Homeಕರ್ನಾಟಕತುಮಕೂರಿನಲ್ಲಿ ಗಬ್ಬೆದ ರಸ್ತೆಗಳಿಗೆ ಟಾರು.. : ತಿಂಗಳಿಗೊಮ್ಮೆ ಬರ್ಲಿ ಮೋದಿ ಎನ್ನುತ್ತಿದ್ದಾರೆ ಜನ...

ತುಮಕೂರಿನಲ್ಲಿ ಗಬ್ಬೆದ ರಸ್ತೆಗಳಿಗೆ ಟಾರು.. : ತಿಂಗಳಿಗೊಮ್ಮೆ ಬರ್ಲಿ ಮೋದಿ ಎನ್ನುತ್ತಿದ್ದಾರೆ ಜನ…

- Advertisement -
- Advertisement -

ತುಮಕೂರೆಂಬೋ ದೂಳುನಗರವನ್ನು ಸ್ಮಾರ್ಟ್ ಸಿಟಿ ಎಂದು ಘೋಷಣೆ ಮಾಡಿ ಮೂರು ತಿಂಗಳು ಕಳೆದರೆ ನಾಲ್ಕು ವರ್ಷ ಪೂರ್ಣಗೊಳ್ಳಲಿದೆ. 2016 ಮಾರ್ಚ್ 11 ರಂದು ಸ್ಮಾರ್ಟ್ ಸಿಟಿಯಾಗಿ ಘೋಷಣೆ ಮಾಡಿದ್ದರೂ ನಗರ ಅಭಿವೃದ್ಧಿಯನ್ನೇ ಕಂಡಿಲ್ಲ. ಅಮಾನಿಕೆರೆಯಂಗಳವನ್ನು ಬಿಟ್ಟರೆ ಇನ್ನೆಲ್ಲಿ ನೋಡಿದರೂ ದೂಳು, ಗುಂಡಿಗಳು. ಜನರ ರಸ್ತೆಗಿಳಿದರೆ ಸಾಕು ನಗರಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಕಾರಿಗಳಿಗೆ ಪಕ್ಷಾತೀತವಾಗಿ ಬೈಗುಳದ ಮಳೆಯನ್ನೇ ಸುರಿಸುತ್ತಾರೆ. ಆದರೆ ಕೆಲವೊಮ್ಮೆ ಭಕ್ತರು ಹೇಳಿಕೊಳ್ಳುವಂತಿಲ್ಲ. ಬಿಡುವಂತಿಲ್ಲ. ಆದರೂ ತುಮಕೂರಿನ ಜನ ಮಾತ್ರ ಸ್ಮಾರ್ಟ್ ಆಗದೇ ಇರುವ ಸಿಟಿಯ ಬಗ್ಗೆ ಆಕ್ರೋಶವನ್ನು ಹೊರಹಾಕುತ್ತಾರೆ. ಸ್ಮಾರ್ಟ್ ಸಿಟಿಯ ಕುರಿತು ಬರೆಯಲು ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವುದೇ ಕಾರಣ.

ಜನವರಿ 2ರಂದು ತುಮಕೂರು ನಗರದ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನಕ್ಕೆ ಮೋದಿ ಬರುತ್ತಿದ್ದಾರೆ. ಈಗ ಬಂದರೆ ಇದು ಮೂರನೇ ಭೇಟಿ. ಪ್ರಧಾನಿ ತುಮಕೂರು ಭೇಟಿಗೆ ಕಾರಣಗಳೇನು ಎಂಬ ಬಗ್ಗೆ ಮೇಲ್ನೋಟಕ್ಕೆ ಹೇಳುತ್ತಿರುವ ಅಂಶಗಳು ಪ್ರಮುಖ ಕಾರಣಗಳೇ ಅಲ್ಲ. ಮುಖ್ಯಮಂತ್ರಿಗಳಿಗೆ ಕೃಷಿ ಪ್ರಶಸ್ತಿ ಪ್ರದಾನ ಮಾಡುವುದು, ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತು ಹಣವನ್ನು ಬಿಡುಗಡೆ ಮಾಡುವುದು, 42 ಕೃಷಿಕರಿಗೆ ಪ್ರಶಸ್ತಿ ನೀಡುವುದು ಪ್ರಮುಖ ಆದ್ಯತೆಗಳಲ್ಲ ಎಂಬುದು ಯಾರು ಬೇಕಾದರೂ ಊಹಿಸಬಹುದು. ಆದರೆ  ಪ್ರಧಾನಿ ಕಾರ್ಯಕ್ರಮಕ್ಕೆ ಬರುತ್ತಿರುವ ಹಿಂದಿನ ಉದ್ದೇಶದ ಬಗ್ಗೆ  ಆಯೋಜಕರಾಗಲೀ, ಬಿಜೆಪಿಯ ಮುಖಂಡರಾಗಲೀ ಸ್ಪಷ್ಟ ಕಾರಣ ನೀಡುತ್ತಿಲ್ಲ.

ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾದಾಗಲೂ ಬರಲಿಲ್ಲ. ಹೆಚ್ಚು ಜನರು ಸೇರುವ ಮತ್ತು ಭದ್ರತೆಯ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಮಾಡಲಿಲ್ಲ ಎಂಬ ಸಬೂಬು ಬೇರೆ. ಈಗ ಆ ವಿಷಯ ಮುನ್ನೆಲೆಗೆ ಬಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ಇದೀಗ ಸಿದ್ದಗಂಗಾ ಮಠದಲ್ಲಿ ಒಂದೂವರೆ ಗಂಟೆ ಕಾಲ ಕಳೆಯಲಿದ್ದಾರೆ. ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡುವುದು, ಧ್ಯಾನದಲ್ಲಿ ತೊಡಗುವ ಕಾರ್ಯಕ್ರಮಗಳು ಪೂರ್ವನಿಗದಿಯಾಗಿವೆ. ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಧ್ಯಾನ ಮಾಡಿ ದೇಶದ ಗಮನ ಸೆಳೆದ ಪ್ರಧಾನಿ ಇದೀಗ ಸಿದ್ದಗಂಗಾ ಮಠದ ಧ್ಯಾನಮಂದಿರದಲ್ಲೂ ಧ್ಯಾನ ಮಾಡಿ ದೇಶದಲ್ಲಿ ಸುದ್ದಿಯಾಗಲಿದ್ದಾರೆ. ಧ್ಯಾನದ ನಂತರವೂ ಕಾರ್ಯಕ್ರಮಕ್ಕೆ ಹಾಜರಾಗುವುದು. ಹೀಗಾಗಿ ಧ್ಯಾನಮುಖಿ ನರೇಂದ್ರ ಮೋದಿ ಮತ್ತೆ ರಾಷ್ಟ್ರೀಯ ವಾಹಿನಿಗಳಲ್ಲಿ ಸುದ್ದಿಯಾಗಲಿದ್ದಾರೆ.

ಮಠದಲ್ಲೇ ಹೆಚ್ಚು ಸಮಯ ಕಳೆಯುವ ಮೂಲಕ ರಾಜ್ಯದ ಬಹುದೊಡ್ಡ ಲಿಂಗಾಯತ ಸಮುದಾಯದ ಪ್ರೀತಿ ಗಿಟ್ಟಿಸಿಕೊಳ್ಳುವ ಉದ್ದೇಶವೂ ಇದರಿಂದೆ ಇರಬಹುದು. ಹಿರಿಯ ಶ್ರೀಗಳು ಲಿಂಗೈಕ್ಯರಾದ ಸಂದರ್ಭದಲ್ಲಿ ಮಠದ ಭಕ್ತರು ಪ್ರಧಾನಿ ಭೇಟಿ ನೀಡಲಿಲ್ಲವೆಂದು ಮುನಿಸಿಕೊಂಡಿದ್ದರು. ಆ ಮುನಿಸನ್ನು ಹೋಗಲಾಡಿಸುವುದು ಮಠದಲ್ಲಿ ಹೆಚ್ಚು ಕಾಲ ಕಳೆಯುವುದರ ಹಿಂದಿನ ಉದ್ದೇಶವೆಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದಗಂಗಾ ಮಠದ ಮೂಲಕ ಪ್ರಧಾನಿ ಮೋದಿ ಏನು ಸಂದೇಶಗಳನ್ನು ರವಾನಿಸಬಹುದು ಎಂಬ ಕುತೂಹಲ ಜನರಲ್ಲಿದೆ. ಡಾ. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಕೊಡಬೇಕು ಎಂಬ ಒತ್ತಾಯ ಹಲವು ವರ್ಷಗಳದ್ದು. ಆದರೆ ಕೇಂದ್ರದ ಯಾವ ಸರ್ಕಾರವೂ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಉತ್ಸಾಹ ತೋರಿಸಲಿಲ್ಲ. ನರೇಂದ್ರ ಮೋದಿ ಎರಡು ಬಾರಿ ಪ್ರಧಾನಿಯಾದರೂ ಇದರ ಬಗ್ಗೆ ಕಿವಿಗೆ ಹಾಕಿಕೊಳ್ಳಲಿಲ್ಲ. ಸಿಟ್ಟಿಗೆದ್ದ ಜನರ ಮನಸ್ಸನ್ನು ಸೆಳೆಯುವುದು ಭೇಟಿಯ ಹಿಂದಿನ ಉದ್ದೇಶವೇ? ಇರಬಹುದು.

ಆದರೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮಿಸಿದರೆ ತುಮಕೂರು ಚಿತ್ರದುರ್ಗ ರಾಜಕೀಯವಾಗಿ (ಸಂಸತ್ ಚುನಾವಣೆಯಲ್ಲಿ) ಬಿಜೆಪಿ ತೆಕ್ಕೆಗೆ ಹೋಗಿರುವುದು ಪ್ರಮುಖ ಕಾರಣ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿದಿರುವುದು ಮಗದೊಂದು ಕಾರಣ. ಕೆಲವೇ ದಿನಗಳ ಹಿಂದೆ ಆರ್‌ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ತುಮಕೂರು ಜಿಲ್ಲೆಯ ಪಾವಗಡಕ್ಕೆ ಭೇಟಿ ನೀಡಿರುವುದು ಕೂಡ ಗಮನಾರ್ಹ ಸಂಗತಿ. ಪ್ರಧಾನಿ ಸುಮ್ಮಸುಮ್ಮನೆ ತುಮಕೂರಿಗೆ ಭೇಟಿ ನೀಡುತ್ತಿಲ್ಲ. ರಾಜಕೀಯ ಲಾಭನಷ್ಟಗಳ ಲೆಕ್ಕಾಚಾರವನ್ನು ಹಾಕಿಯೇ ಭೇಟಿ ನೀಡುತ್ತಿರುವುದು ಎನ್ನಲಾಗುತ್ತಿದೆ.

ಮೇಲೆಯೇ ಹೇಳಿದಂತೆ ತುಮಕೂರು ಸ್ಮಾರ್ಟ್ ಸಿಟಿ ಆಗಿದ್ದರೂ ಇದುವರೆಗೂ ಸ್ಮಾರ್ಟ್ ಅಂತೂ ಆಗಿಲ್ಲ. ರಸ್ತೆಗಳು ಗುಂಡಿ ಗುದ್ರಗಳಿಂದ ಕೂಡಿವೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆಂಬ ಕಾರಣಕ್ಕೆ ತೇಪೆ ಹಚ್ಚುವ ಕೆಲಸ ಬಿರುಸಿನಿಂದ ನಡೆಯುತ್ತಿದೆ. ಪ್ರಮುಖ ರಸ್ತೆಗಳಲ್ಲಿ ಸೇರಿಕೊಂಡಿದ್ದ ದೂಳನ್ನು ಹೊಡೆದು ಟಾರು ಹಾಕುವ ಕಾರ್ಯ ಭರದಿಂದ ನಡೆಯುತ್ತಿದೆ. ರಸ್ತೆಗಳಿಗೆ ನೀರು ಸಿಂಪಡಿಸಲಾಗುತ್ತಿದೆ. ನಗರದಲ್ಲಿ ಹಾದುಹೋಗಿರುವ ಬಿ.ಎಚ್.ರಸ್ತೆಯ ಡಾಂಬರೀಕಣ ಕಾರ್ಯ ಹಗಲಿರುಳು ನಡೆಯುತ್ತಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ಸರ್ವೀಸ್ ರಸ್ತೆ ಹಲವು ದಿನಗಳಿಂದ ಕುಂಠಿತಗೊಂಡಿತ್ತು. ಈಗ ಆ ಸರ್ವೀಸ್ ರಸ್ತೆಯನ್ನು ಹೊಳೆಯುವಂತೆ ಮಾಡಲಾಗಿದೆ. ಆಟೋ ಚಾಲಕರು, ಬೈಕ್ ಸವಾರರು, ಸಾರ್ವಜನಿಕರು ನಗರದಲ್ಲಿ (ಪ್ರಮುಖ ರಸ್ತೆ) ನಡೆಯುತ್ತಿರುವ ಕೆಲಸ ನೋಡಿ, “ಮೋದಿ ತಿಂಗಳಿಗೊಮ್ಮೆಯಾದರೂ ಬರ್ಲಪ್ಪ” ಅಂತ ಮನವಿ ಮಾಡುತ್ತಿದ್ದಾರೆ.

ಜನರ ನೋವು ಮನವಿಯಾಗಿ ಪರಿವರ್ತನೆಯಾಗಿದೆ. ರಸ್ತೆಗಳಲ್ಲಿನ ಗುಂಡಿ ಗುದ್ರೆಗಳು ದೂಳು ಇರುವದನ್ನು ಯಾರಿಗೆ ಹೇಳಿದರೂ ಸ್ವಚ್ಚಗೊಳಿಸುವ ಗೋಜಿಗೆ ಹೋಗದೇ ಇರುವುದರಿಂದ ಮೋದಿ ಮತ್ತೆ ಮತ್ತೆ ಬರ್ಲಪ್ಪ ಎನ್ನುವ ಮನವಿ ಮಾಡುತ್ತಿದ್ದಾರೆ ಜನ. ಹಾಗಾಗಿವೆ ತುಮಕೂರು ನಗರದ ರಸ್ತೆಗಳು. ಸಿದ್ದಗಂಗಾ ಮಠ, ಕ್ಯಾತ್ಸಂದ್ರದಿಂದ ಹಿಡಿದು ಟೌನ್ ಹಾಲ್ ವರೆಗಿನ ಬಿ.ಎಚ್.ರಸ್ತೆಯನ್ನು ಶುಚಿಗೊಳಿಸಿ ಡಾಂಬರು ಹಾಕಲಾಗುತ್ತಿದೆ. ಆದರೆ ಒಳಗಿನ ರಸ್ತೆಗಳಲ್ಲಿ ಅದೇ ದೂಳು, ದಡಕ್ಕೆನ್ನುವ ಗುದ್ರಗಳು, ಅಗೆದ ರಸ್ತೆಗಳು, ಡಾಂಬರ್ ಕಾಣದ ರಸ್ತೆ ಬದಿಗಳು, ಜಿಯೋ, ನೀರು, ಗ್ಯಾಸ್ ಗಾಗಿ ಅಗೆದಿರುವ ಜಾಡುಗಳು ಎದ್ದು ಕಾಣುತ್ತಿವೆ. ಅವುಗಳು ಯಾವಾಗ ರಿಪೇರಿ ಕಾಣತ್ತವೋ ಎಂದು ಜನ ಕಾಯುತ್ತಿದ್ದಾರೆ.

ಸ್ಮಾರ್ಟ್ ಸಿಟಿಯ ಕೆಲಸಗಳು ಕುಂಟುತ್ತಾ ಸಾಗಿವೆ. ದೊಡ್ಡದೊಡ್ಡ ಗುಂಡಿಗಳು ಜನರ ಗಮನ ಸೆಳೆಯುತ್ತವೆ. ಕಾಮಗಾರಿ ಚಾಲ್ತಿಯಲ್ಲಿದೆ ಎಂಬ ಬೋರ್ಡುಗಳ ಕಾಣಸಿಗುತ್ತವೆ. ರೆಡ್ ಟೇಪ್ ಗಳು ರಸ್ತೆಗಳಲ್ಲಿ ಓಡಾಡುವ ವಾಹನ ಸವಾರರಿಗೆ ರಾಚುತ್ತಿವೆ. ಬೀದಿ ದೀಪಗಳಿಲ್ಲದ ವೇಳೆಯಲ್ಲಿ ರಸ್ತೆಯಲ್ಲಿ ಬೈಕ್ ಸವಾರರು ಪ್ರಯಾಣಿಸಿದರೆ ಬೀಳುವುದು ಗ್ಯಾರೆಂಟಿ. ಹೆಲ್ಮೆಟ್ಟಿದ್ದರೆ ತಲೆಗೆ ಪಟ್ಟಿಲ್ಲ. ಕೈಕಾಲು ಮರಿದರೆ ಕೇಳೋರಿಲ್ಲ ಅನ್ನುವಂತಹ ಪರಿಸ್ಥಿತಿ ಇದೆ. ತುಮಕೂರು ನಗರದ ಜನರ ಗೋಳು ಸಾಕಷ್ಟಿವೆ. ಸ್ಮಾರ್ಟ್ ಸಿಟಿಯ ಅವಾಂತರಗಳಿಗೆ ಜನ ರೋಸಿ ಹೋಗಿದ್ದಾರೆ. ಜನ ಕೇಳುವ ಪ್ರಶ್ನೆಗಳಿಗೆ ಮೋದಿ ಸಾಹೇಬರು ಉತ್ತರಿಸುತ್ತಾರೆಯೇ. ಸ್ಮಾರ್ಟ್ ಸಿಟಿಯಲ್ಲಿ ಆಗಿರುವ ಅವ್ಯವಹಾರದ ವಿರುದ್ದ ಕ್ರಮ ಕೈಗೊಳ್ಳುತ್ತಾರೆಯೇ? ಮೌನವಹಿಸುತ್ತಾರೆ? ನಾನು ತಿನ್ನುವುದಿಲ್ಲ. ತಿನ್ನಲೂ ಬಿಡುವುದಿಲ್ಲ ಎಂಬ ಮಾತನ್ನು ಉಳಿಸಿಕೊಳ್ಳುತ್ತಾರೆಯೇ ನೋಡಬೇಕು.

ಪುಸ್ತಕದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಪ್ರಶಸ್ತಿಗಳು ಬರುತ್ತಲೇ ಇವೆ. ಪತ್ರಿಕೆಗಳು ಅದನ್ನು ಪ್ರಕಟಿಸುತ್ತಲೇ ಇವೆ. ಆದರೆ ಸ್ಮಾರ್ಟ್ ಸಿಟಿಯಿಂದ ಜನರಿಗೆ ಯಾವ ಪ್ರಯೋಜವಾಗಿದೆ ಎಂಬುದನ್ನು ಇದುವರೆಗೂ ಪ್ರಕಟಿಸಿಲ್ಲ. ಪಾರದರ್ಶಕತೆ, ಬದ್ದತೆ ಅಂದರೆ ಇದೇ ಇರಬೇಕು. ಪಾರದರ್ಶಕತೆ ಇಲ್ಲದ ಕಾಮಗಾರಿ ಬದ್ದತೆ ಇಲ್ಲದ ಕೆಲಸ ಎರಡೂ ವ್ಯರ್ಥ. ಹೀಗಾಗಿ ಪ್ರಧಾನಿಗಳಿಂದ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳಿಗೆ ಮನ್ನಣೆ ಸಿಗಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...