Homeಅಂತರಾಷ್ಟ್ರೀಯಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ 'ದಿ ವಾಯ್ಸ್ ಆಫ್ ಹಿಂದ್ ರಜಬ್'

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

- Advertisement -
- Advertisement -

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ ‘ದಿ ವಾಯ್ಸ್ ಆಫ್ ಹಿಂದ್ ರಜಬ್‘ ಚಲನಚಿತ್ರವು 2026ರ ಆಸ್ಕರ್ (ಅಕಾಡೆಮಿ ಪ್ರಶಸ್ತಿ) ಪ್ರಶಸ್ತಿಗೆ ಅಧಿಕೃತವಾಗಿ ನಾಮನಿರ್ದೇಶನಗೊಂಡಿದೆ. 

ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ (Best International Feature Film) ವಿಭಾಗದಲ್ಲಿ ಟುನೀಶಿಯಾ ದೇಶದಿಂದ ಅಧಿಕೃತವಾಗಿ ಚಿತ್ರವು ಆಸ್ಕರ್‌ಗೆ ಪ್ರವೇಶ ಪಡೆದಿದೆ. ಈ ಚಿತ್ರವನ್ನು ಖ್ಯಾತ ಟುನೀಶಿಯನ್ ಚಲನಚಿತ್ರ ನಿರ್ದೇಶಕಿ ಕೌಥರ್ ಬೆನ್ ಹನಿಯಾ ಅವರು ನಿರ್ದೇಶಿಸಿದ್ದಾರೆ.

ಈ ವರ್ಷದ ಅಥವಾ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಪ್ರಧಾನ ಸಮಾರಂಭವು ಅಮೆರಿಕದ ಲಾಸ್ ಏಂಜಲೀಸ್‌ನ ಓವೇಶನ್ ಹಾಲಿವುಡ್‌ನಲ್ಲಿರುವ ಐತಿಹಾಸಿಕ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15, 2026 (ಭಾನುವಾರ) ರಂದು ನಡೆಯಲಿದೆ.

ಭಾರತೀಯ ವೀಕ್ಷಕರಿಗೆ ಸಮಯದ ವ್ಯತ್ಯಾಸದಿಂದಾಗಿ ಈ ಕಾರ್ಯಕ್ರಮವು ಮಾರ್ಚ್ 16, 2026 (ಸೋಮವಾರ) ರಂದು ಬೆಳಿಗ್ಗೆ 4.30ಕ್ಕೆ ನೇರ ಪ್ರಸಾರವಾಗಲಿದೆ.

ಖ್ಯಾತ ಹಾಸ್ಯನಟ ಮತ್ತು ದೂರದರ್ಶನ ನಿರೂಪಕ ಕೋನನ್ ಒ’ಬ್ರಿಯಾನ್ ಅವರು ಸತತ ಎರಡನೇ ಬಾರಿಗೆ ಸಮಾರಂಭವನ್ನು ನಡೆಸಿಕೊಡಲಿದ್ದಾರೆ.

ಈ ಬಾರಿಯ ಆಸ್ಕರ್ ರೇಸ್‌ನಲ್ಲಿ ‘ಸಿನರ್ಸ್ಚಿತ್ರವು ಗರಿಷ್ಠ 16 ನಾಮನಿರ್ದೇಶನಗಳನ್ನು ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದೆ.

‘ದಿ ವಾಯ್ಸ್ ಆಫ್ ಹಿಂದ್ ರಜಬ್‘ ಚಿತ್ರದ ನಿರ್ಮಾಪಕರು ಮತ್ತು ಬೆಂಬಲಿಗರು ಈ ಚಿತ್ರವು ಪ್ರಶಸ್ತಿ ಪಡೆಯುವ ದೊಡ್ಡ ಭರವಸೆಯಲ್ಲಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ.

ಹಿಂದ್ ರಜಬ್ ಗಾಝಾದ ಆರು ವರ್ಷದ ಫ್ಯಾಲೆಸ್ತೀನ್ ಬಾಲಕಿ. 2024ರ ಜನವರಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ಸಂದರ್ಭದಲ್ಲಿ ಈಕೆ ಜಗತ್ತಿನಾದ್ಯಂತ ಸುದ್ದಿಯಾಗಿದ್ದಳು.

ಜನವರಿ 29, 2024ರಂದು ಹಿಂದ್ ರಜಬ್ ತನ್ನ ಕುಟುಂಬದೊಂದಿಗೆ ಗಾಝಾ ನಗರದಿಂದ ಪಲಾಯನ ಮಾಡುವಾಗ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಇಸ್ರೇಲ್ ಸೇನೆ ಸುಮಾರು 300 ಸುತ್ತು ಗುಂಡುಗಳ ಭೀಕರ ದಾಳಿ ನಡೆಸಿತ್ತು.

ಇಸ್ರೇಲ್ ಸೇನೆಯ ದಾಳಿಯಿಂದ ಕಾರಿನಲ್ಲಿದ್ದ ಕುಟುಂಬದ ಇತರ ಆರು ಸದಸ್ಯರು ತಕ್ಷಣ ಮೃತಪಟ್ಟಾಗ, ಬಾಲಕಿ ಹಿಂದ್ ಮಾತ್ರ ಬದುಕುಳಿದಿದ್ದಳು. ಸುಮಾರು ಮೂರು ಗಂಟೆಗಳ ಕಾಲ ಆಕೆ ತನ್ನವರ ಶವಗಳ ನಡುವೆ ಕಾರಿನಲ್ಲಿ ಸಿಲುಕಿಕೊಂಡಿದ್ದಳು. ಈ ಸಂದರ್ಭದಲ್ಲಿ ಆಕೆ ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿಗೆ (ಪಿಆರ್‌ಸಿಎಸ್‌) ಫೋನ್ ಮಾಡಿ ತನ್ನನ್ನು ರಕ್ಷಿಸುವಂತೆ ಅಳುತ್ತಾ ಬೇಡಿಕೊಂಡಿದ್ದಳು.

ಆಕೆಯನ್ನು ರಕ್ಷಿಸಲು ಹೋದ ಪಿಆರ್‌ಸಿಎಸ್‌ನ ಇಬ್ಬರು ಅರೆವೈದ್ಯಕೀಯ ಸಿಬ್ಬಂದಿ ಕೂಡಾ ದಾಳಿಯಲ್ಲಿ ಮೃತಪಟ್ಟಿದ್ದರು. ಸುಮಾರು 12 ದಿನಗಳ ನಂತರ ಹಿಂದ್ ರಜಬ್‌ಳ ಶವ ಗುಂಡಿನ ದಾಳಿಯಿಂದ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಪತ್ತೆಯಾಗಿತ್ತು.

ಈ ಘಟನೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕೊಲಂಬಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಸ್ರೇಲ್ ಸೇನೆಯ ಆಕ್ರಮಣವನ್ನು ಪ್ರತಿಭಟಿಸಿ ತಮ್ಮ ಹ್ಯಾಮಿಲ್ಟನ್ ಹಾಲ್‌ಗೆ ‘ಹಿಂದ್ ಹಾಲ್’ ಎಂದು ಮರುನಾಮಕರಣ ಮಾಡಿದ್ದರು.

ಈಕೆಯ ಕಥೆಯನ್ನು ಆಧರಿಸಿದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಸೆಪ್ಟೆಂಬರ್ 3, 2025 ರಂದು ವೆನಿಸ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು. ಆಗ ಪ್ರೇಕ್ಷಕರು ಸುಮಾರು 23 ನಿಮಿಷಗಳ ಕಾಲ ಎದ್ದು ನಿಂತು ಚಿತ್ರಕ್ಕೆ ಗೌರವ ಸೂಚಿಸಿದ್ದರು. ಈ ಮೂಲಕ ಚಿತ್ರ ದಾಖಲೆ ಬರೆದಿತ್ತು.

ಅಲ್ಲದೆ, ಅಲ್ಲಿ ಅದು ಗ್ರ್ಯಾಂಡ್ ಜ್ಯೂರಿ ಪ್ರಶಸ್ತಿ ಮತ್ತು ಇತರ ಆರು ಸಮಾನಾಂತರ ಬಹುಮಾನಗಳನ್ನು ಗೆದ್ದುಕೊಂಡಿತ್ತು. 2025ರ ಸೆಪ್ಟೆಂಬರ್ 10ರಂದು ಟುನೀಶಿಯಾದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಚಿತ್ರ, ನಂತರ ನವೆಂಬರ್ 26 ರಂದು ದಿ ಪಾರ್ಟಿ ಫಿಲ್ಮ್ ಸೇಲ್ಸ್‌ನಿಂದ ಫ್ರಾನ್ಸ್‌ನಲ್ಲಿ ಬಿಡುಗಡೆಗೊಂಡಿತ್ತು.

ಹಿಂದ್ ರಜಬ್ ಇಂದು ಗಾಝಾದ ನಾಗರಿಕರ, ವಿಶೇಷವಾಗಿ ಮಕ್ಕಳ ಸಂಕಷ್ಟದ ಸಂಕೇತವಾಗಿ ಗುರುತಿಸಲ್ಪಡುತ್ತಿದ್ದಾಳೆ.

2023ರಿಂದ 2025ರವರೆಗೆ ಇಸ್ರೇಲ್ ಗಾಝಾ ಮೇಲೆ ನಡೆಸಿದ ಆಕ್ರಮಣ ಮತ್ತು ನರಮೇಧದಲ್ಲಿ ಸುಮಾರು 75 ಸಾವಿರಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಈ ಪೈಕಿ 20 ಸಾವಿರ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಚಲನಚಿತ್ರವೊಂದಕ್ಕೆ ‘ಆಸ್ಕರ್ ಪ್ರಶಸ್ತಿ’ ಎಂಬುವುದು ವಿಶ್ವದ ಅತಿದೊಡ್ಡ ವೇದಿಕೆಗಳಲ್ಲಿ ಒಂದಾಗಿರುವುದರಿಂದ ಅದು ಅತ್ಯಂತ ಪ್ರಮುಖವಾಗಿದೆ ಎಂದು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಒಡೆಸ್ಸಾ ರೇ ಲಾಸ್ ಏಂಜಲೀಸ್‌ನಿಂದ ದೂರವಾಣಿ ಮೂಲಕ ಮಾತನಾಡುತ್ತಾ ಹೇಳಿದ್ದಾರೆ. ಈ ಚಿತ್ರದ ಮುಖ್ಯ ಉದ್ದೇಶ ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ತಲುಪುವುದಾಗಿದೆ. ಆಸ್ಕರ್ ವೇದಿಕೆಯು ಈ ಗುರಿಯನ್ನು ಜಾಗತಿಕ ಮಟ್ಟದಲ್ಲಿ ಸಾಧಿಸಲು ನೆರವಾಗುತ್ತದೆ ಎಂಬುವುದಾಗಿ ತಿಳಿಸಿದ್ದಾರೆ ಎಂದು ಅಲ್- ಜಝೀರಾ ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...