Homeಕರ್ನಾಟಕ‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

- Advertisement -
- Advertisement -

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ. ಇಂದು ಅಂತಿಮ ಘಟ್ಟದ ನಿರ್ಣಾಯಕ ಹೋರಾಟ ನಡೆಯುತ್ತಿದೆ. ಆದರೂ, ಮಾದಿಗ ಸಮುದಾಯಗಳಿಗೆ ದೊರೆಯಬೇಕಾದ ಹಕ್ಕುಗಳು ಇನ್ನೂ ದೊರೆತಿಲ್ಲ. 

ಇಂದು (ಗುರುವಾರ) ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳದಿದ್ದರೆ, ಹೋರಾಟವು ಫ್ರೀಡಂ ಪಾರ್ಕಿನಿಂದ  ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುತ್ತದೆ ಎಂದು ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ‘ಪಕ್ಕದ ಕೇರಳ, ಪಂಜಾಬ್ ನಲ್ಲಿ ಒಳಮೀಸಲಾತಿ ಜಾರಿಯಾಗಿದೆ. ಈ ರಾಜ್ಯಗಳಲ್ಲಿ ತೊಡಕಾಗದ ಕಾನೂನುಗಳು ಕರ್ನಾಟಕದಲ್ಲಿ ಹೇಗೆ ಅಡ್ಡಿಯಾಗುತ್ತವೆ ಎಂದು ನಾವು ಸರ್ಕಾರವನ್ನು ಕೇಳಬೇಕಿದೆ. ಎಲ್ಲ ಸಮಯದಾಯಗಳಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದು ಒಳಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ, ಒಳಮೀಸಲಾತಿಯನ್ನು ಪರಿಪೂರ್ಣವಾಗಿ ಅನುಷ್ಠಾನಕ್ಕೆ ತರಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದು ಆರೋಪಿಸಿದರು. 

ಎಡಗೈ ಸಮುದಾಯಗಳನ್ನು ಸಭೆಗೆ ಕರೆಯುತ್ತಾರೆ, ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಾರೆಂದು ನಿರೀಕ್ಷಿಸಿದ್ದೆವು. ಆದರೆ, ಸರ್ಕಾರ ತಮ್ಮ ಕ್ಯಾಬಿನೆಟ್ ಸಭೆಯಲ್ಲಿ ಎರಡು ವಾರಗಳ ಕಾಲ ಮುಂದೂಡಿತು. ಸಮುದಾಯಗಳನ್ನು ವಂಚಿಸಿತು. ಈಗ, ಸರ್ಕಾರವು 50,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಆದೇಶಿಸಿದೆ. ಆದರೆ, ಒಳಮೀಸಲಾತಿಯನ್ನು ತಪ್ಪಿಸಿದೆ. ನಾನು ನೇಮಕಾತಿಯನ್ನು ನಿಲ್ಲಿಸಿ ಎಂದು ಕೇಳುತ್ತಿಲ್ಲ. ಬದಲಾಗಿ, ಎಲ್ಲ ಸಮುದಾಯದ ಯುವಜನರಿಗೂ ಉದ್ಯೋಗಳ ಅಗತ್ಯವಿದೆ ಎಂಬುದನ್ನು ಅರಿತು, ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಕೆ ಆಗಬೇಕೆಂದು ಆಗ್ರಹಿಸುತ್ತಿದ್ದೇವೆ. ಸರ್ಕಾರವು ಇದೇ ರೀತಿ ನಿರ್ಲಕ್ಷ್ಯ ಧೋರಣೆ ತಳೆದರೆ, ಈ ಹೋರಾಟವು ಫ್ರೀಡಂ ಪಾರ್ಕಿನಿಂದ ವಿಧಾನಸೌಧಕ್ಕೆ ಸ್ಥಳಾಂತರಗೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ. 

“ನಾಗಮೋಹನ್ ದಾಸ್ ಕಮಿಟಿಯನ್ನು ರಚಿಸಿದಿರಿ, ಕೋಟ್ಯಂತರ ಹಣ ವ್ಯಯ ಮಾಡಿದಿರಿ. ಆದರೆ, ಆ ವರದಿಯನ್ನ ಮೂಲೆಗೊತ್ತಿದ್ದೀರಿ. ನಿಮಗೆ ಬೇಕಾದಂತೆ ನೀವು ಮಾಡುವುದಾದರೆ, ಕಮಿಟಿಗಳನ್ನು ಯಾಕೆ ರಚಿಸಿದಿರಿ. ಹಣವನ್ನೇಕೆ ವ್ಯಯಿಸಿದಿರಿ. ನಿಮ್ಮಿಚ್ಚೆಯಂತೆ ನೀವು ಒಳಮೀಸಲಾತಿಯನ್ನು ಬರೆದು, ಜಾರಿಗೊಳಿಸಿದ್ದರೆ, ನಾವು ಅದಕ್ಕೆ ಸರಿಯಾಗಿ ಉತ್ತರ ಕೊಡುತ್ತಿದ್ದೆವು ಎಂದು ಕಿಡಿಕಾರಿದರು.

“ಗುರುವಾರ, (ಮಾರ್ಚ್ 12) ಸಂಪುಟ ಸಭೆ ನಡೆಯಲಿದೆ. ಸಿದ್ದರಾಮಯ್ಯನವರು ಇಂದಿನ ಸಭೆಯಲ್ಲಿಯೇ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ, ಸಮುದಾಯದ ಹೋರಾಟಗಾರರು ಯಾವ ಕ್ರಮಕ್ಕೆ ಮುಂದಾಗುತ್ತಾರೆಯೋ, ಅದರಂತೆ ಇಡೀ ಸಮುದಾಯ ಮುನ್ನಡೆಯುತ್ತದೆ ಎಂದು ಎಚ್ಚರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಒಳಮೀಸಲಾತಿ ಹೋರಾಟದ ಮುಖಂಡ ಮಾರಸಂದ್ರ ಮುನಿಯಪ್ಪ ಅವರು ‘ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ. ಆದರೆ, ಒಳಮೀಸಲಾತಿ ವಿಚಾರದಲ್ಲಿ ಅವರು ನುಡಿದಂತೆ ನಡೆದಿಲ್ಲ. ಯಾರು ಅವರನ್ನು ತಡೆದಿದ್ದಾರೆ? ಸರ್ಕಾರವು 56,000 ಹುದ್ದೆಗಳನ್ನು ಭರ್ತಿಮಾಡಲು ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ದೇಶಾದ್ಯಂತ 35 ಕೋಟಿಗೂ ಹೆಚ್ಚು ಮಂದಿ ಎಸ್ಸಿ/ಎಸ್ಟಿ ಸಮುದಾಯದ ಜನರಿದ್ದೇವೆ. ಎಲ್ಲ ಸಮುದಾಯಗಳು ಮತ್ತು ಒಳ ಪಂಗಡಗಳಿಗೂ ಸಮಾನ ಅವಕಾಶ ಸಿಗಬೇಕೆಂದು ಹೋರಾಟಗಳು ನಡೆದಿವೆ. ಒಳಮೀಸಲಾತಿಗಾಗಿ ಸದಾಶಿವ ಆಯೋಗದ ಶಿಫಾರಸುಗಳನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿತು. ನಾಗಮೋಹನ್ ದಾಸ್ ನೇತೃತ್ವದಲ್ಲಿ ಹೊಸ ಆಯೋಗ ರಚಿಸಿತು. ಈಗ, ದಾಸ್ ಆಯೋಗದ ಶಿಫಾರಸುಗಳನ್ನೂ ಕಡೆಗಣಿಸಿ, ಒಳಮೀಸಲಾತಿ ಹಂಚಿಕೆ ಮಾಡಲಾಗಿದೆ. ಆದರೂ, ಜಾರಿಗೊಳಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಹೈಕಮಾಂಡ್ ದಲಿತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತೇವೆಂದು ಕಾಂಗ್ರೆಸ್ ಹೈಕಮಾಂಡ್ ನಿರಂತರವಾಗಿ ಹೇಳಿಕೊಂಡು ಬಂದಿದೆ. ಆದರೆ, ನಿರಂತರವಾಗಿ ಎಸ್ಸಿ/ಎಸ್ಟಿ ಸಮುದಾಯವನ್ನು ವಂಚಿಸಿದೆ. ಒಳಮೀಸಲಾತಿ ಜಾರಿಮಾಡುತ್ತೇವೆಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಸಮುದಾಯವನ್ನು ವಂಚಿಸುತ್ತಿದೆ. 

ಫೆಬ್ರವರಿ 27ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯಲ್ಲಿ ಇಂದಿಗೆ ಮುಂದೂಡಲಾಗಿತ್ತು. ಈಗ, ಈ ತಿಂಗಳ ಕೊನೆಗೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ. ಇದು ಅನ್ಯಾಯ. ಸರ್ಕಾರವು ಎಚ್ಚೆತ್ತುಕೊಂಡು ಒಳಮೀಸಲಾತಿ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ನೇಮಕಾತಿಯ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...