Homeಮುಖಪುಟಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ವಿರೋಧ ಪಕ್ಷದ ಸಂಸದರು ಸೋಮವಾರ (ಮಾ.9) ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು.

ಇದಕ್ಕೂ ಮೊದಲು, ಎರಡನೇ ಹಂತದ ಬಜೆಟ್ ಅಧಿವೇಶನದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಸದನದ ನಾಯಕರು ಸಂಸತ್ ಭವನದ ಸಂಕೀರ್ಣದಲ್ಲಿರುವ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಸಭೆ ಸೇರಿದ್ದರು.

ಮಲ್ಲಿಕಾರ್ಜು ಖರ್ಗೆ ಮತ್ತು ರಾಹುಲ್ ಗಾಂಧಿ ಮಾತ್ರವಲ್ಲದೆ, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಡಿಎಂಕೆಯ ದಯಾನಿಧಿ ಮಾರನ್, ಎನ್‌ಸಿಪಿ (ಎಸ್‌ಪಿ) ಯ ಸುಪ್ರಿಯಾ ಸುಳೆ ಮತ್ತು ಶಿವಸೇನೆಯ (ಯುಬಿಟಿ) ಸಂಜಯ್ ರಾವತ್ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

“ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಪ್ರಾರಂಭಗೊಳ್ಳುತ್ತಿದ್ದಂತೆ ಇರಾನ್ ಜೊತೆಗಿನ ಅಮೆರಿಕ-ಇಸ್ರೇಲ್ ಯುದ್ಧವು ನಮ್ಮ ಹಿತ್ತಲನ್ನು ತಲುಪಿದೆ. ಈ ಸಂದರ್ಭದಲ್ಲಿ, ಪ್ರಸ್ತುತ ಭೌಗೋಳಿಕ ರಾಜಕೀಯ ಬಿಕ್ಕಟ್ಟಿನ ಕುರಿತು ಪೂರ್ಣ ಪ್ರಮಾಣದ ಚರ್ಚೆ ನಡೆಸುವುದು ಕಡ್ಡಾಯವಾಗಿದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ವಿದೇಶಾಂಗ ವ್ಯವಹಾರಗಳ ಸಚಿವರ ಏಕಪಕ್ಷೀಯ ಹೇಳಿಕೆ ಇದಕ್ಕೆ ಪರಿಹಾರವಲ್ಲ. ನಾವು ಸಾಮೂಹಿಕವಾಗಿ ಇಡೀ ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ. ಭಾರತ ಸರ್ಕಾರವು ನಮ್ಮ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ನಮ್ಮ ವ್ಯಾಪಾರಿಗಳಿಗೆ ನೆರವಾಗಲು, ನಮ್ಮ ರಫ್ತುಗಳ ಪೂರೈಕೆ ಸರಪಳಿಯನ್ನು ವೈವಿಧ್ಯಗೊಳಿಸಲು ಮತ್ತು ಬೆಲೆ ಏರಿಕೆಯ ಮೂಲಕ ನಮ್ಮ ಜನರ ಮೇಲೆ ಹೊರೆ ಹೇರುವುದನ್ನು ನಿಲ್ಲಿಸಲು ವಿವರವಾದ ತುರ್ತು ಯೋಜನೆಯೊಂದಿಗೆ ಮುಂದೆ ಬರಬೇಕು. ವಿರೋಧ ಪಕ್ಷವು ನಮ್ಮ ಜನರ ಬಗ್ಗೆ ಸಂವೇದನಾಶೀಲತೆಯನ್ನು ತೋರಬೇಕೆಂದು ಒತ್ತಾಯಿಸುತ್ತದೆ” ಎಂದು ಸಭೆಯ ನಂತರ ಖರ್ಗೆ ಹೇಳಿದ್ದಾರೆ.

ವಿರೋಧ ಪಕ್ಷದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಪ್ರತಿಭಟನೆ ನಡೆಸಿದರು, ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಚರ್ಚೆಗೆ ಒತ್ತಾಯಿಸಿದರು ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರದ ‘ಮೌನ’ವನ್ನು ಖಂಡಿಸಿದರು.

“ಗಲ್ಫ್ ಉರಿಯುತ್ತಿದೆ, ತೈಲ ಆಘಾತ. ಭಾರತೀಯರು ಸಂಕಷ್ಟದಲ್ಲಿದ್ದಾರೆ. ಭಾರತಕ್ಕೆ ನಾಯಕತ್ವದ ಅಗತ್ಯವಿದೆ – ಮೌನದಲ್ಲ” ಎಂದು ಬರೆದಿದ್ದ ಬೃಹತ್ ಬ್ಯಾನರ್ ಹಿಡಿದ ಸಂಸದರು, ಸರ್ಕಾರ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಟಿಎಂಸಿಯ ಸಾಗರಿಕಾ ಘೋಷ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...