Homeಮುಖಪುಟಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

- Advertisement -
- Advertisement -

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮಾರ್ಚ್ 1ರಂದು ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು maktoobmedia.com ವರದಿ ಮಾಡಿದೆ.

ವರದಿಯ ಪ್ರಕಾರ, ಮಧುಬನಿಯ ಘೋಷರ್ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ಹಿ ಗ್ರಾಮದ ರೋಷನ್ ಖಾತೂನ್ ಮೃತ ಮಹಿಳೆ. ಈಕೆ ಫೆಬ್ರವರಿ 28ರಂದು ಸ್ಥಳೀಯ ವಿವಾದವೊಂದನ್ನು ಬಗೆಹರಿಸಲು ಸಹಾಯ ಕೋರಿ ಗ್ರಾಮದ ಮುಖ್ಯಸ್ಥೆಯ ಬಳಿ ಹೋಗಿದ್ದರು. ಈ ವೇಳೆ ಮುಖ್ಯಸ್ಥೆಯ ಮಗನ ನೇತೃತ್ವದಲ್ಲಿ ಗುಂಪು ಹಲ್ಲೆ ನಡೆಸಲಾಗಿದೆ.

ಸ್ಥಳೀಯರ ಪ್ರಕಾರ, 40 ವರ್ಷದ ರೋಷನ್ ಖಾತೂನ್ ಅವರು ಭೂ ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಗ್ರಾಮದ ಮುಖ್ಯಸ್ಥೆ ಮುಖಿಯಾ ಕುಮಾರಿ ದೇವಿ ಅವರ ಮನೆಗೆ ಹೋಗಿದ್ದರು. ಈ ವೇಳೆ ಮುಖಿಯಾ ಕುಮಾರಿಯ ಮಗನ ನೇತೃತ್ವದ ಗುಂಪು ಖಾತೂನ್ ಅವರನ್ನು ಕಂಬಕ್ಕೆ ಕಟ್ಟಿ ತೀವ್ರವಾಗಿ ಥಳಿಸಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ನೆರೆದಿದ್ದವರು ಕೂಡ ಆಕೆಯನ್ನು ನಿಂದಿಸಿದ್ದಾರೆ.

ಖಾತೂನ್ ಅವರ ಪತಿಯನ್ನು ಗ್ರಾಮದ ಮುಖ್ಯಸ್ಥೆಯ ಮಗ ಬಲವಂತವಾಗಿ ಕರೆದೊಯ್ದಿದ್ದ. ಈ ಬಗ್ಗೆ ಮಾಹಿತಿ ತಿಳಿದು ವಿಚಾರಿಸಲು ಹೋದ ವೇಳೆ, ಖಾತೂನ್‌ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್ ಒಂದು ಹೇಳುತ್ತಿದೆ.

ಹಲ್ಲೆಯ ಸಮಯದಲ್ಲಿ ಖಾತೂನ್ ಅವರು ರಂಝಾನ್ ಉಪವಾಸದಲ್ಲಿದ್ದರು. ತೀವ್ರ ದಾಳಿಯಿಂದ ಬಾಯಾರಿಕೆಯಾದಾಗ ಅವರು ನೀರು ಕೇಳಿದ್ದರು. ಈ ವೇಳೆ ಆರೋಪಿಗಳು ಅವರಿಗೆ ಬಲವಂತವಾಗಿ ಮದ್ಯ ಮಿಶ್ರಿತ ಮೂತ್ರ ಕುಡಿಸಿದ್ದಾರೆ ಎಂದು ಕುಟುಂಬ ಸದಸ್ಯರು ಮತ್ತು ಪ್ರತ್ಯಕ್ಷದರ್ಶಿಗಳು ಗಂಭೀರ ಆರೋಪ ಮಾಡಿದ್ದಾರೆ.

ಅನೇಕ ಜನರ ಸಮ್ಮುಖದಲ್ಲೇ ಖಾತೂನ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆ ಅವರೆಲ್ಲರೂ ಮೂಕ ಪ್ರೇಕ್ಷರಾಗಿ ನಿಂತಿದ್ದರು. ಖಾತೂನ್ ತೀವ್ರ ಅಸಹಾಯಕರಾಗಿದ್ದರು. ಹಲ್ಲೆಯನ್ನು ನಿಲ್ಲಿಸುವಂತೆ ಪದೇ ಪದೇ ಬೇಡಿಕೊಳ್ಳುತ್ತಿದ್ದರು ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿರುವುದಾಗಿ maktoobmedia.com ಉಲ್ಲೇಖಿಸಿದೆ.

ಆರೋಪಗಳನ್ನು ದೃಢಪಡಿಸದ ಪೊಲೀಸರು

ಆದಾಗ್ಯೂ, ಪೊಲೀಸ್ ಅಧಿಕಾರಿಗಳು ಈ ಆರೋಪಗಳನ್ನು ಇನ್ನೂ ದೃಢಪಡಿಸಿಲ್ಲ ಎಂದು ತಿಳಿಸಿದ್ದಾರೆ. ತನಿಖೆಯಲ್ಲಿ ತೊಡಗಿರುವ ಅಧಿಕಾರಿಯೊಬ್ಬರು, “ಸಂತ್ರಸ್ತೆ ಉಪವಾಸವಿದ್ದ ಬಗ್ಗೆ ಮತ್ತು ನೀರು ಕೇಳಿದ ಬಗ್ಗೆ ಕೆಲವು ವರದಿಗಳನ್ನು ನಾವು ನೋಡಿದ್ದೇವೆ. ಆದರೆ ಈ ಹಂತದಲ್ಲಿ ನಾವು ಈ ವಿವರಗಳನ್ನು ಖಚಿತಪಡಿಸಲು ಸಾಧ್ಯವಿಲ್ಲ. ತನಿಖೆ ಮುಂದುವರಿಯುತ್ತಿದ್ದು, ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ” ಎಂದು ಹೇಳಿರುವುದಾಗಿ maktoobmedia.com ತಿಳಿಸಿದೆ.

ಎಫ್‌ಐಆರ್ ದಾಖಲು, ಪ್ರಮುಖ ಆರೋಪಿಯ ಬಂಧನ

ಪ್ರಕರಣದ ಮುಖ್ಯ ಆರೋಪಿ, ಗ್ರಾಮದ ಮುಖ್ಯಸ್ಥೆಯ ಮಗ ಮಂಗನು ಸಿಂಗ್ (ಮನು ಸಿಂಗ್) ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಒಟ್ಟು 17 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ವರದಿಯಾಗಿದೆ.

ಮನ್ಸೂರಿ ಸಮುದಾಯದ ರಾಜ್ಯಾಧ್ಯಕ್ಷ ಅಜಯ್ ಮನ್ಸೂರಿ ಅವರು, “ಮೃತ ಮಹಿಳೆಗೆ ನ್ಯಾಯ ಒದಗಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಹೇಳಿದ್ದಾರೆ. ಅಪರಾಧಿಗಳನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿದ್ದಾರೆ.

ರೋಷನ್ ಅವರ ಪತಿ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕ ಕ್ರಮವಾಗಿ ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

“ರೋಷನ್ ಖಾತೂನ್ ಒಬ್ಬಳು ಬಡ ಮಹಿಳೆ. ಸಹಾಯ ಯಾಚಿಸಲು ಹೋದ ಆಕೆಯನ್ನು ಥಳಿಸಿ ಕೊಂದಿರುವುದು ನಮಗೆ ತೀವ್ರ ನೋವುಂಟು ಮಾಡಿದೆ. ಆಕೆಗೆ ನ್ಯಾಯ ಮತ್ತು ಎಲ್ಲಾ ನಾಗರಿಕರಿಗೆ ಸುರಕ್ಷತೆಯನ್ನು ನಾವು ಬಯಸುತ್ತೇವೆ” ಎಂದು ಸಮುದಾಯದ ಹಿರಿಯರೊಬ್ಬರು ಸ್ಥಳೀಯ ಮಾಧ್ಯಮ ಮಿಥ್ಲಾ ಸಮಾಚಾರ್‌ಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...