Homeಕರ್ನಾಟಕ‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. 

ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. 

ಇದೇ ವೇಳೆ ಹೆಚ್.ವೈ. ಮೇಟಿಯವರನ್ನು ನೆನೆದ ಮುಖ್ಯಮಂತ್ರಿಗಳು ಈ ಭಾಗದ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ದಿವಂಗತರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ, ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆಯಾಗಲು ಹೆಚ್.ವೈ.ಮೇಟಿಯವರೇ ಕಾರಣ ಎಂದರು.

ಮೆಡಿಕಲ್ ಕಾಲೇಜು ಸ್ಥಾಪಿಸಲು 2025ರ ಬಜೆಟ್ ನ ಘೋಷಣೆಯಾಗಿದ್ದು, ಇಂದು ಶಂಕುಸ್ಥಾಪನೆಗೊಳ್ಳುತ್ತಿದೆಯೇ ಹೊರತು, ಉಪಚುನಾವಣೆಯ ಕಾರಣಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು. 

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ಅನೇಕ ಜಿಲ್ಲೆಗಳನ್ನು ಅಭಿವೃದ್ಧಿಗೊಳಿಸುವ ದಿಸೆಯಲ್ಲಿ ಹಲವು ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಳನ್ನು ಮಾಡಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಹಾಗೂ ಟ್ರಾಮಾ ಸೆಂಟರ್ ಗಳನ್ನು ಸ್ಥಾಪನೆಯ ಉದ್ದೇಶವಿದ್ದು, ಈಗಾಗಲೇ ಸುಮಾರು 25 ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು..

ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ

ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದ ಮುಖ್ಯಮಂತ್ರಿಗಳು ನಮ್ಮ ಸರ್ಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಸಮಾನ ಆದ್ಯತೆ ನೀಡುತ್ತಿದ್ದೇವೆ ಎಂದರು. ಪ್ರತಿ ವರ್ಷ ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದುವರೆಗೆ 1.22 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಿಲ್ಲ. ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಅವರ ದುರಾಲೋಚನೆಯಾಗಿದೆ ಎಂದು ಕಿಡಿಕಾರಿದರು.

ಯುಕೆಪಿ ಹಂತ 3 ಭೂ-ಪರಿಹಾರ ಒಂದೇ ಬಾರಿಗೆ ಪಾವತಿ

ಬಿಜೆಪಿಯವರು ತಮ್ಮ ಅವಧಿಯಲ್ಲಿ ಯುಕೆಪಿ ಯೋಜನೆಗೆ ಪರಿಹಾರ ನೀಡಲು ಆಸಕ್ತಿ ವಹಿಸಲಿಲ್ಲ. ಆದ್ದರಿಂದ ರೈತರು ಭೂಮಿ ನೀಡಲು ಮುಂದೆ ಬರಲಿಲ್ಲ. ಈಗ ರೈತರಿಗೆ ಭೂ ಪರಿಹಾರವನ್ನು ಒಂದೇ ಬಾರಿಗೆ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಣಯಿಸಿದೆ. ಈ ಬಾರಿಯ ಬಜೆಟ್ ನಲ್ಲಿ ಯುಕೆಪಿ ಯೋಜನೆಯ 3 ಹಂತದಲ್ಲಿ ಭೂ-ಪರಿಹಾರಕ್ಕೆ ಹಣ ಮೀಸಲಿಡಲಾಗಿದ್ದು, ನಂತರವೂ ಹೆಚ್ಚಿನ ಅನುದಾನಕ್ಕೆ ವ್ಯವಸ್ಥೆಗೊಳಿಸಲಾಗುವುದು. ಸ್ವಯಂ ಪ್ರೇರಣೆಯಿಂದ ಭೂಮಿ ನೀಡುವ ರೈತರಿಗೆ ನೀರಾವರಿ ಜಮೀನಿಗೆ 40 ಲಕ್ಷ ರೂ, ಹಾಗೂ ಖುಷ್ಕಿ ಜಮೀನಿಗೆ 30 ಲಕ್ಷ ರೂ. ನೀಡಲು ಸರ್ಕಾರ ನಿರ್ಣಯಿಸಿದೆ. ಆದರೆ ಈ ಬಗ್ಗೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮತಿ ದೊರಕಿಲ್ಲ

ಯುಕೆಪಿ ಯೋಜನೆಯ ವ್ಯಾಪ್ತಿಗೆ ಬರುವ 8 ಗ್ರಾಮಗಳಲ್ಲಿ 900 ಎಕರೆಗೆ 446 ಕೋಟಿ ರೂ.ಗಳ ಪರಿಹಾರವನ್ನು ಕೊಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ. ಕೇಂದ್ರಕ್ಕೆ ಹಲವು ಮನವಿಗಳ ನಂತರವೂ, ಯುಕೆಪಿ, ಮಹಾದಾಯಿ ಸೇರಿದಂತೆ ಹಲವು ನೀರಾವರಿ ಯೋಜನೆಗೆ ಬೇಕಾದ ಅಗತ್ಯ ಅನುಮತಿಗಳನ್ನು ಕೇಂದ್ರ ಸರ್ಕಾರ ಇದುವರೆಗೆ ನೀಡಿಲ್ಲ. ಆದರೆ ನಮ್ಮ ಸರ್ಕಾರದಿಂದ ಉತ್ತರ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಉತ್ತರ ಕರ್ನಾಟಕದ  ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...