HomeಮುಖಪುಟParliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

- Advertisement -
- Advertisement -

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ.

ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು ‘ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ’ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಡ್ಡಿಪಡಿಸಿದ್ದರಿಂದ ಸದನದಲ್ಲಿ ಗದ್ದಲ ಉಂಟಾಯಿತು.

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ನಿಯಮ 176ರ ಅಡಿಯಲ್ಲಿ ‘ಅಲ್ಪಾವಧಿ ಚರ್ಚೆ’ಗೆ ಅವಕಾಶ ಕೋರಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ಅಧ್ಯಕ್ಷರಿಗೆ ನೋಟಿಸ್ ನೀಡಿದ್ದರು.

ಪಶ್ಚಿಮ ಏಷ್ಯಾದಲ್ಲಿನ ಅಸ್ಥಿರತೆಯಿಂದಾಗಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಭಾರತವು ತನ್ನ ಒಟ್ಟು ಕಚ್ಚಾ ತೈಲದ ಸುಮಾರು 55% ರಷ್ಟನ್ನು ಈ ಪ್ರದೇಶದಿಂದಲೇ ಆಮದು ಮಾಡಿಕೊಳ್ಳುತ್ತಿದೆ ಎಂದು ಖರ್ಗೆ ತಮ್ಮ ನೋಟಿಸ್‌ನಲ್ಲಿ ಆತಂಕ ವ್ಯಕ್ತಪಡಿಸಿದ್ದರು.

ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಸುರಕ್ಷತೆಯ ಬಗ್ಗೆಯೂ ಚರ್ಚೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು.

ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಶ್ಚಿಮ ಏಷ್ಯಾದ ಸ್ಥಿತಿಗತಿ ಕುರಿತು ಹೇಳಿಕೆ ನೀಡಲು ಮುಂದಾದಾರು. ಈ ವೇಳೆ ವಿರೋಧ ಪಕ್ಷದ ನಾಯಕರಿಗೆ ಮೊದಲು ಮಾತನಾಡಲು ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಇದರಿಂದಾಗಿ ಸದನದಲ್ಲಿ ತೀವ್ರ ಗದ್ದಲ ಉಂಟಾಯಿತು.

ಗದ್ದಲದ ನಡುವೆಯೇ, ಪದೇ ಪದೇ ವಿನಂತಿಸಿದ ನಂತರ ಸಭಾಧ್ಯಕ್ಷರು ನಿಯಮ 176ರ ಅಡಿಯಲ್ಲಿ (ಅಲ್ಪಾವಧಿ ಚರ್ಚೆ) ವಿಷಯವನ್ನು ಪ್ರಸ್ತಾಪಿಸಲು ಖರ್ಗೆ ಅವರಿಗೆ ಅವಕಾಶ ಮಾಡಿಕೊಟ್ಟರು. 

ಅಂತಿಮವಾಗಿ, ಖರ್ಗೆ ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಭಾರತದ ಇಂಧನ ಭದ್ರತೆಯ ಮೇಲಾಗುವ ಪರಿಣಾಮಗಳ ಕುರಿತು ಮಾತನಾಡಿದರು.

ಆದಾಗ್ಯೂ, ಖರ್ಗೆ ಮಾತನಾಡುತ್ತಿದ್ದಾಗ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮತ್ತು ಸಭಾಧ್ಯಕ್ಷರು ಭಾಷಣ ಮುಕ್ತಾಯಗೊಳಿಸಲು ಸೂಚಿಸಿದ್ದರಿಂದ ಸದನದಲ್ಲಿ ಮತ್ತೆ ಗದ್ದಲ ಮುಂದುವರಿಯಿತು.

ಈ ನಡುವೆ ವಿರೋಧ ಪಕ್ಷಗಳ ಸದಸ್ಯರು ನಿಯಮ 267ರ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿ ನೀಡಿದ್ದ ನೋಟಿಸ್‌ಗಳನ್ನು ಸಭಾಧ್ಯಕ್ಷರು ತಿರಸ್ಕರಿಸಿದರು.

ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದ ಭಾರತಕ್ಕಾಗುವ ಪರಿಣಾಮಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೇವಾಲಾ ನೋಟಿಸ್ ನೀಡಿದ್ದರು.

ಇಂಧನ ಭದ್ರತೆ, ಆರ್ಥಿಕತೆ ಮತ್ತು ಅನಿವಾಸಿ ಭಾರತೀಯರ ರಕ್ಷಣೆಯ ಬಗ್ಗೆ ಚರ್ಚಿಸಲು ಕೋರಿ ಎಎಪಿಯ ಸಂಜಯ್ ಸಿಂಗ್ ನೋಟಿಸ್ ಸಲ್ಲಿಸಿದ್ದರು.

ಮತದಾರರ ಹಕ್ಕು ಕಸಿದುಕೊಳ್ಳುವಿಕೆ ಕುರಿತು ಚರ್ಚಿಸಲು ಟಿಎಂಸಿಯ ನದಿಮುಲ್ ಹಕ್ ಮತ್ತು ಸಾಕೇತ್ ಗೋಖಲೆ ನಿಯಮ 267ರ ಅಡಿ ನೋಟಿಸ್ ನೀಡಿದ್ದರು.

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಿಪಿಐನ ಪಿ. ಸಂತೋಷ್ ನೋಟಿಸ್ ಸಲ್ಲಿಸಿದ್ದರು ಎಂದು ವರದಿಯಾಗಿದೆ.

ಸಭಾಧ್ಯಕ್ಷರು ಈ ಎಲ್ಲಾ 267ರ ಅಡಿಯ ನೋಟಿಸ್‌ಗಳನ್ನು ತಿರಸ್ಕರಿಸಿದರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರ ನಿಯಮ 176ರ ಅಡಿಯಲ್ಲಿ ಅಲ್ಪಾವಧಿ ಚರ್ಚೆಗೆ ಅವಕಾಶ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...