Homeಅಂತರಾಷ್ಟ್ರೀಯನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

- Advertisement -
- Advertisement -

‘ಜೆನ್‌ ಝೀ ದಂಗೆ’ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ. 

ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ ರ‍್ಯಾಪರ್ ಆಗಿರುವ ಬಲೇಂದ್ರ ಶಾ ಅವರು, ಈಗಾಗಲೇ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರನ್ನು ಝಾಪಾ-5 ಕ್ಷೇತ್ರದಲ್ಲಿ ಸುಮಾರು 50,000 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಬಲೇಂದ್ರ ಶಾ ಅವರ ಪಕ್ಷವು ಈಗಾಗಲೇ 165 ನೇರ ಚುನಾವಣೆ ಕ್ಷೇತ್ರಗಳ ಪೈಕಿ 47 ಸ್ಥಾನಗಳಲ್ಲಿ ಜಯಗಳಿಸಿದ್ದು, ಒಟ್ಟು 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಕೆ.ಪಿ. ಒಲಿ ಅವರ ಸಿಪಿಎನ್-ಯುಎಂಎಲ್ ಮತ್ತು ನೇಪಾಳಿ ಕಾಂಗ್ರೆಸ್ (ಐಎನ್‌ಸಿ) ಪಕ್ಷಗಳು ಈ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿವೆ.

ಈ ಭರ್ಜರಿ ಯಶಸ್ಸಿನೊಂದಿಗೆ, ಬೆಂಗಳೂರಿನಲ್ಲಿ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದ 35 ವರ್ಷದ ಬಲೇಂದ್ರ ಶಾ ನೇಪಾಳದ ಮುಂದಿನ ಪ್ರಧಾನಿಯಾಗುವ ಎಲ್ಲಾ ಸಾಧ್ಯತೆಗಳಿವೆ.

‘ಜೆನ್-ಝೀ’ ಯುವಜನರ ಮತ್ತು ಇತರ ಜನರ ಅತೃಪ್ತಿಯ ಅಲೆಯಲ್ಲಿ ಹಳೆಯ ರಾಜಕೀಯ ಶಕ್ತಿಗಳನ್ನು ಮೆಟ್ಟಿ ನಿಂತು ಆರ್‌ಎಸ್‌ಪಿ ಭರ್ಜರಿ ಗೆಲುವನ್ನು ದಾಖಲಿಸುತ್ತಿದೆ.

ನೇಪಾಳವು ಮಿಶ್ರ ಚುನಾವಣಾ ವ್ಯವಸ್ಥೆಯನ್ನು ಅನುಸರಿಸುತ್ತದೆ. ಮತ ಎಣಿಕೆಯು ಎರಡು ಹಂತಗಳಲ್ಲಿ ನಡೆಯುತ್ತದೆ.

165 ಸ್ಥಾನಗಳಿಗೆ ಮತದಾರರು ನೇರವಾಗಿ ಅಭ್ಯರ್ಥಿಗಳಿಗೆ ಮತ ಹಾಕುತ್ತಾರೆ. ಅತಿ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ. ಇದರ ಎಣಿಕೆ ಮೊದಲು ನಡೆಯುತ್ತದೆ. ಉಳಿದ 110 ಸ್ಥಾನಗಳಿಗೆ ಮತದಾರರು ರಾಜಕೀಯ ಪಕ್ಷಕ್ಕೆ ಮತ ಹಾಕುತ್ತಾರೆ. ಇಡೀ ದೇಶವನ್ನು ಒಂದು ಕ್ಷೇತ್ರವೆಂದು ಪರಿಗಣಿಸಿ, ಪಕ್ಷಗಳು ಪಡೆದ ಒಟ್ಟು ಮತಗಳ ಶೇಕಡಾವಾರು ಆಧಾರದ ಮೇಲೆ ಈ ಸ್ಥಾನಗಳನ್ನು ಹಂಚಲಾಗುತ್ತದೆ.

ಬಾಹ್ಯ ಪ್ರದೇಶಗಳಿಂದ ಮತಪೆಟ್ಟಿಗೆಗಳನ್ನು ಸಂಗ್ರಹಿಸಿ ಕೇಂದ್ರಗಳಿಗೆ ತಲುಪಿಸಿದ ನಂತರ ಕೈಯಿಂದಲೇ ಮತ ಎಣಿಕೆ ಮಾಡಲಾಗುತ್ತದೆ. 

ಮಾರ್ಚ್ 5ರಂದು ಮತದಾನ ಮುಕ್ತಾಯಗೊಂಡ ತಕ್ಷಣ, ಅಂದರೆ ಮಾರ್ಚ್ 5ರ ಸಂಜೆ ಅಥವಾ ಮಾರ್ಚ್ 6ರ ಬೆಳಿಗ್ಗೆಯಿಂದ ಮತ ಎಣಿಕೆ ಆರಂಭವಾಗಿದೆ.

ಚುನಾವಣಾ ಆಯೋಗವು ಮಾರ್ಚ್ 9, 2026ರೊಳಗೆ ಎಲ್ಲಾ 275 ಸ್ಥಾನಗಳ ಮತ ಎಣಿಕೆಯನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ.

ಫಲಿತಾಂಶಗಳು ಶೀಘ್ರವಾಗಿ ಪ್ರಕಟವಾಗುತ್ತಿದ್ದು, ಪ್ರಮಾಣಾನುಗುಣ ಪ್ರಾತಿನಿಧ್ಯದ ಅಂತಿಮ ಲೆಕ್ಕಾಚಾರಕ್ಕೆ ಇನ್ನೂ 2-3 ದಿನಗಳು ಬೇಕಾಗಬಹುದು. 

ಬೆಂಗಳೂರಿನಲ್ಲಿ ಪದವಿ ಪಡೆದಿರುವ ಬಲೇಂದ್ರ ಶಾ

ಪ್ರಧಾನಿ ಹುದ್ದೆಗೇರಲು ಅಣಿಯಾಗಿರುವ ಯುವ ನಾಯಕ ಬಲೇಂದ್ರ ಶಾ ಅವರು ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದವರು. ನಗರದ ಯಲಹಂಕದಲ್ಲಿರುವ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಎಂಐಟಿ) ಕಾಲೇಜಿನಲ್ಲಿ ಅವರು ತಮ್ಮ ಉನ್ನತ ವ್ಯಾಸಂಗ ಮಾಡಿದ್ದಾರೆ.

2016 ರಿಂದ 2018 ರ ಅವಧಿಯಲ್ಲಿ ಸ್ಟ್ರಕ್ಚರಲ್ ಇಂಜಿನಿಯರಿಂಗ್‌ನಲ್ಲಿ ಬಲೇಂದ್ರ ಶಾ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಜನಪ್ರಿಯ ರ‍್ಯಾಪರ್ ಬಲೇಂದ್ರ ಶಾ

ಬಲೇಂದ್ರ ಶಾ ರಾಜಕೀಯಕ್ಕೆ ಬರುವ ಮೊದಲು ನೇಪಾಳದ ಅತ್ಯಂತ ಜನಪ್ರಿಯ ರ‍್ಯಾಪರ್ ಆಗಿದ್ದರು.

ನೇಪಾಳದ ಪ್ರಸಿದ್ಧ ‘Raw Barz’ ಎಂಬ ರ‍್ಯಾಪ್ ಬ್ಯಾಟಲ್ ಸರಣಿಯ ಮೂಲಕ ಅವರು ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು.

ಅವರ ಹಾಡುಗಳು ಕೇವಲ ಮನೋರಂಜನೆಗೆ ಸೀಮಿತವಾಗಿರದೆ, ನೇಪಾಳದ ಭ್ರಷ್ಟಾಚಾರ, ರಾಜಕೀಯ ಅಸ್ಥಿರತೆ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ದನಿಯೆತ್ತುತ್ತಿದ್ದವು. 

ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾಗಲೂ ಸಂಗೀತದಲ್ಲಿ ಸಕ್ರಿಯರಾಗಿದ್ದರು ಮತ್ತು ಅವರ ಅನೇಕ ಯೂಟ್ಯೂಬ್ ವಿಡಿಯೋಗಳು ಆ ಸಮಯದಲ್ಲಿ ವೈರಲ್ ಆಗಿದ್ದವು. ಸಂಗೀತ ಕ್ಷೇತ್ರದಲ್ಲಿ ಅವರು ಬಲೇನ್ಎಂಬ ಹೆಸರಿನಿಂದಲೇ ಹೆಚ್ಚು ಪ್ರಸಿದ್ಧರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...