Homeಮುಖಪುಟಮಹಾ ಸಿಎಂ ಉದ್ಧವ್‌ ಠಾಕ್ರೆ ಸಂಪುಟ ವಿಸ್ತರಣೆ: ಡಿಸಿಎಂ ಆಗಿ ಅಜಿತ್‌ ಪವಾರ್‌, ಸಚಿವನಾಗಿ ಆದಿತ್ಯ...

ಮಹಾ ಸಿಎಂ ಉದ್ಧವ್‌ ಠಾಕ್ರೆ ಸಂಪುಟ ವಿಸ್ತರಣೆ: ಡಿಸಿಎಂ ಆಗಿ ಅಜಿತ್‌ ಪವಾರ್‌, ಸಚಿವನಾಗಿ ಆದಿತ್ಯ ಠಾಕ್ರೆ..

- Advertisement -
- Advertisement -

ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ತನ್ನ ಸಂಪುಟಕ್ಕೆ ಮೂವತ್ತಾರು ಮಂತ್ರಿಗಳನ್ನು ಸೇರಿಸಿಕೊಳ್ಳಲಾಗಿದೆ. ಇಂದು ಪ್ರಮಾಣ ವಚನ ಸ್ವೀಕರಿಸಿದ ಮಂತ್ರಿಗಳಲ್ಲಿ ಉದ್ಧವ್ ಅವರ 29 ವರ್ಷದ ಮಗ ಆದಿತ್ಯ ಠಾಕ್ರೆ ಸೇರಿದ್ದು, ಮಹಾರಾಷ್ಟ್ರದಲ್ಲಿ ಇದೇ ಮೊದಲ ಬಾರಿಗೆ ತಂದೆ-ಮಗ ಜೋಡಿಯನ್ನು ರಾಜ್ಯದ ಮಂತ್ರಿ ಮಂಡಳಿಯಲ್ಲಿ ನೋಡುವಂತಾಗಿದೆ.

ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.  ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದಾಖಲೆ ಅವರದು. ನವೆಂಬರ್‌ನಲ್ಲಿ ಕೇವಲ ಮೂರು ದಿನಗಳ ಕಾಲ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಸರ್ಕಾರ ರಚಿಸುವ ಒಪ್ಪಂದದಲ್ಲಿ ಅವರು ಡಿಸಿಎಂ ಆಗಿದ್ದರು.

ಮಹಾರಾಷ್ಟ್ರದ ಒಟ್ಟು 36 ಮಂತ್ರಿಗಳಲ್ಲಿ (ಒಟ್ಟು ಶಾಸಕರ 15%) 26 ಮಂತ್ರಿಗಳು ಕ್ಯಾಬಿನೆಟ್ ಮಂತ್ರಿಗಳಾಗಿ ಮತ್ತು 10 ಮಂತ್ರಿಗಳು ಕಿರಿಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಸ್ತೃತ ಸಂಪುಟದಲ್ಲಿ ಮೂವರು ಮಹಿಳೆಯರಿದ್ದರೆ, ನಾಲ್ವರು ಮುಸ್ಲಿಮರಿದ್ದಾರೆ.

ಆದಿತ್ಯ ಠಾಕ್ರೆಯವರಲ್ಲದೇ ಹಿರಿಯ ಎನ್‌ಸಿಪಿ ಮುಖಂಡ ಮತ್ತು ಸಂಸದ ಸುನಿಲ್ ತತ್ಕರೆ ಅವರ ಪುತ್ರಿ ಅದಿತಿ ಕೂಡ ಮೊದಲ ಬಾರಿಗೆ ಶಾಸಕರಾಗಿದ್ದರೂ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಉದ್ಧವ್ ಠಾಕ್ರೆ ಅವರು ರೈತ ಮುಖಂಡ ಮತ್ತು ವಿದರ್ಭದ ನಾಲ್ಕು ಅವಧಿಯ ಸ್ವತಂತ್ರ ಶಾಸಕ ಬಚು ಕಾಡು, ಅಹಮದ್‌ನಗರದ ಶಂಕರ್ ಗಡ್ಡಖ್, ಕೊಲ್ಹಾಪುರದ ರಾಜೇಂದ್ರ ಯಾದ್ರವ್ಕರ್ ಸೇರಿದಂತೆ ಮೂವರು ಸ್ವತಂತ್ರರಿಗೆ ಸಂಪುಟದಲ್ಲಿ ಅವಕಾಶ ನೀಡಿದ್ದಾರೆ. ಈ ಎಲ್ಲಾ ಸ್ವತಂತ್ರರು ಶಿವಸೇನೆಗೆ ಬೆಂಬಲ ನೀಡಿದ್ದರು.

ಕಾಂಗ್ರೆಸ್ ತನ್ನ ಪಾಲಿನ 10 ಸಚಿವ ಸ್ಥಾನಗಳಲ್ಲಿ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರನ್ನು ಕೈಬಿಟ್ಟು, ಮಾಜಿ ಸಿಎಂ ಅಶೋಕ್ ಚವಾಣ್ ಅವರನ್ನು ಪಟ್ಟಿಯಲ್ಲಿ ಸೇರಿಸಿದೆ.

ಶಿವಸೇನೆಯಿಂದ ಠಾಕ್ರೆ ಅವರು ಎಂಎಲ್ಸಿ ಅನಿಲ್ ಪರಬ್ ಅವರಂತಹ ಪಕ್ಷದ ನಿಷ್ಠಾವಂತರಿಗೆ ಮತ್ತು ಮಾಜಿ ಸಚಿವರಾದ ಸಂಜಯ್ ರಾಥೋಡ್, ಗುಲಾಬ್ರಾವ್ ಪಾಟೀಲ್, ದಾದಾ ಭೂಸ್, ಉದಯ್ ಸಮಂತ್, ಶಂಭುರಾಜೆ ದೇಸಾಯಿ ಅವರನ್ನು ಮತ್ತು ಹೊಸಬರಾದ ಸತ್ತಾರ್, ಸಂದೀಪನ್ ಭುಮ್ರೆ (ಮರಾಠವಾಡ)ರವರನ್ನು ಉಳಿಸಿಕೊಂಡಿದ್ದಾರೆ. ಹೊರಗುಳಿದವರಲ್ಲಿ ಮಾಜಿ ಸಚಿವ ರವೀಂದ್ರ ವೈಕರ್, ಸೇನಾ ಸಂಸದ ಸಂಜಯ್ ರೌತ್ ಅವರ ಸಹೋದರ ಸುನಿಲ್ ರೌತ್ ಇತರರು ಸೇರಿದ್ದಾರೆ.

ಇದರಿಂದ ಸಂಸದ ಸಂಜಯ್ ರೌತ್ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಸಂಜಯ್‌ ರಾವತ್‌ ಅದನ್ನು ನಿರಾಕರಿಸಿದ್ದು ತಮ್ಮ ಕೆಲಸವನ್ನು ಮಾತ್ರ ತಾವು ಮಾಡಿದ್ದು ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಮೂರು ಪಕ್ಷಗಳು ಸಚಿವರನ್ನು ಆರಿಸುವಲ್ಲಿ ಪ್ರದೇಶ, ಜಾತಿ ಮತ್ತು ಧರ್ಮವನ್ನು ಗಮನದಲ್ಲಿಟ್ಟುಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಮೊದಲೇ ಆರು ಜನ ಸಚಿವರು ಸಿಎಂ ಉದ್ಧವ್‌ ಠಾಕ್ರೆಯವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...