Homeಅಂತರಾಷ್ಟ್ರೀಯ'ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ': 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

- Advertisement -
- Advertisement -

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3) ನಡೆಯಿತು.

ಈ ಕುರಿತ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮುಗ್ದ ಮಕ್ಕಳ ಸಾವಿಗೆ ಇಡೀ ಮಾನವೀಯ ಜಗತ್ತು ಮರುಗಿದೆ.

ಶಾಲೆಯ ಮೇಲೆ ದಾಳಿ ನಡೆಸಿ ಅಮಾಯಕ ಮಕ್ಕಳನ್ನು ಭೀಕರವಾಗಿ ಕೊಂದಿರುವುದಕ್ಕೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಾಗಾಗಿ, ಇಸ್ರೇಲ್ ತನ್ನ ದುಷ್ಕೃತ್ಯವನ್ನು ಮರೆಮಾಚುವ ಪ್ರಯತ್ನ ನಡೆಸುತ್ತಿದೆ. ಶಾಲೆಯ ಮೇಲೆ ನಾವು ಅಥವಾ ಅಮೆರಿಕ ದಾಳಿ ನಡೆಸಿಲ್ಲ ಎನ್ನುತ್ತಿದೆ.

ಗಾಝಾ ಮೇಲೆ ದಾಳಿ ನಡೆಸಿ ಮುಗ್ದ ಮಕ್ಕಳ ರಕ್ತ ಹರಿಸಿದಾಗಲೂ ಇಸ್ರೇಲ್ ಇದೇ ವಾದವನ್ನು ಮುಂದಿಡುತ್ತಿತ್ತು. ಮಾಧ್ಯಮಗಳ ಸಾಕ್ಷಿ ಸಮೇತ ಇಸ್ರೇಲ್‌ನ ಕ್ರೌರ್ಯವನ್ನು ಜಗತ್ತಿನ ಮುಂದಿಟ್ಟಾಗ, ಅದು ಅನಿವಾರ್ಯವಾಗಿ ದಾಳಿ ನಡೆಸಿರುವುದನ್ನು ಒಪ್ಪಿಕೊಳ್ಳಬೇಕಾಯಿತು ಎಂದು ಅಲ್‌-ಜಝೀರಾ ವರದಿ ಹೇಳುತ್ತದೆ.

ಇರಾನ್‌ನ ಸರ್ಕಾರಿ ಮಾಧ್ಯಮ ಮಕ್ಕಳ ಸಾಮೂಹಿಕ ಅಂತ್ಯ ಸಂಸ್ಕಾರದ ದೃಶ್ಯಗಳನ್ನು ಮಂಗಳವಾರ ಪ್ರಸಾರ ಮಾಡಿದೆ. ಅದರಲ್ಲಿ, ಮಿನಾಬ್‌ ನಗರದ ಸಾರ್ವಜನಿಕ ಚೌಕವೊಂದರಲ್ಲಿ ಸಾವಿರಾರು ಜನರು ಜಮಾಯಿಸಿರುವುದು ಕಂಡು ಬಂದಿದೆ. ಅಲ್ಲಿ ನೆರೆದಿದ್ದ ಪುರುಷರು ಇಸ್ಲಾಮಿಕ್ ರಿಪಬ್ಲಿಕ್ ಧ್ವಜವನ್ನು ಬೀಸುತ್ತಿದ್ದರು ಮತ್ತು ಕಪ್ಪು ಚಾದರ್ ಧರಿಸಿದ್ದ ಮಹಿಳೆಯರಿಂದ ಸ್ವಲ್ಪ ದೂರದಲ್ಲಿ ಪ್ರತ್ಯೇಕವಾಗಿ ನಿಂತಿದ್ದರು.

ವೇದಿಕೆಯ ಮೇಲಿಂದ ಮಾತನಾಡಿದ ಮಹಿಳೆಯೊಬ್ಬರು, ತಾನು “ಆಟೆನಾ”ಳ (ಮೃತ ಬಾಲಕಿ) ತಾಯಿ ಎಂದು ಪರಿಚಯಿಸಿಕೊಂಡಿದ್ದು, ಅವರು ಫೋಟೋವೊಂದನ್ನು ಎತ್ತಿ ತೋರಿಸುತ್ತಾ, ಇದು ‘ಅಮೆರಿಕದ ಅಪರಾಧದ ದಾಖಲೆ’ ಎಂದು ಹೇಳಿದ್ದಾರೆ. ಮುಂದುವರಿದು ಅವರು, “ಅವರು (ಮಕ್ಕಳು) ದೇವರ ಹಾದಿಯಲ್ಲಿ ಮರಣ ಹೊಂದಿದ್ದಾರೆ” ಎಂದು ಹೇಳಿದ್ದಾರೆ.

ಸಭೆಯಲ್ಲಿದ್ದ ಜನಸಮೂಹವು ಅಮೆರಿಕ ಮತ್ತು ಇಸ್ರೇಲ್‌ನ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿತ್ತು. ಮತ್ತು ‘ಶರಣಾಗತಿ ಇಲ್ಲ’ (No surrender) ಎಂದು ಜೋರಾಗಿ ಹೇಳುತ್ತಿತ್ತು.

ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಸೋಮವಾರದಂದು, ಶಾಲಾ ವಿದ್ಯಾರ್ಥಿನಿಯರ ಹತ್ಯೆಗೆ ಅಮೆರಿಕ ಮತ್ತು ಇಸ್ರೇಲ್ ನೇರ ಕಾರಣ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ಮಕ್ಕಳನ್ನು ದಫನ ಮಾಡಲು ತೋಡಿದ್ದ ಗುಂಡಿಗಳ ಫೋಟೋ ಹಂಚಿಕೊಂಡಿದ್ದ ಅರಾಗ್ಚಿ, “ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಪ್ರಾಥಮಿಕ ಶಾಲೆಯ ಮೇಲಿನ ಬಾಂಬ್ ದಾಳಿಯಲ್ಲಿ ಹತ್ಯೆಗೀಡಾದ 160ಕ್ಕೂ ಹೆಚ್ಚು ಮುಗ್ಧ ಹೆಣ್ಣು ಮಕ್ಕಳ ಸಮಾಧಿಗಳಿವು. ದಾಳಿಯಲ್ಲಿ ಮಕ್ಕಳ ದೇಹಗಳು ಛಿದ್ರಛಿದ್ರವಾಗಿವೆ” ಎಂದು ಬರೆದುಕೊಂಡಿದ್ದರು.

“ಇದು ಮಿಸ್ಟರ್ ಟ್ರಂಪ್ ವಾಗ್ದಾನ ಮಾಡಿದ ರಕ್ಷಣಾ ಕಾರ್ಯದ ಅಸಲಿ ರೂಪ. ಗಾಝಾದಿಂದ ಮಿನಾಬ್‌ವರೆಗೆ ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ” ಎಂದು ಅರಾಗ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಿಂದ ಇರಾನ್‌ನಲ್ಲಿ ಹಲವು ಆಸ್ಪತ್ರೆಗಳು ಮತ್ತು ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಇರಾನ್‌ ನಾಯಕರು ಅಂತಾರಾಷ್ಟ್ರೀಯ ಮಟ್ಟದ ಕ್ರಮ ಮತ್ತು ಒಗ್ಗಟ್ಟಿಗೆ ಕರೆ ನೀಡಿದ್ದಾರೆ.

ಇರಾನ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘಾಯಿ ಸೋಮವಾರ ಮಾತನಾಡಿ, “ಅಮೆರಿಕ ಮತ್ತು ಇಸ್ರೇಲ್ ಯಾವುದೇ ವ್ಯತ್ಯಾಸವಿಲ್ಲದೆ ವಸತಿ ಪ್ರದೇಶಗಳ ಮೇಲೆ ಸತತವಾಗಿ ದಾಳಿ ನಡೆಸುತ್ತಿವೆ. ಅವು ಆಸ್ಪತ್ರೆಗಳು, ಶಾಲೆಗಳು, ರೆಡ್ ಕ್ರೆಸೆಂಟ್ ಸೌಲಭ್ಯಗಳು ಮತ್ತು ಸಾಂಸ್ಕೃತಿಕ ಸ್ಮಾರಕಗಳನ್ನೂ ಬಿಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ವಿಶ್ವಸಂಸ್ಥೆಯ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆಯಾದ ಯುನೆಸ್ಕೋ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ ಮಲಾಲ ಯೂಸುಫ್‌ಝೈ ಅವರು ಶಾಲೆ ಮೇಲಿನ ದಾಳಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಛೇರಿಯು ಈ ದಾಳಿಯ ಕುರಿತು ತಕ್ಷಣದ, ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸುವಂತೆ ಕರೆ ನೀಡಿದೆ. ವಿಶ್ವಸಂಸ್ಥೆಯ ಹೈಕಮಿಷನರ್ ವೋಲ್ಕರ್ ಟರ್ಕ್ ಅವರ ಕಛೇರಿಯ ವಕ್ತಾರರಾದ ರವೀನಾ ಶಮದಾಸನಿ ಅವರು ಮಾತನಾಡುತ್ತಾ, ಈ ದಾಳಿಯು ‘ಯುದ್ಧಾಪರಾಧ’ ಎಂದು ನಿರ್ಧರಿಸಲು ತಮ್ಮ ಕಛೇರಿಯ ಬಳಿ ಸದ್ಯಕ್ಕೆ ಸಾಕಷ್ಟು ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಇದು ಅತ್ಯಂತ ಭಯಾನಕವಾದುದು ಎಂದು ಶಮದಾಸನಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳು ಈ ಸಂಘರ್ಷದ ವಿನಾಶ, ಹತಾಶೆ, ಅರ್ಥಹೀನತೆ ಮತ್ತು ಕ್ರೌರ್ಯದ ನೈಜ ಸ್ವರೂಪವನ್ನು ತೋರಿಸಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂತರರಾಷ್ಟ್ರೀಯ ಮಾನವೀಯ ಕಾನೂನಿನಡಿಯಲ್ಲಿ ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು ಅಥವಾ ಯಾವುದೇ ನಾಗರಿಕ ಮೂಲಸೌಕರ್ಯಗಳ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡುವುದು ಯುದ್ಧಾಪರಾಧ ಎಂದು ಪರಿಗಣಿಸಲಾಗುತ್ತದೆ.

“ಅದು ನಮ್ಮ ದಾಳಿಯಾಗಿದ್ದರೆ ಯುದ್ಧ ಇಲಾಖೆ ತನಿಖೆ ನಡೆಸುತ್ತದೆ ಮತ್ತು ನಿಮ್ಮ ಪ್ರಶ್ನೆಯನ್ನು ನಾನು ಅವರಿಗೆ ಉಲ್ಲೇಖಿಸುತ್ತೇನೆ” ಎಂದು ಘಟನೆಯ ಬಗ್ಗೆ ಕೇಳಿದಾಗ ಸೋಮವಾರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಉದ್ದೇಶಪೂರ್ವಕವಾಗಿ ಶಾಲೆಯನ್ನು ಗುರಿಯಾಗಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಗಳಿಂದ ನಾಗರಿಕರಿಗೆ ಹಾನಿಯಾಗಿದೆ ಎಂಬ ವರದಿಗಳನ್ನು ಪರಿಶೀಲಿಸುತ್ತಿರುವುದಾಗಿ ಯುಎಸ್ ಸೆಂಟ್ರಲ್ ಕಮಾಂಡ್ ಮಾಧ್ಯಮಗಳಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...