Homeಮುಖಪುಟ'70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ': ಅಸ್ಸಾಂ ಸಿಎಂ...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

- Advertisement -
- Advertisement -

ಸುಮಾರು 70 ಲಕ್ಷ ‘ಬಂಗಾಳಿ ಮುಸ್ಲಿಮರ’ನ್ನು ಭಾರತದಿಂದ ಹೊರಹಾಕುವುದು ‘ಮಾನವೀಯವಾಗಿ ಸಾಧ್ಯವಿಲ್ಲ’. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಈ 70 ಲಕ್ಷ ಬಂಗಾಳಿ ಮುಸ್ಲಿಮರನ್ನು ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರು ಎಂದು ಸಿಎಂ ಶರ್ಮಾ, ಅವರ ಸರ್ಕಾರ ಮತ್ತು ಹಿಂದುತ್ವ ಸಂಘಟನೆಗಳು ಹೇಳುತ್ತಿವೆ. ಅವರನ್ನು ಒಂದು ರೀತಿ ಅವಹೇಳನಕಾರಿಯಾಗಿ ‘ಮಿಯಾ ಮುಸ್ಲಿಮರು’ ಎಂಬ ಪದ ಬಳಸಿ ಕರೆಯಲಾಗುತ್ತಿದೆ.

ಶುಕ್ರವಾರ (ಮಾ.13) ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಆಜ್‌ತಕ್ ಸುದ್ದಿವಾಹಿನಿ ನಿರೂಪಕಿ ಅಂಜನಾ ಓಂ ಕಶ್ಯಪ್ ನೇತೃತ್ವದಲ್ಲಿ ‘ಪಂಚಾಯತ್ ಆಜ್‌ತಕ್’ ಎಂಬ ಕಾರ್ಯಕ್ರಮ ಆಯೋಜಿಸಿತ್ತು. ಅದರಲ್ಲಿ ಮಾತನಾಡಿದ ಸಿಎಂ ಶರ್ಮಾ, “ನಾವು 70 ಲಕ್ಷ ಜನರನ್ನು ಓಡಿಸಲು ಸಾಧ್ಯವಿಲ್ಲ. 70 ಲಕ್ಷ ಜನರನ್ನು ಕರೆದೊಯ್ಯುವ ರೈಲು ಭಾರತದಲ್ಲಿ ಇಲ್ಲ. ಅದು ಮಾನವೀಯವಾಗಿ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಹಾಗಾಗಿ, ಆ 70 ಲಕ್ಷ ಜನರು ಅಸ್ಸಾಂನಲ್ಲಿ ಅಥವಾ ಭಾರತದಲ್ಲಿ ವಾಸಿಸಲು ಸಾಧ್ಯವಿಲ್ಲದಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ. ಈ ಮೂಲಕ ಅವರೇ ದೇಶ ಬಿಡುವಂತೆ ಮಾಡುತ್ತೇವೆ ಎಂದಿದ್ದಾರೆ.

ಮುಸ್ಲಿಂ ಆಟೋ ಚಾಲಕರಿಗೆ 5 ರೂಪಾಯಿ ಬದಲು 4 ರೂಪಾಯಿ ಕೊಡಿ ಎಂಬ ಈ ಹಿಂದಿನ ತನ್ನ ವಿವಾದಾತ್ಮಕ ಹೇಳಿಕೆಯನ್ನು ನೆನಪಿಸಿದ ಶರ್ಮಾ, “ನಾನು ಯಾರಿಗೂ ಥಳಿಸಲು ಅಥವಾ ದಾಳಿ ಮಾಡಲು ಹೇಳಿಲ್ಲ. ಅವರಿಗೆ (ಬಂಗಾಳಿ ಮುಸ್ಲಿಮರು) ಉಸಿರುಗಟ್ಟುವಂತೆ ವಾತಾವರಣ ಸೃಷ್ಟಿಸಿ ಎಂಬುವುದಾಗಿ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

“ಕಾನೂನು ಕೈಗೆತ್ತಿಕೊಳ್ಳಬೇಡಿ, ಯಾರಿಗೂ ದೈಹಿಕವಾಗಿ ಹಾನಿ ಮಾಡಬೇಡಿ. ನಾನು ಎಂದಿಗೂ ಯಾರನ್ನೂ ಕೊಲ್ಲಿ ಎಂದು ಹೇಳಿಲ್ಲ, ಅದಕ್ಕೆ ಅವಕಾಶವಿಲ್ಲ. ಆದರೆ ಅವರು (ಬಂಗಾಳಿ ಮುಸ್ಲಿಮರು) ಅವರಾಗಿಯೇ ದೇಶ ಬಿಟ್ಟು ಹೋಗಬೇಕೆಂದು ಭಾವಿಸುವ ಮಟ್ಟಿಗೆ ಅವರಿಗೆ ತೊಂದರೆ ಕೊಡಿ” ಎಂದು ಎಂದಿದ್ದೇನೆ ಎಂದು ತನ್ನ ಮುಸ್ಲಿಂ ದ್ವೇಷದ ಹೇಳಿಕೆಯನ್ನು ಬಹಿರಂಗವಾಗಿ ಸಮರ್ಥಿಸಿಕೊಂಡಿದ್ದಾರೆ.

ಗುಂಡಿಕ್ಕುವ ವಿಡಿಯೋ ರಿಪೋಸ್ಟ್ ಮಾಡುತ್ತೇವೆ

ಸಿಎಂ ಶರ್ಮಾ ಮುಸ್ಲಿಮರನ್ನು ಗುರಿಯಾಗಿಸಿ ಗುಂಡಿಕ್ಕಿದಂತೆ ತೋರಿಸುವ ಎಐ ವಿಡಿಯೋವನ್ನು ಇತ್ತೀಚೆಗೆ ಅಸ್ಸಾಂ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪೋಸ್ಟ್ ಮಾಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ, ಅದನ್ನು ಡಿಲೀಟ್ ಮಾಡಿತ್ತು.

ಆ ವಿಡಿಯೋ ವಿರುದ್ದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್‌ಗೆ ಹೋಗಿ ಎಂದಿತ್ತು. ಹಾಗಾಗಿ, ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಸಿಎಂ ಶರ್ಮಾಗೆ ನೋಟಿಸ್ ಜಾರಿ ಮಾಡಿದೆ.

ವಿಡಿಯೋದಲ್ಲಿ ಸಿಎಂ ಶರ್ಮಾ ಅವರು ಬಂದೂಕು ಹಿಡಿದು ಶೂಟ್ ಮಾಡಿದ ನೈಜ ದೃಶ್ಯದೊಂದಿಗೆ, ಮುಸ್ಲಿಂ ಸಮುದಾಯದವರಂತೆ ಕಾಣುವ ವ್ಯಕ್ತಿಗಳನ್ನು ಗುರಿಯಾಗಿಸಿ ಗುಂಡು ಹಾರಿಸುವ ಎಐ ಸೃಷ್ಟಿತ ಚಿತ್ರಗಳನ್ನು ಬಳಸಲಾಗಿತ್ತು.

ಈ ವಿಡಿಯೋ ಕುರಿತು ‘ಪಂಚಾಯತ್‌ ಆಜ್‌ತಕ್‌’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಶರ್ಮಾ, “ಆ ವಿಡಿಯೋ ಸರಿಯಾಗಿತ್ತು. ಆದರೆ, ಅದರಲ್ಲಿ ಗುರಿಯಾಗಿಸಿದ ಮುಸ್ಲಿಮರು ‘ಬಾಂಗ್ಲಾದೇಶದವರು’ ಎಂದು ಉಲ್ಲೇಖಿಸಬೇಕಿತ್ತು ಎಂದಿದ್ದಾರೆ.

ದಾಖಲೆರಹಿತ ವಲಸಿಗರಿಗೂ ಕೂಡ ಕಾನೂನುಬದ್ಧವಾಗಿ ಗುಂಡಿಕ್ಕಲು ಸಾಧ್ಯವಿಲ್ಲ ಎಂದು ನಿರೂಪಕರು ಹೇಳಿದಾಗ, ವಿಡಿಯೋದಲ್ಲಿ ಗುಂಡಿಕ್ಕಿದಂತೆ ತೋರಿಸಿರುವುದು ಸಾಂಕೇತಿಕ ಎಂದು ಸಿಎಂ ಶರ್ಮಾ ಸಮರ್ಥಿಸಿಕೊಂಡಿದ್ದಾರೆ.

ಬಾಂಗ್ಲಾದೇಶಿಯರು ಅಸ್ಸಾಂಗೆ ನುಸುಳುವುದನ್ನು ತಡೆಯಲು, ಅಸ್ಸಾಂ ಮುಖ್ಯಮಂತ್ರಿ ಅವರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿರುವ ವ್ಯಕ್ತಿಗಳು ಬಾಂಗ್ಲಾದೇಶಿಯರು ಎಂದು ಉಲ್ಲೇಖಿಸದಿರುವುದು ಕಾನೂನಾತ್ಮಕವಾಗಿ ಮತ್ತು ಸಾಂವಿಧಾನಿಕವಾಗಿ ತಪ್ಪು. ಹಾಗಾಗಿ, ಅದನ್ನು ಡಿಲೀಟ್ ಮಾಡಿದ್ದೇವೆ. ಕರೆಕ್ಷನ್ ಮಾಡಿ ಮತ್ತೆ ಅದೇ ವಿಡಿಯೋವನ್ನು ಪೋಸ್ಟ್ ಮಾಡುತ್ತೇವೆ. ಬಿಜೆಪಿ ರಾಜ್ಯ ಘಕಟದ ಖಾತೆಗಿಂತ ತನ್ನ ವೈಯಕ್ತಿಕ ಖಾತೆಯಲ್ಲಿ ಪೋಸ್ಟ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ‘ಮಿಯಾ’ ಎಂಬ ಪದವನ್ನು ಸಾಮಾನ್ಯವಾಗಿ ಬಂಗಾಳಿ ಮೂಲದ ಮುಸ್ಲಿಮರನ್ನು ಹೀಯಾಳಿಸಲು ಅವಮಾನಕಾರಿ ಪದವಾಗಿ ಬಳಸಲಾಗುತ್ತದೆ. ಇವರಲ್ಲಿ ಅನೇಕರು ಬಾಂಗ್ಲಾದೇಶದಿಂದ ಬಂದ ದಾಖಲೆ ರಹಿತ ವಲಸಿಗರು ಎಂದು ಆರೋಪಿಸುತ್ತಾರೆ.

ಇತ್ತೀಚಿನ ದಿನಗಳಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿರುವ ಸಿಎಂ ಶರ್ಮಾ ಬಂಗಾಳಿ ಮುಸ್ಲಿಮರನ್ನು ಗುರಿಯಾಗಿಸಿ ಇತರ ಅನೇಕ ದ್ವೇಷದ ಹೇಳಿಕೆಗಳನ್ನು ನೀಡಿದ್ದಾರೆ. “ಅವರಿಗೆ (ಬಂಗಾಳಿ ಮುಸ್ಲಿಮರಿಗೆ) ತೊಂದರೆ ಕೊಡುವುದೇ ನಮ್ಮ ಕೆಲಸ” ಎಂದು ಹೇಳಿಕೊಂಡಿದ್ದಾರೆ. ಮತದಾರರ ಪಟ್ಟಿಯಿಂದ ಬಂಗಾಳಿ ಮುಸ್ಲಿಮರ ಹೆಸರುಗಳನ್ನು ತೆಗೆದುಹಾಕಲು ಅರ್ಜಿಗಳನ್ನು ಸಲ್ಲಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...