Homeಅಂತರಾಷ್ಟ್ರೀಯಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

- Advertisement -
- Advertisement -

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ‘ಐಆರ್‌ಐಎಸ್ ದೆನಾ’ ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ.

ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ ಪೈಕಿ ಇದುವರೆಗೆ 87 ಮಂದಿಯ ಶವಗಳನ್ನು ಶ್ರೀಲಂಕಾದ ನೌಕಾಪಡೆಯು ಸಮುದ್ರದಿಂದ ಹೊರತೆಗೆದಿದೆ. 32 ಮಂದಿಯನ್ನು ಶ್ರೀಲಂಕಾ ನೌಕಾಪಡೆ ಯಶಸ್ವಿಯಾಗಿ ರಕ್ಷಿಸಿದ್ದು, ಅವರಿಗೆ ಗಾಲೆ ನಗರದ ಕಾರಪಿಟಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ ಸುಮಾರು 61 ಸಿಬ್ಬಂದಿ ಇನ್ನೂ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ದಕ್ಷಿಣ ಕರಾವಳಿಯ ಗಾಲೆ ನಗರದಿಂದ ಸುಮಾರು 40 ನಾಟಿಕಲ್ ಮೈಲಿ (ಸುಮಾರು 74 ಕಿ.ಮೀ.) ದೂರದಲ್ಲಿರುವ ಹಿಂದೂ ಮಹಾಸಾಗರದ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಇದು ತಮಿಳುನಾಡಿನ ಕನ್ಯಾಕುಮಾರಿಯಿಂದ ಸುಮಾರು 300 ಕಿ.ಮೀ. ದೂರದಲ್ಲಿದೆ ಎಂದು ವರದಿಯಾಗಿದೆ.

ಭಾರತದ ಆರ್ಥಿಕ ವಲಯದ (ಐಇಝೆಡ್‌) ಹೊರಗೆ ಈ ದಾಳಿ ನಡೆದಿದ್ದರೂ, ದೇಶದ ಅತ್ಯಂತ ಸಮೀಪದ ಜಲಪ್ರದೇಶದಲ್ಲಿ ಇಂತಹ ಸಂಘರ್ಷ ಸಂಭವಿಸಿರುವುದು ಭಾರತದ ಭದ್ರತಾ ದೃಷ್ಟಿಯಿಂದ ಕಳವಳಕಾರಿಯಾಗಿದೆ.

ಈ ದೊಡ್ಡ ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ಮೌನ ಪಾಲಿಸಿದೆ. ಇದು ರಾಜಕೀಯ ನಾಯಕರು ಮತ್ತು ಸಾರ್ವಜನಿಕರ ತೀವ್ರ ಟೀಕೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು ಮೋದಿ ಸರ್ಕಾರದ ಮೌನದ ಬಗ್ಗೆ ಆಶ್ವರ್ಯ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು, “ಸಂಘರ್ಷ ಭಾರತದ ಹಿತ್ತಲಿಗೆ (ಹಿಂದೂ ಮಹಾಸಾಗರ) ಬಂದಿದ್ದರೂ ಪ್ರಧಾನಿ ಮೌನವಾಗಿರುವುದು ‘ಆಘಾತಕಾರಿ” ಎಂದಿದ್ದಾರೆ. “ಪ್ರಧಾನಿಯವರು ದೇಶದ ಕಾರ್ಯತಂತ್ರದ ಸ್ವಾಯತ್ತತೆಯನ್ನು ರಾಜಿ ಮಾಡಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ನಮ್ಮ ಮನೆಗೆ ಆಮಂತ್ರಿಸಿ ಕರೆದಿದ್ದ ಅತಿಥಿ ಹಡಗು ಹಿಂದಿರುಗುವಾಗ ಅದರ ಮೇಲೆ ದಾಳಿಯಾದರೂ ಮೋದಿ ಸರ್ಕಾರ ಮೌನವಾಗಿರುವುದು ರಾಷ್ಟ್ರೀಯ ಹಿತಾಸಕ್ತಿಯ ಅಧಃಪತನ” ಎಂದು ರಾಜ್ಯಸಭೆಯ ವಿರೋಧಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು, “ಇದು ಇತಿಹಾಸದಲ್ಲೇ ಅತ್ಯಂತ ‘ಹೇಡಿ ಮತ್ತು ಭಯಭೀತ’ ಸರ್ಕಾರ” ಎಂದಿದ್ದಾರೆ.

“ಭಾರತ ವಿದೇಶಿ ಶಕ್ತಿಗಳಿಗೆ ಗುಲಾಮನಂತಾಗಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.

ಈ ದಾಳಿಯಿಂದ ಗಲ್ಫ್ ವಲಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಭಾರತದ 40% ತೈಲ ಮತ್ತು ಅನಿಲ ಪೂರೈಕೆಗೆ ಧಕ್ಕೆಯಾಗುವ ಆತಂಕವನ್ನು ಅನೇಕರು ವ್ಯಕ್ತಪಡಿಸಿದ್ದಾರೆ.

ಇದು ಮಾತ್ರವಲ್ಲದೆ, ಕಳೆದ ವಾರ ನಡೆದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಅವರ ಹತ್ಯೆಯ ಬಗ್ಗೆಯೂ ಭಾರತ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಏಕೆಂದರೆ, ಭಾರತ ಐತಿಹಾಸಿಕವಾಗಿ ಇರಾನ್ ಜೊತೆ ಉತ್ತಮ ಸಂಬಂಧವನ್ನು ಹೊಂದಿರುವ ರಾಷ್ಟ್ರವಾಗಿದೆ. ಒಂದು ರೀತಿಯಲ್ಲಿ ಭಾರತ ಮತ್ತು ಇರಾನ್ ಆಪ್ತ ಸ್ನೇಹಿತರು ಎಂದು ಹೇಳಬಹುದು. ಹೀಗಿರುವಾಗ ಕೇಂದ್ರದ ಮೌನ ಪ್ರಶ್ನಾರ್ಹವಾಗಿದೆ.

ಮೃತ ನೌಕಾ ಸಿಬ್ಬಂದಿ ಭಾರತದ ಅತಿಥಿಗಳು

ಅಮೆರಿಕ ದಾಳಿಯಿಂದ ಸಾವಿಗೀಡಾದ ಇರಾನ್‌ ನೌಕಾ ಸಿಬ್ಬಂದಿ ಭಾರತ ಅತಿಥಿಗಳು. ಆಂಧ್ರ ಪ್ರದೇಶ ವಿಶಾಖಪಟ್ಟಣಂನಲ್ಲಿ ನಡೆದ ಬಹುರಾಷ್ಟ್ರೀಯ ನೌಕಾಪಡೆಯ ಸಮರಭ್ಯಾಸದಲ್ಲಿ ಪಾಲ್ಗೊಳ್ಳಲು ಇವರು ಭಾರತಕ್ಕೆ ಆಗಮಿಸಿದ್ದರು.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು, ಐಆರ್‌ಐಎಸ್‌ ದೆನಾ ನೌಕೆಯು ಭಾರತೀಯ ನೌಕಾಪಡೆಯ ಅತಿಥಿಯಾಗಿ ವಿಶಾಖಪಟ್ಟಣಂನ ‘ಮಿಲನ್ 2026’ ಕವಾಯತಿನಲ್ಲಿ ಭಾಗವಹಿಸಿತ್ತು. ಇಂತಹ ಅತಿಥಿ ನೌಕೆಯ ಮೇಲೆ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ದಾಳಿ ಮಾಡಿರುವುದು ಅಮಾನವೀಯ ಎಂದು ಹೇಳಿದ್ದಾರೆ.

ಭಾರತ ಸರ್ಕಾರದ ಮೂಲಗಳ ಪ್ರಕಾರ, ಈ ನೌಕೆಯು ಫೆಬ್ರವರಿ 16 ರಿಂದ ಫೆಬ್ರವರಿ 25 ರವರೆಗೆ ಮಾತ್ರ ಭಾರತದ ಅಧಿಕೃತ ಅತಿಥಿಯಾಗಿತ್ತು. ಕವಾಯತು ಮುಗಿಸಿ ಫೆಬ್ರವರಿ 25 ರಂದೇ ಅದು ಭಾರತದ ಜಲಪ್ರದೇಶವನ್ನು ತೊರೆದಿದ್ದರಿಂದ, ದಾಳಿ ನಡೆದ ಸಮಯದಲ್ಲಿ (ಮಾರ್ಚ್ 4) ಅದು ತಾಂತ್ರಿಕವಾಗಿ ಭಾರತದ ಅತಿಥಿಯಾಗಿರಲಿಲ್ಲ ಎಂಬುದು ಸರ್ಕಾರದ ವಾದವಾಗಿದೆ ಎಂದು ವರದಿಯಾಗಿದೆ.

ಇಸ್ಲಾಮಿಕ್ ರೆವೆಲ್ಯೂಷನ್‌ ವರ್ಷಾಚರಣೆಗೆ ಶುಭಾಷಯ ತಿಳಿಸಿದ್ದ ಕೇಂದ್ರ ಈಗ ಮೌನ!

ಗಮನಾರ್ಹವಾಗಿ, ಇರಾನ್‌ನ ಇಸ್ಲಾಮಿಕ್ ರೆವೆಲ್ಯೂಷನ್‌ನ 47ನೇ ವರ್ಷಾಚರಣೆಯ ದಿನದಂದು, ಅಂದರೆ ಫೆಬ್ರವರಿ 11, 2026ರಂದು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ ಸರ್ಕಾರ ಮತ್ತು ಅಲ್ಲಿನ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದರು.

ಆದರೆ, ಇದೇ ಫೆಬ್ರವರಿ ಅಂತ್ಯಕ್ಕೆ ಅಂದರೆ 28ಕ್ಕೆ ನಡೆದ ಇರಾನ್ ಮೇಲಿನ ದಾಳಿ, ಮತ್ತು ಅಲ್ಲಿನ ಸರ್ವೋಚ್ಚ ನಾಯಕನ ಹತ್ಯೆ ಹಾಗೂ ಈಗ ಭಾರತದ ಕಾಲ ಬುಡದಲ್ಲೇ ನಡೆದಿರುವ ನೌಕೆ ಮೇಲಿನ ದಾಳಿಯ ಬಗ್ಗೆ ಭಾರತ ಮೌನ ವಹಿಸಿರುವುದು ಜನರನ್ನು ಆಶ್ಚರ್ಯಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...