ ಪರಿಷ್ಕರಣೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಯಾರಾದರೂ ಮತದಾರರು ನಿಧನರಾಗಿದ್ದಾರೆಯೇ?.. ಸ್ಥಳಾಂತರಗೊಂಡಿದ್ದಾರೆಯೇ? ಅಥವಾ ಹೊಸ ಮತದಾರ ಅರ್ಹರಾಗಿದ್ದಾರೆಯೇ? ಎಂಬುದನ್ನು ಪರಿಶೀಲಿಸುತ್ತಾರೆ. ಆದರೆ, ಎಸ್‌ಐಆರ್‌ನಲ್ಲಿ ನೀವು ಭಾರತೀಯ ನಾಗರಿಕರೇ?’ ಎಂಬ ಪ್ರಶ್ನೆಯನ್ನು ಆರಂಭದಲ್ಲೇ ಕೇಳಲಾಗುತ್ತಿದೆ. ಬಹುತೇಕ ಆದಿವಾಸಿಗಳು, ಅಲ್ಪಸಂಖ್ಯಾತರು, ಬಡವರು ಮತ್ತು ಮಹಿಳೆಯರ ಬಳಿ ಕೇಳಲಾಗುತ್ತಿರುವ ದಾಖಲೆಗಳು ಇಲ್ಲ. ಇದು ಮುಂದುವರಿದರೆ ಅನೇಕರ ಮತಹಕ್ಕು ಕಳೆದುಹೋಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಭಾರತದ ಸಂವಿಧಾನ ರೂಪಿಸಿದ ಮಹನೀಯರು ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಖಾತ್ರಿ ಮಾಡುವ ಪ್ರಜಾಸತ್ತಾತ್ಮಕ, ಸಮಾಜವಾದಿ ಗಣರಾಜ್ಯದ ಕನಸು ಕಂಡಿದ್ದರು. ಎಸ್‌ಐಆರ್ ಈ ಸಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುವ ಸಂಚಾಗಿದೆ ಎಂದು ಶಿವಸುಂದರ್ ಹೇಳಿದರು.

ಎಸ್‌ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆ ಅಲ್ಲ. ಇದು ಪ್ರಜಾಸತ್ತಾತ್ಮಕ ಹಾಗೂ ನಾಗರಿಕ ಹಕ್ಕುಗಳ ಹತ್ಯೆ ಎಂದು ಅವರು ಆರೋಪಿಸಿದರು.

ಇತರೆ ರಾಜ್ಯಗಳ ಅಂಕಿ ಅಂಶಗಳನ್ನು ಉಲ್ಲೇಖಿಸಿದ ಅವರು, ಬಿಹಾರದಲ್ಲಿ 65 ಲಕ್ಷ, ತಮಿಳುನಾಡಿನಲ್ಲಿ 74 ಲಕ್ಷ ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 3 ಕೋಟಿ ಮತದಾರರನ್ನು ಎಸ್‌ಐಆರ್ ಮೂಲಕ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಇವರಲ್ಲಿ ಬಹುತೇಕರು ಮುಸ್ಲಿಮರು ಅಥವಾ ಆಡಳಿತ ಪಕ್ಷದ ವಿರೋಧಿಗಳು ಎಂದು ವಿವರಿಸಿದರು.

ಎಸ್‌ಐಆರ್ ಮೂಲಕ ಆಡಳಿತ ಪಕ್ಷ ತನ್ನ ವಿರೋಧಿಗಳನ್ನು ಮತದಾರರ ಪಟ್ಟಿಯಿಂದ ಅಳಿಸಿ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಯತ್ನಿಸುತ್ತಿದೆ. ಇದು ಹಗಲಿನಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವದ ಹತ್ಯೆಯಾಗಿದೆ. ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ರಕ್ಷಿಸಲು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಬೇಕು ಎಂದು ಕರೆ ನೀಡಿದರು.

ನಾಗರಿಕ ಸಮಾಜ ಸಂಸ್ಥೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರಗತಿಪರ ಸಂಘಟನೆಗಳು ಒಗ್ಗಟ್ಟಿನಿಂದ ಜನರನ್ನು ಜಾಗೃತಿಗೊಳಿಸಿ ಹೋರಾಟ ನಡೆಸಬೇಕು ಎಂದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಹೋರಾಟಗಾರರು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನಾಗರಿಕರು, ಯುವಜನರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...