Homeಮುಖಪುಟಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

- Advertisement -
- Advertisement -

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮಾರ್ಚ್ 1ರಂದು ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು maktoobmedia.com ವರದಿ ಮಾಡಿದೆ.

ವರದಿಯ ಪ್ರಕಾರ, ಮಧುಬನಿಯ ಘೋಷರ್ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ಹಿ ಗ್ರಾಮದ ರೋಷನ್ ಖಾತೂನ್ ಮೃತ ಮಹಿಳೆ. ಈಕೆ ಫೆಬ್ರವರಿ 28ರಂದು ಸ್ಥಳೀಯ ವಿವಾದವೊಂದನ್ನು ಬಗೆಹರಿಸಲು ಸಹಾಯ ಕೋರಿ ಗ್ರಾಮದ ಮುಖ್ಯಸ್ಥೆಯ ಬಳಿ ಹೋಗಿದ್ದರು. ಈ ವೇಳೆ ಮುಖ್ಯಸ್ಥೆಯ ಮಗನ ನೇತೃತ್ವದಲ್ಲಿ ಗುಂಪು ಹಲ್ಲೆ ನಡೆಸಲಾಗಿದೆ.

ಸ್ಥಳೀಯರ ಪ್ರಕಾರ, 40 ವರ್ಷದ ರೋಷನ್ ಖಾತೂನ್ ಅವರು ಭೂ ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಗ್ರಾಮದ ಮುಖ್ಯಸ್ಥೆ ಮುಖಿಯಾ ಕುಮಾರಿ ದೇವಿ ಅವರ ಮನೆಗೆ ಹೋಗಿದ್ದರು. ಈ ವೇಳೆ ಮುಖಿಯಾ ಕುಮಾರಿಯ ಮಗನ ನೇತೃತ್ವದ ಗುಂಪು ಖಾತೂನ್ ಅವರನ್ನು ಕಂಬಕ್ಕೆ ಕಟ್ಟಿ ತೀವ್ರವಾಗಿ ಥಳಿಸಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ನೆರೆದಿದ್ದವರು ಕೂಡ ಆಕೆಯನ್ನು ನಿಂದಿಸಿದ್ದಾರೆ.

ಖಾತೂನ್ ಅವರ ಪತಿಯನ್ನು ಗ್ರಾಮದ ಮುಖ್ಯಸ್ಥೆಯ ಮಗ ಬಲವಂತವಾಗಿ ಕರೆದೊಯ್ದಿದ್ದ. ಈ ಬಗ್ಗೆ ಮಾಹಿತಿ ತಿಳಿದು ವಿಚಾರಿಸಲು ಹೋದ ವೇಳೆ, ಖಾತೂನ್‌ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್ ಒಂದು ಹೇಳುತ್ತಿದೆ.

ಹಲ್ಲೆಯ ಸಮಯದಲ್ಲಿ ಖಾತೂನ್ ಅವರು ರಂಝಾನ್ ಉಪವಾಸದಲ್ಲಿದ್ದರು. ತೀವ್ರ ದಾಳಿಯಿಂದ ಬಾಯಾರಿಕೆಯಾದಾಗ ಅವರು ನೀರು ಕೇಳಿದ್ದರು. ಈ ವೇಳೆ ಆರೋಪಿಗಳು ಅವರಿಗೆ ಬಲವಂತವಾಗಿ ಮದ್ಯ ಮಿಶ್ರಿತ ಮೂತ್ರ ಕುಡಿಸಿದ್ದಾರೆ ಎಂದು ಕುಟುಂಬ ಸದಸ್ಯರು ಮತ್ತು ಪ್ರತ್ಯಕ್ಷದರ್ಶಿಗಳು ಗಂಭೀರ ಆರೋಪ ಮಾಡಿದ್ದಾರೆ.

ಅನೇಕ ಜನರ ಸಮ್ಮುಖದಲ್ಲೇ ಖಾತೂನ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ಅವರೆಲ್ಲರೂ ಮೂಕ ಪ್ರೇಕ್ಷರಾಗಿ ನಿಂತಿದ್ದರು. ಖಾತೂನ್ ತೀವ್ರ ಅಸಹಾಯಕರಾಗಿದ್ದರು. ಹಲ್ಲೆಯನ್ನು ನಿಲ್ಲಿಸುವಂತೆ ಪದೇ ಪದೇ ಬೇಡಿಕೊಳ್ಳುತ್ತಿದ್ದರು ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿರುವುದಾಗಿ maktoobmedia.com ಉಲ್ಲೇಖಿಸಿದೆ.

ಆರೋಪಗಳನ್ನು ದೃಢಪಡಿಸದ ಪೊಲೀಸರು

ಆದಾಗ್ಯೂ, ಪೊಲೀಸ್ ಅಧಿಕಾರಿಗಳು ಈ ಆರೋಪಗಳನ್ನು ಇನ್ನೂ ದೃಢಪಡಿಸಿಲ್ಲ ಎಂದು ತಿಳಿಸಿದ್ದಾರೆ. ತನಿಖೆಯಲ್ಲಿ ತೊಡಗಿರುವ ಅಧಿಕಾರಿಯೊಬ್ಬರು, “ಸಂತ್ರಸ್ತೆ ಉಪವಾಸವಿದ್ದ ಬಗ್ಗೆ ಮತ್ತು ನೀರು ಕೇಳಿದ ಬಗ್ಗೆ ಕೆಲವು ವರದಿಗಳನ್ನು ನಾವು ನೋಡಿದ್ದೇವೆ. ಆದರೆ ಈ ಹಂತದಲ್ಲಿ ನಾವು ಈ ವಿವರಗಳನ್ನು ಖಚಿತಪಡಿಸಲು ಸಾಧ್ಯವಿಲ್ಲ. ತನಿಖೆ ಮುಂದುವರಿಯುತ್ತಿದ್ದು, ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ” ಎಂದು ಹೇಳಿರುವುದಾಗಿ maktoobmedia.com ತಿಳಿಸಿದೆ.

ಎಫ್‌ಐಆರ್ ದಾಖಲು, ಪ್ರಮುಖ ಆರೋಪಿಯ ಬಂಧನ

ಪ್ರಕರಣದ ಮುಖ್ಯ ಆರೋಪಿ, ಗ್ರಾಮದ ಮುಖ್ಯಸ್ಥೆಯ ಮಗ ಮಂಗನು ಸಿಂಗ್ (ಮನು ಸಿಂಗ್) ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಒಟ್ಟು 17 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ವರದಿಯಾಗಿದೆ.

ಮನ್ಸೂರಿ ಸಮುದಾಯದ ರಾಜ್ಯಾಧ್ಯಕ್ಷ ಅಜಯ್ ಮನ್ಸೂರಿ ಅವರು, “ಮೃತ ಮಹಿಳೆಗೆ ನ್ಯಾಯ ಒದಗಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಹೇಳಿದ್ದಾರೆ. ಅಪರಾಧಿಗಳನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿದ್ದಾರೆ.

ರೋಷನ್ ಅವರ ಪತಿ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕ ಕ್ರಮವಾಗಿ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

“ರೋಷನ್ ಖಾತೂನ್ ಒಬ್ಬಳು ಬಡ ಮಹಿಳೆ. ಸಹಾಯ ಯಾಚಿಸಲು ಹೋದ ಆಕೆಯನ್ನು ಥಳಿಸಿ ಕೊಂದಿರುವುದು ನಮಗೆ ತೀವ್ರ ನೋವುಂಟು ಮಾಡಿದೆ. ಆಕೆಗೆ ನ್ಯಾಯ ಮತ್ತು ಎಲ್ಲಾ ನಾಗರಿಕರಿಗೆ ಸುರಕ್ಷತೆಯನ್ನು ನಾವು ಬಯಸುತ್ತೇವೆ” ಎಂದು ಸಮುದಾಯದ ಹಿರಿಯರೊಬ್ಬರು ಸ್ಥಳೀಯ ಮಾಧ್ಯಮ ಮಿಥ್ಲಾ ಸಮಾಚಾರ್‌ಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...