Homeಮುಖಪುಟಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ (ಮಾ.11) ಆದೇಶಿಸಿದೆ.

“ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ನ್ಯಾಯಾಲಯದಲ್ಲಿ ಹೇಳಿಕೆ ನೀಡದಿದ್ದರೆ, ಮೊಹಮ್ಮದ್ ಗಂಜ್ ಗ್ರಾಮದಲ್ಲಿರುವ ಆಸ್ತಿಯನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗುವುದು ಎಂದು ಕೆಲವು ವ್ಯಕ್ತಿಗಳು ತನಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಕೆಲ ಪೊಲೀಸ್ ಸಿಬ್ಬಂದಿ ಕಾಗದದ ಮೇಲೆ ಏನಿದೆ ಎಂದು ವಿವರಿಸದೆಯೇ ತನ್ನ ಹೆಬ್ಬೆಟ್ಟಿನ ಗುರುತನ್ನು ಬಲವಂತವಾಗಿ ಪಡೆದುಕೊಂಡಿದ್ದಾರೆ” ಎಂದು ಹಸೀನ್ ಖಾನ್ ಎಂಬವರು ಆರೋಪಿಸಿದ್ದರು.

ತನ್ನ ಮತ್ತು ತನ್ನ ಕುಟುಂಬದ ರಕ್ಷಣೆ ಹಾಗೂ ತಮ್ಮ ಆಸ್ತಿಯ ರಕ್ಷಣೆಗಾಗಿ ನ್ಯಾಯಾಲಯಕ್ಕೆ ಮೊರೆಯಿಟ್ಟಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ನ್ಯಾಯಮೂರ್ತಿಗಳಾದ ಅತುಲ್ ಶ್ರೀಧರನ್ ಮತ್ತು ಸಿದ್ಧಾರ್ಥ್ ನಂದನ್ ಅವರ ಪೀಠವು, ಮುಂದಿನ ಆದೇಶದವರೆಗೆ ಖಾನ್ ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಸಶಸ್ತ್ರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ನಿರ್ದೇಶನ ನೀಡಿದೆ.

ನ್ಯಾಯಪೀಠವು ಮುಂದುವರಿದು, ಹಸೀನ್ ಖಾನ್ ಅಥವಾ ಅವರ ಆಸ್ತಿಗೆ ಯಾವುದೇ ರೀತಿಯ ಹಾನಿ ಸಂಭವಿಸಿದಲ್ಲಿ, ಅದನ್ನು ಮೇಲ್ನೋಟಕ್ಕೆ “ರಾಜ್ಯ ಸರ್ಕಾರದ ಪ್ರೇರೇಪಣೆಯಿಂದಲೇ” ನಡೆದಿದೆ ಎಂದು ಪರಿಗಣಿಸಲಾಗುವುದು ಎಂದು ತಿಳಿಸಿದೆ. ಆದಾಗ್ಯೂ, ಇದನ್ನು ಸಾಬೀತುಪಡಿಸಲು ಅಥವಾ ಖಂಡಿಸಲು ಸರ್ಕಾರಕ್ಕೆ ಅವಕಾಶವಿರುತ್ತದೆ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ.

ಜನವರಿ 27ರಂದು ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ, ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಅದರಂತೆ, ಧಾರ್ಮಿಕ ಪ್ರಾರ್ಥನಾ ಸಭೆಯು ಖಾಸಗಿ ಆವರಣದೊಳಗೆ ನಡೆಯುವವರೆಗೆ, ಅಂತಹ ಸಭೆ ನಡೆಸಲು ಯಾವುದೇ ಮುಂಚಿತ ಅನುಮತಿಯ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿತ್ತು. ಅಲ್ಲದೆ, ಇಂತಹ ಚಟುವಟಿಕೆಗಳಿಗೆ ಕಾನೂನಿನಡಿ ಯಾವುದೇ ಅನುಮತಿಯ ಅಗತ್ಯವಿಲ್ಲ ಎಂಬ ಉತ್ತರ ಪ್ರದೇಶ ಸರ್ಕಾರದ ಹೇಳಿಕೆಯನ್ನೂ ನ್ಯಾಯಾಲಯ ಈ ಸಂದರ್ಭದಲ್ಲಿ ದಾಖಲಿಸಿಕೊಂಡಿತ್ತು.

ಲೈವ್ ಲಾ ವರದಿಯ ಪ್ರಕಾರ, ಈ ಹಿಂದಿನ ಪ್ರಕರಣದಲ್ಲಿ ನ್ಯಾಯಾಲಯವು ನೀಡಿದ್ದ ಸ್ಪಷ್ಟ ಅಭಿಪ್ರಾಯಗಳ ಹೊರತಾಗಿಯೂ, ಹಸೀನ್ ಖಾನ್ ಅವರು ತಮ್ಮ ಮನೆಯಲ್ಲಿ ನಮಾಝ್ ಮಾಡಿದ್ದಕ್ಕಾಗಿ ಪೊಲೀಸರು ಅವರನ್ನು ಬಲವಂತವಾಗಿ ಕರೆದೊಯ್ದು ದಂಡ ವಿಧಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಬುಧವಾರ ನ್ಯಾಯಾಲಯವು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅನೂಪ್ ತ್ರಿವೇದಿ ಅವರಲ್ಲಿ, “ಖಾಸಗಿ ಆಸ್ತಿಯಲ್ಲಿ ನಮಾಝ್ ಮಾಡಲು ಅನುಮತಿ ಪಡೆಯಬೇಕೆಂದು ಅಧಿಕಾರಿಗಳು ಒತ್ತಾಯಿಸಿದ್ದರೇ?” ಎಂದು ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ತ್ರಿವೇದಿ ಅವರು, ಮನೆಯ ಮಾಲೀಕರು ಸೇರಿದಂತೆ ಅಲ್ಲಿ ಹಾಜರಿದ್ದ ಎಲ್ಲಾ ವ್ಯಕ್ತಿಗಳಿಂದಲೂ ಅನುಮತಿ ಪಡೆಯುವಂತೆ ಕೇಳಲಾಗಿತ್ತು ಎಂದು ತಿಳಿಸಿದ್ದಾರೆ.

ಇದನ್ನು ಆಲಿಸಿದ ನ್ಯಾಯಾಧೀಶರು, ಮಾರ್ಚ್ 23ರಂದು ನಿಗದಿಯಾಗಿರುವ ಮುಂದಿನ ವಿಚಾರಣೆಯ ಸಂದರ್ಭದಲ್ಲಿ ಬರೇಲಿ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ಅಧೀಕ್ಷಕ ಅನುರಾಗ್ ಆರ್ಯ ಅವರು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಿರಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಕ್ರಿಶ್ಚಿಯನ್ ಸಂಸ್ಥೆಗಳಾದ ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಮತ್ತು ಇಮ್ಯಾನ್ಯುಯೆಲ್ ಗ್ರೇಸ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಜನವರಿ 27ರಂದು ಆದೇಶ ಹೊರಡಿಸಿದ್ದ ಹೈಕೋರ್ಟ್, ಧಾರ್ಮಿಕ ಕೂಟಗಳು ಸಂವಿಧಾನದ 25ನೇ ವಿಧಿಯಡಿ ಖಾತರಿಪಡಿಸಲಾದ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಹೇಳಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...