Homeಮುಖಪುಟ'70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ': ಅಸ್ಸಾಂ ಸಿಎಂ...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

- Advertisement -
- Advertisement -

ಸುಮಾರು 70 ಲಕ್ಷ ‘ಬಂಗಾಳಿ ಮುಸ್ಲಿಮರ’ನ್ನು ಭಾರತದಿಂದ ಹೊರಹಾಕುವುದು ‘ಮಾನವೀಯವಾಗಿ ಸಾಧ್ಯವಿಲ್ಲ’. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಈ 70 ಲಕ್ಷ ಬಂಗಾಳಿ ಮುಸ್ಲಿಮರನ್ನು ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರು ಎಂದು ಸಿಎಂ ಶರ್ಮಾ, ಅವರ ಸರ್ಕಾರ ಮತ್ತು ಹಿಂದುತ್ವ ಸಂಘಟನೆಗಳು ಹೇಳುತ್ತಿವೆ. ಅವರನ್ನು ಒಂದು ರೀತಿ ಅವಹೇಳನಕಾರಿಯಾಗಿ ‘ಮಿಯಾ ಮುಸ್ಲಿಮರು’ ಎಂಬ ಪದ ಬಳಸಿ ಕರೆಯಲಾಗುತ್ತಿದೆ.

ಶುಕ್ರವಾರ (ಮಾ.13) ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಆಜ್‌ತಕ್ ಸುದ್ದಿವಾಹಿನಿ ನಿರೂಪಕಿ ಅಂಜನಾ ಓಂ ಕಶ್ಯಪ್ ನೇತೃತ್ವದಲ್ಲಿ ‘ಪಂಚಾಯತ್ ಆಜ್‌ತಕ್’ ಎಂಬ ಕಾರ್ಯಕ್ರಮ ಆಯೋಜಿಸಿತ್ತು. ಅದರಲ್ಲಿ ಮಾತನಾಡಿದ ಸಿಎಂ ಶರ್ಮಾ, “ನಾವು 70 ಲಕ್ಷ ಜನರನ್ನು ಓಡಿಸಲು ಸಾಧ್ಯವಿಲ್ಲ. 70 ಲಕ್ಷ ಜನರನ್ನು ಕರೆದೊಯ್ಯುವ ರೈಲು ಭಾರತದಲ್ಲಿ ಇಲ್ಲ. ಅದು ಮಾನವೀಯವಾಗಿ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಹಾಗಾಗಿ, ಆ 70 ಲಕ್ಷ ಜನರು ಅಸ್ಸಾಂನಲ್ಲಿ ಅಥವಾ ಭಾರತದಲ್ಲಿ ವಾಸಿಸಲು ಸಾಧ್ಯವಿಲ್ಲದಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ. ಈ ಮೂಲಕ ಅವರೇ ದೇಶ ಬಿಡುವಂತೆ ಮಾಡುತ್ತೇವೆ ಎಂದಿದ್ದಾರೆ.

ಮುಸ್ಲಿಂ ಆಟೋ ಚಾಲಕರಿಗೆ 5 ರೂಪಾಯಿ ಬದಲು 4 ರೂಪಾಯಿ ಕೊಡಿ ಎಂಬ ಈ ಹಿಂದಿನ ತನ್ನ ವಿವಾದಾತ್ಮಕ ಹೇಳಿಕೆಯನ್ನು ನೆನಪಿಸಿದ ಶರ್ಮಾ, “ನಾನು ಯಾರಿಗೂ ಥಳಿಸಲು ಅಥವಾ ದಾಳಿ ಮಾಡಲು ಹೇಳಿಲ್ಲ. ಅವರಿಗೆ (ಬಂಗಾಳಿ ಮುಸ್ಲಿಮರು) ಉಸಿರುಗಟ್ಟುವಂತೆ ವಾತಾವರಣ ಸೃಷ್ಟಿಸಿ ಎಂಬುವುದಾಗಿ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

“ಕಾನೂನು ಕೈಗೆತ್ತಿಕೊಳ್ಳಬೇಡಿ, ಯಾರಿಗೂ ದೈಹಿಕವಾಗಿ ಹಾನಿ ಮಾಡಬೇಡಿ. ನಾನು ಎಂದಿಗೂ ಯಾರನ್ನೂ ಕೊಲ್ಲಿ ಎಂದು ಹೇಳಿಲ್ಲ, ಅದಕ್ಕೆ ಅವಕಾಶವಿಲ್ಲ. ಆದರೆ ಅವರು (ಬಂಗಾಳಿ ಮುಸ್ಲಿಮರು) ಅವರಾಗಿಯೇ ದೇಶ ಬಿಟ್ಟು ಹೋಗಬೇಕೆಂದು ಭಾವಿಸುವ ಮಟ್ಟಿಗೆ ಅವರಿಗೆ ತೊಂದರೆ ಕೊಡಿ” ಎಂದು ಎಂದಿದ್ದೇನೆ ಎಂದು ತನ್ನ ಮುಸ್ಲಿಂ ದ್ವೇಷದ ಹೇಳಿಕೆಯನ್ನು ಬಹಿರಂಗವಾಗಿ ಸಮರ್ಥಿಸಿಕೊಂಡಿದ್ದಾರೆ.

ಗುಂಡಿಕ್ಕುವ ವಿಡಿಯೋ ರಿಪೋಸ್ಟ್ ಮಾಡುತ್ತೇವೆ

ಸಿಎಂ ಶರ್ಮಾ ಮುಸ್ಲಿಮರನ್ನು ಗುರಿಯಾಗಿಸಿ ಗುಂಡಿಕ್ಕಿದಂತೆ ತೋರಿಸುವ ಎಐ ವಿಡಿಯೋವನ್ನು ಇತ್ತೀಚೆಗೆ ಅಸ್ಸಾಂ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪೋಸ್ಟ್ ಮಾಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ, ಅದನ್ನು ಡಿಲೀಟ್ ಮಾಡಿತ್ತು.

ಆ ವಿಡಿಯೋ ವಿರುದ್ದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್‌ಗೆ ಹೋಗಿ ಎಂದಿತ್ತು. ಹಾಗಾಗಿ, ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಸಿಎಂ ಶರ್ಮಾಗೆ ನೋಟಿಸ್ ಜಾರಿ ಮಾಡಿದೆ.

ವಿಡಿಯೋದಲ್ಲಿ ಸಿಎಂ ಶರ್ಮಾ ಅವರು ಬಂದೂಕು ಹಿಡಿದು ಶೂಟ್ ಮಾಡಿದ ನೈಜ ದೃಶ್ಯದೊಂದಿಗೆ, ಮುಸ್ಲಿಂ ಸಮುದಾಯದವರಂತೆ ಕಾಣುವ ವ್ಯಕ್ತಿಗಳನ್ನು ಗುರಿಯಾಗಿಸಿ ಗುಂಡು ಹಾರಿಸುವ ಎಐ ಸೃಷ್ಟಿತ ಚಿತ್ರಗಳನ್ನು ಬಳಸಲಾಗಿತ್ತು.

ಈ ವಿಡಿಯೋ ಕುರಿತು ‘ಪಂಚಾಯತ್‌ ಆಜ್‌ತಕ್‌’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಶರ್ಮಾ, “ಆ ವಿಡಿಯೋ ಸರಿಯಾಗಿತ್ತು. ಆದರೆ, ಅದರಲ್ಲಿ ಗುರಿಯಾಗಿಸಿದ ಮುಸ್ಲಿಮರು ‘ಬಾಂಗ್ಲಾದೇಶದವರು’ ಎಂದು ಉಲ್ಲೇಖಿಸಬೇಕಿತ್ತು ಎಂದಿದ್ದಾರೆ.

ದಾಖಲೆರಹಿತ ವಲಸಿಗರಿಗೂ ಕೂಡ ಕಾನೂನುಬದ್ಧವಾಗಿ ಗುಂಡಿಕ್ಕಲು ಸಾಧ್ಯವಿಲ್ಲ ಎಂದು ನಿರೂಪಕರು ಹೇಳಿದಾಗ, ವಿಡಿಯೋದಲ್ಲಿ ಗುಂಡಿಕ್ಕಿದಂತೆ ತೋರಿಸಿರುವುದು ಸಾಂಕೇತಿಕ ಎಂದು ಸಿಎಂ ಶರ್ಮಾ ಸಮರ್ಥಿಸಿಕೊಂಡಿದ್ದಾರೆ.

ಬಾಂಗ್ಲಾದೇಶಿಯರು ಅಸ್ಸಾಂಗೆ ನುಸುಳುವುದನ್ನು ತಡೆಯಲು, ಅಸ್ಸಾಂ ಮುಖ್ಯಮಂತ್ರಿ ಅವರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿರುವ ವ್ಯಕ್ತಿಗಳು ಬಾಂಗ್ಲಾದೇಶಿಯರು ಎಂದು ಉಲ್ಲೇಖಿಸದಿರುವುದು ಕಾನೂನಾತ್ಮಕವಾಗಿ ಮತ್ತು ಸಾಂವಿಧಾನಿಕವಾಗಿ ತಪ್ಪು. ಹಾಗಾಗಿ, ಅದನ್ನು ಡಿಲೀಟ್ ಮಾಡಿದ್ದೇವೆ. ಕರೆಕ್ಷನ್ ಮಾಡಿ ಮತ್ತೆ ಅದೇ ವಿಡಿಯೋವನ್ನು ಪೋಸ್ಟ್ ಮಾಡುತ್ತೇವೆ. ಬಿಜೆಪಿ ರಾಜ್ಯ ಘಕಟದ ಖಾತೆಗಿಂತ ತನ್ನ ವೈಯಕ್ತಿಕ ಖಾತೆಯಲ್ಲಿ ಪೋಸ್ಟ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ‘ಮಿಯಾ’ ಎಂಬ ಪದವನ್ನು ಸಾಮಾನ್ಯವಾಗಿ ಬಂಗಾಳಿ ಮೂಲದ ಮುಸ್ಲಿಮರನ್ನು ಹೀಯಾಳಿಸಲು ಅವಮಾನಕಾರಿ ಪದವಾಗಿ ಬಳಸಲಾಗುತ್ತದೆ. ಇವರಲ್ಲಿ ಅನೇಕರು ಬಾಂಗ್ಲಾದೇಶದಿಂದ ಬಂದ ದಾಖಲೆ ರಹಿತ ವಲಸಿಗರು ಎಂದು ಆರೋಪಿಸುತ್ತಾರೆ.

ಇತ್ತೀಚಿನ ದಿನಗಳಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿರುವ ಸಿಎಂ ಶರ್ಮಾ ಬಂಗಾಳಿ ಮುಸ್ಲಿಮರನ್ನು ಗುರಿಯಾಗಿಸಿ ಇತರ ಅನೇಕ ದ್ವೇಷದ ಹೇಳಿಕೆಗಳನ್ನು ನೀಡಿದ್ದಾರೆ. “ಅವರಿಗೆ (ಬಂಗಾಳಿ ಮುಸ್ಲಿಮರಿಗೆ) ತೊಂದರೆ ಕೊಡುವುದೇ ನಮ್ಮ ಕೆಲಸ” ಎಂದು ಹೇಳಿಕೊಂಡಿದ್ದಾರೆ. ಮತದಾರರ ಪಟ್ಟಿಯಿಂದ ಬಂಗಾಳಿ ಮುಸ್ಲಿಮರ ಹೆಸರುಗಳನ್ನು ತೆಗೆದುಹಾಕಲು ಅರ್ಜಿಗಳನ್ನು ಸಲ್ಲಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...