Homeಕರ್ನಾಟಕ'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..'; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಹಕ್ಕಿಗಾಗಿ ಹೋರಾಟದ ಜೊತೆಗೆ ಕಾನೂನು ಸಂಘರ್ಷವನ್ನೂ ಮುಂದುವರೆಸುತ್ತೇವೆ'

- Advertisement -
- Advertisement -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ‘ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ’ ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, “ಶೇ.1 ಒಳಮೀಸಲಾತಿಯಂತೂ ಇಲ್ಲ, ಮುಖ್ಯಮಂತ್ರಿ ಈ ಹಿಂದೆ ಭರವಸೆ ಕೊಟ್ಟಂತೆ ಪ್ರತ್ಯೇಕ ನಿಗಮವೂ ಇಲ್ಲ, ಸಬಲೀಕರಣದ ವಿಶೇಷ ಪ್ಯಾಕೇಜೂ ಇಲ್ಲ. ಆಯವ್ಯಯದಲ್ಲಿ 4 ವಸತಿ ಶಾಲೆಗಳನ್ನು ಬಿಟ್ಟರೆ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಯಾವ ಬೇಡಿಕೆಗಳನ್ನೂ ಈಡೇರಿಸಿಲ್ಲ” ಎಂದು ಬೇಸರ ಹೊರಹಾಕಿದ್ದಾರೆ.

“ಬಲಾಢ್ಯ ಪರಿಶಿಷ್ಟ ಜಾತಿಗಳ ಲಾಬಿಗೆ ಮಣಿದು 49 ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ನ್ಯಾಯೋಚಿತ ಪಾಲನ್ನು ಕರ್ನಾಟಕ ಸರ್ಕಾರ ನೀಡಲಿಲ್ಲ. ಪ್ರತಿಭಟನಾ ಸಮಾವೇಶ ನಡೆಸಿದರೂ ನಮ್ಮ ಅಹವಾಲನ್ನು ಸ್ವೀಕರಿಸಲು ಸರಕಾರದ ಯಾವ ಪ್ರತಿನಿಧಿಯೂ ನಮ್ಮ ಬಳಿ ಸುಳಿಯಲ್ಲಿ. ಆಗ ನಾವು ಅಕ್ಟೋಬರ್ 2ರಂದು ದೆಹಲಿಗೆ ತೆರಳಿ ಜಂತರ್ ಮಂತರ್‌ನಲ್ಲಿ ಮತ್ತು ಎಐಸಿಸಿ ಕಛೇರಿಯ ಬಳಿ ಧರಣಿ ನಡೆಸಿದೆವು. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪನವರು ‘ಅಲೆಮಾರಿಗಳಿಗೆ ಶೇ.1 ರಷ್ಟು ಮೀಸಲಾತಿ ಮತ್ತು ಪ್ರತ್ಯೇಕ ಅಭಿವೃದ್ಧಿ ನಿಗಮ, ಅಭಿವೃದ್ಧಿಯ ವಿಶೇಷ ಪ್ಯಾಕೇಜ್‌ ನೀಡಲು ನಮ್ಮ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ಇದೆ’ ಎಂದು ಭರವಸೆ ನೀಡಿ ದೆಹಲಿಯಿಂದ ನಮ್ಮನ್ನು ವಾಪಸ್ ಕರೆಯಿಸಿಕೊಂಡಿದ್ದರು. ನಂತರ ಅಕ್ಟೋಬರ್ 31ರಂದು ಅಲೆಮಾರಿ ಸಮುದಾಯಗಳ ಮುಖಂಡರನ್ನು ಮಾನ್ಯ ಮುಖ್ಯಮಂತ್ರಿಗಳು ಸಭೆ ಕರೆದು ಶೇ.1 ಮೀಸಲಾತಿ ಮತ್ತು ಪ್ರತ್ಯೇಕ ಅಭಿವೃದ್ಧಿ ನಿಗಮ ಮತ್ತು ಅಭಿವೃದ್ಧಿಯ ವಿಶೇಷ ಪ್ಯಾಕೇಜ್‌ ನೀಡುವ ಭರವಸೆಯನ್ನು ಸಭೆಯಲ್ಲಿ ನೀಡಿದ್ದರು. ಫೆ.5ರಂದು ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪನವರು ಅಲೆಮಾರಿ ಸಮುದಾಯಗಳ ಪ್ರತಿನಿಧಿಗಳನ್ನು ಕರೆದು 2026-27ನೇ ಸಾಲಿನ ಅಯವ್ಯಯದಲ್ಲಿ ಅಲೆಮಾರಿ ಸಮುದಾಯಗಳಿಗೆ ನೀಡಬೇಕಿರುವ ಅಭಿವೃದ್ಧಿ ಯೋಜನೆಗಳನ್ನು ಕುರಿತು ಚರ್ಚಿಸಿದರು. ಈ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಂದೀಪ್, ರಾಕೇಶ್ ಕುಮಾರ್, ವೆಂಕಟಯ್ಯ ಮತ್ತು ಇತರೆ ಅಧಿಕಾರಿಗಳು ಇದ್ದರು” ಎಂದು ಹೇಳಿದ್ದಾರೆ.

ಅಲೆಮಾರಿ ಒಕ್ಕೂಟದ ಬೇಡಿಕೆಗಳು:

  1. ಭಾರತದ ಸರ್ವೋಚ್ಛ ನ್ಯಾಯಾಲಯದ ತೀರ್ಪು ಮತ್ತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ಅನುಸಾರ 49 ಅಲೆಮಾರಿ ಸಮುದಾಯಗಳನ್ನು ಪ್ರವರ್ಗ `ಎ’ನಲ್ಲಿ ಇರಿಸಿ ಶೇ 1%ರಷ್ಟು ಮೀಸಲಾತಿಯನ್ನು ನೀಡಬೇಕು.
  2. 49 ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮದ ಸ್ಥಾಪನೆ ಮಾಡಬೇಕು
  3. ಕರ್ನಾಟಕ ಸರಕಾರವು ರಾಜ್ಯದ 49 ಅಲೆಮಾರಿ ಸಮುದಾಯಗಳಿಗೆ 500 ಕೋಟಿಗಳನ್ನು ಮೀಸಲಾಗಿಟ್ಟು ಅಭಿವೃದ್ಧಿಯ ವಿಶೇಷ ಪ್ಯಾಕೇಜನ್ನು ರೂಪಿಸಬೇಕು.
  4. ಕರ್ನಾಟಕ ಸರಕಾರವು ಪರಿಶಿಷ್ಟ ಜಾತಿಗಳಿಗೆ ತನ್ನ ಆಯವ್ಯಯದಲ್ಲಿ ವಿಶೇಷ ಘಟಕ ಯೋಜನೆಯ ಒಟ್ಟು ಮೊತ್ತದಲ್ಲಿ ಶೇ.5 ರಷ್ಟು ಹಣವನ್ನು 49 ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಮೀಸಲಾಗಿಡಬೇಕು.
  5. ವಸತಿ: ಪ್ರತಿ ಜಿಲ್ಲೆಗೆ 500 ಮನೆಗಳಂತೆ 31 ಜಿಲ್ಲೆಗಳಿಗೆ 15,500 ಮನೆಗಳನ್ನು ನಿರ್ಮಾಣ ಮಾಡಬೇಕು. ಇದನ್ನು ಮುಂದಿನ ಮೂರು ವರ್ಷಗಳಿಗೆ ವಿಸ್ತರಿಸಿ ಒಟ್ಟು 46,500 ಮನೆಗಳನ್ನು ಅಲೆಮಾರಿ ಸಮುದಾಯಗಳಿಗೆ ನಿರ್ಮಿಸಬೇಕು.
  6. ಭೂಒಡೆತನ ಯೋಜನೆ: ಅಲೆಮಾರಿ ಸಮುದಾಯಗಳಿಗೆ ಸರಕಾರವು ಕೃಷಿಭೂಮಿಯನ್ನು ನೀಡಿ ಅವರಿಗೆ ನಿರ್ದಿಷ್ಟ ಆರ್ಥಿಕ ಮೂಲವನ್ನು ಕಲ್ಪಿಸಬೇಕು. ಭೂಒಡೆತನ ಯೋಜನೆಯಲ್ಲಿ ಪ್ರತಿ ಜಿಲ್ಲೆಗೆ 100 ಎಕರೆ ಕೃಷಿ ಜಮೀನನ್ನು ಅಲೆಮಾರಿ ಸಮುದಾಯಗಳಿಗೆ ಮೀಸಲಾಗಿಡಬೇಕು.
  7. ಶಿಕ್ಷಣ : ಅಲೆಮಾರಿ ಸಮುದಾಯಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ನವೋದಯ ವಿದ್ಯಾಲಯ’ ಮತ್ತುಮೊರಾರ್ಜಿ ವಸತಿ ಶಾಲೆ’ಗಳ ಮಾದರಿಯಲ್ಲಿ ಎರಡು ಜಿಲ್ಲೆಗ ಒಂದರAತೆ ಒಟ್ಟು 15 ವಸತಿ ಶಾಲೆಗಳನ್ನು ನಿರ್ಮಾಣ ಮಾಡಬೇಕು. ಸರಕಾರದ ವಸತಿ ನಿಲಯಗಳಲ್ಲಿ (ಹಾಸ್ಟೆಲ್) ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಶೇ 15%ರಷ್ಟು ಸ್ಥಾನಗಳನ್ನು ಉಚಿತವಾಗಿ ಕಲ್ಪಿಸಬೇಕು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಂಶೋಧನೆಯನ್ನು (ಪಿಎಚ್, ಡಿ ಅಥವಾ ತತ್ಸಮಾನ ಸಂಶೋಧನೆಗಾಗಿ) ಕೈಗೊಳ್ಳುವ ಅಲೆಮಾರಿ ಸಮುದಾಯಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರವು ಪ್ರತಿ ತಿಂಗಳು ರೂ 25,000/-ಗಳ ಶಿಷ್ಯವೇತನವನ್ನು ನೀಡಬೇಕು. ಇದಲ್ಲದೆ ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ತೆರಳುವ ಅಲೆಮಾರಿ ಸಮುದಾಯಗಳ ಯುವಕರಿಗೆ ಸೂಕ್ತ ಹಣಕಾಸಿನ ನೆರವನ್ನು ನೀಡಬೇಕು.
  8. ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳಿಗೆ ಸೇರಿದ ಹಲವು ಸಮುದಾಯಗಳ ಪಾರಂಪರಿಕ ಕೌಶಲ್ಯ ಮತ್ತು ಕಲೆಗಳನ್ನು ಆಧುನಿಕಗೊಳಿಸಲು ಈ ಸಮುದಾಯಗಳಿಗೆ ತರಬೇತಿ ನೀಡಬೇಕು. ಪ್ರತಿ ವ್ಯಕ್ತಿಗೆ 10 ಲಕ್ಷಗಳ ರೂಪಾಯಿಗಳ ಸಾಲ ಸೌಲಭ್ಯವನ್ನು ನೀಡಬೇಕು. ಇದಲ್ಲದೆ, ಸ್ವಯಂಸಾರಥಿ ಯೋಜನೆಯಲ್ಲಿ ಸಾಲ ಸೌಲಭ್ಯವನ್ನು ನೀಡುವ ಅನುದಾನ ಹೆಚ್ಚಿಸಿ, ಜಿಲ್ಲೆಯೊಂದರಲ್ಲಿ ಅಲೆಮಾರಿ ಸಮುದಾಯಗಳಿಗೆ ಸೇರಿದ ಕನಿಷ್ಟ 100 ಜನರಿಗೆ ಸಾಲ ಸೌಲಭ್ಯಗಳು ಸಿಗುವಂತೆ ಮಾಡಬೇಕು.
  9. ಸಂಸ್ಕೃತಿ, ಕಲೆಗಳ ರಕ್ಷಣೆ: ಅಲೆಮಾರಿ ಸಮುದಾಯಗಳ ಭಾಷೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಸಲುವಾಗಿ ಅಲೆಮಾರಿ ಸಮುದಾಯಗಳ ಭಾಷೆ, ಕಲೆ ಮತ್ತು ಸಂಸ್ಕೃತಿ ಅಕಾಡೆಮಿ’ಯನ್ನು, ಅಲೆಮಾರಿ ಸಮುದಾಯಗಳ ಅಧ್ಯಯನಕ್ಕಾಗಿಅಲೆಮಾರಿ ಮತ್ತು ವಿಮುಕ್ತ ಸಮುದಾಯಗಳ ಸಂಶೋಧನಾ ಕೇಂದ್ರ’ವನ್ನು ಸ್ಥಾಪಿಸಬೇಕು.
  10. `ಅಲೆಮಾರಿ ಮತ್ತು ವಿಮುಕ್ತ ಸಮುದಾಯಗಳ ಆಯೋಗ’ವನ್ನು ರಾಜ್ಯದಲ್ಲಿ ಸ್ಥಾಪಿಸಬೇಕು. ಅಲೆಮಾರಿ ಮತ್ತು ವಿಮುಕ್ತ ಸಮುದಾಗಳಿಗೆ ಸೇರಿದ ವ್ಯಕ್ತಿಗಳು ಈ ಆಯೋಗಕ್ಕೆ ಅಧ್ಯಕ್ಷ ಮತ್ತು ಪದಾಧಿಕಾರಿಗಳಾಗಬೇಕು.

    “ಈ ಮೇಲಿನ ಹತ್ತು ಬೇಡಿಕೆಗಳನ್ನು ನಾವು ಮಾನ್ಯ ಮುಖ್ಯಮಂತ್ರಿಗಳ ಮತ್ತು ಸಮಾಜ ಕಲ್ಯಾಣ ಸಚಿವರ ಬಜೆಟ್‌ಪೂರ್ವ ಸಭೆಯಲ್ಲಿ ಮಂಡಿಸಿದ್ದೆವು. ಈ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯಮಂತ್ರಿಗಳು ಮತ್ತು ಸಮಾಜ ಕಲ್ಯಾಣ ಸಚಿವರು ಭರವಸೆ ನೀಡಿದ್ದರು. ಆದರೆ, ಮುಖ್ಯಮಂತ್ರಿಗಳು ಮಂಡಿಸಿದ ಅಯವ್ಯಯದಲ್ಲಿ ನಮ್ಮ ಯಾವ ಬೇಡಿಕೆಗಳನ್ನೂ ಈಡೇರಿಸದೆ ಅಲೆಮಾರಿಗಳಿಗೆ ಅನ್ಯಾಯವೆಸಗಿದ್ದಾರೆ” ಎಂದು ಆರೋಪಿಸಿದ್ದಾರೆ.

    “ನಮ್ಮ ಹಕ್ಕುಗಳಿಗಾಗಿನ ಹೋರಾಟವು ನಿಲ್ಲುವುದಿಲ್ಲ. ನಾವು ಸಂಖ್ಯೆಯಲ್ಲಿ ಕಡಿಮೆ ಇರಬಹುದು. ನಿಮ್ಮನ್ನು ಚುನಾವಣೆಗಳಲ್ಲಿ ಗೆಲ್ಲಿಸಲು ಬೇಕಾದ ಸಂಖ್ಯೆ ನಮ್ಮಲ್ಲಿ ಇಲ್ಲದೇ ಇರಬಹುದು. ಆದರೆ, ನೀವು ಮಾಡುತ್ತಿರುವ ಬಲಾಢ್ಯರ ಪರವಾದ ರಾಜಕಾರಣವನ್ನು ನಾವು ರಾಜ್ಯದ ಜನರ ಮುಂದೆ ಬಯಲುಗೊಳಿಸುವ ಶಕ್ತಿ ನಮಗಿದೆ. ಒಳಮೀಸಲಾತಿಯಲ್ಲಿ ಸರಿಯಾದ ಪಾಲನ್ನು ಪಡೆಯಲು ನಾವು ಬೀದಿ ಹೋರಾಟಗಳನ್ನು ಮುಂದುವರೆಸುತ್ತೇವೆ. ಹಾಗೆಯೇ ನ್ಯಾಯಾಲಯದಲ್ಲಿ ನಮ್ಮ ನ್ಯಾಯಬದ್ಧ ಹಕ್ಕಿಗಾಗಿ ಹೋರಡುತ್ತಲೇ ಇರುತ್ತೇವೆ. ಕರ್ನಾಟಕದಲ್ಲಿನ ನ್ಯಾಯಪ್ರಜ್ಞೆಯುಳ್ಳ ಜನ ನಮ್ಮ ಸಹಾಯಕ್ಕೆ ಬರುತ್ತಾರೆ ಎಂಬ ವಿಶ್ವಾಸದಲ್ಲಿ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. ಹಾಗೇಯೇ ಎಲ್ಲಾ ಪಕ್ಷದಲ್ಲಿರುವ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇರುವ ಶಾಸಕರು ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಅಲೆಮಾರಿ ಸಮುದಾಯಗಳ ಪರ ದನಿ ಎತ್ತಬೇಕೆಂದು ಕೋರುತ್ತೇವೆ” ಎಂದು ಮನವಿ ಮಾಡಿದ್ದಾರೆ.

    ಇದನ್ನೂ ಓದಿ: ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...