Homeಮುಖಪುಟಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ 'ಇರಾನ್‌ಗೆ ಹೋಗಿ' ಎಂದ ಪೊಲೀಸ್‌ ಅಧಿಕಾರಿ :...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ ಶುಕ್ರವಾರ (ಮಾ.13) ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ಆಯೋಜಿಸಿದ್ದರು. ಈ ಸಭೆಯಲ್ಲಿ ಸಂಭಾಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಒ) ಕುಲದೀಪ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಪ್ರಕಾರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಕೆಲವರು ‘ಅತಿಯಾದ ಕಾಳಜಿ’ ಹೊಂದಿರುವಂತೆ ಕಾಣಿಸುತ್ತಿದೆ ಎಂದು ಕುಮಾರ್ ಹೇಳಿದ್ದಾರೆ. ಅಲ್ಲದೆ, ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಘೋಷಣೆಗಳನ್ನು ಕೂಗುವುದು, ಪ್ರತಿಭಟನೆಗಳನ್ನು ಸಂಘಟಿಸುವುದು ಅಥವಾ ಪೋಸ್ಟರ್‌ಗಳನ್ನು ಪ್ರದರ್ಶಿಸುವುದು ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿದರೆ, ಅಂತಹವರ ವಿರುದ್ಧ ಕಠಿಣ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ಮುಂದುವರಿದು, ಅಂತಾರಾಷ್ಟ್ರೀಯ ಸಂಘರ್ಷಗಳು ಸ್ಥಳೀಯ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರಬಾರದು ಎಂದು ಕುಮಾರ್ ಹೇಳಿದ್ದಾರೆ.

ಇಲ್ಲಿ ಕೆಲವರು ಇರಾನ್-ಇಸ್ರೇಲ್ ಯುದ್ಧದ ಬಗ್ಗೆ ಅತಿಯಾದ ಕಾಳಜಿ ವಹಿಸುತ್ತಾ, ಅದರ ಬಗ್ಗೆ ಎದೆ ಬಡಿದುಕೊಳ್ಳುತ್ತಿದ್ದಾರೆ, ಅವರು ವಿಮಾನ ಹತ್ತಿ ಇರಾನ್‌ಗೆ ಹೋಗಲಿ. ಅಂತಹ ವಿಷಯಗಳನ್ನು ಸರ್ಕಾರಗಳು ನಿರ್ವಹಿಸಬೇಕೇ ಹೊರತು ಸ್ಥಳೀಯ ನಾಗರಿಕರಲ್ಲ ಎಂದಿದ್ದಾರೆ.

ಯುದ್ಧದ ಯಾವುದೇ ಒಂದು ಪಕ್ಷವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುವುದು, ವಿಷಯಕ್ಕೆ ಸಂಬಂಧಿಸಿದ ಪೋಸ್ಟರ್‌ಗಳು ಅಥವಾ ಬ್ಯಾನರ್‌ಗಳನ್ನು ಪ್ರದರ್ಶಿಸುವುದು ಮತ್ತು ಈದ್ ಪ್ರಾರ್ಥನೆಯ ಸಮಯದಲ್ಲಿ ಅಡಚಣೆ ಉಂಟುಮಾಡುವುದು ಕಟ್ಟುನಿಟ್ಟಾದ ಕಾನೂನು ಕ್ರಮಕ್ಕೆ ಕಾರಣವಾಗುತ್ತದೆ ಎಂದು ಕುಮಾರ್ ಎಚ್ಚರಿಕೆ ನೀಡಿದ್ದಾರೆ ಎಂದು ವರದಿ ವಿವರಿಸಿದೆ.

ಮತ್ತೊಂದು ವೈರಲ್ ವಿಡಿಯೋ ಪ್ರಕಾರ, ಮಸೀದಿಗಳಲ್ಲಿ ಸ್ಥಳದ ಕೊರತೆಯಿದೆ ಎಂಬ ಕಾರಣಕ್ಕೆ ರಸ್ತೆಗಳ ಮೇಲೆ ನಮಾಝ್ ಮಾಡಿದರೆ, ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂಬುವುದಾಗಿ ಕುಮಾರ್ ಎಚ್ಚರಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಮಸೀದಿಯಲ್ಲಿ ಸ್ಥಳವಿಲ್ಲದಿದ್ದಾಗ ಪ್ರಾರ್ಥನೆ ಮಾಡುವವರು ಧಾವಿಸಿ ರಸ್ತೆಯ ಮೇಲೆ ನಮಾಝ್ ಮಾಡಲು ಶುರು ಮಾಡುತ್ತಾರೆ. ಹೀಗಾದರೆ, ನಾವು ಒಂದು ನಿಮಿಷದವರೆಗೆ ಏನನ್ನೂ ಹೇಳುವುದಿಲ್ಲ, ಆನಂತರ ಅವರ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತೇವೆ. ಯಾರಾದರೂ ಇರಾನ್-ಇಸ್ರೇಲ್ ಯುದ್ಧಕ್ಕೆ ಬೆಂಬಲ ಸೂಚಿಸಿದರೆ ಅಥವಾ ಘೋಷಣೆಗಳನ್ನು ಕೂಗಿದರೆ, ಅವರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ನಾವು ಹಿಂದುಸ್ತಾನಿಗಳು. ನಾವು ಭಾರತೀಯರು. ಅಂತಾರಾಷ್ಟ್ರೀಯ ವಿಷಯಗಳನ್ನು ಸರ್ಕಾರಗಳು ನಿಭಾಯಿಸಬೇಕು. ಒಂದು ವೇಳೆ ಬೇರೆ ದೇಶದ ವಿವಾದಗಳು ನಮ್ಮ ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಿದರೆ, ಪೊಲೀಸರು ಅಂತಹವರಿಗೆ ‘ಅತಿ ಉತ್ತಮ ಚಿಕಿತ್ಸೆ’ (ಕಠಿಣ ಕ್ರಮ) ನೀಡುತ್ತಾರೆ ಎಂದು ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.

ಯುದ್ಧದ ಬಗ್ಗೆ ವೈರಲ್ ರೀಲ್ಸ್‌ಗಳನ್ನು ಮಾಡುವ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೂಡ ಅಧಿಕಾರಿ ಟೀಕಿಸಿದ್ದು, ಆನ್‌ಲೈನ್‌ನಲ್ಲಿ ವದಂತಿಗಳನ್ನು ಅಥವಾ ಪ್ರಚೋದನಕಾರಿ ವಿಷಯಗಳನ್ನು ಹರಡುವುದನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಇನ್‌ಸ್ಪೆಕ್ಟರ್ ವಿರುದ್ಧ ಕಿಡಿಕಾರಿದ ಓವೈಸಿ

ಸರ್ಕಲ್ ಇನ್‌ಸ್ಪೆಕ್ಟರ್ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಎಐಎಂಐಎಂ ಪಕ್ಷದ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ನಾಗರಿಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ತಡೆಯಲು ಅಥವಾ ಬೆದರಿಕೆ ಹಾಕಲು ಅಧಿಕಾರಿಗೆ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದಾರೆ.

ಈ ದೇಶವು ಇನ್‌ಸ್ಪೆಕ್ಟರ್ ಕುಲದೀಪ್ ಕುಮಾರ್ ಅವರ ತಂದೆಯದ್ದಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಇಸ್ರೇಲ್ ಪರ ರ್‍ಯಾಲಿಗಳನ್ನು ಬೆಂಬಲಿಸುವ ಮೂಲಕ ಇರಾನ್ ಸಂಘರ್ಷದ ಬಗ್ಗೆ ಪ್ರತಿಭಟಿಸುವ ಮುಸ್ಲಿಮರಿಗೆ ಬೆದರಿಕೆ ಹಾಕುವ ಮೂಲಕ ಅಧಿಕಾರಿ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಂವಿಧಾನದ 19ನೇ ವಿಧಿಯ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದ್ದು, ಶಾಂತಿ ಕಾಪಾಡುವ ಹೆಸರಿನಲ್ಲಿ ಜನರನ್ನು ಭಯಭೀತಗೊಳಿಸುವ ಅಧಿಕಾರ ಯಾರಿಗೂ ಇಲ್ಲ ಎಂದು ಅವರು ಒತ್ತಿ ಹೇಳಿದ್ದಾರೆ.

ಪೊಲೀಸ್ ಅಧಿಕಾರಿಯ ಮಾತುಗಳು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭಾಷೆಯಂತೆ ಕೇಳಿಸುತ್ತಿವೆ ಎಂದು ಓವೈಸಿ ಟೀಕಿಸಿದ್ದಾರೆ.

ಇಮ್ರಾನ್‌ ಪ್ರತಾಪ್‌ಗಢ ಟೀಕೆ

ಕಾಂಗ್ರೆಸ್ ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್‌ಗಢ ಅವರು ಸಂಭಾಲ್ ಪೊಲೀಸರ ವರ್ತನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ರಸ್ತೆಯಲ್ಲಿ ನಮಾಝ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ ಅಧಿಕಾರಿಯನ್ನು ಟೀಕಿಸಿದ್ದಾರೆ.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಭಾಷೆ ‘ಸ್ವೀಕಾರ್ಹವಲ್ಲ’ ಎಂದು ಎಂದಿರುವ ಇಮ್ರಾನ್, ನಾಗರಿಕರ ಹಕ್ಕುಗಳಿಗೆ ಸಂವಿಧಾನವು ನೀಡಿರುವ ರಕ್ಷಣೆಯ ಬಗ್ಗೆ ಅಧಿಕಾರಿಗಳಿಗೆ ನೆನಪಿಸುವಂತೆ ಒತ್ತಾಯಿಸಿದ್ದಾರೆ.

ಇಸ್ರೇಲ್ ಪರವಾಗಿ ಪ್ರತಿಭಟನೆ ನಡೆಸುತ್ತಿರುವವರು ಎಲ್ಲಿಗೆ ಹೋಗಬೇಕು? ಎಂದು ಇಮ್ರಾನ್ ಪ್ರಶ್ನಿಸಿದ್ದಾರೆ. ಇದು ಜವಾಬ್ದಾರಿಯುತ ಭಾಷೆಯಲ್ಲ. ಶಾಂತಿ ಸಮಿತಿ ಸಭೆಯು ಶಾಂತಿ ಮತ್ತು ಭ್ರಾತೃತ್ವದ ಮೇಲೆ ಗಮನ ಹರಿಸಬೇಕೇ ಹೊರತು, ಬೆದರಿಕೆಗಳ ಮೇಲಲ್ಲ ಎಂದಿದ್ದಾರೆ.

ಇದಾದ ಬೆನ್ನಲ್ಲೇ, ಎಐಎಂಐಎಂ ಉತ್ತರ ಪ್ರದೇಶದ ರಾಜ್ಯಾಧ್ಯಕ್ಷ ಶೌಕತ್ ಅಲಿ ಅವರು ಕೂಡ ಅಧಿಕಾರಿಯ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಿದ್ದು, ಶಾಂತಿ ಕಾಪಾಡುವ ನೆಪದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ ಮತ್ತು ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೌಕತ್ ಅಲಿ ಅವರು ಸಭೆಯಲ್ಲಿ ಬಳಸಲಾದ ಭಾಷೆಯು ಮುಸ್ಲಿಂ ಸಮುದಾಯವನ್ನು ಬೆದರಿಸುವಂತಿದೆ ಎಂದು ಆರೋಪಿಸಿರುವ ಅವರು, ಅಧಿಕಾರಿಗಳು ಶಾಂತಿ ಕಾಪಾಡುವ ಬದಲು ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಎಂದು ದೂರಿದ್ದಾರೆ.

ನಾವು ಅಸಂವಿಧಾನಿಕವಾಗಿ ಏನಾದರೂ ಮಾಡಿದರೆ ನಮ್ಮ ಮೇಲೆ ಪ್ರಕರಣ ದಾಖಲಿಸಿ. ಆದರೆ ನೀವು ಶಾಂತಿ ಸಮಿತಿ ಸಭೆಯಲ್ಲಿ ಕುಳಿತು ಮುಸ್ಲಿಮರಿಗೆ ಬೆದರಿಕೆ ಹಾಕುತ್ತಿದ್ದೀರಿ ಎಂದು ಹೇಳಿದ್ದಾರೆ. ಅಧಿಕಾರಿಯ ಈ ಮಾತುಗಳು ಕಾನೂನು ಜಾರಿ ಅಧಿಕಾರಿಗಳಿಂದ ನಿರೀಕ್ಷಿಸಲಾದ ಸಂವಿಧಾನಬದ್ಧ ಪ್ರಮಾಣ ವಚನವನ್ನು ಪ್ರತಿಬಿಂಬಿಸುವುದಿಲ್ಲ ಎಂದಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...