Homeಕರ್ನಾಟಕಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ 'ಪ್ರಗತಿಪರ ಸೌಹಾರ್ದ ಸಂಘಟನೆಗಳ' ಆಗ್ರಹ

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

- Advertisement -
- Advertisement -

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯ ಸೌಹಾರ್ದ ಪರಂಪರೆಯನ್ನು ಸಂರಕ್ಷಿಸಲು ಹಾಗೂ ಸಂಪ್ರದಾಯದಂತೆ ಉರುಸ್ ನಡೆಸಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ಕಳುಹಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಸೌಹಾರ್ದ ತಾಣವಾದ ಬಾಬಾ ಬುಡನ್ ಗಿರಿ ಉಳಿವಿಗೋಸ್ಕರ ಕರ್ನಾಟಕದ ಎಲ್ಲಾ ಪ್ರಗತಿಪರ ಮನಸ್ಸುಗಳು ಅನೇಕ ದಶಕಗಳ ಕಾಲ ಹೋರಾಟ ಮಾಡಿದ್ದ ಇತಿಹಾಸ ನಮಗೆಲ್ಲರಿಗೂ ಗೊತ್ತೇ ಇದೆ. ಅದರಾಚೆಗೂ ಕೂಡ ಸಂಘಪರಿವಾರದ ಒತ್ತಡಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ ಒಂದು ರಾಜಿ ಸೂತ್ರವನ್ನು ಮುಂದಿಟ್ಟಿತ್ತು. ಅದರ ಪ್ರಕಾರ ಉರುಸ್ ಹಾಗೂ ದತ್ತಪೂಜೆ ಎರಡನ್ನೂ ನಡೆಸಲು ಅವಕಾಶ ಇರಬೇಕು. ಎರಡನ್ನೂ ಕೂಡ ಜಿಲ್ಲಾಡಳಿತ ಮೇಲ್ವಿಚಾರಣೆ ಮಾಡಬೇಕು ಎನ್ನುವ ತೀರ್ಮಾನಕ್ಕೆ ಇದಾಗಿತ್ತು. ದತ್ತ ಪೂಜೆಯ ಹೆಸರಿನಲ್ಲಿ ಸಂಘಪರಿವಾರಕ್ಕೆ ಬ್ರಾಹ್ಮಣೀಯ ಆಚರಣೆಯನ್ನು ತುರುಕಲು ಇದು ಅವಕಾಶ ನೀಡುವುದಾಗಿದ್ದರೂ, ಒಂದು ರೀತಿಯಲ್ಲಿ ಈಗಾದರೂ ಈ ಸಂಘರ್ಷ ಮುಕ್ತಾಯಗೊಳ್ಳಲಿ ಎಂದು ಅದನ್ನು ಬೆಂಬಲಿಸಿದ ಜನರೂ ಇದ್ದರು. ಆದರೆ ಇದು ಇಬ್ಬರಿಗೂ ಅವಕಾಶ ಮಾಡಿಕೊಡುವ ಜಾತ್ಯಾತೀತ ನಿಲುವಲ್ಲ. ಸಂಘ ಪರಿವಾರಕ್ಕೆ ಮಣೆ ಹಾಕಿ, ಸೂಫಿ ಪರಂಪರೆಯನ್ನು ನಮ ನಿಶೇಧಿಸುವ ತಂತ್ರಗಾರಿಕೆ ಎಂಬುದು ಬಯಲಾಗಿದೆ” ಎಂದು ಬಹಿರಂಗ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಬ್ರಾಹ್ಮಣೀಯ ರೀತಿಯಲ್ಲಿ ದತ್ತ ಜಯಂತಿ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಅವಕಾಶ ನೀಡಿತ್ತು. ಬಾಬಾ ಬುಡನ್ ಗಿರಿಯನ್ನು ಕೇಸರಿಮಯಗೊಳಿಸಿ ಸಂಘಪರಿವಾರದ ನೇತೃತ್ವದಲ್ಲಿ ದತ್ತ ಜಯಂತಿ ನಡೆಯಿತು. ಆದರೆ, ಅದೇ ಸಂಧರ್ಭದಲ್ಲಿ ನೆನ್ನೆ(ಮಾರ್ಚ್4), ಇಂದು(ಮಾರ್ಚ್5) ಮತ್ತು ನಾಳೆ(ಮಾರ್ಚ್6) ದರ್ಗಾ ಸಮಿತಿ ಕಡೆಯಿಂದ ಉರುಸ್ ಆಯೋಜನೆಗೊಂಡಿತ್ತು. ಆದರೆ ಜಿಲ್ಲಾಡಳಿತ ಉರುಸ್ ನಡೆಯದಂತೆ ತಡೆಯೊಡ್ಡಿದೆ. ಸಜ್ಜಾದೆ ಅವರಿಗೆ ನಿಮಗೆ ಇಲ್ಲಿ ಸಂಪ್ರದಾಯದಂತೆ ಗಂಧ ಹಚ್ಚುವ, ಉರುಸ್ ಅನ್ನು ನಡೆಸಿಕೊಡುವ ಹಕ್ಕು ಇಲ್ಲ ಎಂದು ತಡೆ ಹಿಡಿದು, ಗೋರಿಯ ಮೇಲೆ ಹಸಿರು ಚಾದರ್ ಹಾಕುವುದಕ್ಕಾಗಲಿ, ಅವರ ಸಂಪ್ರದಾಯದಂತೆ ಉರುಸ್ ನಡೆಸಲಾಗಲಿ ಅವಕಾಶ ಕೊಡದೆ ಅವರನ್ನು ಹೊರಗಿಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಈ ಅನ್ಯಾಯವನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಆ ಪ್ರತಿಭಟನೆಗೂ ಅವಕಾಶ ಕೊಡದಂತೆ ಪೊಲೀಸರು ಪ್ರತಿಭಟನೆಗೆ ಮುಂದಾದ ಹೋರಾಟಗಾರರನ್ನು ಎಳೆದಾಡಿ ಅವಮಾನಕಾರಿಯಾಗಿ ನಡೆಸಿಕೊಂಡಿದ್ದಾರೆ. ಇದು ಹುಸಿ ಜಾತ್ಯಾತೀತ ಹಾಗೂ ದ್ವಂದ್ವ ನೀತಿಯಾಗಿದೆ. ಕಾಂಗ್ರೆಸ್ ಸರ್ಕಾರದ ಈ ನಡವಳಿಕೆಯನ್ನು ನಾವು ಖಂಡಿಸುತ್ತಿದ್ದೇವೆ. ತಾವು ಈ ಕೂಡಲೇ ಮಧ್ಯಪ್ರವೇಶ ಮಾಡಿ ಬಾಬಾ ಬುಡನ್ ಗಿರಿಯಲ್ಲಿ ಸೌಹಾರ್ದ ಪರಂಪರೆಯನ್ನು ಸಂರಕ್ಷಿಸಬೇಕು, ಸುಪ್ರೀಂಕೋರ್ಟ್ ತೀರ್ಪಿನ ಆದೇಶದಂತೆ ನಡೆದುಕೊಳ್ಳಬೇಕು. ಉರುಸ್ ನಡೆಸಲು ಸಜ್ಜಾದೆ ಮತ್ತು ಭಕ್ತಾದಿಗಳಿಗೆ ಅವಕಾಶ ನೀಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಸೂಕ್ತ ರೀತಿಯಲ್ಲಿ ನಿರ್ದೇಶನ ನೀಡಬೇಕೆಂದು ಒತ್ತಾಯಿಸುತ್ತಿದ್ದೇವೆ” ಎಂದು ಆಗ್ರಹಿಸಿದ್ದಾರೆ.

ಪತ್ರದಲ್ಲಿ ಸಹಿ ಮಾಡಿದರವರು:

  1. ಡಾ.ವಿಜಯಮ್ಮ, ಹಿರಿಯ ಪತ್ರಕರ್ತರು.
  2. ತಾರಾರಾವ್, ಎದ್ದೇಳು ಕರ್ನಾಟಕ.
  3. ಬಂಜಗೆರೆ ಜಯಪ್ರಕಾಶ್‌
  4. ಪ್ರಕಾಶ್‌ ರಾಜ್
  5. ಕೆ.ಎಲ್.ಅಶೋಕ್, ಕಾರ್ಯದರ್ಶಿ, ಕರ್ನಾಟಕ ಜನಶಕ್ತಿ.
  6. ಗೌಸ್ ಮೊಹಿಯುದ್ಧೀನ್.
  7. ನಗರಗೆರೆ ರಮೇಶ್, ಶಾಂತಿಗಾಗಿ ನಾಗರಿಕರ ವೇದಿಕೆ.
  8. ಪ್ರೊ.ವಿ.ಎಸ್.ಶ್ರೀಧರ್, ಶಾಂತಿಗಾಗಿ ನಾಗರಿಕರ ವೇದಿಕೆ.
  9. ನೂರ್ ಶ್ರೀಧರ್ ರಾಜ್ಯಾಧ್ಯಕ್ಷರು, ಕರ್ನಾಟಕ ಜನಶಕ್ತಿ.
  10. ಶ್ರೀಪಾದ್ ಭಟ್, ಶಿಕ್ಷಣ ತಜ್ಞರು.
  11. ಬಸವರಾಜ್ ಕೌತಾಳ್, ಒಳ ಮೀಸಲಾತಿ ಹೋರಾಟ ಸಮಿತಿ.
  12. ಕರಿಯಪ್ಪ ಗುಡಿಮನಿ, ಒಳಮೀಸಲಾತಿ ಹೋರಾಟಗಾರರು.
  13. ನಿರಂಜನಾರಾಧ್ಯ ವಿ.ಪಿ., ಶಿಕ್ಷಣ ತಜ್ಞರು.
  14. ಸಿರಿಮನೆ ನಾಗರಾಜ್, ಗೌರವಾಧ್ಯಕ್ಷರು, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ.
  15. ಸಿದ್ಗೌಡ ಮೋದಗಿ, ಭಾರತೀಯ ಕೃಷಿಕ ಸಮಾಜ.
  16. ಅನಂತ್, ಯುವಶಕ್ತಿ.
  17. ಮಲ್ಲು ಕುಂಬಾರ್ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ.,
  18. ಬಸವರಾಜ್ ಸೂಳಿಭಾವಿ ಮೇ ಸಾಹಿತ್ಯ ಬಳಗ.,
  19. ಬಸವರಾಜ್, ಬಾದರ್ಲಿ.
  20. ಸಿದ್ಧರಾಜು ಮಂಡ್ಯ, ಕರ್ನಾಟಕ ಜನಶಕ್ತಿ
  21. ಕುಮಾರ್ ಸಮತಳ, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ.
  22. ಲಕ್ಷ್ಮಣ ಮಂಡಲಗೇರಾ, ರಂಗಕರ್ಮಿ-ಪತ್ರಕರ್ತ
  23. ದುರ್ಗೇಶ್ ರಾಜ್ಯ ಸಂಚಾಲಕ ಕೆವಿಎಸ್,
  24. ರಘು ನಂದನ್, ರಂಗಕರ್ಮಿ.
  25. ಡಾ.ಕಿರಣ್ ಕಮಲ್ ಪ್ರಸಾದ್, ಜೀವಿಕ.
  26. ಎ.ಎಸ್.ಪ್ರಭಾಕರ್, ಪ್ರಾಧ್ಯಾಪಕರು.
  27. ಎಂ.ಆರ್.ನAದನ್ ನಿವೃತ್ತ ಪ್ರಾಧ್ಯಾಪಕರು.
  28. ಚೆನ್ನಮ್ಮ, ಮಹಿಳಾ ಮುನ್ನಡೆ.
  29. ಶಿವಣ್ಣ, ಪ್ರಾಧ್ಯಾಪಕ.
  30. ಫಾ.ಸಮೀರ್ ಮಿನ್ಜಿ, ಮೈನ್ ಇಂಡಿಯನ್ ಸೋಸಿಯಲ್ ಇನ್‌ಸ್ಟಿಟ್ಯೂಟ್.
  31. ಖಲೀಂಉಲ್ಲಾ, ಸ್ವರಾಜ್ ಇಂಡಿಯಾ.
  32. ರವಿ ಮೋಹನ್, ಕಾರ್ಮಿಕ ಮುಖಂಡ.
  33. ನಾಗೇಶ್ ಅರಳಕುಪ್ಪೆ
  34. ಪೂರ್ಣಿಮಾ, ಮಹಿಳಾ ಮುನ್ನಡೆ.
  35. ಚಂದ್ರು ತರಹುಣಿಸೆ – ಪತ್ರಕರ್ತ
  36. ಮಂಜುಳಾ ಹುಲಿಕುಂಟೆ – ಕವಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...